ಸೋರೆಕಾಯಿ ವೈವಿಧ್ಯ


Team Udayavani, Dec 21, 2018, 6:55 AM IST

img20181126141503.jpg

ಸೋರೆಕಾಯಿ ಸೌತೆಕಾಯಿಯಂತಹದೇ ತರಕಾರಿ. ಅದನ್ನು ನಾವು ಹಲವು ರೀತಿಯಲ್ಲಿ ನಮ್ಮ ಅಡುಗೆಯಲ್ಲಿ ಬಳಸಬಹುದು. ದೋಸೆ, ಪಲ್ಯ, ಸಾಂಬಾರು, ಪಾಯಸ, ಬೋಳು ಕೊದಿಲು, ಹಲ್ವ, ಮಜ್ಜಿಗೆ ಹುಳಿ, ಹೀಗೆ ಹಲವು ರೀತಿಯ ಅಡುಗೆಯನ್ನು ಮಾಡಬಹುದು. ಪಥ್ಯದ ಆಹಾರವಾಗಿಯೂ ಇದರ ಬಳಕೆ ಜಾಸ್ತಿ.

ಸೋರೆಕಾಯಿ ದೋಸೆ
ಬೇಕಾಗುವ ಸಾಮಗ್ರಿ:
ಬೆಳ್ತಿಗೆ ಅಕ್ಕಿ- 4 ಕಪ್‌, ಸೋರೆಕಾಯಿ- 2 ಕಪ್‌- ಸಿಪ್ಪೆತೆಗೆದು ತಿರುಳು ಸಹಿತ ಬಳಸಬಹುದು. ರುಚಿಗೆ ಉಪ್ಪು, ಇಷ್ಟವೆಂದಾದರೆ ನೀರುಳ್ಳಿ , ಹಸಿಮೆಣಸು ಸಣ್ಣಗೆ ಹೆಚ್ಚಿದ್ದು.

ತಯಾರಿಸುವ ವಿಧಾನ: 4 ಗಂಟೆ ನೆನೆಸಿದ ಅಕ್ಕಿಯನ್ನು ಸೋರೆಕಾಯಿ ಹೋಳು ತಿರುಳು ಹಾಕಿ ನುಣ್ಣಗೆ ಬೀಸಿಕೊಳ್ಳಿ. ನೀರು ಹಾಕುವ ಬದಲು ಸೋರೆಕಾಯಿಯನ್ನೇ ಹಾಕಬೇಕು. ಅದಕ್ಕೆ ಉಪ್ಪು$ಸೇರಿಸಿ ದೋಸೆ ಮಾಡಬಹುದು. ಸಣ್ಣಗೆ ತುಂಡು ಮಾಡಿದ ನೀರುಳ್ಳಿ , ಹಸಿಮೆಣಸು, ಸ್ವಲ್ಪಕಾಯಿತುರಿಯನ್ನು ಬಳಸಿದರೆ ಮತ್ತೂಂದು ರುಚಿಯ ದೋಸೆ ತಯಾರು. ಚಟ್ನಿ, ಜೇನಿನೊಂದಿಗೆ ತಿನ್ನಲು ಬಾರಿ ರುಚಿ.

ಬೋಳು ಕೊದ್ಲು 
ಬೇಕಾಗುವ ಸಾಮಗ್ರಿ:
ಸಣ್ಣಗೆ ತುಂಡು ಮಾಡಿದ ಸೋರೆಕಾಯಿ ಹೋಳುಗಳು, ರುಚಿಗೆ ಉಪ್ಪು, ಬೆಲ್ಲ, ಉಂಡೆಹುಳಿ ಹುಡಿ, ಅರಸಿನ, ಮೆಣಸಿನ ಹುಡಿ ಚೂರು. ಒಗ್ಗರಣೆಗೆ- ಮೆಣಸು , ಸಾಸಿವೆ, ತುಪ್ಪ , ಬೆಳ್ಳುಳ್ಳಿ ಎಸಳುಗಳು. 

ತಯಾರಿಸುವ ವಿಧಾನ: ಸೋರೆಕಾಯಿ ಹೋಳು, ಉಪ್ಪು, ಹುಳಿ, ಬೆಲ್ಲ,  ಅರಸಿನ, ಮೆಣಸಿನ ಹುಡಿ, ಸ್ವಲ್ಪ ನೀರು ಹಾಕಿ  ಚೆನ್ನಾಗಿ ಬೇಯಿಸಿ ಬೆಳ್ಳುಳ್ಳಿ ಒಗ್ಗರಣೆ ಹಾಕಿದರೆ ಬೋಳುಕೊದು ತಯಾರು. ಪಥ್ಯದ ಬೋಳು ಕೊದ್ಲುಗಾದರೆ ಒಗ್ಗರಣೆ, ಮೆಣಸಿನ ಹುಡಿ,  ಅರಸಿನ ಬಳಸುವುದಿಲ್ಲ.

ಸೋರೆಕಾಯಿ ಪಲ್ಯ
ಬೇಕಾಗುವ ಸಾಮಗ್ರಿ
: ತೆಳ್ಳಗೆ ಕತ್ತರಿಸಿದ ಸೋರೆಕಾಯಿ ಹೋಳುಗಳು, ಉಪ್ಪು, ಮೆಣಸಿನ ಹುಡಿ (ಸಾರಿನ ಹುಡಿಯೂ ಆದೀತು), ಅರಸಿನ,  ಬೆಲ್ಲ , ಒಗ್ಗರಣೆಗೆ-  ಮೆಣಸು, ಸಾಸಿವೆ ಬೇವಿನಸೊಪ್ಪು, ಎಣ್ಣೆ. ಕಾಯಿತುರಿ.
ತಯಾರಿಸುವ ವಿಧಾನ: ಬಾಣಲೆಯಲ್ಲಿ ಒಗ್ಗರಣೆ ಸಿಡಿದಾಗ ಬೇವಿನಸೊಪ್ಪು ಹಾಕಿ. ಅದಕ್ಕೆ ತುಂಡರಿಸಿದ ಹೋಳು, ಉಪ್ಪು, ಅರಸಿನ, ಬೆಲ್ಲ ಹಾಕಿ ನೀರು ಆರುವವರೆಗೆ ಬೇಯಿಸಿ. (ಬೇರೆ ನೀರು ಹಾಕುವ ಅಗತ್ಯವಿಲ್ಲ. ಸಣ್ಣ ಉರಿಯಲ್ಲಿ ಇಟ್ಟಾಗ ನೀರು ಹೋಳಿನಿಂದ ಬಿಡುತ್ತದೆ.) ಬಳಿಕ‌ ಅದಕ್ಕೆ ಕಾಯಿತುರಿ ಹಾಕಿ ಕೈ ಆಡಿಸಿದರೆ ಪಲ್ಯ ತಯಾರು.

ಸೋರೆಕಾಯಿ ಪಾಯಸ
ಬೇಕಾಗುವ ಸಾಮಗ್ರಿ:
ಸಣ್ಣಗೆ ಕತ್ತರಿಸಿದ ಸೋರೆಕಾçಯಿ ಹೋಳುಗಳು (ಸಿಪ್ಪೆ-ಬೀಜ, ತಿರುಳು ಸಂಪೂರ್ಣ ತೆಗೆಯಬೇಕು), ಹಸಿ ತೆಂಗಿನಕಾಯಿ ಹಾಲು (ದಪ್ಪಹಾಲು , ತೆಳ್ಳಗಿನ ಹಾಲು- 2ನೇ ಬಾರಿ ತೆಗೆದದ್ದು) ಬೆಲ್ಲ-  5ಅಚ್ಚು, ಅಕ್ಕಿ ಹಿಟ್ಟು- 5 ಚಮಚ, ಗೇರುಬೀಜ ಸ್ವಲ್ಪ, ಬೇಕಷ್ಟು ಉಪ್ಪು.

ತಯಾರಿಸುವ ವಿಧಾನ: ಸೋರಿಕಾಯಿ ಹೋಳುಗಳನ್ನು ಉಪ್ಪು, ಒಂದು ಸಣ್ಣ ತುಂಡು ಬೆಲ್ಲ ಹಾಕಿ ಚೆನ್ನಾಗಿ ಬೇಯಿಸಿಕೊಳ್ಳಿ. ಹೋಳು ಬೆಂದ ಮೇಲೆ ಉಳಿದ ಬೆಲ್ಲ ಹಾಕಿ ಚೆನ್ನಾಗಿ ಕುದಿಸಿ. ಆಮೇಲೆ ಅಕ್ಕಿಹಿಟ್ಟು ಹಾಕಿ ಚೆನ್ನಾಗಿ ಕುದಿಸಬೇಕು. ಆಮೇಲೆ ತೆಳು ಕಾಯಿಹಾಲು ಹಾಕಿ ಕುದಿಸಿ. ನಂತರ ದಪ್ಪಕಾಯಿಹಾಲು ಹಾಕಿ ಸಣ್ಣಗೆ ಕುದಿ ಬರಿಸಿ ಇಳಿಸಿ. ಗೇರುಬೀಜವನ್ನು ತುಪ್ಪದಲ್ಲಿ ಉರಿದು ಸೇರಿಸಿ. ಈಗ ಸ್ವಾದಿಷ್ಟ ಸೋರೆಕಾಯಿ ಪಾಯಸ ತಯಾರು.

ಸೋರೆಕಾಯಿ ಹಲ್ವ
ಬೇಕಾಗುವ ಸಾಮಗ್ರಿ:
ತುರಿದ ಸೋರೆಕಾಯಿ- 4 ಕಪ್‌, ಸಕ್ಕರೆ- 2 ಕಪ್‌, ಗೇರುಬೀಜ ಸ್ವಲ್ಪ, ಏಲಕ್ಕಿ ಹುಡಿ ಚೂರು. ತುಪ್ಪ-5 ಚಮಚ.
ತಯಾರಿಸುವ ವಿಧಾನ: ಸೋರೆಕಾಯಿ ತುರಿಯನ್ನು ದಪ್ಪ ಬಾಣಲೆಯಲ್ಲಿ ನೀರು ಹಾಕದೆ ಬೇಯಿಸಿ. ಬಳಿಕ ಗೇರುಬೀಜವನ್ನು ಹಾಕಿ. ಬೇಯುವಾಗ ನೀರೆಳುತ್ತದೆ. ಅದು ಸಂಪೂರ್ಣ ಆರಿದಾಗ ಸಕ್ಕರೆ , ತುಪ್ಪಹಾಕಿ ಚೆನ್ನಾಗಿ ಮೊಗಚಿರಿ. ತಳ ಬಿಡುತ್ತಾ ಬಂದಾಗ ಬೇರೆ ಪಾತ್ರದಲ್ಲಿ ಹಾಕಿ ತಣಿಯಲು ಬಿಡಿ. ಬಿಸಿ ಬಿಸಿ ತಿನ್ನಲು ರುಚಿ. ಪ್ರಿಜ…ನಲ್ಲಿ ಇಟ್ಟು ಐಸ್‌ಕ್ರೀಮ… ಜೊತೆ ತಿನ್ನಲು ರುಚಿ.

– ಅಶ್ವಿ‌ನಿ ಮೂರ್ತಿ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.