ಪಾಕ ಪಾಠ


Team Udayavani, Aug 30, 2019, 5:00 AM IST

f-24

ಬೆಲ್ಲಕ್ಕೆ ನೀರು ಹಾಕಿ ಒಲೆಯ ಮೇಲೆ ಕುದಿಯಲು ಬಿಟ್ಟು , ಕಾಯುತ್ತ ನಿಂತೆವು. ಆದರೆ, ಎಷ್ಟು ಹೊತ್ತಾದರೂ ಕುದಿ ಬಾರದೇ ಬೇಸರವಾದ್ದರಿಂದ ಟಿ. ವಿ. ನೋಡಲು ಹೋದೆವು…

ಕೆಲವು ವರ್ಷಗಳ ಹಿಂದೆ ಬೆಂಗಳೂರಿನ ಪಿ. ಜಿ. ಒಂದರಲ್ಲಿ ಬದುಕಿಕೊಂಡಿದ್ದ ಕಾಲವದು. ರೂಮ್‌ಮೇಟ್‌ ಆಗಿದ್ದ ಆಂಧ್ರದ ಹುಡುಗಿಯೊಬ್ಬಳಿಗೆ ಕನ್ನಡ ಕಲಿಸುವ ಕಾರ್ಯಕ್ರಮ ಆಗಾಗ ನಡೆಯುತ್ತಿತ್ತು. ಹೀಗೆಯೇ ಒಂದು ಕನ್ನಡ ಕಲಿಕಾ ಸೆಷನ್‌ನಲ್ಲಿ ತನ್ನದೊಂದು ಸಮಸ್ಯೆಯನ್ನು ನಮ್ಮ ಬಳಿ ಕನ್ನಡದಲ್ಲಿಯೇ ಹೇಳಿಕೊಂಡಳು. ತನಗೂ ಎಲ್ಲರಂತೆಯೇ ಸ್ಕರ್ಟ್‌ಗಳನ್ನು ಧರಿಸುವ ಆಸೆಯೆಂದೂ, ಆದರೆ ತನ್ನ ಕಾಲಿನ ಮೇಲಿರುವ ಕರಡಿ ಕೂದಲುಗಳು ತೊಂದರೆ ಕೊಡುತ್ತಿವೆಯೆಂದೂ, ಅಂಗಡಿ ಕ್ರೀಮುಗಳನ್ನು ಬಳಸಿದರೆ ಚರ್ಮಕ್ಕೆ ಅಲರ್ಜಿ ಆಗುತ್ತದೆಂದೂ ಅಲವತ್ತುಕೊಂಡಳು. ರೂಮಿನಲ್ಲಿದ್ದ ನಾವೇ ನಾಲ್ವರು, ಬೆಲ್ಲದ ಪಾಕ ತಯಾರಿಸಿ, ಅವಳ ಕಾಲುಗಳಿಗೆ ಬಳಿದು ರೋಮಮುಕ್ತಗೊಳಿಸುವ ಯೋಜನೆಯೊಂದನ್ನು ತಯಾರಿಸಿದೆವು. ಮಾರನೆಯ ದಿನ ನಮ್ಮ ಪಿ.ಜಿ ಆಂಟಿ ಎಲ್ಲಿಗೋ ಹೋಗುವವರಿದ್ದರು. ಅವರು ರಾತ್ರಿ ಮರಳಿ ಬರುವುದರೊಳಗೆ ಇದನ್ನು ಕಾರ್ಯಗತಗೊಳಿಸಬೇಕಿತ್ತು.

ಸಂಜೆ ರೂಮಿಗೆ ಎಲ್ಲರೂ ಮರಳುತ್ತಿದ್ದಂತೆಯೇ ಅವಸರವಸರವಾಗಿ ಕಾರ್ಯಕ್ರಮಕ್ಕೆ ಸಿದ್ಧವಾದೆವು. ಸಮಸ್ಯೆಯೆಂದರೆ, ನಮಗ್ಯಾರಿಗೂ ಅದುವರೆಗೆ ಬೆಲ್ಲದ ಪಾಕ ಮಾಡಿ ಗೊತ್ತಿರಲಿಲ್ಲ. ಗಣೇಶ ಹಬ್ಬದ ಪಂಚಕಜ್ಜಾಯಕ್ಕೆ ಅವರು ಬೆಲ್ಲದ ಪಾಕ ಮಾಡುವುದನ್ನು ನೋಡಿದ್ದ ನಾನೇ ಅವರೆಲ್ಲರಿಗೆ ಸೀನಿಯರ್‌! ಹಾಗಾಗಿ ನನ್ನ ನೇತೃತ್ವದಲ್ಲಿಯೇ ಯೋಜನೆ ಪ್ರಾರಂಭವಾಯಿತು. ಬೆಲ್ಲಕ್ಕೆ ನೀರು ಹಾಕಿ, ಒಲೆಯ ಮೇಲೆ ಕುದಿಯಲು ಬಿಟ್ಟು , ಕಾಯುತ್ತಾ ನಿಂತೆವು. ಆದರೆ ಎಷ್ಟು ಹೊತ್ತಾದರೂ ಕುದಿ ಬಾರದೆ ಬೇಸರವಾದ್ದರಿಂದ ಟಿವಿ ನೋಡಲು ಹೋದೆವು. ಸುಮಾರು ಹೊತ್ತಿನ ಬಳಿಕ ಬೆಲ್ಲದ ಏರುಪಾಕದ ಪರಿಮಳ ಮೂಗಿಗೆ ಬಡಿಯುತ್ತಿದ್ದಂತೆಯೇ ಎಲ್ಲರಿಗೂ ಫ‌ಕ್ಕನೆ ನೆನಪಾಯಿತು. ಅಡುಗೆ ಮನೆಗೆ ದೌಡಾಯಿಸಿದರೆ ಬೆಲ್ಲದ ಪಾಕ ಗಟ್ಟಿಯಾಗಿ ಕೊತಕೊತ ಕುದಿಯುತ್ತಿದ್ದುದರ ಹೊರತು ಮತ್ತೇನೂ ಆದಂತೆ ಕಾಣಲಿಲ್ಲ. ಸ್ಟವ್‌ ಆರಿಸಿ, ಮತ್ತೆ ಟಿ.ವಿ ಮುಂದೆ ಕೂತೆವು. ಬಿಸಿ ಪಾಕ ಆರಬೇಕಲ್ಲ! ಮತ್ತೆ ಬೆಲ್ಲದ ಪಾಕ ನೆನಪಾಗುವಷ್ಟರಲ್ಲಿ ಒಂದು ತಾಸು ಕಳೆದಿತ್ತು. ಪಿ.ಜಿ ಆಂಟಿ ಬರುವುದಕ್ಕೆ ಇನ್ನು ಸ್ವಲ್ಪವೇ ಹೊತ್ತು ಉಳಿದಿದ್ದರಿಂದ ಗಡಿಬಿಡಿಯಲ್ಲಿ ಪಾಕದ ಪಾತ್ರೆ ಹಿಡಿದು ಮೇಲಿನ ರೂಮಿಗೆ ಓಡಿದೆವು.

ಬೇಕಾದ ಉಳಿದೆಲ್ಲ ಸಲಕರಣೆಗಳನ್ನು ಸಿದ್ಧಮಾಡಿಕೊಂಡು, ಅವಳ ಕಾಲು ಹಿಡಿದು ಕೂತಿದ್ದೊಂದೇ ಬಂತು. ದರಿದ್ರ ಬೆಲ್ಲದ ಪಾಕಕ್ಕೆ ಅದೇನು ಮೋಹವೋ ಪಾತ್ರೆಯ ಮೇಲೆ! ಎಷ್ಟು ಒದ್ದಾಡಿದರೂ ಅದು ಪಾತ್ರೆಯನ್ನೂ ಬಿಡಲಿಲ್ಲ. ಜೊತೆಗಿದ್ದ ಸೌಟನ್ನೂ ಸಡಿಲಿಸಲಿಲ್ಲ. ಪಾತ್ರೆಯಿಂದ ಪಾಕ ಬಿಡಿಸಲು ಕೈಬಲವೊಂದೇ ಸಾಲದೆನಿಸಿ, ಪಾತ್ರೆಯನ್ನು ಕಾಲಲ್ಲಿ ಹಿಡಿದು ಸೌಟನ್ನು ಕೈಯಲ್ಲಿ ಜಗ್ಗಾಡಿದ್ದಾಯ್ತು. ಬ್ರಹ್ಮ ಜಿಗುಟು ಗೋಂದಿನಂತೆ ಗಟ್ಟಿಯಾಗಿ ಪಾತ್ರೆ, ಸೌಟುಗಳನ್ನು ಹಿಡಿದಿದ್ದ ಅದು ನಮ್ಮ ಬಾಹುಬಲಕ್ಕೆ ಸವಾಲೆಸೆಯುತ್ತಿತ್ತು. ಒಬ್ಬಳು ಪಾತ್ರೆಯನ್ನೂ ಇನ್ನೊಬ್ಬಳು ಸೌಟನ್ನೂ ಹಿಡಿದು ಸರ್ವಶಕ್ತಿಯನ್ನೂ ಪ್ರಯೋಗಿಸಿ ಎಳೆದಾಡಿದೆವು. ಊಹುಂ! ಪಾಕ ಕಮಕ್‌- ಕಿಮಕ್‌ ಎನ್ನಲಿಲ್ಲ. ಅವಳ ಕಾಲಿನ ಬಗ್ಗೆ ಈವರೆಗಿದ್ದ ಕರುಣೆಯೆಲ್ಲ ಮಾಯವಾಗಿ, ಕೋಪದಿಂದ ಪಾಕ ಬಿಡಿಸುವುದರ ಕಡೆಗೆ ಗಮನ ಕೇಂದ್ರೀಕರಿಸಿದೆವು. ಕಾಲಿನ ಮನೆ ಹಾಳಾಯ್ತು, ಈಗ ಆಂಟಿ ಬರುವುದರೊಳಗೆ ಮಾಡಿರುವ ಅವಾಂತರದ ತಿಪ್ಪೆ ಸಾರಿಸಬೇಕಲ್ಲ !

ಮುಂದಿನ ಕೆಲವು ನಿಮಿಷಗಳಲ್ಲಿ ಕೆಳಗಡೆ ಆಂಟಿಯ ಧ್ವನಿ ಕೇಳಿದಾಗಂತೂ ಎಲ್ಲರ ಎದೆಯಲ್ಲೂ ಗುಡುಗು ಮಿಂಚು. ಮಾಡುವುದೇನು ಎಂಬುದು ತಿಳಿಯದೆ ಲಗುಬಗೆಯಲ್ಲಿ ನಮ್ಮಲ್ಲೊಬ್ಬಳು ಪಾತ್ರೆಯೊಂದಿಗೇ ಬಾತ್‌ರೂಮಿಗೆ ನುಗ್ಗಿದಳು. ಅಲ್ಲಾದರೂ ಎಷ್ಟೊತ್ತಿರಲು ಸಾಧ್ಯ? ಕಡೆಗೊಮ್ಮೆ ಹೊರಗೆ ಬರಲೇಬೇಕಲ್ಲ ! ವಿಷಯ ತಿಳಿದು ಬೈಯ್ಯಬೇಕೊ, ನಗಬೇಕೊ ತಿಳಿಯದ ಪಿ.ಜಿ ಆಂಟಿ, ಪಾಕ ಗಟ್ಟಿಯಾದರೆ ನೀರು ಹಾಕಿ ಬಿಡಿಸಬಹುದು ಎಂಬ ಸರಳ ಸತ್ಯ ಮನವರಿಕೆ ಮಾಡಿಕೊಟ್ಟರು.

“ಹುಡುಗು ಬುದ್ಧಿ ನೆಗೆದುಬಿದ್ದಿ’ ಎಂಬ ಹಿರಿಯರ ಮಾತು ಅನುಭವದ್ದೇ ಇರಬೇಕು!

ಅಲಕಾ ಕೆ.

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.