ತಂಪು ತಂಪು ತಂಬುಳಿ


Team Udayavani, May 17, 2019, 6:00 AM IST

Tambuli-2-aa

ಬೇಸಿಗೆಯ ಧಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೆಚ್ಚು ಖಾರ, ಕರಿದ ಪದಾರ್ಥಗಳನ್ನು ನಾವು ತಿನ್ನುವ ಆಹಾರದಲ್ಲಿ ಕಡಿಮೆ ಮಾಡಿ ತಂಪಾದ ತಂಬುಳಿಗಳನ್ನು ಮಾಡಿ ಸವಿದರೆ ಆರೋಗ್ಯಕ್ಕೆ ಹಿತ.

ಕರಿಬೇವಿನ ತಂಬುಳಿ
ಬೇಕಾಗುವ ಸಾಮಗ್ರಿ: 1/4 ಕಪ್‌ ಕರಿಬೇವಿನೆಲೆ, 1/2 ಕಪ್‌ ತೆಂಗಿನ ತುರಿ, 2 ಕಪ್‌ ಸಿಹಿ ಮಜ್ಜಿಗೆ, 1/4 ಇಂಚು ಉದ್ದದ ಶುಂಠಿ, ಉಪ್ಪು ರುಚಿಗೆ ತಕ್ಕಷ್ಟು , 1/2 ಚಮಚ ಸಾಸಿವೆ, ಸಣ್ಣ ತುಂಡು ಕೆಂಪುಮೆಣಸು.
ತಯಾರಿಸುವ ವಿಧಾನ: ಕರಿಬೇವಿನೆಲೆಗಳನ್ನು ಚೆನ್ನಾಗಿ ತೊಳೆದು, ಕಾಯಿತುರಿ, ಶುಂಠಿ ಜೊತೆ ಸೇರಿಸಿ ನುಣ್ಣಗೆ ರುಬ್ಬಿ. ನಂತರ ಉಪ್ಪು , ಮಜ್ಜಿಗೆ ಬೆರೆಸಿ, ನಂತರ ಸಾಸಿವೆ, ಕೆಂಪುಮೆಣಸು ಸೇರಿಸಿ ಒಗ್ಗರಣೆ ಕೊಡಿ.

ಮೆಂತೆ ತಂಬುಳಿ
ಬೇಕಾಗುವ ಸಾಮಗ್ರಿ: 1 ಚಮಚ ಮೆಂತೆ ಕಾಳು, 1/2 ಕಪ್‌ ತೆಂಗಿನ ತುರಿ, 2 ಕಪ್‌ ಸಿಹಿ ಮಜ್ಜಿಗೆ, 1 ಒಣಮೆಣಸು, ರುಚಿಗೆ ತಕ್ಕಷ್ಟು ಉಪ್ಪು , 1/4 ಚಮಚ ಸಾಸಿವೆ, 1 ಚಮಚ ಎಣ್ಣೆ ಯಾ ತುಪ್ಪ.
ತಯಾರಿಸುವ ವಿಧಾನ: ಬಾಣಲೆ ಒಲೆಯ ಮೇಲಿಟ್ಟು ತುಪ್ಪ ಹಾಕಿ. ಬಿಸಿಯಾದಾಗ ಮೆಂತೆಕಾಳು, ಕೆಂಪು ಮೆಣಸು ಸೇರಿಸಿ ಹುರಿದು ಕೆಳಗಿಳಿಸಿ. ನಂತರ ತೆಂಗಿನತುರಿ, ಹುರಿದ ಮೆಂತೆಕಾಳು, ಮೆಣಸು ಸೇರಿಸಿ ಸ್ವಲ್ಪ ನೀರು ಸೇರಿಸಿ ನುಣ್ಣಗೆ ರುಬ್ಬಿ. ನಂತರ ಮಜ್ಜಿಗೆ, ಉಪ್ಪು , ಬೇಕಾದಷ್ಟು ನೀರು ಸೇರಿಸಿ. ನಂತರ ತುಪ್ಪ ಯಾ ಎಣ್ಣೆಯಲ್ಲಿ ಸಾಸಿವೆ ಸೇರಿಸಿ ಒಗ್ಗರಣೆ ಕೊಡಿ. ಮೆಂತೆ ತಂಪು ಗುಣ ಹೊಂದಿರುವ ಕಾರಣ ಬೇಸಿಗೆಯಲ್ಲಿ ಇದರ ತಂಬುಳಿ ಮಾಡಿ ಸೇವಿಸಿದರೆ ದೇಹ ತಂಪಾಗುವುದು.

ಒಂದೆಲಗದ ಸೊಪ್ಪಿನ ತಂಬುಳಿ
ಬೇಕಾಗುವ ಸಾಮಗ್ರಿ: 1 ಕಪ್‌ ಒಂದೆಲಗದ ಸೊಪ್ಪು, 1/2 ಕಪ್‌ ತೆಂಗಿನ ತುರಿ, 2 ಕಪ್‌ ಸಿಹಿ ಮೊಸರು ಯಾ ಮಜ್ಜಿಗೆ, 2 ಕಾಳುಮೆಣಸು ಯಾ 1 ಹಸಿಮೆಣಸು, ರುಚಿಗೆ ತಕ್ಕಷ್ಟು ಉಪ್ಪು , 1/4 ಚಮಚ ಸಾಸಿವೆ, ಸಣ್ಣ ತುಂಡು ಕೆಂಪುಮೆಣಸು, 1 ಚಮಚ ತುಪ್ಪ.
ತಯಾರಿಸುವ ವಿಧಾನ: ಒಂದೆಲಗವನ್ನು ತೊಳೆದು, ಕಾಯಿತುರಿ, ಕಾಳುಮೆಣಸು ಯಾ ಹಸಿಮೆಣಸು ಸೇರಿಸಿ ಸ್ವಲ್ಪ ನೀರು ಹಾಕಿ ನುಣ್ಣಗೆ ರುಬ್ಬಿ. ನಂತರ ಮಜ್ಜಿಗೆ, ಉಪ್ಪು ಸೇರಿಸಿ ಸಾಕಷ್ಟು ತೆಳ್ಳಗೆ ಮಾಡಿ, ಸಾಸಿವೆ, ಕೆಂಪುಮೆಣಸು ಸೇರಿಸಿ ತುಪ್ಪದಲ್ಲಿ ಒಗ್ಗರಣೆ ಕೊಡಿ. ತಂಪು ಗುಣವುಳ್ಳ ಈ ತಂಬುಳಿ ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ.

ಕೊತ್ತಂಬರಿ ಸೊಪ್ಪಿನ ತಂಬುಳಿ
ಬೇಕಾಗುವ ಸಾಮಗ್ರಿ: 1 ಕಪ್‌ ಕೊತ್ತಂಬರಿ ಸೊಪ್ಪು , 1/2 ಕಪ್‌ ತೆಂಗಿನತುರಿ, 2-3 ಹಸಿಮೆಣಸು, ಸಿಹಿ ಮೊಸರು ಅಥವಾ ಮಜ್ಜಿಗೆ 4 ಕಪ್‌, 1/4 ಚಮಚ ಜೀರಿಗೆ, 1/2 ಚಮಚ ತುಪ್ಪ , 1 ಒಣಮೆಣಸು.
ತಯಾರಿಸುವ ವಿಧಾನ: ಕೊತ್ತಂಬರಿ ಸೊಪ್ಪಿನ ಬೇರು, ಬಲಿತ ದಂಟುಗಳನ್ನು ತೆಗೆದು, ಎಳೆಯ ದಂಟು ಮತ್ತು ಸೊಪ್ಪನ್ನು ತೆಗೆದು ತೊಳೆದು, ಹಸಿಮೆಣಸು, ಕಾಯಿತುರಿ ಸೇರಿಸಿ ನುಣ್ಣಗೆ ರುಬ್ಬಿ. ನಂತರ ಉಪ್ಪು ಮತ್ತು ಮಜ್ಜಿಗೆ ಸೇರಿಸಿ ತುಪ್ಪದಲ್ಲಿ ಜೀರಿಗೆ ಮತ್ತು ಒಣಮೆಣಸಿನ ಒಗ್ಗರಣೆ ಕೊಡಿ.

ಬಸಳೆ ಸೊಪ್ಪಿನ ತಂಬುಳಿ
ಬೇಕಾಗುವ ಸಾಮಗ್ರಿ: 10-15 ಎಲೆ ಬಸಳೆ, 1/2 ಚಮಮ ಜೀರಿಗೆ, 1/2 ಕಪ್‌ ತೆಂಗಿನತುರಿ, ಸ್ವಲ್ಪ ಬೆಣ್ಣೆ , ಉಪ್ಪು ರುಚಿಗೆ ತಕ್ಕಷ್ಟು , 1/2 ಕಪ್‌ ಮೊಸರು ಯಾ ಮಜ್ಜಿಗೆ, 1/2 ಚಮಚ ಸಾಸಿವೆ, ಸಣ್ಣ ತುಂಡು ಕೆಂಪು ಮೆಣಸು, 1/2 ಚಮಚ ಎಣ್ಣೆ.
ತಯಾರಿಸುವ ವಿಧಾನ: ಬಾಣಲೆ ಒಲೆಯ ಮೇಲಿಟ್ಟು ಬೆಣ್ಣೆ ಹಾಕಿ. ಬಿಸಿಯಾದಾಗ ತೊಳೆದು ಬಸಳೆ ಎಲೆಯನ್ನು ಸಣ್ಣಗೆ ಹೆಚ್ಚಿ ಹಾಕಿ ಹುರಿಯಿರಿ. ನಂತರ ಜೀರಿಗೆ ಹಾಕಿ ಹುರಿದು, ಕಾಯಿತುರಿ ಸೇರಿಸಿ ನುಣ್ಣ ರುಬ್ಬಿ. ನಂತರ ಮಜ್ಜಿಗೆ, ಉಪ್ಪು ಸೇರಿಸಿ ಎಣ್ಣೆಯಲ್ಲಿ ಸಾಸಿವೆ, ಕೆಂಪುಮೆಣಸು ಸೇರಿಸಿ ಒಗ್ಗರಣೆ ಕೊಡಿ. ಈ ತಂಬುಳಿಯು ಬಾಯಿಹುಣ್ಣು ಆದವರಿಗೆ ಒಳ್ಳೆಯ ಔಷಧಿ.

ತೊಂಡೆ ಸೊಪ್ಪಿನ ತಂಬುಳಿ
ಬೇಕಾಗುವ ಸಾಮಗ್ರಿ: 2 ಹಿಡಿ ತೊಂಡೆ ಸೊಪ್ಪು , 1 ಚಮಚ ಜೀರಿಗೆ, 3 ಕಪ್‌ ಸಿಹಿ ಮಜ್ಜಿಗೆ, 1/2 ಕಪ್‌ ತೆಂಗಿನತುರಿ, 1 ಚಮಚ ತುಪ್ಪ , 1 ಚಮಚ ಸಾಸಿವೆ.
ತಯಾರಿಸುವ ವಿಧಾನ: ಬಾಣಲೆ ಒಲೆಯ ಮೇಲಿಟ್ಟು ತುಪ್ಪ ಹಾಕಿ. ಬಿಸಿಯಾದಾಗ ತೊಂಡೆ ಸೊಪ್ಪು ಹಾಕಿ. ತುಪ್ಪದಲ್ಲಿ ಹುರಿದು ಜೀರಿಗೆ ಸೇರಿಸಿ ಕಾಯಿತುರಿ ಜೊತೆ ನುಣ್ಣಗೆ ರುಬ್ಬಿ. ನಂತರ ಮಜ್ಜಿಗೆ, ಉಪ್ಪು ಸೇರಿಸಿ ತುಪ್ಪದಲ್ಲಿ ಸಾಸಿವೆ ಒಗ್ಗರಣೆ ಕೊಡಿ. ಈ ತಂಬುಳಿಯು ಬಾಯಿಹುಣ್ಣು ಬೀಳುವವರಿಗೆ ಉತ್ತಮ ಔಷಧ.

-ಸರಸ್ವತಿ ಎಸ್‌. ಭಟ್‌

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.