ಛಪಾಕ್‌ ಸೋಲಿನ ಬಳಿಕ ದೀಪಿಕಾ


Team Udayavani, Jan 24, 2020, 5:13 AM IST

kaa-8

ಕೆಲದಿನಗಳ ಹಿಂದಷ್ಟೇ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಅಭಿನಯದ ಛಪಾಕ್‌ ಸಿನಿಮಾ ಅದ್ದೂರಿಯಾಗಿ ತೆರೆಗೆ ಬಂದಿತ್ತು. ಆದರೆ, ಛಪಾಕ್‌ ಸಿನಿಮಾ ಬಿಡುಗಡೆಗೂ ಮೊದಲು ಸದ್ದು ಮಾಡಿದಷ್ಟು, ಬಿಡುಗಡೆಯ ನಂತರ ಸದ್ದು ಮಾಡಲಿಲ್ಲ. ಅದರಲ್ಲೂ ಛಪಾಕ್‌ ಸಿನಿಮಾ ನಿರೀಕ್ಷಿತ ಗೆಲುವು ಕಾಣದಿರಲು ದೀಪಿಕಾ ಪಡುಕೋಣೆ ಅವರೇ ನೇರ ಕಾರಣ ಎನ್ನುವುದು ಅನೇಕ ಬಾಲಿವುಡ್‌ ಮಂದಿಯ ಅಭಿಪ್ರಾಯ. ತಮ್ಮ ಮದುವೆಯ ನಂತರ ತೆರೆಗೆ ಬಂದ ಛಪಾಕ್‌ ಸಿನಿಮಾದ ಮೇಲೆ ದೀಪಿಕಾಗೂ ಸಾಕಷ್ಟು ನಿರೀಕ್ಷೆಯಿತ್ತು. ಈಗ ಛಪಾಕ್‌ ಸಿನಿಮಾದ ಸೋಲಿನಿಂದ ದೀಪಿಕಾ ಕೂಡ ಕಂಗೆಟ್ಟಿದ್ದಾರೆ ಎನ್ನಲಾಗುತ್ತಿದೆ.

ಬಾಲಿವುಡ್‌ ಮೂಲಗಳ ಪ್ರಕಾರ, ಛಪಾಕ್‌ ಸಿನಿಮಾದ ನಂತರ ದೀಪಿಕಾ ಪಡುಕೋಣೆ ಅವರು ಬಂಗಾಲಿ ಮೂಲದ ನಟಿ, ಗಾಯಕಿ ಬಿನೋದಿನಿ ದಾಸಿ ಅವರ ಬಯೋಪಿಕ್‌ನಲ್ಲಿ ಅಭಿನಯಿಸಬೇಕಿತ್ತು. ಆದರೆ, ಛಪಾಕ್‌ ಸೋಲಿನ ನಂತರ ದೀಪಿಕಾ ಅವರು ಬಿನೋದಿನಿ ದಾಸಿ ಅವರ ಬಯೋಪಿಕ್‌ ಮಾಡಲು ಹಿಂದೇಟು ಹಾಕುತ್ತಿದ್ದಾರಂತೆ.

ಈ ಮೊದಲು ಬಿನೋದಿನಿ ದಾಸಿ ಅವರ ಕಥೆ ಮತ್ತು ಸ್ಕ್ರಿಪ್ಟ್ ಓದಿ ಸಿನಿಮಾ ಮಾಡಲು ಓಕೆ ಎಂದಿದ್ದ ದೀಪಿಕಾ ಈಗ ಆ ಬಯೋಪಿಕ್‌ನಲ್ಲಿ ಅಭಿನಯಿಸಲು ಆಸಕ್ತಿ ತೋರಿಸುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ. ಇನ್ನು ದೀಪಿಕಾ ಅವರಿಂದ ಸಕಾರಾತ್ಮಕ ಪ್ರತಿಕ್ರಿಯೆಗಳು ಬಾರದಿದ್ದರಿಂದ ಬೇಸತ್ತ ಚಿತ್ರತಂಡ, ಬಿನೋದಿನಿ ದಾಸಿ ಬಯೋಪಿಕ್‌ನಲ್ಲಿ ಅಭಿನಯಿಸುವಂತೆ ಐಶ್ವರ್ಯಾ ರೈ ಅವರಿಗೆ ಆಫ‌ರ್‌ ನೀಡಿದೆಯಂತೆ. ಬಿನೋದಿನಿ ದಾಸಿ ಅವರ ಕಥೆ ಮತ್ತು ಸಿನಿಮಾದ ಸ್ಕ್ರಿಪ್ಟ್ ನೋಡಿರುವ ಐಶ್ವರ್ಯಾ ರೈ ಈ ಬಯೋಪಿಕ್‌ನಲ್ಲಿ ನಟಿಸಲು ಗ್ರೀನ್‌ ಸಿಗ್ನಲ್‌ ನೀಡಿದ್ದಾರಂತೆ. ಪ್ರದೀಪ್‌ ಸರ್ಕಾರ್‌ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಿನೋದಿನಿ ದಾಸಿ ಅವರ ಬಯೋಪಿಕ್‌ನ ಪೂರ್ವ ತಯಾರಿ ಕೆಲಸಗಳು ಭರದಿಂದ ನಡೆಯುತ್ತಿದ್ದು, ಚಿತ್ರ ಇದೇ ಫೆಬ್ರವರಿ ವೇಳೆಗೆ ಸೆಟ್ಟೇರುವ ಸಾಧ್ಯತೆ ಇದೆ.

ಒಟ್ಟಾರೆ ದೀಪಿಕಾ ಪಡುಕೋಣೆ ಮತ್ತೂಂದು ಬಯೋಪಿಕ್‌ ಕೈ ಬಿಟ್ಟಿರುವುದಕ್ಕೆ ಬಾಲಿವುಡ್‌ ಅಂಗಳದಲ್ಲಿ ಅನೇಕ ಅನಿಸಿಕೆ, ಅಭಿಪ್ರಾಯಗಳು ವ್ಯಕ್ತವಾಗುತ್ತಿವೆೆ. ಬಯೋಪಿಕ್‌ ಚಿತ್ರವನ್ನು ಮಾಡುವುದರಿಂದ, ಒಂದು ಸಮುದಾಯ ಅಥವಾ ಒಂದು ಜನಾಂಗದಿಂದ ವಿವಾದಕ್ಕೆ ಒಳಗಾಗಬಹುದು ಎಂಬ ಆತಂಕ ಮೂಡಿರಬಹುದು. ಅದಕ್ಕಾಗಿ ಬಯೋಪಿಕ್‌ ಚಿತ್ರಕ್ಕೆ ದೀಪಿಕಾ ಆಸಕ್ತಿ ತೋರಿಲ್ಲ ಎನ್ನಲಾಗುತ್ತಿದೆ. ಅದೇನೆ ಇರಲಿ, ಕೆಲವರ್ಷಗಳ ಹಿಂದೆ ಬಾಲಿವುಡ್‌ನ‌ ಹಲವು ನಟಿಯರು ರಿಜೆಕ್ಟ್ ಮಾಡಿದ್ದ ಬಯೋಪಿಕ್‌ ಚಿತ್ರಗಳನ್ನ ಕೈಗೆತ್ತಿಕೊಂಡು ನಟಿಸಿ, ಯಶಸ್ಸು ಕಂಡಿದ್ದ ದೀಪಿಕಾ ಪಡುಕೋಣೆ ಈಗ ತಾನೇ ಮಾಡಬೇಕಾದ ಬಯೋಪಿಕ್‌ ಕೈಬಿಟ್ಟಿದ್ದು ವಿಪರ್ಯಾಸವೇ ಸರಿ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.