ರಾತ್ರಿ ನಿದ್ದೆ ಬರುವುದಿಲ್ಲವೆ?


Team Udayavani, Jun 28, 2019, 5:00 AM IST

14

ರಾತ್ರಿ ಬೇಗ ನಿದ್ರೆ ಬರೋದಿಲ್ಲ, ಬೆಳಗ್ಗೆ ಬೇಗ ಏಳುವುದಕ್ಕೂ ಆಗುವುದಿಲ್ಲ- ಇದು ಅನೇಕರ ಸಮಸ್ಯೆ. ಮಹಿಳೆಯರ ಪಾಲಿಗಂತೂ ಇದು ತುಂಬಾ ಕಷ್ಟದ ವಿಷಯ. ಇನ್ನೊಂದರ್ಧ ಗಂಟೆ ಮಲಗುತ್ತೇನೆ ಅಂತ ಅಲಾರಾಂನ ತಲೆ ಮೊಟಕುವಂತಿಲ್ಲ. ಯಾಕಂದ್ರೆ, ಏಳುವುದು ಚೂರು ಲೇಟಾದರೂ ಅಂದಿನ ಕೆಲಸಗಳು ಹಳಿ ತಪ್ಪುತ್ತವೆ. ಮಕ್ಕಳಿಗೆ ಸ್ಕೂಲ್‌ ಬಸ್‌ ತಪ್ಪುತ್ತದೆ, ಗಂಡನಿಗೂ ಆಫೀಸ್‌ಗೆ ಲೇಟಾಗುತ್ತದೆ. ಇನ್ನು ಉದ್ಯೋಗಸ್ಥ ಮಹಿಳೆಯರ ಪಾಡನ್ನು ಕೇಳುವುದೇ ಬೇಡ. ಹಾಗಾದ್ರೆ, ಈ ಸಮಸ್ಯೆಗೆ ಪರಿಹಾರವೇನು? ನಿದ್ರಾಹೀನತೆಯಿಂದ ಪಾರಾಗಿ, ಬೆಳಗ್ಗೆ ಉಲ್ಲಾಸದಿಂದ ಏಳಬೇಕು ಅಂತಿದ್ರೆ ಏನು ಮಾಡಬೇಕು ಅಂದಿರಾ?

– ರಾತ್ರಿ ತಡವಾಗಿ ಮಲಗುವ ಅಭ್ಯಾಸವಿದ್ದವರಿಗೆ ಬೆಳಗ್ಗೆ ಬೇಗ ಎಚ್ಚರವಾಗುವುದಿಲ್ಲ. ಹಾಗಾಗಿ, ಬೇಗ ಮಲಗುವುದನ್ನು ರೂಢಿಸಿಕೊಳ್ಳಿ.
– ಸಂಜೆ ವೇಳೆ ವ್ಯಾಯಾಮ ಅಥವಾ ಜಿಮ್‌ನಲ್ಲಿ ವರ್ಕ್‌ಔಟ್‌ ಮಾಡಿದರೆ ರಾತ್ರಿ ಚೆನ್ನಾಗಿ ನಿದ್ದೆ ಬರುತ್ತದೆ. ಹತ್ತು ನಿಮಿಷ ವಾಕಿಂಗ್‌ ಮಾಡಿದರೂ ಆದೀತು.
-ಆಹಾರ ಸೇವಿಸಿದ ತಕ್ಷಣ ಮಲಗುವುದು ಸರಿಯಲ್ಲ. ಇದು ಅಜೀರ್ಣ ಸಮಸ್ಯೆಯನ್ನುಂಟು ಮಾಡುವುದಲ್ಲದೆ, ನಿದ್ರಾಹೀನತೆಗೂ ಕಾರಣವಾಗುತ್ತದೆ. ಮಲಗುವ ಕನಿಷ್ಠ 3 ಗಂಟೆ ಮುಂಚೆ ಊಟ ಮಾಡಬೇಕು. ಮಾಂಸಾಹಾರವಾದರೆ 4-5 ಗಂಟೆಗಳ ಮುಂಚೆ ಸೇವಿಸಬೇಕು.
– ಮಗುವಿನಂತೆ ಮಲಗುವುದು ಅಂತಾರೆ. ಅಂದರೆ, ಮಕ್ಕಳಿಗೆ ಯಾವ ಚಿಂತೆಯೂ ಇರುವುದಿಲ್ಲ. ಈ ಕಾರಣದಿಂದಲೇ ಮಕ್ಕಳು ಹಾಸಿಗೆಗೆ ಜಾರಿದೊಡನೆ ನಿದ್ದೆ ಹೋಗುತ್ತಾರೆ. ಹಾಗೆಯೇ, ಮಲಗುವಾಗ ಎಲ್ಲ ಚಿಂತೆಗಳನ್ನು ದೂರ ಮಾಡಿದರೆ ಬೇಗ ನಿದ್ದೆ ಬರುತ್ತದೆ.
-ಮಲಗುವ ಮುನ್ನ ಹತ್ತು ನಿಮಿಷ ಕಣ್ಣು ಮುಚ್ಚಿ ಕುಳಿತು, ನಾಳೆ ಮಾಡಬೇಕಾದ ಕೆಲಸಗಳ ಕುರಿತು ಮನದಲ್ಲಿಯೇ ಲೆಕ್ಕಾಚಾರ ಹಾಕಿ. ನಂತರ ಐದು ನಿಮಿಷ ದೀರ್ಘ‌ವಾಗಿ ಉಸಿರಾಡಿ, ಎಲ್ಲ ವಿಚಾರಗಳನ್ನೂ ಮರೆತು ದಿಂಬಿಗೆ ತಲೆ ಕೊಡಿ.
– ಮಲಗುವ ಒಂದು ಗಂಟೆಗೂ ಮುನ್ನ ಟಿ.ವಿ. ಆಫ್ ಮಾಡಿ, ಮೊಬೈಲ್‌ ತೆಗೆದು ಪಕ್ಕಕ್ಕೆ ಇಡಿ.

ಪುಷ್ಪಲತಾ

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.