ಗರಂ ಗರಂ ಸಾರುಗಳು


Team Udayavani, Nov 22, 2019, 4:27 AM IST

pp-23

ಚಳಿಗಾಲಕ್ಕೆ ನಾಲಗೆಗೆ ಹಿತವಾಗುವ, ಜೀರ್ಣಕ್ರಿಯೆಗೆ ಸಹಕಾರಿಯಾಗುವ ಹೆಚ್ಚು ಖರ್ಚಿಲ್ಲದೆ ಕಡಿಮೆ ಸಮಯದಲ್ಲಿ ತಯಾರಿಸಬಹುದಾದ ಆರೋಗ್ಯಕರ ಸಾರುಗಳ ರೆಸಿಪಿ ಇಲ್ಲಿದೆ.

ದೊಡ್ಡಪತ್ರೆ ಸಾರು
ಬೇಕಾಗುವ ಸಾಮಗ್ರಿ: ತೊಳೆದು ಸಣ್ಣಗೆ ಹೆಚ್ಚಿದ 4-6 ದೊಡ್ಡ ಪತ್ರೆ ಎಲೆಗಳು, 1 ಈರುಳ್ಳಿ, 1 ಚಮಚ ಹುಳಿರಸ, 1 ಚಮಚ ಬೆಲ್ಲದ ಪುಡಿ, 1 ಚಮಚ ಉದ್ದಿನಬೇಳೆ, 1/4 ಚಮಚ ಜೀರಿಗೆ, 3-4 ಕಾಳುಮೆಣಸು, 2-3 ಕೆಂಪುಮೆಣಸು, 1/4 ಚಮಚ ಸಾಸಿವೆ, 1/4 ಚಮಚ ಜೀರಿಗೆ, 7-8 ಕರಿಬೇವಿನೆಲೆ, 1 ಚಮಚ ತುಪ್ಪ.

ತಯಾರಿಸುವ ವಿಧಾನ: ಬಾಣಲೆ ಒಲೆಯ ಮೇಲಿಟ್ಟು ತುಪ್ಪ ಹಾಕಿ. ಬಿಸಿಯಾದಾಗ ಈರುಳ್ಳಿ ಚೂರು, ದೊಡ್ಡಪತ್ರೆ ಎಲೆಯ ಚೂರು ಹಾಕಿ ಚೆನ್ನಾಗಿ ಹುರಿಯಿರಿ. ಉದ್ದಿನಬೇಳೆ, ಜೀರಿಗೆ, ಕಾಳುಮೆಣಸು, ಕೆಂಪುಮೆಣಸು ಇವಿಷ್ಟನ್ನು ಹುರಿದು ಪುಡಿ ಮಾಡಿ. ನಂತರ ಮೇಲಿನ ಈರುಳ್ಳಿ ಚೂರು, ದೊಡ್ಡಪತ್ರೆಯ ಮಿಶ್ರಣಕ್ಕೆ ಹಾಕಿ. ಉಪ್ಪು, ಹುಳಿ, ಬೆಲ್ಲ , ಸ್ವಲ್ಪ ನೀರು ಹಾಕಿ ಕುದಿಸಿ. ನಂತರ ಸಾಸಿವೆ, ಜೀರಿಗೆ, ಕರಿಬೇವಿನೆಲೆಯ ಒಗ್ಗರಣೆ ಕೊಡಿ. ಈಗ ಘಮಘಮಿಸುವ ಸಾರು ಸವಿಯಲು ಸಿದ್ಧ.

ಕರಿಮೆಣಸು ಸಾರು
ಬೇಕಾಗುವ ಸಾಮಗ್ರಿ: 2 ಚಮಚ ತುಪ್ಪ , 1 ಚಮಚ ಎಣ್ಣೆ, 1 ಟೇಬಲ್‌ ಚಮಚ ಕರಿಮೆಣಸು, 1 ಚಮಚ ಜೀರಿಗೆ, 4-5 ಮೆಂತೆಕಾಳು, 1/2 ಚಮಚ ಸಾಸಿವೆ, 1/2 ಕಪ್‌ ತೊಗರಿಬೇಳೆ, 1-2 ಟೊಮೆಟೊ, 1-2 ಬೆಳ್ಳುಳ್ಳಿ ಎಸಳು, 1 ಈರುಳ್ಳಿ , 2 ಕೆಂಪುಮೆಣಸು, 1 ಎಸಳು ಕರಿಬೇವು, ರುಚಿಗೆ ತಕ್ಕಷ್ಟು ಉಪ್ಪು.

ತಯಾರಿಸುವ ವಿಧಾನ: ಬಾಣಲೆ ಒಲೆಯ ಮೇಲಿಟ್ಟು ತುಪ್ಪ ಹಾಕಿ. ಬಿಸಿಯಾದಾಗ ಜೀರಿಗೆ, ಕರಿಮೆಣಸು, ಮೆಂತೆಕಾಳು ಹಾಕಿ ಹುರಿಯಿರಿ. ತಣ್ಣಗಾದ ಮೇಲೆ ಪುಡಿ ಮಾಡಿ. ಟೊಮೆಟೊ ತೊಗರಿಬೇಳೆ ಸ್ವಲ್ಪ ನೀರು ಸೇರಿಸಿ ಕುಕ್ಕರಿನಲ್ಲಿಟ್ಟು ಬೇಯಿಸಿ. ನಂತರ ಬಾಣಲೆ ಒಲೆಯ ಮೇಲಿಟ್ಟು ತುಪ್ಪ , ಎಣ್ಣೆ ಹಾಕಿ. ಬಿಸಿಯಾದಾಗ ಸಾಸಿವೆ ಹಾಕಿ. ಸಾಸಿವೆ ಸಿಡಿದಾಗ ಬೆಳ್ಳುಳ್ಳಿ ಎಸಳು, ನೀರುಳ್ಳಿ ಹಾಕಿ ಹುರಿದು, ಬೇಯಿಸಿದ ತೊಗರಿಬೇಳೆ, ಟೊಮೆಟೊ, ನೀರು, ಮಾಡಿಟ್ಟ ಪುಡಿ ಹಾಕಿ ಕುದಿಸಿ. ಉಪ್ಪು ಹಾಕಿ. 5-10 ನಿಮಿಷ ಕುದಿಸಿ. ನಂತರ ಒಲೆಯಿಂದ ಕೆಳಗಿಳಿಸಿ. ಈಗ ಕರಿಮೆಣಸು ಸಾರು ಅನ್ನದೊಂದಿಗೆ ಸವಿಯಲು ಹಿತವಾಗಿರುತ್ತದೆ.

ತೊಗರಿಬೇಳೆ ಗರಂ ಸಾರು
ಬೇಕಾಗುವ ಸಾಮಗ್ರಿ: 1/2 ಕಪ್‌ ತೊಗರಿಬೇಳೆ, 2-3 ಟೊಮೆಟೊ ಹಣ್ಣು , 2 ಚಮಚ ಕೊತ್ತಂಬರಿ ಬೀಜ, 1/4 ಚಮಚ ಸಾಸಿವೆ, 1/4 ಚಮಚ ಜೀರಿಗೆ, 1/4 ಚಮಚ ಕಾಳುಮೆಣಸು, 2-3 ಒಣಮೆಣಸು, 2 ಎಸಳು ಕರಿಬೇವು, 2 ಚಮಚ ಎಣ್ಣೆ, ಚಿಟಿಕೆ ಇಂಗು, 1/2 ಚಮಚ ಬೆಲ್ಲ, 1/4 ಕಪ್‌ ತೆಂಗಿನತುರಿ, 1/4 ಚಮಚ ಕೆಂಪುಮೆಣಸಿನ ಪುಡಿ, ಉಪ್ಪು ರುಚಿಗೆ ತಕ್ಕಷ್ಟು.

ತಯಾರಿಸುವ ವಿಧಾನ: ತೊಗರಿಬೇಳೆ ತೊಳೆದು, ಸ್ವಲ್ಪ ನೀರು ಸೇರಿಸಿ ಕುಕ್ಕರಿಗೆ ಹಾಕಿ ಬೇಯಿಸಿ. ಟೊಮೆಟೊ ಸಣ್ಣಗೆ ತುಂಡು ಮಾಡಿ. ಉಪ್ಪು , ಬೆಲ್ಲ, ಮೆಣಸಿನ ಪುಡಿ, ಸ್ವಲ್ಪ ನೀರು ಹಾಕಿ ಬೇಯಿಸಿ. ಕೊತ್ತಂಬರಿ ಬೀಜ, ಸಾಸಿವೆ, ಮೆಂತೆ, ಜೀರಿಗೆ, ಕಾಳುಮೆಣಸು, ಒಣಮೆಣಸು ಸ್ವಲ್ಪ ಎಣ್ಣೆ ಹಾಕಿ ಹುರಿದು ತೆಂಗಿನತುರಿ, ಸ್ವಲ್ಪ ನೀರು ಸೇರಿಸಿ ರುಬ್ಬಿ. ಬೆಂದ ಟೊಮೆಟೊಕ್ಕೆ ಬೆಂದ ಬೇಳೆ, ರುಬ್ಬಿದ ಮಿಶ್ರಣ, ಬೇಕಾದಷ್ಟು ನೀರು ಸೇರಿಸಿ ತೆಳ್ಳಗೆ ಮಾಡಿ ಕುದಿಸಿ. ಕರಿಬೇವು, ಕೊತ್ತಂಬರಿಸೊಪ್ಪು ಹಾಕಿ ಸಾಸಿವೆ, ಇಂಗಿನ ಒಗ್ಗರಣೆ ಕೊಡಿ.

ಮೆಂತೆಸೊಪ್ಪಿನ ಸಾರು
ಬೇಕಾಗುವ ಸಾಮಗ್ರಿ: 1/2 ಕಪ್‌ ತೊಗರಿಬೇಳೆ, 1 ಕಂತೆ ಮೆಂತೆ ಸೊಪ್ಪು, 2 ಚಮಚ ಸಾರಿನ ಪುಡಿ, 1/2 ಚಮಚ ಬೆಲ್ಲ, 1/2 ಚಮಚ ಹುಳಿರಸ, 1 ಚಮಚ ಸಾಸಿವೆ, 1 ಒಣಮೆಣಸು, ಸ್ವಲ್ಪ ಕರಿಬೇವಿನೆಲೆ, 1 ಚಮಚ ಎಣ್ಣೆ , ರುಚಿಗೆ ತಕ್ಕಷ್ಟು ಉಪ್ಪು.

ತಯಾರಿಸುವ ವಿಧಾನ: ತೊಗರಿಬೇಳೆಗೆ ಸ್ವಲ್ಪ ನೀರು ಹಾಕಿ ಕುಕ್ಕರಿನಲ್ಲಿಟ್ಟು ಬೇಯಿಸಿ. ಮೆಂತೆಸೊಪ್ಪು ತೊಳೆದು ಸಣ್ಣಗೆ ಹೆಚ್ಚಿಡಿ. ನಂತರ ಬೆಂದ ತೊಗರಿಬೇಳೆ, ಸಾರಿನಪುಡಿ, ಉಪ್ಪು , ಹುಳಿ, ಬೆಲ್ಲ, ಸಣ್ಣಗೆ ತುಂಡು ಮಾಡಿದ ಮೆಂತೆಸೊಪ್ಪು , ಬೇಕಾದಷ್ಟು ನೀರು ಸೇರಿಸಿ ತೆಳ್ಳಗೆ ಮಾಡಿ ಕುದಿಸಿ. ನಂತರ ಎಣ್ಣೆಯಲ್ಲಿ ಸಾಸಿವೆ, ಕರಿಬೇವಿನೆಲೆಯ ಒಗ್ಗರಣೆ ಕೊಡಿ.

ಪುನರ್ಪುಳಿ ಸಿಪ್ಪೆ ಸಾರು
ಬೇಕಾಗುವ ಸಾಮಗ್ರಿ: 1 ಕಪ್‌ ಒಣಗಿದ ಪುನರ್ಪುಳಿ ಸಿಪ್ಪೆ , 1/2 ಅಚ್ಚು ಬೆಲ್ಲ, 1/2 ಚಮಚ ಕೆಂಪುಮೆಣಸಿನ ಪುಡಿ, ರುಚಿಗೆ ತಕ್ಕಷ್ಟು ಉಪ್ಪು, 1 ಚಮಚ ಸಾಸಿವೆ, 1 ಕೆಂಪುಮೆಣಸು, 1 ಚಮಚ ಎಣ್ಣೆ.

ತಯಾರಿಸುವ ವಿಧಾನ: ಪುನರ್ಪುಳಿ ಸಿಪ್ಪೆಯನ್ನು ಚೆನ್ನಾಗಿ ತೊಳೆದು ಒಂದು ಪಾತ್ರೆಗೆ 2 ಕಪ್‌ ನೀರು ಹಾಕಿ ಸಿಪ್ಪೆಯನ್ನು ಕಿವುಚಿ, ರಸ ತೆಗೆಯಿರಿ. ನಂತರ ಸಿಪ್ಪೆ ಎಸೆದು, ಉಳಿದ ನೀರಿಗೆ ಉಪ್ಪು, ಬೆಲ್ಲ, ಮೆಣಸಿನ ಪುಡಿ ಹಾಕಿ ಕುದಿಸಿ. ನಂತರ ಎಣ್ಣೆಯಲ್ಲಿ ಸಾಸಿವೆ, ಕೆಂಪುಮೆಣಸಿನ ತುಂಡು ಹಾಕಿ ಒಗ್ಗರಣೆ ಕೊಡಿ.

ಸರಸ್ವತಿ ಎಸ್‌. ಭಟ್‌

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.