ಆರೋಗ್ಯಕರ ಜ್ಯೂಸ್‌ಗಳು


Team Udayavani, Mar 20, 2020, 4:30 AM IST

Juice

ಬೇಸಿಗೆಯ ಬೇಗೆಯನ್ನು ತಣಿಸಲು ವಿವಿಧ ಬಗೆಯ ಜ್ಯೂಸ್‌ ಗಳನ್ನು ಮನೆಯಲ್ಲಿಯೇ ತಯಾರಿಸಿ ಸೇವಿಸುವುದೊಳ್ಳೆಯದು.ಆರೋಗ್ಯಕರವಾದ ಮತ್ತು ರುಚಿಕರವಾದ ಜ್ಯೂಸ್‌ಗಳ ರೆಸಿಪಿ ಇಲ್ಲಿದೆ.

ತಾಳಿಬೊಂಡದ ಜ್ಯೂಸ್‌
ಬೇಕಾಗುವ ಸಾಮಾಗ್ರಿ: ತಾಳಿಬೊಂಡ (ತಾಟಿನುಂಗು)ದ ತಿರುಳು- 4, ಸಕ್ಕರೆ- 7 ಚಮಚ, ನಿಂಬೆರಸ- 1 ಚಮಚ.
ತಯಾರಿಸುವ ವಿಧಾನ: ತಾಳಿಬೊಂಡದ ತಿರುಳು ಮತ್ತು ಸಕ್ಕರೆಗೆ ಸ್ವಲ್ಪ ನೀರು ಸೇರಿಸಿ ನುಣ್ಣಗೆ ರುಬ್ಬಿ. ಇದಕ್ಕೆ ನಿಂಬೆರಸ, ಜ್ಯೂಸ್‌ನ ಹದಕ್ಕೆ ಬೇಕಾದಷ್ಟು ನೀರು ಸೇರಿಸಿ ಮತ್ತೂಮ್ಮೆ ರುಬ್ಬಿ. ಸ್ವಾದಿಷ್ಟಕರವಾದ ಜ್ಯೂಸ್‌ ಕುಡಿಯಲು ಸಿದ್ಧ. ತಾಳಿಬೊಂಡದ ಜ್ಯೂಸ್‌ ಸೇವಿಸುವುದರಿಂದ ಬಿಸಿಲಿನಲ್ಲಿ ಸಾಮಾನ್ಯವಾಗಿ ಕಾಡುವ ತಲೆಸುತ್ತು ಹಾಗೂ ಸುಸ್ತು ಮುಂತಾದ ಸಮಸ್ಯೆಗಳು ನಿವಾರಣೆಯಾಗುತ್ತದೆ.

ಕ್ಯಾರೆಟ್‌ ಜ್ಯೂಸ್‌
ಬೇಕಾಗುವ ಸಾಮಾಗ್ರಿ: ಕ್ಯಾರೆಟ್‌- 1, ಹಾಲು- 1 ಕಪ್‌, ಗೋಡಂಬಿ- 4, ಸಕ್ಕರೆ- 6 ಚಮಚ, ಏಲಕ್ಕಿ ಪುಡಿ ಚಿಟಿಕೆ.

ತಯಾರಿಸುವ ವಿಧಾನ: ಗೋಡಂಬಿಯನ್ನು ಸ್ವಲ್ಪ ಹಾಲಿನಲ್ಲಿ ಕಾಲು ಗಂಟೆ ನೆನೆಸಿ. ಕ್ಯಾರೆಟ್‌ಗೆ ಸ್ವಲ್ಪ ನೀರು ಸೇರಿಸಿ ಬೇಯಿಸಿ. ಆರಿದ ಮೇಲೆ ನೆನೆದ ಗೋಡಂಬಿ, ಸಕ್ಕರೆ, ಸ್ವಲ್ಪ ಹಾಲು ಸೇರಿಸಿ ರುಬ್ಬಿ. ನಂತರ ಉಳಿದ ಹಾಲು, ಏಲಕ್ಕಿ ಹುಡಿ, ಸ್ವಲ್ಪ ನೀರು ಸೇರಿಸಿ ಇನ್ನೊಮ್ಮೆ ರುಬ್ಬಿ ಸರ್ವಿಂಗ್‌ ಕಪ್‌ ಹಾಕಿ. ರುಚಿಕರವಾದ ಕ್ಯಾರೆಟ್‌ ಜ್ಯೂಸ್‌ ಸಿದ್ಧ. ಇದು ಕಣ್ಣುಗಳ ಮತ್ತು ತ್ವಚೆಯ ಆರೋಗ್ಯಕ್ಕೆ ಸಹಕಾರಿಯಾಗಿದೆ.

ಫ್ಯಾಷನ್‌ ಫ್ರೂ ಜ್ಯೂಸ್‌
ಬೇಕಾಗುವ ಸಾಮಾಗ್ರಿ: ಫ್ಯಾಶನ್‌ ಫ್ರೂಟ್‌- 1, ಸಕ್ಕರೆ- 7 ಚಮಚ.
ತಯಾರಿಸುವ ವಿಧಾನ: ಫ್ಯಾಶನ್‌ ಫ್ರೂಟ್‌ ತಿರುಳಿಗೆ ಸ್ವಲ್ಪ ನೀರು ಸೇರಿಸಿ ರುಬ್ಬಿ. ನಂತರ ಸೋಸಿ ಸಕ್ಕರೆ, ಎರಡು ದೊಡ್ಡ ಕಪ್‌ ನೀರು ಸೇರಿಸಿ ಚೆನ್ನಾಗಿ ಕದಡಿ. ಜೀರ್ಣಶಕ್ತಿ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಫ್ಯಾಶನ್‌ ಫ್ರೂಟ್‌ ಜ್ಯೂಸ್‌ ರೆಡಿ.

ಎಳ್ಳು ಜ್ಯೂಸ್‌
ಬೇಕಾಗುವ ಸಾಮಾಗ್ರಿ: ಕಪ್ಪು ಎಳ್ಳು- 2 ಚಮಚ, ಹಾಲು- 1 ದೊಡ್ಡ ಕಪ್‌, ಬಾದಾಮಿ- 3, ಖರ್ಜೂರ- 3.
ತಯಾರಿಸುವ ವಿಧಾನ: ಬಾದಾಮಿ ಮತ್ತು ಖರ್ಜೂರಗಳನ್ನು ಬೇರೆ ಬೇರೆಯಾಗಿ ನೀರಿನಲ್ಲಿ ಎರಡು ಗಂಟೆ ನೆನೆಸಿ. ಎಳ್ಳನ್ನು ಒಂದು ಗಂಟೆ ನೆನೆಸಿ. ನೆನೆದ ಬಾದಾಮಿಯ ಸಿಪ್ಪೆಯನ್ನು ತೆಗೆದು ಸಣ್ಣಗೆ ಹೆಚ್ಚಿ. ನಂತರ ನೆನೆದ ಎಳ್ಳು, ಬಾದಾಮಿ, ಖರ್ಜೂರ ಮತ್ತು ಸ್ವಲ್ಪ ನೀರು ಸೇರಿಸಿ ಮಿಕ್ಸಿಯಲ್ಲಿ ನುಣ್ಣಗೆ ರುಬ್ಬಿ. ಹಾಲು ಸೇರಿಸಿ ಇನ್ನೊಮ್ಮೆ ರುಬ್ಬಿ. ಬೇಕಿದ್ದರೆ ಸ್ವಲ್ಪ ನೀರು ಸೇರಿಸಿ ಹದಮಾಡಿಕೊಳ್ಳಿ. ದೇಹವನ್ನು ತಂಪಾಗಿಸುವುದಲ್ಲದೆ ಮೂಳೆಗಳನ್ನು ಗಟ್ಟಿಮಾಡುವ ಎಳ್ಳಿನ ಜ್ಯೂಸ್‌ ಕುಡಿಯಲು ಸಿದ್ಧ. ಸಿಹಿ ಜಾಸ್ತಿ ಬೇಕಿದ್ದರೆ ಸ್ವಲ್ಪ ಬೆಲ್ಲ ಸೇರಿಸಬಹುದು.

ಪ್ರೇಮಾ ಎಸ್‌. ಭಟ್‌

ಟಾಪ್ ನ್ಯೂಸ್

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.