ಸೋಶಿಯಲ್‌ ಮೀಡಿಯಾದಲ್ಲಿ ಕಹೋನಾ ಪ್ಯಾರ್‌ ಹೈ ಹುಡುಗಿ


Team Udayavani, Jun 14, 2019, 6:00 AM IST

Amisha-Patel

ಬಾಲಿವುಡ್‌ನ‌ ಸೂಪರ್‌ ಹಿಟ್‌ ಚಿತ್ರ ಕಹೋ ನಾ ಪ್ಯಾರ್‌ ಹೈ ನಿಮಗೆ ನೆನಪಿರಬಹುದು. 2000 ನೇ ಇಸವಿಯಲ್ಲಿ ತೆರೆಕಂಡ ಈ ಚಿತ್ರ ಅಂದಿನ ಕಾಲಕ್ಕೆ ಬಾಕ್ಸಾಫೀಸ್‌ನಲ್ಲಿ ಹಲವು ದಾಖಲೆಗಳನ್ನು ಬರೆದಿತ್ತು. ರಾಕೇಶ್‌ ರೋಷನ್‌ ನಿರ್ಮಾಣ ಮತ್ತು ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರ ಹೃತಿಕ್‌ ರೋಷನ್‌ ಮತ್ತು ಅಮಿಷಾ ಪಟೇಲ್‌ ಎನ್ನುವ ನವ ಪ್ರತಿಭೆಗಳನ್ನು ಬಾಲಿವುಡ್‌ ಅಂಗಳದಲ್ಲಿ ಸೂಪರ್‌ ಸ್ಟಾರ್ ಪಟ್ಟಕ್ಕೆ ಏರುವಂತೆ ಮಾಡಿತು. ಕಹೋ ನಾ ಪ್ಯಾರ್‌ ಹೈ ಚಿತ್ರದ ನಂತರ ನಾಯಕ ನಟ ಹೃತಿಕ್‌ ರೋಷನ್‌ ಸಾಲು ಸಾಲು ಸೂಪರ್‌ ಹಿಟ್‌ ಚಿತ್ರಗಳನ್ನು ನೀಡುವ ಮೂಲಕ ಬಾಲಿವುಡ್‌ನ‌ಲ್ಲಿ ಬಹುಬೇಡಿಕೆಯ ಹೀರೋಗಳ ಸಾಲಿನಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡರು.

ಅದೇ ರೀತಿ ಕಹೋ ನಾ ಪ್ಯಾರ್‌ ಹೈ ಚಿತ್ರದ ಯಶಸ್ಸಿನ ನಂತರ ನಾಯಕ ನಟಿ ಅಮಿಷಾ ಪಟೇಲ್‌ಗ‌ೂ ಸಾಲು ಸಾಲು ಚಿತ್ರಗಳ ಆಫ‌ರ್ ಬರೋದಕ್ಕೆ ಶುರುವಾಯಿತು. ಹಿಂದಿಯ ಜೊತೆಗೆ ತಮಿಳು, ತೆಲುಗು ಚಿತ್ರರಂಗದಲ್ಲೂ ಅಮಿಷಾಗೆ ಒಳ್ಳೆಯ ಚಿತ್ರಗಳ ಆಫ‌ರ್ ಬಂದವು. ಅಮಿಷಾ ಚಿತ್ರರಂಗಕ್ಕೆ ಕಾಲಿಟ್ಟ ಸುಮಾರು 18 ವರ್ಷಗಳಲ್ಲಿ ಸರಿಸುಮಾರು 35ಕ್ಕೂ ಹೆಚ್ಚು ಚಿತ್ರಗಳಲ್ಲಿ ನಾಯಕಿಯಾಗಿ, ಗೆಸ್ಟ್‌ ಅಪಿಯರೆನ್ಸ್‌ ಆಗಿ ಕಾಣಿಸಿಕೊಂಡಿದ್ದಾರೆ. ಆದರೆ, ಇಷ್ಟೊಂದು ದೊಡ್ಡ ಸಂಖ್ಯೆಯ ಚಿತ್ರಗಳಲ್ಲಿ ಅಭಿನಯಿಸಿದ್ದರೂ ಯಾವ ಚಿತ್ರಗಳೂ ಅಮಿಷಾಗೆ ಹೇಳಿಕೊಳ್ಳುವ ಮಟ್ಟಿಗೆ ಯಶಸ್ಸು ತಂದುಕೊಡಲಿಲ್ಲ. ಬಾಲಿವುಡ್‌, ಟಾಲಿವುಡ್‌, ಕಾಲಿವುಡ್‌ ಹೀಗೆ ಎಲ್ಲಾ ಚಿತ್ರರಂಗಗಳಲ್ಲೂ ಒಂದು ರೌಂಡ್‌ ಹೊಡೆದು ಬಂದರೂ ಅಮಿಷಾಗೆ ಸಕ್ಸಸ್‌ ರೇಟ್‌ ತುಂಬಾ ಕಡಿಮೆ ಅನ್ನೋದು ವಾಸ್ತವ ಸತ್ಯ.

ನಿಧಾನವಾಗಿ ನಾಯಕ ನಟಿಯಾಗಿ ಚಿತ್ರರಂಗದಲ್ಲಿ ಬೇಡಿಕೆ ಕಡಿಮೆಯಾಗುತ್ತಿದ್ದಂತೆ, ತಮ್ಮದೇ ಆದ ಪ್ರೊಡಕ್ಷನ್‌ ಕಂಪೆನಿ ಹುಟ್ಟುಹಾಕಿದ ಅಮಿಷಾ ನಿರ್ಮಾಣದತ್ತ ಮುಖ ಮಾಡಿದರು. ಆದರೆ ಅಲ್ಲೂ ಅಮಿಷಾಗೆ ಸಕ್ಸಸ್‌ ಅನ್ನೋದು ಮರೀಚಿಕೆಯಾಯಿತು. ತಾನು ಅಂದುಕೊಂಡಂತೆ ಯಾವ ಚಿತ್ರಗಳನ್ನೂ ಹೊರತರಲಾಗಲಿಲ್ಲ.

ಅದಾದ ಬಳಿಕ ಅಮಿಷಾ ಹೆಸರು ಸಿನಿಮಾಗಳಿಗಿಂತ ಬೇರೆ ಬೇರೆ ವಿಷಯಗಳಿಗೆ ಹೆಚ್ಚು ಸುದ್ದಿಯಾಗಲು ಶುರುವಾಯಿತು. ಉದ್ಯಮಿಯೊಬ್ಬರ ಜೊತೆ ಕೆಲಕಾಲ ಸುತ್ತಾಡುವ ಮೂಲಕ ಸುದ್ದಿಯಾದ ಅಮಿಷಾ, ಆನಂತರ “ಪೇಟಾ’ ಸಂಘಟನೆಯಲ್ಲಿ ಗುರುತಿಸಿಕೊಂಡು ಅಲ್ಲೂ ವಿವಾದದ ಮೂಲಕ ಸುದ್ದಿಯಾದರು. ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ವಿಷಯವನ್ನು ಮೈಮೇಲೆ ಎಳೆದುಕೊಂಡು ಸುದ್ದಿಯಾಗುತ್ತಿದ್ದಾರೆ. ಅದರಲ್ಲೂ ಕಳೆದ ಒಂದೆರಡು ವರ್ಷಗಳಿಂದ ಅಮಿಷಾ ತಮ್ಮ ಸಿನಿಮಾಗಳಿಗಿಂತ ಹೆಚ್ಚಾಗಿ ಅನಗತ್ಯ ವಿಷಯಗಳಿಗೆ ಸೋಶಿಯಲ್‌ ಮೀಡಿಯಾಗಳಲ್ಲಿ ಸಿಕ್ಕಾಪಟ್ಟೆ ಸುದ್ದಿಯಾಗುತ್ತಿದ್ದಾರೆ. ಇತ್ತೀಚೆಗೆ ಅಮಿಷಾ ಪಟೇಲ್‌ ಮಾಡಿಸಿದ್ದ ಹಾಟ್‌ ಫೋಟೋಶೂಟ್‌ ಕೂಡ ಈಗ ಸೋಶಿಯಲ್‌ ಮೀಡಿಯಾಗಳಲ್ಲಿ ಸಾಕಷ್ಟು ವೈರಲ್‌ ಆಗಿ ಸುದ್ದಿಯಾಗುತ್ತಿದೆ. ಕಪ್ಪು ಬಣ್ಣದ ಡ್ರೆಸ್‌ನಲ್ಲಿ ಸಖತ್‌ ಹಾಟ್‌ ಆಗಿ ಕಾಣಿಸಿಕೊಂಡಿರುವ ಅಮಿಷಾ, ಬಟ್ಟೆ ಜಾರುತ್ತಿದ್ದರೂ ಅದರ ಪರಿವೇ ಇಲ್ಲದಂತೆ ಫೋಟೋಗೆ ಪೋಸ್‌ ಕೊಟ್ಟಿದ್ದಾರೆ! ಸದ್ಯ ಆ ಲುಕ್‌ ಎಲ್ಲೆಡೆ ಹರಿದಾಡುತ್ತಿದ್ದು, ಅಮಿಷಾ ಪ್ರಚಾರಕ್ಕಾಗಿಯೇ ಇಂಥ ಗಿಮಿಕ್‌ ಮಾಡುತ್ತಿದ್ದಾರೆ ಅಂತ ಫ್ಯಾನ್ಸ್‌ ಕಾಲೆಳೆಯುತ್ತಿದ್ದಾರೆ.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.