ಚಳಿಗಾಲದಲ್ಲಿ ಮನೆ ಬೆಚ್ಚಗಿರಲಿ


Team Udayavani, Nov 15, 2019, 5:02 AM IST

ff-18

ಬೇಸಿಗೆಗಾಲದಲ್ಲಿ ತಂಪಾಗಿಯೂ ಚಳಿಗಾಲದಲ್ಲಿ ಬೆಚ್ಚಗೂ ಇಡುವ ಮನೆ ಯಾವುದು ತಿಳಿದಿದೆಯೇ? ಅದು ಮಣ್ಣಿನ ಗೋಡೆಯ ಹುಲ್ಲಿನ ಮನೆ. ಆದರೆ ಇಂದಿನ ದಿನಗಳಲ್ಲಿ ಕಾಂಕ್ರೀಟಿನ ಎತ್ತರದ ಕಟ್ಟಡದ ಗೋಡೆಗಳ ನಡುವೆ ವಾಸಿಸುವ ನಮಗೆ ಹವಮಾನದ ವೈಪರೀತ್ಯವನ್ನು ತಡೆಯಲು ಸಾಧ್ಯವಿಲ್ಲ.

ಹೀಗಾಗಿ ಬೇಸಿಗೆಗಾಲದಲ್ಲಿ ಫ್ಯಾನ್‌, ಎಸಿಗಳ ಮೊರೆ ಹೋದರೆ, ಚಳಿಗಾಲದಲ್ಲಿ ರೂಮ್‌ ಹೀಟರ್‌ಗಳನ್ನು ಬಳಸುತ್ತೇವೆ. ಚಳಿಗಾಲ ಸಮೀಪಿಸುತ್ತಿದ್ದ‌ಂತೆ ಮನೆಯನ್ನು ಹೇಗೆ ಬೆಚ್ಚಗಿರಿಸುವುದು ಹೇಗೆ ಎಂಬ ಪ್ರಶ್ನೆ ಎಲ್ಲರನ್ನೂ ಕಾಡಬಹುದು. ಹೀಗಿರುವಾಗ ಕೆಲವೊಂದು ಸುಲಭ ಉಪಾಯದಿಂದ ನಮ್ಮ ಮನೆಯನ್ನು ಬೆಚ್ಚಗಿರಿಸಿಕೊಳ್ಳಬಹುದು.

ದಪ್ಪನೆಯ, ಭಾರದ ಪರದೆ ಅಡ್ಡಬಿಡಿ
ಚಳಿಗಾಲದಲ್ಲಿ ನಮ್ಮ ಮನೆಯ ಕಿಟಕಿ ಪರದೆಗಳನ್ನು ದಪ್ಪನೆಯ, ಭಾರದ ಮತ್ತು ಗಾಢವರ್ಣದ ಬಟ್ಟೆಯಿಂದ ಮಾಡಿದ ಪರದೆಗಳನ್ನು ಹಾಕಿ. ಇದು ಸೂರ್ಯನ ಬೆಳಕನ್ನು ಹೀರಿ ಬೆಚ್ಚಗಿರುವುದು ಮಾತ್ರವಲ್ಲದೇ ಹೊರಗಿನ ತಣ್ಣನೆಯ ಗಾಳಿ ಮನೆಯೊಳಗೆ ಬಾರದಂತೆ ತಡೆಯುತ್ತದೆ.

ಗವಾಕ್ಷಿಗಳನ್ನು ತೆರೆದಿಡಿ
ಕಿಟಕಿಯ ಮೇಲ್ಭಾಗದ ಗವಾಕ್ಷಿಗಳನ್ನು ದಿನದ ಹೊತ್ತಿನಲ್ಲಿ ತೆರೆದಿಡುವ ಮೂಲಕ ಸಾಕಷ್ಟು ಸೂರ್ಯನ ಬೆಳಕು ಮನೆಯೊಳಗೆ ಬರುವಂತೆ ಮಾಡಬೇಕು. ಇದು ಮನೆಯೊಳಗಿನ ವಾತಾವರಣವನ್ನು ಬಿಸಿ ಮಾಡಿ ರಾತ್ರಿಯಿಡೀ ಬೆಚ್ಚಗಿರಿಸಲು ಸಹಕರಿಸುತ್ತದೆ.

ಕಾರ್ಪೆಟ್‌ ಹಾಸಿ
ಮನೆಯ ನೆಲದ ಮೇಲೆ ದಪ್ಪನೆಯ ಮತ್ತು ಭಾರದ ರತ್ನಗಂಬಳಿಯನ್ನು ಹರಡುವ ಮೂಲಕವು ಮನೆಯನ್ನು ಬೆಚ್ಚಗಿಡಬಹುದು. ಇದು ನೆಲದ ಮಣ್ಣಿನಿಂದ ಮೇಲಕ್ಕೇರುವ ತಣ್ಣನೆಯ ತಾಪಮಾನವನ್ನು ಮನೆಯೊಳಗೆ ಬಾರದಂತೆ ತಡೆಯುತ್ತದೆ. ಆದರೆ ಈ ದುಬಾರಿ ಕಾಪೆìಟ್‌ ಮೇಲೆ ಹೊರಗಿನ ಪಾದರಕ್ಷೆ ಅಥವಾ ಕೊಳಕು ಪಾದಗಳಿಂದ ತುಳಿಯಬಾರದಂತೆ ಎಚ್ಚರವಹಿಸಬೇಕು.

ಮೇಣದ ಬತ್ತಿ ಹಚ್ಚಿ
ಸಂಜೆಯಾಗುತ್ತಿಂದಂತೆ ಮನೆಯ ವಿವಿಧ ಕೋಣೆಯಳಲ್ಲಿ ಒಂದೆರಡು ಮೇಣದ ಬತ್ತಿಗಳನ್ನು ಹಚ್ಚಬೇಕು. ಅವುಗಳಲ್ಲಿ ಒಂದೆರಡು ಸುವಾಸಿತ ಮೇಣದ ಬತ್ತಿ ಇದ್ದರೆ ಉತ್ತಮ. ಮೇಣದ ಬತ್ತಿ ಅಲ್ಲದೆ ಎಣ್ಣೆಯ ದೀಪವನ್ನೂ ಉಪಯೋಗಿಸಬಹುದು. ಇದು ಮನೆಯನ್ನು ಬೆಚ್ಚಗಿಡುವಲ್ಲಿ ಸಹಕರಿಸುತ್ತದೆ.

ಸೂಕ್ತ ವಿದ್ಯುತ್‌ ದೀಪಗಳನ್ನು ಬೆಳಗಿಸಿ
ಟ್ಯೂಬ್‌ಲೈಟ್‌ ಮತ್ತು ಎಲ್ಲಿಡಿ ಬಲ್ಬ್ಗಳು ಶಾಖರಹಿತ ಅಥವಾ ಕಡಿಮೆ ಶಾಖ ನೀಡುವುದರಿಂದ ಅವುಗಳ ಬದಲಿಗೆ ಸಾಂಪ್ರದಾಯಿಕ ಟಂಗ್ಸ್‌ಟನ್‌ ಫಿಲಮೆಂಟ್‌ಬಲ್ಬ್ಗಳು ಉಪಯೋಗಿಸಿ ಇದು ಕೋಣೆಗೆ ಬೆಳಕಿನ ಜೊತೆಗೆ ಶಾಖವನ್ನು ನೀಡುತ್ತದೆ. ಈ ಬಲ್ಬ್ಗಳಿರುವಲ್ಲಿ ಸೀಲಿಂಗ್‌ ಫ್ಯಾನ್ನು ನಿಧಾನಗತಿಯಲ್ಲಿ ಚಲಾಯಿಸುವ ಮೂಲಕ ಬೆಚ್ಚನೆಯ ಗಾಳಿ ಇಡಿ ಕೋಣೆಗೆ ಹರಡುವಂತೆ ಮಾಡಬಹುದು.

ಸುಲಭಾ ಆರ್‌. ಭಟ್‌

ಟಾಪ್ ನ್ಯೂಸ್

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.