ಅತ್ತೆ-ಸೊಸೆ ವಿಚಾರ!


Team Udayavani, May 10, 2019, 5:50 AM IST

30

ಪ್ರತಿಯೊಬ್ಬ ಹೆಣ್ಣು ಮಗಳು ತನ್ನ ಮನೆಯಿಂದ ತನ್ನ ಕುಟುಂಬವನ್ನೇ ತೊರೆದು ಗಂಡನ ಮನೆಗೆ ಬಂದಿರುತ್ತಾಳೆ. ಹೊಸ ಮನೆಯಲ್ಲಿ ಎಲ್ಲರನ್ನೂ ತನ್ನವರೆಂದು ಅಂದುಕೊಳ್ಳುತ್ತಾಳೆ. ಅತ್ತೆ ಅಂದರೆ ಅವಳಿಗೆ ಮತ್ತೂಬ್ಬಳು ತಾಯಿ. ಮಗಳು ತಪ್ಪು ಮಾಡಿದಾಗ ತಿದ್ದಿ ಬುದ್ಧಿ ಹೇಳುವಂತೆ ಅತ್ತೆ ತನ್ನ ಸೊಸೆಗೂ ಬುದ್ಧಿ ಹೇಳಬೇಕು.

ಇದು ಒಬ್ಬರಿಬ್ಬರ ದೂರಲ್ಲ. ಎಲ್ಲರ ಮನೆ ದೋಸೆ ತೂತು ಅನ್ನುವಂತೆ ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕಂಡು ಬರುವಂಥಾ ಸಮಸ್ಯೆ. ಅತ್ತೆ-ಸೊಸೆ ನಡುವೆ ಅನ್ಯೋನ್ಯ ಸಂಬಂಧ ಇರುವುದು ಬಹಳ ವಿರಳ. ಹಲವರು ಅನ್ಯೋನ್ಯ ಇರುವಂತೆ ಸಮಾಜಕ್ಕೆ ತೋರಿಸಲು ಇನ್ನಿಲ್ಲದ ಕಷ್ಟಪಡುತ್ತಾರೆ. ಮನೆಯಿಂದ ಹೊರಗಡೆ ಮದುವೆ, ಪೂಜೆ ಎಂದಾಗ ಖುಷಿಯಿಂದ ಓಡಾಡುತ್ತಾರೆ. ಮನೆಯೊಳಗೆ ಮಾತ್ರ ಇಬ್ಬರೂ ಉತ್ತರ-ದಕ್ಷಿಣ. ಒಬ್ಬರನ್ನು ಕಂಡ್ರೆ ಇನ್ನೊಬ್ಬರಿಗಾಗಲ್ಲ.

ಹಾಗಂತ ಮದುವೆಯಾದ ಹೊಸದರಲ್ಲಿ ಹೀಗಿರುವುದಿಲ್ಲ. ಎಲ್ಲಾ ಅತ್ತೆಯಂದಿರೂ ಸೊಸೆಯನ್ನು ಪ್ರೀತಿಯಿಂದ ಬರಮಾಡಿಕೊಳ್ಳುತ್ತಾರೆ. ಅಕ್ಕಪಕ್ಕದ ಮನೆಯವರಲ್ಲಿ ಸೊಸೆಯ ಅಂದ-ಚಂದ, ಕೆಲಸದ ಅಚ್ಚುಕಟ್ಟು , ಶಿಸ್ತಿನ ಬಗ್ಗೆ ಗಂಟೆಗಟ್ಟಲೆ ಹೊಗಳುತ್ತಾರೆ. ಆದರೆ, ದಿನದಿಂದ ದಿನಕ್ಕೆ ಒಳ್ಳೆಯ ಗುಣಗಳನ್ನು ಬಿಟ್ಟು, ತಪ್ಪುಗಳೇ ಕಾಣತೊಡಗುತ್ತದೆ. ಯಾವ ಕೆಲಸವನ್ನೂ ನೀಟಾಗಿ ಮುಗಿಸಿಲ್ಲ ಅನ್ನೋದ್ರಿಂದ ತೊಡಗಿ ಹಿರಿಯರ ಮಾತಿಗೆ ಬೆಲೆನೇ ಕೊಡಲ್ಲಪ್ಪಾ ಅನ್ನೋವರೆಗೆ ಬಂದು ನಿಲ್ಲುತ್ತದೆ.

ನೆರೆಮನೆಯವರು ಬಂದರಂತೂ ಅವರ ಬಳಿ ಬರೀ ಸೊಸೆಯ ಕುರಿತಾದ ದೂರುಗಳೇ. “ಏನೂಂತ ನೋಡಿ ಒಪ್ಕೊಂಡ್ವೋ ನಮ್ಮ ಮಗನಿಗೆ ಇದಕ್ಕಿಂದ ಅದೆಷ್ಟೋ ಒಳ್ಳೆಯ ಹುಡುಗಿ ಸಿಗ್ತಾ ಇದ್ಲು’ ಅಂತ ಅಲವತ್ತುಕೊಳ್ಳುತ್ತಾರೆ. ತಮ್ಮ ಸೊಸೆ ಪಫೆìಕ್ಟ್ ಅಲ್ಲ ಅನ್ನೋದನ್ನು ಮತ್ತೆ ಮತ್ತೆ ಮನಸ್ಸಿಗೆ ಖಾತರಿಪಡಿಸುತ್ತಲೇ ಇರುತ್ತಾರೆ. ಇನ್ನು ಮಗಳು ಇದ್ದರಂತೂ ಅವಳ ಜತೆ ಹೋಲಿಕೆ ಮಾಡಿ ಸೊಸೆಯನ್ನು ತೆಗಳುವುದು ನಡೆಯುತ್ತದೆ. ಈ ರೀತಿಯಾಗಿ ಅತ್ತೆ-ಸೊಸೆ ನಡುವೆ ಅಂತರ ಬೆಳೆಯುತ್ತಾ ಹೋಗುತ್ತದೆ.

ಇದೆಲ್ಲದರ ಮಧ್ಯೆ ಮಗ, ಸೊಸೆ ಪರವಾಗೇ ನಿಲ್ತಾನೆ ಅನ್ನೋದು ಮತ್ತಷ್ಟು ಭಿನ್ನಾಭಿಪ್ರಾಯಕ್ಕೆ ಕಾರಣವಾಗುತ್ತದೆ. ನೀವು ಸೊಸೆಯಾಗಿದ್ದಾಗ ನಿಮ್ಮ ಗಂಡ ನಿಮ್ಮ ಪರವಾಗಿ ನಿಂತಿದ್ದು ಸರಿಯಾದರೆ ಮಗ ಮಾಡುವುದು ಯಾಕೆ ತಪ್ಪು$. ಎಲ್ಲರೂ ದೂಷಿಸುವವರೇ ಆದಾಗ, ಒಬ್ಬರಿಂದಲಾದರೂ ಪ್ರೀತಿಯ ಆಸರೆ ಬೇಕಿರುತ್ತದಲ್ವಾ.

ಆದರೆ, ಎಲ್ಲಾ ಅತ್ತೆಯಂದಿರೂ ತಿಳಿದುಕೊಳ್ಳಬೇಕು, ಎಲ್ಲರೂ ಸರ್ವಗುಣ ಸಂಪನ್ನರಲ್ಲ. ಎಲ್ಲರ ವ್ಯಕ್ತಿತ್ವದಲ್ಲೂ ಪಾಸಿಟಿವ್‌ ಗುಣಗಳ ಜತೆ ನೆಗೆಟಿವ್‌ ಗುಣಗಳೂ ಇರುತ್ತವೆ. ಎಲ್ಲಾ ಸರಿ-ತಪ್ಪುಗಳನ್ನು ಒಪ್ಪಿಕೊಂಡು ನಮ್ಮವರಾಗಿಸಿಕೊಳ್ಳುವುದೇ ಪರಿಪೂರ್ಣತೆ. ಬಹುತೇಕ ಪ್ರತಿಯೊಬ್ಬ ಅತ್ತೆಯೂ ತಾನೂ ಸೊಸೆಯಾಗಿಯೇ ಬಳಿಕ ಅತ್ತೆಯಾದೆ ಅನ್ನೋದನ್ನೇ ಮರೆತುಬಿಡುತ್ತಾರೆ. ಎಲ್ಲರೂ ಅಲ್ಲ, ಕೆಲವೊಬ್ಬರು. ಹೀಗಾಗಿಯೇ ಸೊಸೆಯ ವ್ಯಕ್ತಿತ್ವದಲ್ಲಿ ಹೊಸ ಹೊಸ ಸಮಸ್ಯೆಗಳು ಕಾಣಿಸಿಕೊಳ್ಳುತ್ತಲೇ ಇರುತ್ತದೆ.

ಹಾಗಂತ ಜಗಳ, ಮುನಿಸು ನಡೆಯಲೇಬಾರದು ಅಂತಲ್ಲ. ಅದ್ಯಾವುದೇ ಇರದ ಸಂಬಂಧಗಳು ಯಾವುದಿವೆ. ಎಲ್ಲಾ ಸಂಬಂಧಗಳು ಪ್ರೀತಿ, ಗೌರವದ ಜತೆ ಅಷ್ಟಿಷ್ಟು ಜಗಳ, ಕಿತ್ತಾಟ ನಡೆದಾಗಲೇ ಸರಿಯಾಗಿದೆ ಎಂದರ್ಥ. ಆದರೆ ಜಗಳ, ಆಗಿನ ಮಾತು ಎಲ್ಲವನ್ನೂ ಮರೆತು, “ಸ್ಸಾರಿ’ ಎಂದು ಮತ್ತೆ ಪ್ರೀತಿಯಿಂದ ಮುನ್ನಡೆಯುವ ಮನಸ್ಸಿರಬೇಕು ಅಷ್ಟೆ.

ಪ್ರತಿಯೊಬ್ಬ ಹೆಣ್ಣುಮಗಳು ತನ್ನ ಮನೆಯಿಂದ ತನ್ನ ಕುಟುಂಬವನ್ನೇ ತೊರೆದು ಗಂಡನ ಮನೆಗೆ ಬಂದಿರುತ್ತಾಳೆ. ಹೊಸ ಮನೆಯಲ್ಲಿ ಎಲ್ಲರನ್ನೂ ತನ್ನವರೆಂದು ಅಂದುಕೊಳ್ಳುತ್ತಾಳೆ. ಅತ್ತೆ ಅಂದರೆ ಅವಳಿಗೆ ಮತ್ತೂಬ್ಬಳು ತಾಯಿ. ಮಗಳು ತಪ್ಪು$ಮಾಡಿದಾಗ ತಿದ್ದಿ ಬುದ್ಧಿ ಹೇಳುವಂತೆ ಅತ್ತೆ ತನ್ನ ಸೊಸೆಗೂ ಬುದ್ಧಿ ಹೇಳಬೇಕು. ಸೊಸೆಯ ತಪ್ಪುಗಳನ್ನು ಎತ್ತಿ ಹಿಡಿದು ದೂಷಿಸುವ ಬದಲು ಸರಿಪಡಿಸಿಕೊಳ್ಳಲು ಸೂಚಿಸಬೇಕು. ಹೀಗಾದಾಗಲಷ್ಟೇ ಎಲ್ಲರ ಸೊಸೆಯೂ ಸರ್ವಗುಣ ಸಂಪನ್ನೆಯಾಗಿ ಬದಲಾಗಲು ಸಾಧ್ಯ.

ವಿನುತಾ ಪೆರ್ಲ

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.