ನೂರು ಮಾರ್ಕಿನ ಪ್ರಶ್ನೆ : ಇವತ್ತು ಬೆಳಗಿನ ತಿಂಡಿ ಏನು?


Team Udayavani, May 3, 2019, 6:00 AM IST

depositphotos_-AAAA

ಪ್ಲೇ ಹೋಂಗೆ ಕಳುಹಿಸಲು ಮೂರೂವರೆ ವರ್ಷದ ಮಗುವನ್ನು ಸಿದ್ಧಪಡಿಸುತ್ತಿದ್ದಳು ಅಮ್ಮ. “”ಇವತ್ತು ಏನು ತಿಂಡಿ ಅಮ್ಮಾ” ಎಂದು ಕೇಳಿದಾಗ ತಿಂಡಿಯನ್ನು ಪ್ಲೇಟಿನಲ್ಲಿ ಹಾಕಿ ಮಗುವಿನ ಎದುರು ತಂದಿಟ್ಟಳು. ತಕ್ಷಣ ಆ ಮಗು “”ಏನಮ್ಮಾ , ನಿನ್ನೇನೂ ಪಲಾವ್‌, ಇವತ್ತೂ ಅದೇ ತಿಂಡಿನಾ, ನನಗೆ ಬೇಡ. ಬೇರೇನಾದರೂ ಮಾಡಿಕೊಡು” ಎಂದಾಗ ಅಮ್ಮನಿಗೆ ಆಶ್ಚರ್ಯವಾಯಿತು. ಏಕೆಂದರೆ, ಹಿಂದಿನ ದಿನ ಮಾಡಿ ಉಳಿದಿದ್ದ ಪಲಾವ್‌ನ ಮಸಾಲೆಯನ್ನು ಇಂದು ಮಾಡಿದ ಬಿಸಿ ಅನ್ನದ ಜೊತೆ ಕಲೆಸಿಕೊಟ್ಟಿದ್ದಳು. ಹಿಂದಿನ ದಿನದ ತಿಂಡಿಯನ್ನೇ ಅಮ್ಮ ತನಗೆ ಕೊಡುತ್ತಿದ್ದಾಳೆ ಎಂದು ಅದನ್ನು ನಿರಾಕರಿಸಿತ್ತು ಆ ಪುಟ್ಟ ಬಾಲೆ.

ಪುಟ್ಟ ಪುಟ್ಟ ಕಂದಮ್ಮಗಳ ಇಂಥ ಬೆಳವಣಿಗೆ ನಿಜಕ್ಕೂ ಆಶ್ಚರ್ಯವನ್ನೇ ಉಂಟುಮಾಡುತ್ತಿದೆ. ಕಾಲ ಬದಲಾಗುತ್ತಿದೆಯೋ ಅಥವಾ ನಾಗರೀಕತೆ ಬೆಳೆಯುತ್ತ ಹೋದಂತೆ ಮಕ್ಕಳ ಮಾನಸಿಕ ಸ್ಥಿತಿಯೂ ಕಾಲಕ್ಕನುಗುಣವಾಗಿ ಹೊಂದಿಕೊಳ್ಳುತ್ತಿದೆಯಾ! ಎಂಬ ಉತ್ತರಕ್ಕಾಗಿ ನಾವೀಗ ತಡಕಾಡಬೇಕಾಗುತ್ತದೆ.

ಇಂದಿನ ಜಗತ್ತನ್ನು ಪ್ರತಿನಿಧಿಸುತ್ತಿರುವ ಹೊಸ ಪೀಳಿಗೆಗಳು ಈ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ಕೊಡಲು ಹೆಣಗಾಡುತ್ತಿದ್ದಾರೆ. ಏಕೆಂದರೆ, ಇಂದಿನ ಅರ್ಥವ್ಯವಸ್ಥೆಗೆ ಹೊಂದಿಕೊಳ್ಳಲು ದಂಪತಿಗಳಿಬ್ಬರೂ ಹೊರಗೆ ದುಡಿಯಬೇಕಾದ ಅನಿವಾರ್ಯತೆ ಎದುರಾಗಿದೆ. ಇಬ್ಬರಿಗೂ ಕೈತುಂಬಾ ಸಂಬಳ ಬರುವಾಗ ಇರುವ ಒಂದು ಮಗುವನ್ನು ಹೇಗೆಂದರೆ ಹಾಗೆ ಬೆಳೆಸಲು ಮನಸ್ಸು ಒಗ್ಗೀತೇ!

ಹಾಗಾಗಿ, ಬೆಳಗಿನ ಫ‌ಲಾಹಾರಕ್ಕೆ ಮಾಡಿದ ತಿಂಡಿ ಆಗಕ್ಕೆ ಮಾತ್ರ. ಡಬ್ಬಿಗೆ ಮತ್ತೂಂದು, ಮಧ್ಯಾಹ್ನದ ಊಟಕ್ಕೆ ಮಗದೊಂದು, ಸಾಯಂಕಾಲ ಮನೆಗೆ ಬಂದ ನಂತರ ಯಾವುದಾದರೂ ಸ್ನ್ಯಾಕ್ಸ್‌ . ಇಂಥ ವಾತಾವರಣಕ್ಕೆ ಹೊಂದಿಕೊಂಡ ಮಗು ನಿನ್ನೆ ಮಾಡಿದ ತಿಂಡಿಯನ್ನೇ ಇಂದು ಕೊಟ್ಟರೆ ನಿರಾಕರಿಸುವುದರಲ್ಲಿ ತಪ್ಪೇನಿದೆ? ತಮಗಿರುವ ಒಂದೇ ಮಗು ಊಟತಿಂಡಿಯನ್ನು ಸರಿಯಾಗಿ ಮಾಡುತ್ತಿಲ್ಲವೆಂಬ ಕಳವಳ ಪೋಷಕರಿಗೆ. ತಮ್ಮ ಮಗು ಮನೆಯಲ್ಲಿ ಮಾಡಿದ ತಿಂಡಿ, ತಿನಿಸುಗಳಿಗಿಂತ ಅಂಗಡಿಯಲ್ಲಿ ಮಾಡಿರುವ ಚಿಪ್ಸ್‌ , ಲೇಸ್‌, ಕುರ್‌ಕುರೆಗಳಂಥ ತಿಂಡಿಗಳನ್ನು, ಚಾಕಲೇಟ್‌ಗಳನ್ನು ಹೆಚ್ಚು ಇಷ್ಟಪಡುತ್ತಾರೆಂಬುದನ್ನು ಬಹುಶಃ ತಂದೆತಾಯಿಯರು ಮರೆತಿರಬಹುದು. ಸರಿ ಮನೆವೈದ್ಯರ (ಮಗುವಿನ ಸ್ಪೆಷಲಿಸ್ಟ್‌) ಬಳಿ ಧಾವಿಸುತ್ತಾರೆ. ಅವರು ಯಾವುದಾದರೊಂದು ಟಾನಿಕನ್ನು ಬರೆದುಕೊಟ್ಟರೆ ಮುಗಿಯಿತು. ಅವರಿಗಷ್ಟು ದುಡ್ಡು ತೆತ್ತು ಸಮಾಧಾನದಿಂದ ಮನೆಗೆ ತೆರಳುತ್ತಾರೆ. ಬೇರೆ ತಿಂಡಿಗಳನ್ನು ಗಬಗಬನೆ ತಿನ್ನುವ ಮಗು ಊಟವನ್ನು ಮಾತ್ರ ಏಕೆ ಮಾಡುತ್ತಿಲ್ಲ ಎಂಬುದನ್ನು ಯೋಚಿಸುವಷ್ಟು ವ್ಯವಧಾನವೆಲ್ಲಿರುತ್ತದೆ ಇಂದಿನ ಹೆತ್ತಮ್ಮಂದಿರಿಗೆ.

ಒಮ್ಮೆ ತಮ್ಮ ತಂದೆತಾಯಿಯರು ಬೆಳೆದ ರೀತಿ, ತಮ್ಮನ್ನು ಬೆಳೆಸಿದ ರೀತಿಯ ಬಗ್ಗೆ ಆಲೋಚಿಸಿ ಅತ್ತ ತಿರುಗಿ ನೋಡಿದರೆ ಬಹುಶಃ ಅವರಿಗೆ ಅರ್ಥವಾದೀತು. ಅಂದು ತಾಯಂದಿರು ಬೆಳಿಗ್ಗೆ ಐದು ಗಂಟೆಗೇ ಎದ್ದು ಒಂದು ಅನ್ನ, ಸಾರು, ಹುಳಿ ಮಾಡಿಬಿಟ್ಟರೆ ಮುಗಿಯಿತು. ಒಂಬತ್ತು ಗಂಟೆಯ ಹೊತ್ತಿಗೆ ಎಲ್ಲರಿಗೂ ಹೊಟ್ಟೆತುಂಬಾ ಬಡಿಸಿಬಿಡುತ್ತಿದ್ದರು. ಶಾಲೆಯ ಡಬ್ಬಿಗೂ ಅದೇ ಊಟ. ತಂಗಳನ್ನ ಉಳಿದಿದ್ದರೆ ಚಿತ್ರಾನ್ನ ಅಥವಾ ಮೊಸರನ್ನವೇ ಬೆಳಗಿನ ನಮ್ಮ ಫ‌ಲಾಹಾರ. ಸಾಯಂಕಾಲ ಶಾಲೆಯಿಂದ ಹಿಂದಿರುಗಿದ ನಂತರ ಮತ್ತೂಮ್ಮೆ ಊಟ ಮಾಡಿಬಿಟ್ಟರಾಯಿತು. ರಾತ್ರಿ ಬೇಕಾದವರು ಊಟ ಮಾಡುತ್ತಿದ್ದರು.

ಕರಾವಳಿ ಭಾಗದಲ್ಲಂತೂ ಜನಜೀವನ ತೀರಾ ಭಿನ್ನವಾಗಿತ್ತು. ಗೃಹಿಣಿಯರು ಬೆಳಗಿನ ಜಾವ ನಾಲ್ಕೂವರೆಗೆ ಎದ್ದು ಕುಸಲಕ್ಕಿ ಗಂಜಿಯನ್ನು ಬೇಯಲು ಇಟ್ಟುಬಿಟ್ಟರೆ ಶಾಲಾ ಸಮಯಕ್ಕೆ ಬೆಂದಿರುತ್ತಿತ್ತು. ಉಪ್ಪಿನಕಾಯಿ, ತುಪ್ಪದೊಂದಿಗೆ ಊಟ ಮಾಡಿಕೊಂಡು ಹೋದರೆ ಎಷ್ಟು ಸೆಕೆಗಾಲದಲ್ಲೂ ಬಾಯಾರಿಕೆಯಾಗುತ್ತಿರಲಿಲ್ಲ. ತಿಳಿಯನ್ನು ಬಸಿದು ಅನ್ನವನ್ನು ಒಂದು ಬಾಕ್ಸ್‌ನಲ್ಲಿ ಮಧ್ಯಾಹ್ನದ ಊಟಕ್ಕೆ ತೆಗೆದುಕೊಂಡು ಹೋಗುತ್ತಿದ್ದರು.

ಅಪರೂಪಕ್ಕೊಮ್ಮೆ ದೋಸೆ, ಇಡ್ಲಿ, ಒತ್ತುಶ್ಯಾವಿಗೆಯು ಫ‌ಲಾಹಾರಕ್ಕೆ ಸಿದ್ಧವಿರುತ್ತಿತ್ತು. ಅದು ಮಾಡಿದ ದಿವಸ ಬೆಳಗಿನಿಂದ ಸಂಜೆಯವರೆಗೆ ಅದೇ ತಿಂಡಿ. ಬೇಸರ ಪಟ್ಟುಕೊಂಡರೆ ನಮಗೇ ಪಂಗನಾಮ. ಹಾಗಾಗಿ ಎಲ್ಲರೂ ಮರುಮಾತನಾಡದೆ ತಣ್ಣಗಿದ್ದರೂ ಅದನ್ನೇ ತಿನ್ನುತ್ತಿದ್ದೆವು. ಬಿಸಿ ಮಾಡುವ ಪ್ರಮೇಯವೇ ಇರಲಿಲ್ಲ. ಹಬ್ಬ , ಹರಿದಿನಗಳಲ್ಲಿ ವಿಶೇಷ ತಿಂಡಿ ತಿನಿಸುಗಳು ತಯಾರಾಗುತ್ತಿದ್ದವು. ಎಲ್ಲರೂ ಬಹಳ ಇಷ್ಟಪಟ್ಟು ಸವಿಯು ತ್ತಿದ್ದೆವು. ಹಾಗಾಗಿ ಒಂದೊಂದು ಹಬ್ಬಕ್ಕೆ ಒಂದೊಂದು ರೀತಿಯ ತಿಂಡಿ ಗಳನ್ನು ಮಾಡುವ ಪರಿಪಾಠವನ್ನು ಬೆಳೆಸಿಕೊಂಡಿದ್ದರು. ಅರ್ಧ, ಒಂದು ಡಜನ್‌ ಮಕ್ಕಳಿರುತ್ತಿರುವ ಸಂಸಾರಗಳಲ್ಲಿ ಒಬ್ಬೊಬ್ಬರಿಗೂ ಇಷ್ಟವಾಗುವ ತಿಂಡಿಗಳನ್ನು ಮಾಡಿಕೊಡುವುದು ಅಸಾಧ್ಯದ ವಿಷಯವೇ ಸರಿ.

ಈ ದಿನಗಳಲ್ಲಿ ಎಲ್ಲವೂ ಅಯೋಮಯವಾಗಿದೆ. ಹೈಟೆಕ್‌ ಅಮ್ಮಂದಿರಿಗೆ ಸೂರ್ಯ ಉದಯವಾಗುವುದೇ ಏಳು ಗಂಟೆಯ ನಂತರ. ಅವರಿಗೆ ಮಕ್ಕಳನ್ನು ಬೆಳೆಸುವ ರೀತಿಯ ಅರಿವಿಲ್ಲವೋ, ಅಥವಾ ಅವರ ಕೈಯಲ್ಲಿರುವ ಕಾಂಚಾಣದ ಪ್ರಭಾವವೋ, ಅಥವಾ ತಮ್ಮ ಮಕ್ಕಳ ಬಗೆಗಿರುವ ಅತೀವ ಕಾಳಜಿಯೋ ಗೊತ್ತಿಲ್ಲ. ಮಕ್ಕಳ ಮಾನಸಿಕ ಬೆಳವಣಿಗೆಯಂತೂ ಈ ರೀತಿ ವ್ಯಕ್ತವಾಗುತ್ತಿದೆ. ಮಕ್ಕಳು ಹೇಳಿದಂತೆ ಕೇಳುತ್ತಾ ಅವರು ಹಾದಿತಪ್ಪಲು ಅಪರೋಕ್ಷವಾಗಿ ಸಹಾಯ ಮಾಡುತ್ತಿದ್ದಾರೆ. ಎಲ್ಲಾ ಮಕ್ಕಳೂ ಮನೆಯ ಊಟೋಪಚಾರಗಳನ್ನು ಮರೆತು ಹೊರಗಿನ ತಿಂಡಿತೀರ್ಥಗಳತ್ತ ಮನಸೋಲುತ್ತಿದ್ದಾರೆ.

ನಮ್ಮ ಪರಿಚಯದವರೊಬ್ಬರ ಮಗನ ವರ್ತನೆಯನ್ನು ಇಲ್ಲಿ ನಿದರ್ಶನವಾಗಿ ಕೊಡಬಹುದು. ಅವನಿಗೆ 10ನೇ ತರಗತಿಯಲ್ಲಿ ಒಳ್ಳೆಯ ಅಂಕಗಳು ಬಂದ ಕಾರಣ ಒಂದು ಒಳ್ಳೆಯ ಕಾಲೇಜಿನಲ್ಲಿ ಸೀಟು ಸಿಕ್ಕಿತ್ತು. ಆದರೆ, ಅವನು ಅಲ್ಲಿಗೆ ಸೇರಲು ಬಯಸದೆ ಬೇರೆ ಕಾಲೇಜನ್ನು ಆಯ್ಕೆಮಾಡಿಕೊಂಡದ್ದು ಎಲ್ಲರಿಗೂ ಬೇಸರ ಉಂಟುಮಾಡುತ್ತಿತ್ತು. ಕಾರಣ ಕೇಳಿದಾಗ ಅವನಿಂದ ಬಂದ ಉತ್ತರ “”ಆ ಕಾಲೇಜಿನ ಕ್ಯಾಂಟೀನ್‌ ಚೆನ್ನಾಗಿಲ್ಲ. ನಾನು ಈಗ ಸೇರಿರುವ ಕಾಲೇಜಿನ ಕ್ಯಾಂಟೀನ್‌ ಸೂಪರ್‌ ಆಗಿದೆ”. ಎಲ್ಲರೂ ಒಮ್ಮೆ ದಂಗಾಗಿ ಹೋದರು.

ಇದನ್ನೆಲ್ಲ ಗಮನಿಸುವಾಗ ನಾವು ಮಕ್ಕಳನ್ನು ಬೆಳೆಸುವ ರೀತಿಯಲ್ಲಿ ಎಡವುತ್ತಿದ್ದೇವೆಂದು ಭಾಸವಾಗುತ್ತಿದೆ. ಭವಿಷ್ಯದ ಪರಿಸ್ಥಿತಿಯನ್ನು ಅರಿಯಲು ಯಾರಿಗೂ ಸಾಧ್ಯವಿಲ್ಲ. ಯಾವಾಗ ಏನಾಗುತ್ತದೋ ಯಾರೂ ಅರಿಯರು. ಹಾಗಾಗಿ ಮಕ್ಕಳಿಗೆ ಕಷ್ಟ ಸುಖ ಏನೆಂದು ಗೊತ್ತಾಗುವ ರೀತಿಯಲ್ಲಿ ಬೆಳೆಸಬೇಕು. ಮುಂದೆ ಅವರಿಗೆ ಯಾವುದೇ ಪರಿಸ್ಥಿತಿ ಬಂದರೂ ನಿಭಾಯಿಸುವ ಛಾತಿಯಿರಬೇಕು. ಅತಿಯಾದ ಅಕ್ಕರೆ ಮಕ್ಕಳನ್ನು ಅಶಿಸ್ತಿನ ವಾತಾವರಣಕ್ಕೆ ದಬ್ಬುತ್ತದೆ ಎಂಬುದು ನೆನಪಿರಲಿ. ಗಿಡವಾಗಿ ಬಗ್ಗದ್ದು ಮರವಾದ ಮೇಲೆ ಖಂಡಿತಾ ಬಗ್ಗಲಾರದು. ಆದ್ದರಿಂದ ಎಳವೆಯಿಂದಲೇ ಮಕ್ಕಳ ಮನಸ್ಸನ್ನು ಹೇಳಿದ್ದನ್ನು ಅರ್ಥಮಾಡಿಕೊಳ್ಳುವಂಥ ಮನಃಸ್ಥಿತಿಗೆ ಒಗ್ಗಿಸಿ. ಹಾಗಾದಾಗ ಮಾತ್ರ ಭವಿಷ್ಯದಲ್ಲಿ ಅವರಿಂದ ಸದ್ವರ್ತನೆಯನ್ನು ನಿರೀಕ್ಷಿಸಲು ಸಾಧ್ಯ.

 ಪುಷ್ಪಾ ಎನ್‌.ಕೆ. ರಾವ್‌

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.