ಖಾಕಿ ರಾಣಿ!
Team Udayavani, May 10, 2019, 5:50 AM IST
90ರ ದಶಕದಲ್ಲಿ ಬಾಲಿವುಡ್ನಲ್ಲಿ ಮಿಂಚಿದ್ದ ಸಿನಿಪ್ರಿಯರ ಮನಗೆದ್ದಿದ್ದ, ಬಳಿಕ ವೈವಾಹಿಕ ಜೀವನಕ್ಕೆ ಕಾಲಿಟ್ಟು ಒಂದಷ್ಟು ಸಮಯ ತೆರೆಮರೆಗೆ ಸರಿದಿದ್ದ ಅನೇಕ ನಟಿಯರು ಸದ್ಯ ಬಾಲಿವುಡ್ನಲ್ಲಿ ಭರ್ಜರಿಯಾಗಿ ಸೆಕೆಂಡ್ ಇನ್ನಿಂಗ್ಸ್ ಆರಂಭಿಸುತ್ತಿದ್ದಾರೆ. ಮಾಧುರಿ ದೀಕ್ಷಿತ್, ಜೂಹಿ ಚಾವ್ಲಾ, ಐಶ್ವರ್ಯಾ ರೈ ಹೀಗೆ ಸಾಲು ಸಾಲು ನಾಯಕ ನಟಿಯರು ಈಗಾಗಲೇ ಬಾಲಿವುಡ್ನಲ್ಲಿ ಮತ್ತೂಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಈಗ ಈ ಸಾಲಿಗೆ ಮತ್ತೂಬ್ಬ ನಟಿಯ ಹೆಸರು ಸೇರ್ಪಡೆಯಾಗುತ್ತಿದೆ, ಅವರೇ ರಾಣಿ ಮುಖರ್ಜಿ.
ತನ್ನ ವಿಭಿನ್ನ ಪಾತ್ರಗಳ ಮೂಲಕ ಒಂದು ಕಾಲದಲ್ಲಿ ಬಾಲಿವುಡ್ ಸಿನಿಪ್ರಿಯರ ಹಾಟ್ ಫೇವರೆಟ್ ಹೀರೋಯಿನ್ ಎನಿಸಿಕೊಂಡಿದ್ದ ರಾಣಿ ಮುಖರ್ಜಿ, ಬಾಲಿವುಡ್ ನಿರ್ಮಾಪಕ ಆದಿತ್ಯ ಚೋಪ್ರಾ ಅವರನ್ನು ಮದುವೆಯಾದ ಬಳಿಕ ತೆರೆಮೇಲೆ ಕಾಣಿಸಿಕೊಳ್ಳುವುದು ಅಪರೂಪವಾಯಿತು. ಮದುವೆಯ ಬಳಿಕ ಸಿನಿಮಾದ ತೆರೆಮರೆಯ ಕೆಲಸಗಳಲ್ಲಿ ತೊಡಗಿಕೊಂಡ ರಾಣಿ, ನಟನೆಗಿಂತಲೂ ಹೆಚ್ಚಾಗಿ ತಮ್ಮ ಯಶ್ರಾಜ್ ಫಿಲಂಸ್ ಬ್ಯಾನರ್ನಲ್ಲಿ ನಿರ್ಮಾಣವಾಗುತ್ತಿದ್ದ ಸಿನಿಮಾಗಳ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು.
ಬಳಿಕ ಮರ್ದಾನಿ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಅಭಿನಯಿಸುವ ಮೂಲಕ ರಾಣಿ ಬಾಲಿವುಡ್ನಲ್ಲಿ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಿದ್ದರು. ಮರ್ದಾನಿ ಚಿತ್ರದಲ್ಲಿ ರಾಣಿ ಮುಖರ್ಜಿ ನಿರ್ವಹಿಸಿದ ಪಾತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಪ್ರೊಡಕ್ಷನ್ ಕೆಲಸಗಳ ನಡುವೆಯೇ ಸ್ವಲ್ಪ ಸಮಯದ ಬಿಡುವಿನ ಬಳಿಕ, ಕಳೆದ ವರ್ಷ ಮತ್ತೂಮ್ಮೆ ಹಿಚಿ ಚಿತ್ರದ ಮೂಲಕ ಮತ್ತೆ ಅಭಿಮಾನಿಗಳ ಮುಂದೆ ಬಂದಿದ್ದರು ರಾಣಿ ಮುಖರ್ಜಿ. ಈ ಚಿತ್ರ ಕೂಡ ಬಾಕ್ಸಾಫೀಸ್ನಲ್ಲಿ ಸಾಕಷ್ಟು ಸದ್ದು ಮಾಡಿದ್ದೂ ಅಲ್ಲದೇ ಆ ಬಹಳಷ್ಟು ಮೆಚ್ಚುಗೆಗೂ ಪಾತ್ರವಾಗಿತ್ತು.
ಈಗ ಮರ್ದಾನಿ ಚಿತ್ರಕ್ಕೆ ಚಿತ್ರಕಥೆ ಬರೆದಿದ್ದ ಗೋಪಿ ಪುತ್ರನ್, ಮರ್ದಾನಿ 2 ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಈ ಚಿತ್ರದಲ್ಲೂ ರಾಣಿ ಮುಖರ್ಜಿ ಮತ್ತೂಮ್ಮೆ ರಾಜಸ್ಥಾನಿ ಪೊಲೀಸ್ ಅಧಿಕಾರಿಯ ಗೆಟಪ್ನಲ್ಲಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಫಸ್ಟ್ಲುಕ್ ಹೊರಬಿದ್ದಿದೆ. ಚಿತ್ರದ ಫಸ್ಟ್ ಲುಕ್ಗೆ ಸೋಷಿಯಲ್ ಮೀಡಿಯಾಗಳಲ್ಲಿ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದ್ದು, ರಾಣಿ ಮುಖರ್ಜಿ ಕೂಡ ಮರ್ದಾನಿ 2 ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯ ಮಾತುಗಳನ್ನಾಡುತ್ತಿದ್ದಾರೆ. ಸದ್ಯ ಮರ್ದಾನಿ 2 ಚಿತ್ರದ ಚಿತ್ರೀಕರಣ ಭರದಿಂದ ನಡೆಯುತ್ತಿದ್ದು, ಇದೇ ವರ್ಷಾಂತ್ಯದೊಳಗೆ ಚಿತ್ರ ತೆರೆಗೆ ಬರಲಿದೆ. ಒಟ್ಟಾರೆ ಬಿಗ್ಸ್ಕ್ರೀನ್ ಮೇಲೆ ಸೆಕೆಂಡ್ ಇನ್ನಿಂಗ್ಸ್ ಶುರುಮಾಡಿರುವ ರಾಣಿ ಮುಖರ್ಜಿ ಸಿನಿ ಕೆರಿಯರ್ ಹೇಗಿರಲಿದೆ ಅನ್ನೋದು ಅನ್ನೋದು ಮರ್ದಾನಿ 2 ಚಿತ್ರ ರಿಲೀಸ್ ಆದ ಮೇಲಷ್ಟೇ ಗೊತ್ತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್