ನೆನಪುಗಳಲ್ಲಿ ಬದುಕಿರುವಳು!


Team Udayavani, Jul 19, 2019, 5:01 AM IST

Sridevi

ಬಾಲಿವುಡ್‌ನ‌ ಎವರ್‌ಗ್ರೀನ್‌ ಚೆಲುವೆ ಶ್ರೀದೇವಿ ಕಳೆದ 2018ರ ಫೆ. 24ರಂದು ತಮ್ಮ ಸಂಬಂಧಿಕರ ಮದುವೆಗೆ ಹೋದಾಗ ದುಬೈನ ಪ್ರತಿಷ್ಠಿತ ಹೊಟೇಲ್‌ನಲ್ಲಿ ಅಕಾಲಿಕ ನಿಧನರಾಗಿದ್ದರು. ಈ ಸಾವಿನ ಬಗ್ಗೆ ತನಿಖೆ ನಡೆಸಿದ್ದ ದುಬೈ ಪೊಲೀಸರು ಇದು ಆಕಸ್ಮಿಕ ಸಾವು, ಪಾನಮತ್ತರಾಗಿದ್ದರಿಂದ ಕಾಲು ಜಾರಿ ಬಾತ್‌ಟಬ್‌ನಲ್ಲಿ ಬಿದ್ದು ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವರದಿ ನೀಡಿದ್ದರು.

ಶ್ರೀದೇವಿಯವರ ನಿಧನದ ಸುದ್ದಿ ಸಹಜವಾಗಿಯೇ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಆಘಾತವನ್ನು ಉಂಟು ಮಾಡಿತ್ತು. ಮತ್ತೂಂದೆಡೆ ಶ್ರೀದೇವಿ ಅವರ ಅಕಾಲಿಕ ನಿಧನದ ಸುತ್ತ ಅನೇಕ ಅನುಮಾನ ಎದ್ದಿದ್ದವು. ಶ್ರೀದೇವಿಯವರದ್ದು ಸಹಜ ಸಾವಲ್ಲ, ಅದೊಂದು ಕೊಲೆ ಎಂದು ಅನೇಕರು ಅನುಮಾನ ವ್ಯಕ್ತಪಡಿಸಿದ್ದರು. ಕೆಲಕಾಲ ಈ ಬಗ್ಗೆ ಒಂದಷ್ಟು ಚರ್ಚೆ ನಡೆದು ಬಳಿಕ ವಿಷಯ ತಣ್ಣಗಾಗಿತ್ತು. ಇದೀಗ ಮತ್ತೆ ಶ್ರೀದೇವಿ ಸಾವಿನ ಸುದ್ದಿ ಚರ್ಚೆಗೆ ಬಂದಿದೆ.

ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ ಕೇರಳ ಡಿಜಿಪಿ ರಿಷಿರಾಜ್‌ ಸಿಂಗ್‌,”ಶ್ರೀದೇವಿ ಅವರದ್ದು ಆಕಸ್ಮಿಕ ಸಾವಲ್ಲ, ಇದು ಪೂರ್ವನಿಯೋಜಿತ ಕೊಲೆ. ಅವರ ಸಾವಲ್ಲಿ ಅನೇಕ ರೀತಿಯ ಅನುಮಾನಗಳಿವೆ, ಅದನ್ನು ಮುಚ್ಚಿಡಲಾಗಿದೆ. ಈ ಬಗ್ಗೆ ಹಲವು ಸಾಕ್ಷಿ ಆಧಾರಗಳು ಕೂಡ ಇವೆ. ಶ್ರೀದೇವಿ ಅವರ ಶವಪರೀಕ್ಷೆ ನಡೆಸಿದ್ದ ನನ್ನ ಸ್ನೇಹಿತ ವಿಧಿವಿಜ್ಞಾನ ತಜ್ಞ ಡಾ. ಉಮದತನ್‌ ಅವರು, ಶ್ರೀದೇವಿ ಸಾವಿನ ಕುರಿತು ಹಲವು ವಿಷಯಗಳನ್ನ ನನ್ನ ಬಳಿ ಪ್ರಸ್ತಾಪಿಸಿದ್ದಾರೆ. ಹಲವು ಸಾಂದರ್ಭಿಕ ಪುರಾವೆ ತೋರಿಸಿ, ಇದು ಆಕಸ್ಮಿಕ ಸಾವಲ್ಲ, ಇದು ಕೊಲೆ ಎಂದು ಹೇಳುತ್ತಿದ್ದರು. ಶ್ರೀದೇವಿ ಕೊಲೆಯಾದ ಜಾಗದ ಸುತ್ತಮುತ್ತಲಿನ ಸಾಕ್ಷಿಗಳ ಬಗ್ಗೆಯೂ ಮಾತನಾಡಿದ್ದರು’ ಎಂದು ಹೇಳುವ ಮೂಲಕ ಹೊಸ ಬಾಂಬ್‌ ಸಿಡಿಸಿದ್ದಾರೆ.

ಈಗಾಗಲೇ ಶ್ರೀದೇವಿ ಅವರ ನಿಗೂಢ ಸಾವಿನ ಬಗ್ಗೆ ಅನೇಕ ಹಿರಿಯ ಐಪಿಎಸ್‌ ಮಟ್ಟದ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದು, ಡಿಜಿಪಿ ದರ್ಜೆಯ ಹಿರಿಯ ಅಧಿಕಾರಿಯೊಬ್ಬರು ಇಂಥದ್ದೊಂದು ಹೇಳಿಕೆ ನೀಡಿರುವುದು ಮತ್ತೆ ಶ್ರೀದೇವಿಯವರ ಸಾವಿನ ವಿಷಯ ಚರ್ಚೆಗೆ ಬರುವಂತೆ ಮಾಡಿದೆ. ಆದರೆ ಈ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿರುವ ಶ್ರೀದೇವಿ ಪತಿ ಬೋನಿ ಕಪೂರ್‌, “ಇದೊಂದು ಅಸಂಬದ್ಧ ಹೇಳಿಕೆ, ಇಂತಹ ಹೇಳಿಕೆಗಳಿಗೆ ನಾನು ಉತ್ತರಿಸಲಾರೆ. ಶ್ರೀದೇವಿಯ ಸಾವು ಸದ್ಯಕ್ಕೆ ಮುಗಿದ ಅಧ್ಯಾಯ ಅದರ ಬಗ್ಗೆ ಅನಗತ್ಯ ಚರ್ಚೆಗಳು ಬೇಡ’ ಎಂದು ಹೇಳುವ ಮೂಲಕ ಈ ಆರೋಪವನ್ನ ಮತ್ತೆ ಅನುಮಾನದಿಂದ ನೋಡುವಂತೆ ಮಾಡಿದ್ದಾರೆ.

ಒಟ್ಟಾರೆ ನಾಲ್ಕೈದು ದಶಕಗಳ ಕಾಲ ಭಾರತೀಯ ಚಿತ್ರರಂಗದಲ್ಲಿ ಮೆರೆದಿದ್ದ ಮಹಾನ್‌ ನಟಿಯೊಬ್ಬಳ ಹೆಸರು ಆಕೆಯ ಅಭಿನಯ, ಸೌಂದರ್ಯಕ್ಕಿಂತ ಹೆಚ್ಚಾಗಿ ಸಾವಿನ ವಿಷಯಕ್ಕೇ ಆಗಾಗ್ಗೆ ಸುದ್ದಿಯಾಗುತ್ತಿರುವುದು ನಿಜಕ್ಕೂ ಆಕೆಯ ಅಭಿಮಾನಿಗಳಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ ಅನ್ನೋದಂತೂ ಸತ್ಯ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.