ಬಿಂಬುಳಿ ಸವಿ


Team Udayavani, Feb 8, 2019, 12:30 AM IST

18.jpg

ಮರದಲ್ಲಿ ಗೊಂಚಲು ಗೊಂಚಲುಗಳಾಗಿ ಬಿಡುವ ಬಿಂಬುಳಿಯ ಹೆಸರು ಕೇಳಿದೊಡನೆ ಅದರ ಹುಳಿಯನ್ನು ನೆನೆದು ನಾಲಿಗೆಯ ಅಡಿಯಲ್ಲಿ ಚೊರ್‌ ಎಂದು ನೀರೂರುತ್ತದೆ. ಬಾಲ್ಯದಲ್ಲಿ ಉಪ್ಪು ನಂಚಿಕೊಂಡು ಸವಿದ ಬಿಂಬುಳಿಯನ್ನು ಉಪಯೋಗಿಸಿ ಹಲವು ಸವಿರುಚಿಗಳನ್ನು ತಯಾರಿಸಬಹುದು.

ಬಿಂಬುಳಿ ಉಪ್ಪಿನಕಾಯಿ 
ಬೇಕಾಗುವ ಸಾಮಗ್ರಿ: ಬಿಂಬುಳಿ- ಇಪ್ಪತ್ತು, ಸಾಸಿವೆ- ಕಾಲು ಕಪ್‌, ಅರಸಿನ- ಎರಡು ಚಮಚ, ಇಂಗು ಸುವಾಸನೆಗಾಗಿ, ಮೆಂತೆ- ಒಂದು ಚಮಚ, ಉಪ್ಪು ರುಚಿಗೆ.

ತಯಾರಿಸುವ ವಿಧಾನ: ಕುದಿಯುತ್ತಿರುವ ಉಪ್ಪು$ ನೀರಿಗೆ ಹೆಚ್ಚಿದ ಬೀಂಪುಳಿಯನ್ನು ಹಾಕಿ ಕೂಡಲೆ ತೆಗೆದು ಜಾಲರಿಯಲ್ಲಿ ಆರಲು ಬಿಡಿ. ಉಪ್ಪು ನೀರನ್ನು ಚೆನ್ನಾಗಿ ಕುದಿಸಿ ಆರಲು ಬಿಡಿ. ಸಾಸಿವೆ ಮತ್ತು ಮೆಂತೆಯನ್ನು ಬೇರೆ ಬೇರೆಯಾಗಿ ಹುರಿದಿಟ್ಟುಕೊಳ್ಳಿ. ಮೆಣಸಿಗೆ ಸ್ವಲ್ಪ ಎಣ್ಣೆ ಹಾಕಿ ಹುರಿಯಿರಿ. ಇದಕ್ಕೆ ಇಂಗು ಮತ್ತು ಅರಸಿನ ಹಾಕಿ ಬಿಸಿ ಮಾಡಿಕೊಳ್ಳಿ. ಆರಿದ ನಂತರ ಇವುಗಳನ್ನು ಮಿಕ್ಸಿಯಲ್ಲಿ ಪುಡಿ ಮಾಡಿ. ನಂತರ ಸ್ವಲ್ಪ ಉಪ್ಪು ನೀರು ಸೇರಿಸಿ ಪುನಃ ರುಬ್ಬಿ ಬೇಯಿಸಿಟ್ಟ ಬಿಂಬುಳಿಗೆ ಸೇರಿಸಿ ಬೇಕಷ್ಟು ಉಪ್ಪು ನೀರು ಸೇರಿಸಿ ಚೆನ್ನಾಗಿ ಮಿಶ್ರಮಾಡಿ. ಈಗ ತಯಾರಾದ ಉಪ್ಪಿನಕಾಯಿಗೆ ಬೆಳ್ಳುಳ್ಳಿ ಒಗ್ಗರಣೆಯನ್ನು ಬೇಕಿದ್ದರೆ ನೀಡಬಹುದು. 

ಬಿಂಬುಳಿ ವಿದ್‌ ಸ್ವೀಟ್‌ಕಾರ್ನ್ ಕೋಸಂಬ್ರಿ
ಬೇಕಾಗುವ ಸಾಮಗ್ರಿ:
ಸಣ್ಣಗೆ ಹೆಚ್ಚಿದ ಬಿಂಬುಳಿ- ಎರಡು, ಕ್ಯಾರೆಟ್‌ ತುರಿ- ಆರು ಚಮಚ, ಮೂಲಂಗಿ ತುರಿ- ನಾಲ್ಕು ಚಮಚ, ಸ್ವೀಟ್‌ಕಾರ್ನ್- ಆರು ಚಮಚ, ಕೊತ್ತಂಬರಿಸೊಪ್ಪು$ಸ್ವಲ್ಪ$, ಹಸಿಮೆಣಸು- ಒಂದು, ತೆಂಗಿನ ತುರಿ- ಮೂರು ಚಮಚ, ಬ್ಲೇಕ್‌ಸಾಲ್ಟ್- ಅರ್ಧ ಚಮಚ, ಉಪ್ಪು ರುಚಿಗೆ ಬೇಕಷ್ಟು.

ತಯಾರಿಸುವ ವಿಧಾನ: ಮಿಕ್ಸಿಂಗ್‌ ಬೌಲ್‌ಗೆ ಮೇಲೆ ತಿಳಿಸಿದ ಎಲ್ಲ ಸಾಮಗ್ರಿಗಳನ್ನು ಹಾಕಿ ಚೆನ್ನಾಗಿ ಮಿಶ್ರಮಾಡಿ. ನಂತರ ಇದಕ್ಕೆ  ಕೆಂಪು ಮೆಣಸು, ಉದ್ದಿನಬೇಳೆ ಸೇರಿಸಿದ ಸಾಸಿವೆ ಒಗ್ಗರಣೆಯನ್ನು ಕರಿಬೇವಿನ ಜೊತೆ ತುಪ್ಪದಲ್ಲಿ ನೀಡಿ. ನಂತರ ಕೆಂಪು ಮೆಣಸನ್ನು ಹುಡಿಮಾಡಿ ಚೆನ್ನಾಗಿ ಮಿಶ್ರಮಾಡಿ.

ಮೆಣಸುಕಾಯಿ
ಬೇಕಾಗುವ ಸಾಮಗ್ರಿ:
ಬಿಳಿ ಎಳ್ಳು – ಎರಡು ಚಮಚ, ಕಪ್ಪು ಎಳ್ಳು- ಎರಡು ಚಮಚ, ಉದ್ದಿನಬೇಳೆ- ಎರಡು ಚಮಚ, ಕೆಂಪು ಮೆಣಸು- ಐದು, ತೆಂಗಿನ ತುರಿ- ಒಂದು ಕಪ್‌, ಬಿಂಬುಳಿ- ಎಂಟು, ಮೆಣಸಿನಪುಡಿ- ಒಂದು ಚಮಚ, ಬೆಲ್ಲ ಮತ್ತು ಉಪ್ಪು ರುಚಿಗೆ ಬೇಕಷ್ಟು.

ತಯಾರಿಸುವ ವಿಧಾನ: ಹೆಚ್ಚಿದ ಬಿಂಬುಳಿಗೆ ಉಪ್ಪು, ಮೆಣಸಿನಪುಡಿ, ಬೆಲ್ಲ ಹಾಗೂ ಬೇಕಷ್ಟು ನೀರು ಸೇರಿಸಿ ಬೇಯಲು ಇಡಿ. ಎಳ್ಳನ್ನು ಮೊದಲು ಹುರಿದು ತೆಗೆದುಕೊಳ್ಳಿ. ಅದೇ ಬಾಣಲೆಗೆ ಎರಡು ಚಮಚ ಎಣ್ಣೆ ಹಾಕಿ ಮೆಣಸು ಮತ್ತು ಉದ್ದಿನ ಬೇಳೆಯನ್ನು ಹುರಿಯಿರಿ. ನಂತರ ಹುರಿದ ಮಸಾಲೆಗಳನ್ನೆಲ್ಲ ತೆಂಗಿನ ತುರಿಯೊಡನೆ ಬೇಕಷ್ಟು ನೀರು ಸೇರಿಸಿ ನುಣ್ಣಗೆ ರುಬ್ಬಿ. ಬೇಯಿಸಿಟ್ಟ ಬಿಂಬುಳಿಗೆ ಇದನ್ನು ಸೇರಿಸಿ ಕರಿಬೇವು ಮತ್ತು ಸೀಳಿದ ಹಸಿಮೆಣಸಿನ ಜೊತೆ ಕುದಿಸಿ ಇಳಿಸಿ. ದಪ್ಪವಾದ ಗಸಿಯಂತಿರುವ ಇದಕ್ಕೆ ಸಾಸಿವೆ ಒಗ್ಗರಣೆಯನ್ನು ಕರಿಬೇವಿನ ಜೊತೆ ನೀಡಿ.

ಗೊಜ್ಜು 
ಬೇಕಾಗುವ ಸಾಮಗ್ರಿ:
ಬಿಂಬುಳಿ- ಆರು, ಕೆಂಪು ಮೆಣಸಿನಪುಡಿ- ಒಂದು ಚಮಚ, ಅರಸಿನ- ಕಾಲು ಚಮಚ, ರಸಂ ಪೌಡರ್‌- ಎರಡು ಚಮಚ, ಉಪ್ಪು ಮತ್ತು ಬೆಲ್ಲ ರುಚಿಗೆ ತಕ್ಕಷ್ಟು.

ತಯಾರಿಸುವ ವಿಧಾನ: ಸಣ್ಣಗೆ ಹೆಚ್ಚಿದ ಬಿಂಬುಳಿಗೆ ಬೆಲ್ಲ, ಉಪ್ಪು ಮೆಣಸಿನಪುಡಿ ಮತ್ತು ಅರಸಿನ ಸೇರಿಸಿ ಬೇಯಲು ಇಡಿ. ಇದು ಬೇಯುತ್ತಾ ಬರುವಾಗ ರಸಂ ಪೌಡರ್‌ ಹಾಕಿ ಸಣ್ಣ ಉರಿಯಲ್ಲಿ ಚೆನ್ನಾಗಿ ಕುದಿಸಿ. ಸ್ವಲ್ಪ ನೀರು ಆರಿದ ನಂತರ ಒಲೆಯಿಂದ ಇಳಿಸಿ. ಬೆಳ್ಳುಳ್ಳಿ ಮತ್ತು ಕರಿಬೇವು ಸೇರಿಸಿದ ಸಾಸಿವೆ ಒಗ್ಗರಣೆಯನ್ನು ತುಪ್ಪದಲ್ಲಿ ನೀಡಿ.

ಗೀತಸದಾ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.