ರುಚಿಕರ ನಿಪ್ಪಟ್ಟು-ವಡೆಗಳು


Team Udayavani, Aug 9, 2019, 5:00 AM IST

e-19

ಮಳೆಗಾಲ ಪ್ರಾರಂಭವಾದೊಡನೆ ಸಾಮಾನ್ಯವಾಗಿ ಸಂಜೆಯ ಕಾಫಿಗೆ ಏನಾದರು ಕರುಂಕುರು ಬೇಕೆಂದು ಮನ ಬಯಸುತ್ತದೆ. ಇಲ್ಲಿವೆ ಕೆಲವು ರಿಸಿಪಿಗಳು.

ಕ್ಯಾರೆಟ್‌ ವಡೆ
ಬೇಕಾಗುವ ಸಾಮಗ್ರಿ: ಕ್ಯಾರೆಟ್‌ತುರಿ- ಆರು ಚಮಚ, ಮೈದಾ- ಎರಡು ಚಮಚ, ಪುಟಾಣಿ ಕಡ್ಲೆ- ನಾಲ್ಕು ಚಮಚ, ಚಿರೋಟಿರವೆ- ನಾಲ್ಕು ಚಮಚ, ಅಕ್ಕಿಹುಡಿ- ಆರು ಚಮಚ, ಕಡ್ಲೆಹುಡಿ- ಆರು ಚಮಚ, ಹೆಚ್ಚಿದ ಹಸಿಮೆಣಸು- ಮೂರು, ಶುಂಠಿತರಿ- ಮೂರು ಚಮಚ, ಇಂಗು- ಸುವಾಸನೆಗಾಗಿ, ಹೆಚ್ಚಿದ ಕೊತ್ತಂಬರಿಸೊಪ್ಪು- ಆರು ಚಮಚ, ಉಪ್ಪು ರುಚಿಗೆ.

ತಯಾರಿಸುವ ವಿಧಾನ: ಕ್ಯಾರೆಟ್‌ನ್ನು ಸಣ್ಣಗೆ ತುರಿದು ಮಿಕ್ಸಿಂಗ್‌ ಬೌಲ್‌ಗೆ ಹಾಕಿ. ಇದಕ್ಕೆ ಶುಂಠಿತರಿ, ಹಸಿಮೆಣಸು, ಇಂಗು ಹಾಗೂ ಮೇಲೆ ತಿಳಿಸಿದ ಎಲ್ಲಾ ಸಾಮಗ್ರಿಗಳು ಹಾಗೂ ಸ್ವಲ್ಪ ನೀರು ಸೇರಿಸಿ ಚಪಾತಿ ಹಿಟ್ಟಿನ ಹದಕ್ಕೆ ಕಲಸಿಕೊಳ್ಳಿ. ನಂತರ, ನಾಲ್ಕು ಚಮಚ ಬಿಸಿ ಎಣ್ಣೆ ಹಾಕಿ ಪುನಃ ಹಿಟ್ಟನ್ನು ಚೆನ್ನಾಗಿ ಮಿಶ್ರಮಾಡಿ, ನಿಪ್ಪಟ್ಟಿನ ಹದಕ್ಕೆ ತಯಾರಿಸಿ. ನಂತರ, ಸಣ್ಣ ಲಿಂಬೆಗಾತ್ರದ ಉಂಡೆ ಮಾಡಿ ಪ್ಲಾಸ್ಟಿಕ್‌ ಹಾಳೆಗೆ ಎಣ್ಣೆ ಸವರಿ ತೆಳ್ಳಗೆ ತಟ್ಟಿ, ಕಾದ ಎಣ್ಣೆಯಲ್ಲಿ ಹದವಾಗಿ ಕರಿಯಿರಿ. ಸಂಜೆ ಹೊತ್ತಿಗೆ ಟೀಯೊಂದಿಗೆ ಸವಿಯಲು ಬಹಳ ರುಚಿ.

ಸಿರಿಧಾನ್ಯದ ವಡೆ
ಬೇಕಾಗುವ ಸಾಮಗ್ರಿ: ಸಿರಿಧಾನ್ಯ ಬರಗು- ಅರ್ಧ ಕಪ್‌, ಅಕ್ಕಿ ಹುಡಿ- ಒಂದು ಕಪ್‌, ಮೈದಾಹುಡಿ- ಆರು ಚಮಚ, ಚಿರೋಟಿ ರವೆ- ನಾಲ್ಕು ಚಮಚ, ಕಡ್ಲೆಹುಡಿ- ಅರ್ಧ ಕಪ್‌, ತೆಂಗಿನತುರಿ- ಎಂಟು ಚಮಚ, ಹಸಿಮೆಣಸು- ಒಂದು, ಖಾರಪುಡಿ- ಒಂದು ಚಮಚ, ಕೆಂಪುಮೆಣಸು- ಎರಡು, ಹೆಚ್ಚಿದ ಕರಿಬೇವು ಮತ್ತು ಕೊತ್ತಂಬರಿಸೊಪ್ಪು- ಎಂಟು ಚಮಚ, ಹುರಿದು ಸಿಪ್ಪೆತೆಗೆದ ಶೇಂಗಾತರಿ- ಎಂಟು ಚಮಚ, ಜೀರಿಗೆ ಮತ್ತು ಇಂಗು ಸ್ವಲ್ಪ, ಉಪ್ಪು ರುಚಿಗೆ.

ತಯಾರಿಸುವ ವಿಧಾನ: ತೆಂಗಿನತುರಿಗೆ ಕರಿಬೇವು, ಕೆಂಪುಮೆಣಸು, ಜೀರಿಗೆ, ಇಂಗು ಮತ್ತು ಉಪ್ಪು ಸೇರಿಸಿ ರುಬ್ಬಿ ಮಿಕ್ಸಿಂಗ್‌ ಬೌಲ್‌ಗೆ ಹಾಕಿ. ಬರಗುವನ್ನು ಹುರಿದು ಪುಡಿಮಾಡಿ ಇದಕ್ಕೆ ಸೇರಿಸಿ. ನಂತರ ಇದಕ್ಕೆ ಅಕ್ಕಿಹುಡಿ ಮತ್ತು ಮೇಲೆ ತಿಳಿಸಿದ ಎಲ್ಲಾ ಸಾಮಗ್ರಿಗಳನ್ನು ಸೇರಿಸಿ ಮಿಶ್ರಮಾಡಿ. ನಂತರ ಇದಕ್ಕೆ ಬಿಸಿ ಎಣ್ಣೆ ನಾಲ್ಕು ಚಮಚ ಮತ್ತು ಬೇಕಷ್ಟು ನೀರು ಸೇರಿಸಿ ಚೆನ್ನಾಗಿ ನಾದಿ ಹಿಟ್ಟು ತಯಾರಿಸಿ ಬೇಕಾದ ಹದಕ್ಕೆ ನಿಪ್ಪಟ್ಟು ತಯಾರಿಸಿ ಕಾದ ಎಣ್ಣೆಯಲ್ಲಿ ಕರಿಯಿರಿ.

ಮಸಾಲೆ ವಡೆ
ಬೇಕಾಗುವ ಸಾಮಗ್ರಿ: ಅಕ್ಕಿಹಿಟ್ಟು- ಒಂದು ಕಪ್‌, ಮೈದಾಹಿಟ್ಟು- ಒಂದು ಕಪ್‌, ಚಿರೋಟಿರವೆ- ಒಂದು ಕಪ್‌, ಕಡ್ಲೆಹಿಟ್ಟು- ಒಂದು ಕಪ್‌, ಪುಟಾಣಿ- ಅರ್ಧ ಕಪ್‌, ಕೊಬ್ಬರಿತುರಿ- ಅರ್ಧ ಕಪ್‌, ಹಸಿಮೆಣಸು- ಎಂಟು, ಈರುಳ್ಳಿ- ಅರ್ಧ ಕಪ್‌, ಹೆಚ್ಚಿದ ಕರಿಬೇವು- ಹತ್ತು ಚಮಚ, ಇಂಗು, ನುಣ್ಣಗೆ ಜಜ್ಜಿದ ಓಮ ಮತ್ತು ಉಪ್ಪು ರುಚಿಗೆ.

ತಯಾರಿಸುವ ವಿಧಾನ: ಮೇಲೆ ತಿಳಿಸಿದ ಎಲ್ಲಾ ಹಿಟ್ಟುಗಳನ್ನು ಬೇರೆ ಬೇರೆಯಾಗಿ ಹಸಿವಾಸನೆ ಹೋಗುವವರೆಗೂ ಹುರಿದು ಮಿಕ್ಸಿಂಗ್‌ ಬೌಲ್‌ಗೆ ಹಾಕಿ ಮಿಶ್ರಮಾಡಿಕೊಳ್ಳಿ. ನಂತರ ಇದಕ್ಕೆ ಮೇಲೆ ತಿಳಿಸಿದ ಎಲ್ಲಾ ಸಾಮಗ್ರಿಗಳನ್ನು ಇದಕ್ಕೆ ಸೇರಿಸಿ ಬೇಕಷ್ಟು ನೀರು ಸೇರಿಸಿ ಚೆನ್ನಾಗಿ ಮಿಶ್ರಮಾಡಿ. ನಂತರ ಬಿಸಿ ಎಣ್ಣೆ ನಾಲ್ಕು ಚಮಚ ಸೇರಿಸಿ ಪುನಃ ಮಿಶ್ರಮಾಡಿ ಎಣ್ಣೆ ಸವರಿದ ಪ್ಲಾಸ್ಟಿಕ್‌ ಹಾಳೆಯಲ್ಲಿ ತೆಳ್ಳಗೆ ಸಣ್ಣ ಪೂರಿಯ ಹದಕ್ಕೆ ತಟ್ಟಿ, ಕಾದ ಎಣ್ಣೆಯಲ್ಲಿ ಕರಿಯಿರಿ.

ಗರಿಮುರಿ ನಿಪ್ಪಟ್ಟು
ಬೇಕಾಗುವ ಸಾಮಗ್ರಿ: ಅಕ್ಕಿಹುಡಿ- ಮೂರು ಕಪ್‌, ನೆಲಕಡ್ಲೆ- ಅರ್ಧ ಕಪ್‌, ಹುರಿಗಡ್ಲೆ- ಅರ್ಧ ಕಪ್‌, ಕಡ್ಲೆಹುಡಿ- ಒಂದು ಕಪ್‌, ಹೆಚ್ಚಿದ ಕರಿಬೇವು- ಎಂಟು ಚಮಚ, ಕೊಬ್ಬರಿತುರಿ- ಅರ್ಧ ಕಪ್‌, ಬೆಣ್ಣೆ- ಅರ್ಧ ಸೌಟು, ಕೆಂಪು ಮೆಣಸಿನಹುಡಿ- ಎರಡು ಚಮಚ, ಹಸಿಮೆಣಸು- ಎರಡು, ಇಂಗು ಮತ್ತು ಉಪ್ಪು ರುಚಿಗೆ.

ತಯಾರಿಸುವ ವಿಧಾನ: ಕಡ್ಲೆಕಾಯಿ ಬೀಜವನ್ನು ಹುರಿದು ಸಿಪ್ಪೆ ತೆಗೆದು ತರಿತರಿಯಾಗಿ ಪುಡಿ ಮಾಡಿ. ಮಿಕ್ಸಿಂಗ್‌ ಬೌಲ್‌ಗೆ ಅಕ್ಕಿಹುಡಿ ಮತ್ತು ಮೇಲೆ ತಿಳಿಸಿದ ಎಲ್ಲಾ ಸಾಮಗ್ರಿಗಳನ್ನು ಸೇರಿಸಿ ಚೆನ್ನಾಗಿ ಮಿಶ್ರಮಾಡಿ, ಕೊನೆಗೆ ಪುಡಿ ಮಾಡಿಟ್ಟ ಪುಟಾಣಿ ಮತ್ತು ಶೇಂಗಾ ತರಿಯನ್ನು ಸೇರಿಸಿ, ಇದಕ್ಕೆ ಲಿಂಬೆಗಾತ್ರದ ಬೆಣ್ಣೆ ಅಥವಾ ನಾಲ್ಕು ಚಮಚ ಬಿಸಿ ಎಣ್ಣೆ ಸೇರಿಸಿ ಪುನಃ ಮಿಶ್ರಮಾಡಿ ಎಣ್ಣೆ ಸವರಿದ ಪ್ಲಾಸ್ಟಿಕ್‌ ಹಾಳೆಯಲ್ಲಿ ನಿಪ್ಪಟ್ಟು ತಯಾರಿಸಿ ಕಾದ ಎಣ್ಣೆಯಲ್ಲಿ ಕರಿಯಿರಿ.

ಗೀತಸದಾ

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.