ದೊಡ್ಡಪತ್ರೆ ವೈವಿಧ್ಯ


Team Udayavani, Dec 13, 2019, 5:00 AM IST

sa-10

ದೊಡ್ಡಪತ್ರೆ, ಸಾಂಬಾರಸೊಪ್ಪು ಇತ್ಯಾದಿ ಹೆಸರುಗಳಿಂದ ಕರೆಯುವ, ವಿಶೇಷವಾದ ಸುವಾಸನೆಯನ್ನು ಹೊಂದಿರುವ ಈ ಸೊಪ್ಪು ಕೆಮ್ಮು, ದಮ್ಮು, ಅಜೀರ್ಣ, ಉಬ್ಬಸ, ಶೀತ, ಕಾಮಾಲೆ ಇತ್ಯಾದಿ ಸಮಸ್ಯೆಗಳ ಪರಿಹಾರಕ್ಕೆ ಬಹಳ ಉಪಯುಕ್ತ. ಈ ಸೊಪ್ಪನ್ನು ಬಳಸಿ ಹಲವಾರು ವೈವಿಧ್ಯಗಳನ್ನು ತಯಾರಿಸಬಹುದು.

ದೊಡ್ಡಪತ್ರೆ ಪಕೋಡಾ
ಬೇಕಾಗುವ ಸಾಮಗ್ರಿ: ಸ್ವೀಟ್‌ಕಾರ್ನ್- ಒಂದು ಕಪ್‌, ಹೆಚ್ಚಿದ ದೊಡ್ಡಪತ್ರೆ ಸೊಪ್ಪು- ಆರು ಚಮಚ, ಅಕ್ಕಿಹಿಟ್ಟು- ಅರ್ಧ ಕಪ್‌, ಕಡ್ಲೆಹಿಟ್ಟು- ಅರ್ಧ ಕಪ್‌, ಕಾರ್ನ್ ಫ್ಲೋರ್‌- ಒಂದು ಚಮಚ, ಖಾರದಪುಡಿ- ಒಂದು ಚಮಚ, ಜೀರಿಗೆ ಪುಡಿ- ಅರ್ಧ ಚಮಚ, ಇಂಗು- ಒಂದು ಚಮಚ, ಧನಿಯಾ ಪುಡಿ- ಒಂದು ಚಮಚ, ಉಪ್ಪು ರುಚಿಗೆ.

ತಯಾರಿಸುವ ವಿಧಾನ: ಮಿಕ್ಸಿಗೆ ಸ್ವೀಟ್‌ಕಾರ್ನ್ ಹಾಕಿ ತರಿತರಿಯಾಗಿ ರುಬ್ಬಿ. ಮಿಕ್ಸಿಂಗ್‌ ಬೌಲ್‌ಗೆ ಕಡ್ಲೆಹಿಟ್ಟು, ಅಕ್ಕಿಹಿಟ್ಟು ಮತ್ತು ಕಾರ್ನ್ಫ್ಲೋರ್‌ ಹಾಕಿ ಚೆನ್ನಾಗಿ ಮಿಶ್ರಮಾಡಿ. ನಂತರ ಇದಕ್ಕೆ ಮೇಲೆ ತಿಳಿಸಿದ ಎಲ್ಲಾ ಪುಡಿಗಳು, ಸ್ವೀಟ್‌ಕಾರ್ನ್ ಮತ್ತು ಚಿಕ್ಕದಾಗಿ ಹೆಚ್ಚಿಟ್ಟ ಸೊಪ್ಪು ಹಾಗೂ ಸ್ವಲ್ಪ ನೀರು ಸೇರಿಸಿ ಪಕೋಡಾ ಹಿಟ್ಟಿನ ಹದಕ್ಕೆ ಕಲಸಿ ಕಾದ ಎಣ್ಣೆಯಲ್ಲಿ ಗರಿಗರಿಯಾಗಿ ಕರಿಯಿರಿ.

ದೊಡ್ಡಪತ್ರೆ ಟಿಕ್ಕಿ
ಬೇಕಾಗುವ ಸಾಮಗ್ರಿ: ಕ್ಯಾರೆಟ್‌ತುರಿ- ಅರ್ಧ ಕಪ್‌, ಚಿಕ್ಕದಾಗಿ ಹೆಚ್ಚಿದ ದೊಡ್ಡಪತ್ರೆ- ಆರು ಚಮಚ, ಬೇಯಿಸಿದ ಆಲೂಗಡ್ಡೆ- ಎರಡು, ಕೊತ್ತಂಬರಿಸೊಪ್ಪು- ನಾಲ್ಕು ಚಮಚ, ಹೆಚ್ಚಿದ ಈರುಳ್ಳಿ- ನಾಲ್ಕು ಚಮಚ, ಗರಂಮಸಾಲ- ಒಂದು ಚಮಚ, ಹಸಿಮೆಣಸಿನಕಾಯಿ- ಎರಡು ಚಮಚ, ಶುಂಠಿ-ಬೆಳ್ಳುಳ್ಳಿ ಪೇಸ್ಟ್‌- ಒಂದು ಚಮಚ, ಮೈದಾಹಿಟ್ಟು- ನಾಲ್ಕು ಚಮಚ, ಬ್ರೆಡ್‌ಕ್ರಂಪ್ಸ್‌- ಆರು ಚಮಚ, ಲಿಂಬೆರಸ ಮತ್ತು ಉಪ್ಪು ರುಚಿಗೆ.

ತಯಾರಿಸುವ ವಿಧಾನ: ಮೈದಾಹಿಟ್ಟಿಗೆ ನೀರು ಸೇರಿಸಿ ತೆಳ್ಳಗೆ ಪೇಸ್ಟ್‌ ತರ ಕಲಸಿಕೊಳ್ಳಿ. ಬಾಣಲೆಗೆ ಎರಡು ಚಮಚ ಎಣ್ಣೆ ಹಾಕಿ ಜೀರಿಗೆ ಸಿಡಿಸಿ ಹಸಿಮೆಣಸು, ಈರುಳ್ಳಿ, ಶುಂಠಿಬೆಳ್ಳುಳ್ಳಿ ಪೇಸ್ಟ್‌ ಹಾಗೂ ಕ್ಯಾರೆಟ್‌ತುರಿ ಹಾಕಿ ಬಾಡಿಸಿ. ನಂತರ ಇದಕ್ಕೆ ಕೊತ್ತಂಬರಿಸೊಪ್ಪು, ಗರಂಮಸಾಲ, ಹಸಿಮೆಣಸಿನಕಾಯಿ ಸೇರಿಸಿ. ಆರಿದ ಮೇಲೆ ಇದಕ್ಕೆ ಮ್ಯಾಶ್‌ಮಾಡಿದ ಆಲೂಗಡ್ಡೆ, ದೊಡ್ಡಪತ್ರೆ, ಲಿಂಬೆರಸ ಮತ್ತು ಉಪ್ಪು ಸೇರಿಸಿ ಚೆನ್ನಾಗಿ ಮಿಶ್ರಮಾಡಿ ವಡೆಯ ಆಕಾರಕ್ಕೆ ಕೈಯಲ್ಲಿ ತಟ್ಟಿ ಮೈದಾಹಿಟ್ಟಿನ ಪೇಸ್ಟ್‌ನಲ್ಲಿ ಅದ್ದಿ ಬ್ರೆಡ್‌ಕ್ರಂಪ್ಸ್‌ನಲ್ಲಿ ಹೊರಳಿಸಿ ಕಾದ ತವಾದಲ್ಲಿ ಸ್ವಲ್ಪ ಎಣ್ಣೆ ಹಾಕಿ ಎರಡೂ ಬದಿ ಕೆಂಪಗೆ ಬೇಯಿಸಿ. ಸಾಸ್‌ ಜೊತೆ ಸರ್ವ್‌ ಮಾಡಬಹುದು.

ದೊಡ್ಡಪತ್ರೆ ತಂಬುಳಿ
ಬೇಕಾಗುವ ಸಾಮಗ್ರಿ: ಹೆಚ್ಚಿದ ದೊಡ್ಡಪತ್ರೆ ಸೊಪ್ಪು- ಆರು, ಕಾಳುಮೆಣಸು- ಆರು, ತೆಂಗಿನತುರಿ- ಒಂದು ಕಪ್‌, ಮಜ್ಜಿಗೆ- ಎರಡು ಕಪ್‌, ಉಪ್ಪು ರುಚಿಗೆ.

ತಯಾರಿಸುವ ವಿಧಾನ: ಬಾಣಲೆಗೆ ಎರಡು ಚಮಚ ತುಪ್ಪಹಾಕಿ ಕಾಳುಮೆಣಸು ಮತ್ತು ದೊಡ್ಡಪತ್ರೆ ಸೊಪ್ಪನ್ನು ಬಾಡಿಸಿ. ಆರಿದ ನಂತರ ಇದಕ್ಕೆ ತೆಂಗಿನತುರಿ, ಉಪ್ಪು ಮತ್ತು ಸ್ವಲ್ಪ ಮಜ್ಜಿಗೆ ಸೇರಿಸಿ ನುಣ್ಣಗೆ ರುಬ್ಬಿ ಮಿಕ್ಸಿಂಗ್‌ ಬೌಲ್‌ಗೆ ಹಾಕಿ. ನಂತರ ಇದಕ್ಕೆ ಉಳಿದ ಮಜ್ಜಿಗೆ ಮತ್ತು ಬೇಕಷ್ಟು ನೀರು ಸೇರಿಸಿ ಹದ ಮಾಡಿಕೊಂಡು ಜೀರಿಗೆ ಸೇರಿಸಿದ ಸಾಸಿವೆ ಒಗ್ಗರಣೆಯನ್ನು ತುಪ್ಪದಲ್ಲಿ ನೀಡಿ.

ದೊಡ್ಡಪತ್ರೆ ರಾಯತ
ಬೇಕಾಗುವ ಸಾಮಗ್ರಿ: ದೊಡ್ಡಪತ್ರೆ ಸೊಪ್ಪು- ಹತ್ತು, ಹೆಚ್ಚಿದ ಈರುಳ್ಳಿ- ಒಂದು ಕಪ್‌, ಕ್ಯಾರೆಟ್‌ತುರಿ- ನಾಲ್ಕು ಚಮಚ, ದಾಳಿಂಬೆ- ನಾಲ್ಕು ಚಮಚ, ಹಸಿಮೆಣಸಿನಕಾಯಿ- ಒಂದು, ಮೊಸರು- ಎರಡು ಕಪ್‌, ಉಪ್ಪು ರುಚಿಗೆ.

ತಯಾರಿಸುವ ವಿಧಾನ: ದೊಡ್ಡಪತ್ರೆ ಸೊಪ್ಪನ್ನು ಚಿಕ್ಕದಾಗಿ ಹೆಚ್ಚಿ ಮಿಕ್ಸಿಂಗ್‌ ಬೌಲ್‌ಗೆ ಹಾಕಿ. ನಂತರ ಇದಕ್ಕೆ ಮೇಲೆ ತಿಳಿಸಿದ ಎಲ್ಲಾ ಸಾಮಗ್ರಿಗಳನ್ನು ಸೇರಿಸಿ ಚೆನ್ನಾಗಿ ಮಿಶ್ರಮಾಡಿ ಜೀರಿಗೆ ಜೊತೆ ಸಾಸಿವೆ ಒಗ್ಗರಣೆಯನ್ನು ತುಪ್ಪದಲ್ಲಿ ನೀಡಿ.

ಗೀತಸದಾ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.