ಸಮುದ್ರದ ಕಿನಾರೆಯಲ್ಲಿ ಕಂಡ ಕತೆಯಂಥ ಒಂದು ಬದುಕು


Team Udayavani, May 3, 2019, 6:00 AM IST

C5JARB1a-aa

ಕನಸುಗಳೇ ತುಂಬಿರದ ಆ ಪ್ರಪಂಚದಲ್ಲಿ ನೆನಪುಗಳೇ ತುಂಬಿರುವ ಕಥೆಗಳೆಷ್ಟೋ? ದಾರಿಯೇ ಕಾಣದ ಆ ಕತ್ತಲ ದಿನದಲ್ಲಿ ಸಾಗಿದ ದಿನಗಳೆಷ್ಟೋ? ಆದರೆ, ನೆನಪುಗಳು ಮಾತ್ರ ಸಮುದ್ರದ ಅಲೆಯಂತೆ ಮತ್ತೆ ಮತ್ತೆ ಧಾವಿಸಿ ಬರುತ್ತಿದ್ದವು. ಆ ನೆನಪುಗಳಲ್ಲೇ ತನ್ನ ಇಡೀ ಜೀವನ ಸಾಗಿಸುತ್ತಿದ್ದವಳು ಈ ಅಮ್ಮ.

ಸಮುದ್ರದ ಕಿನಾರೆಯ ಆ ಅಮಾವಾಸ್ಯೆಯ ನಸು ಮಬ್ಬಿನ ಹೊತ್ತಲ್ಲಿ ಸರೋಜಾ ಒಬ್ಬಳೇ ಕೂತು ಬಿಕ್ಕಿ ಬಿಕ್ಕಿ ಅಳುತ್ತಿದ್ದಳು. ಆದರೆ, ಸಮುದ್ರ ಸರೋಜಾಳ ಅಳುವಿಗೆ ಸ್ಪಂದಿಸದೆ ಭೋರ್ಗರೆಯುವ ತನ್ನ ಕಾಯಕವನ್ನು ಮುಂದುವರಿಸಿತ್ತು. ಅದಾಗಲೇ “ಅಮ್ಮಾ’ ಎಂಬ ಸದ್ದು ಸರೋಜಾಳನ್ನು ಆ ಹಳೆಯ ನೆನಪುಗಳಿಂದ ಮುಕ್ತಗೊಳಿಸಿತು. ಹಿಂತಿರುಗಿ ನೋಡಿದಾಗ ಸರೋಜಾಳ ಮಗ ಮಹೇಶ ನಿಂತಿದ್ದ. ಮಹೇಶ ಅಮ್ಮನ ಕಣ್ಣಿಂದ ಜಾರಿದ ಆ ಕಣ್ಣ ಹನಿಯನ್ನು ತನ್ನ ಅಂಗೈಯಲ್ಲಿ ಹಿಡಿದು, “ಅಮ್ಮಾ, ಯಾಕೀ ಕಣ್ಣೀರು? ನಾನಿರುವಾಗ ನಿನ್ನ ಕಣ್ಣಲ್ಲಿ ಒಂದು ಹನಿಯೂ ಕಣ್ಣೀರು ಬರಬಾರದು’ ಎಂದು ಕಣ್ಣೀರೊರೆಸಿ ಅಮ್ಮನನ್ನು ಬಿಗಿದಪ್ಪಿಕೊಳ್ಳುವನು. ನಂತರ ತಾಯಿಯನ್ನು ಮನೆಗೆ ಕರೆ ತರುವನು.

ಸರೋಜಾ ದಿನ ಬೆಳಗಾದರೆ ಪಕ್ಕದ ಊರಿನ ಧಣಿಗಳ ಮನೆಯಲ್ಲಿ ಕೆಲಸಕ್ಕೆ ಹೋಗುತ್ತಿದ್ದಳು. ಕಸ-ಮುಸುರೆ ಪಾತ್ರೆ ತೊಳೆದು ದುಡಿಮೆ ಮಾಡಿ ಮಗನನ್ನು ಓದಿಸುತ್ತಿದ್ದಳು. ತನಗೆ ಎಷ್ಟೇ ಕಷ್ಟವಾದರೂ ಪರವಾಗಿಲ್ಲ ಮಗ ಮಾತ್ರ ಚೆನ್ನಾಗಿ ಓದಿ ದೊಡ್ಡ ವ್ಯಕ್ತಿಯಾಗಿ ಈ ಸಮಾಜದಲ್ಲಿ ಬದುಕಬೇಕು ಎಂಬ ಆಸೆ ಅವಳದು. ಮಗ ಮಹೇಶ ಅದಾಗಲೇ ಪಿಯುಸಿ ಮುಗಿಸಿ ಡಿಗ್ರಿಗೆ ಕಾಲಿಟ್ಟ. ಸರೋಜಾ ದುಡಿದ ಹಣ ಒಪ್ಪೊತ್ತಿನ ಗಂಜಿಗೂ ಸಾಕಾಗುತ್ತಿರಲಿಲ್ಲ. ಅಂಥಾದ್ದರಲ್ಲಿ ಹಾಗೂ ಹೀಗೂ ಮಗನನ್ನು ಡಿಗ್ರಿ ಮಾಡಲು ಕಳುಹಿಸಿದಳು. ಆದರೆ, ಡಿಗ್ರಿಗೆ ಸೇರಿದ ಹೊಸತರಲ್ಲಿ ಕಾಲೇಜು ಫೀಸ್‌ ಕಟ್ಟಲು ಹಣವಿಲ್ಲದ ಕಾರಣ ಮಹೇಶ ತಾಯಿಯನ್ನು ಗೋಳಾಡಿಸುತ್ತಿದ್ದ. ಹಾಗಾಗಿ, ತಾಯಿ ಧಣಿಗಳ ಬಳಿ ಸಾಲ ಪಡೆದು ಮಗನ ಕಾಲೇಜಿನ ಫೀಸ್‌ ಕಟ್ಟಿದಳು. ಮಗ ಇಂದಲ್ಲ ನಾಳೆ ಒಬ್ಬ ದೊಡ್ಡ ವ್ಯಕ್ತಿ ಆಗಬಹುದೆಂಬ ಆಸೆ‌ಯಿಂದ.

ಒಂದು ಮುಂಜಾನೆ ಸರೋಜಾಳಿಗೆ ಎಲ್ಲಿಲ್ಲದ ಜ್ವರ ಕಾಣಿಸಿಕೊಂಡಿತು. ಆವತ್ತು ಕೆಲಸಕ್ಕೆ ಹೋಗುವಾಗ ಸ್ವಲ್ಪ ತಡವಾಯಿತು. ಮನೆಯ ಮುಂದೆ ಧಣಿಯ ಮಡದಿ ನಿಂತಿದ್ದಳು. ಸರೋಜಾಳ ಬರುವಿಕೆಯನ್ನೇ ಕಾಯುತ್ತಿದ್ದಳು. ಸರೋಜಾಗೆ ಮೈ ಹುಷಾರಿಲ್ಲದಿದ್ದರೂ ಕನಿಕರವಿಲ್ಲದೆ ಅವಳು ಬಂದೊಡನೆ ಬಾಯಿಗೆ ಬಂದಂತೆ ಬೈದಳು. ಸರೋಜಾಳ ಕಣ್ಣಿಂದ ನೀರು ಜಾರತೊಡಗಿತು. ಅದಾಗಲೇ ಮಳೆಯೂ ಸುರಿಯಿತು. ಅವಳ ಕಣ್ಣೀರು ಮಳೆನೀರಿನಲ್ಲಿ ಮರೆಯಾಗಿ ಹೋಯಿತು. ಆ ಮಳೆಯಲ್ಲೇ ಪಾತ್ರೆಗಳನ್ನು ತೊಳೆದು ಮೆನೆಗೆ ಹಿಂತಿರುಗಿದಳು.

ಇದಾದ ಬಳಿಕ ಸರೋಜಾಳ ಆರೋಗ್ಯ ದಿನೇದಿನೇ ಹದಗೆಡುತ್ತಾ ಹೋಯಿತು. ಅನಾರೋಗ್ಯದ ಕಾರಣ ನಿಧಾನವಾಗಿ ಹಾಸಿಗೆ ಹಿಡಿಯಲು ಶುರುಮಾಡಿದಳು. ಆದರೆ, ಅದಾಗಲೇ ಮಗ ಮಹೇಶ ಮಾದಕದ್ರವ್ಯದ ದಾಸನಾಗಿದ್ದ. ಮಾದಕ ವ್ಯಸನಿಯಾದ ಅವನಿಗೆ ಅಮ್ಮನ ಆ ಒಳಗಿನ ನೋವು ತಿಳಿಯದೇ ಹೋಯಿತು. ದಿನೇ ದಿನೇ ಹಣಕ್ಕಾಗಿ ಅಮ್ಮನನ್ನು ಪೀಡಿಸುತ್ತಿದ್ದ. ತನ್ನ ಅಮ್ಮ ಅನಾರೋಗ್ಯದಿಂದ ಬಳಲುತ್ತಿದ್ದರೂ ತಾಯಿಯ ಆರೋಗ್ಯದ ಕಡೆಗೆ ಅವನಿಗೆ ಗಮನವೇ ಇರಲಿಲ್ಲ. ಗಾಂಜಾ ಸೇವನೆಯ ಅಮಲಿನಲ್ಲಿ ಇದನ್ನೆಲ್ಲ ಮರೆತುಬಿಟ್ಟ. ಗಾಂಜಾ ಸೇವನೆಗೆ ಹಣವಿಲ್ಲದಾಗ ಧಣಿಗಳ ಮನೆಗೆ ಹೋಗಿ, “ಅಮ್ಮನಿಗೆ ಹುಷಾರಿಲ್ಲ ಹಣಬೇಕಿತ್ತು’ ಎಂದು ಸುಳ್ಳು ಹೇಳಿ ಹಣ ಕೇಳುತ್ತಿದ್ದ. ಸತ್ಯ ಗೊತ್ತಾಗಿ ಧಣಿಗಳು ಹಣ ಕೊಡುವುದನ್ನು ನಿಲ್ಲಿಸಿಬಿಟ್ಟರು. ಹಣದಾಸೆಗೆ ಅಡ್ಡದಾರಿಯನ್ನು ಹಿಡಿದ. ಅವರಿವರಲ್ಲಿ ಸುಳ್ಳು ಹೇಳಿ ಹಣ ಪಡೆದು ಗಾಂಜಾ ಸೇವನೆ ಮಾಡತೊಡಗಿದ. ಕೊನೆ ಕೊನೆಗೆ ಯಾವ ದಾರಿಯೂ ಕಾಣದಾದಾಗ ಮನೆಯ ಪಾತ್ರೆಗಳನ್ನೇ ಮಾರಿ ಗಾಂಜಾ ಸೇವನೆ ಮಾಡುತ್ತಿದ್ದ. ಇವುಗಳನ್ನೆಲ್ಲ ತನ್ನ ಕಣ್ಣ ಮುಂದೆ ನೋಡುತ್ತಿದ್ದ ಸರೋಜಾಳಿಗೆ ಕರುಳು ಕಿತ್ತು ಬಂದಂತೆ ಆಗುತ್ತಿತ್ತು.

ಒಂದು ಅಮಾವಾಸ್ಯೆಯ ಮುಂಜಾನೆಯ ಸರಿಸುಮಾರು 5 ಗಂಟೆಯ ಹೊತ್ತಿಗೆ ಸರೋಜಾ ತನ್ನ ಜೀವವನ್ನು ಕೈಯಲ್ಲಿಟ್ಟುಕೊಂಡು ಸಮುದ್ರದ ಕಿನಾರೆಯಲ್ಲಿ ಕುಳಿತಿದ್ದಳು. ಇತ್ತ ಮನೆಯಲ್ಲಿ ಮಹೇಶ ಎಚ್ಚೆತ್ತು ನೋಡಿದರೆ ಅಮ್ಮ ಇಲ್ಲ, ಅಮ್ಮನಿಗಾಗಿ ಹುಡುಕಾಟ ಶುರು ಮಾಡಿದ. ಅಕ್ಕಪಕ್ಕದವರಲ್ಲಿ ಅಮ್ಮನ ಬಗ್ಗೆ ವಿಚಾರಿಸಿದ. ಆದರೆ, ಅಮ್ಮ ಮಾತ್ರ ಎಲ್ಲಿಯೂ ಕಾಣಲಿಲ್ಲ. ಕೊನೆಗೆ ಸಮುದ್ರದ ಕಿನಾರೆಗೆ ಓಡೋಡಿ ಬಂದನು. ಸರೋಜಾ ಒಂದು ಮುಷ್ಟಿಯಲ್ಲಿ ಬಿಳಿಹಾಳೆ ಹಿಡಿದು ಮೌನಕ್ಕೆ ಶರಣಾಗಿದ್ದಳು. ಹೌದು, ಸರೋಜಾ ಇಹಲೋಕ ತ್ಯಜಿಸಿದ್ದಳು. ಆ ಹಾಳೆಯಲ್ಲಿ ಏನೋ ಬರೆದಿತ್ತು. ಮಹೇಶ ಗಾಬರಿಯಿಂದಲೇ ಆ ಹಾಳೆಯನ್ನು ಬಿಡಿಸಿ ಓದಿದ.

ಅದರಲ್ಲಿ ಹೀಗೆ ಬರೆದಿತ್ತು: ನನ್ನ ಪ್ರೀತಿಯ ಮಗ ಮಹೇಶ, ನೀನು ನನ್ನ ಕರುಳಬಳ್ಳಿ ಅಲ್ಲ, ನಾನಿನ್ನ ಹೆತ್ತತಾಯಿಯೂ ಅಲ್ಲ, ಅಂದು ಅಮಾವಾಸ್ಯೆಯ ನಸು ಮಬ್ಬಿನ ಹೊತ್ತಲ್ಲಿ ನಾನು, ನನ್ನ ಗಂಡ ಸಮುದ್ರದ ಕಿನಾರೆಯಲ್ಲಿ ಮಕ್ಕಳಿಲ್ಲ ಎಂಬ ದುಃಖದಲ್ಲಿ ಕುಳಿತಿದ್ದೆವು. ಅದಾಗಲೇ ಎಲ್ಲಿಂದಲೋ ಮಗು ಅಳುವ ಧ್ವನಿ ಕೇಳಿಸಿತು. ನನ್ನ ಗಂಡ ಆ ಧ್ವನಿ ಬಂದೆಡೆ ಓಡಿದರು. ಆ ರಾಕ್ಷಸ ಸಮುದ್ರವು ನಿನ್ನನ್ನು ಅದರೊಡಲೊಳಗೆ ಹಾಕಲು ಹವಣಿಸುತ್ತಿತ್ತು. ಆಗ ನನ್ನವರು ತನ್ನ ಜೀವದ ಹಂಗನ್ನು ತೊರೆದು ನಿನ್ನ ರಕ್ಷಣೆ ಮಾಡಿ ಅವರು ಬಾರದ ಲೋಕದ ಕಡೆ ಪಯಣ ಬೆಳೆಸಿದರು. ನಿನ್ನನ್ನು ಬೆಳೆಸಲು ನಾನು ಪಟ್ಟ ಶ್ರಮಕ್ಕೆ ನೀ ಕೊಟ್ಟ ಫ‌ಲ ಇದೇನಾ? ಇನ್ನಾದರೂ ನೀನು ಚೆನ್ನಾಗಿ ಓದಿ ಈ ಸಮಾಜದಲ್ಲಿ ದೊಡ್ಡ ವ್ಯಕ್ತಿಯಾಗಿ ಜನಸೇವೆ ಮಾಡು. ನಿನಗೆ ನನ್ನ ಆಶೀರ್ವಾದಗಳು. ಇಂತೀ ನಿನ್ನ ತಾಯಿ ಸರೋಜಾ.

ಮಹೇಶ ಬಿದ್ದಿದ್ದ ಅಮ್ಮನ ದೇಹವನ್ನು ಬಿಗಿದಪ್ಪಿ ಒಂದೇ ಸಮನೆ ಅಳಲಾರಂಭಿಸಿದ. ಆದರೆ, ಇದರಿಂದ ಏನು ಪ್ರಯೋಜನ? ಇನ್ನಾದರೂ ತನ್ನ ತಾಯಿಯ ಕೊನೆಯ ಆಸೆಯನ್ನು ಈಡೇರಿಸಬೇಕೆಂದು ಪಣ ತೊಟ್ಟ. ಕಷ್ಟಪಟ್ಟು ಓದಿ ಡಿಗ್ರಿ ಮುಗಿಸಿ ಒಳ್ಳೆಯ ಕೆಲಸ ಗಿಟ್ಟಿಸಿಕೊಂಡನು. ಸಮಾಜದಲ್ಲಿ ಒಬ್ಬ ಒಳ್ಳೆಯ ವ್ಯಕ್ತಿಯಾದನು. ವಾರದಲ್ಲಿ ಒಂದು ಬಾರಿಯಾದರೂ ಸಮುದ್ರದ ಕಿನಾರೆಗೆ ಹೋಗಿ ತನ್ನ ತಾಯಿಯನ್ನು ನೆನೆದು ಕಣ್ಣೀರಿಡುತ್ತಿದ್ದನು.

ಪ್ರಿಯ ಗೆಳೆಯರೇ, ನಮ್ಮ ಸುತ್ತಮುತ್ತ ಇಂಥ ಎಷ್ಟು ಕತೆಗಳಿರಬಹುದು ! ನಮ್ಮೊಳಗೆಯೇ ಇಂಥ ಕತೆ ಇರಬಹುದು. ಆದರೆ, ಕತೆ ಬರೆಯಬಹುದು, ಅದನ್ನು ಓದಬೇಕಾದ ಅಮ್ಮನೇ ಇರುವುದಿಲ್ಲ ! ಹಾಗಾಗಿ ಅಮ್ಮದೇವರಿಗೆ ಎಂದಿಗೂ ನೋವು ಕೊಡಬೇಡಿ !

-ದೀಕ್ಷಿತ್‌
ಸ್ನೇಹ ಟ್ಯುಟೋರಿಯಲ್‌ ಕಾಲೇಜಿನ ಹಳೆವಿದ್ಯಾರ್ಥಿ
ಉಡುಪಿ.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.