ಮಾತಿಗೊಂದು ವೇದಿಕೆ


Team Udayavani, Oct 18, 2019, 5:00 AM IST

f-57

ಆಗ ತಾನೆ ಪದವಿಪೂರ್ವ ಶಿಕ್ಷಣ ಪೂರ್ಣಗೊಳಿಸಿ ಪದವಿಯತ್ತ ಪ್ರತಿಷ್ಠಿತ ಕಾಲೇಜಿಗೆ ಕಾಲಿರಿಸಿದ್ದೆ. ಕಲಾವಿಭಾಗದ ವಿದ್ಯಾರ್ಥಿಯಾಗಿದ್ದರಿಂದ ಬಿಎ ಪದವಿಯನ್ನು ಆಯ್ಕೆ ಮಾಡುವುದು ಖಚಿತವಾಗಿತ್ತು. ಕೆಲವರ ಸಲಹೆಯಿಂದ ಮತ್ತು ನನ್ನದೇ ಅಸಕ್ತಿಯಿಂದ ಪತ್ರಿಕೋದ್ಯಮ ವಿಷಯವನ್ನು ತೆಗೆದುಕೊಂಡಿದ್ದೆ. ಆದರೆ, ಪತ್ರಿಕೋದ್ಯಮ ವಿಭಾಗದ ಬಗ್ಗೆ ನನಗೆ ಕಿಂಚಿತ್ತೂ ಜ್ಞಾನವಿರಲಿಲ್ಲ. ಆದರೂ ಪತ್ರಿಕೋದ್ಯಮ ವಿಷಯ ಆಯ್ಕೆ ಮಾಡಿಕೊಂಡಿದ್ದೆ. ಇತಿಹಾಸವೆಂದರೆ ಮೊದಲೇ ಕಬ್ಬಿಣದ ಕಡಲೆಯಾಗಿದ್ದರಿಂದ ಇತಿಹಾಸ ವಿಷಯವಿಲ್ಲದಿರುವ ಒಂದು ಕಾಂಬಿನೇಷನ್‌(ಪತ್ರಿಕೋದ್ಯಮ, ಅರ್ಥಶಾಸ್ತ್ರ, ಐಚ್ಛಿಕ ಕನ್ನಡ) ಇದ್ದುದರಿಂದ ಅದನ್ನೇ ಆಯ್ಕೆಮಾಡಿದ್ದೆ.

ವಿದ್ಯಾರ್ಥಿಗಳಲ್ಲಿರುವ ಸಭಾಕಂಪನ ಹೋಗಲಾಡಿಸುವುದಕ್ಕೆ ಪತ್ರಿಕೋದ್ಯಮ ವಿಭಾಗದ ಹಿರಿಯ ವಿದ್ಯಾರ್ಥಿಗಳು ಆರಂಭಿಸಿದ ಒಂದು ವೇದಿಕೆಯಿತ್ತು. ಎಲ್ಲರೂ ಆ ವೇದಿಕೆಯಲ್ಲಿ ಕಡ್ಡಾಯವಾಗಿ ಮಾತನಾಡಬೇಕು ಎಂದು ನಮ್ಮ ವಿಭಾಗದ ಮುಖ್ಯಸ್ಥರು ಸುಗ್ರೀವಾಜ್ಞೆಯನ್ನು ಹೊರಡಿಸಿದ್ದರು. ನಮ್ಮ ವಿಭಾಗದ ಮುಖ್ಯಸ್ಥರು ಮಾಡಿದ್ದ ಕಡ್ಡಾಯ ಘೋಷಣೆಯು ವೇದಿಕೆಯನ್ನೇರುವ ಮೊದಲೇ ಭಯಪಡುತ್ತಿದ್ದ ನನ್ನನ್ನು ಇನ್ನಷ್ಟು ಭಯಭೀತನನ್ನಾಗಿ ಮಾಡಿತ್ತು. ಕಾರ್ಯಕ್ರಮದ ಮೊದಲ ಸಂಚಿಕೆಯಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ತಮ್ಮ ಪರಿಚಯವನ್ನು ಹೇಳುವ ಸಂಪ್ರದಾಯವು ಮೊದಲಿನಿಂದಲೇ ನಡೆದುಕೊಂಡುಬಂದಿತ್ತು. ಮೊದಲ ಬಾರಿ ಭಯದಿಂದಲೇ ಪರಿಚಯವನ್ನು ಮಾಡಿಕೊಂಡಿದ್ದೆ. ನಂತರದ ಕೆಲವು ದಿನಗಳಲ್ಲಿ ವೇದಿಕೆಯತ್ತ ನಾನು ಧಾವಿಸಿರಲಿಲ್ಲ. ಆ ವೇದಿಕೆಯಲ್ಲಿ ಸೀನಿಯರ್‌ಗಳು ಲೀಲಾಜಾಲವಾಗಿ ಮಾತನಾಡುತಿದ್ದುದು ನನ್ನಲ್ಲಿ ಆಶ್ಚರ್ಯವನ್ನುಂಟುಮಾಡಿತ್ತು. ಅಲ್ಲಿ ನಮ್ಮ ಪ್ರಥಮ ವರ್ಷದ ವಿದ್ಯಾರ್ಥಿಗಳ ಭಾಗವಹಿಸುವಿಕೆಯು ಸ್ವಲ್ಪ ವಿರಳವಾಗಿತ್ತು. ಇದನ್ನು ಗಮನಿಸಿದ ಕಾರಣವೋ ಏನೋ ನಮ್ಮ ವಿಭಾಗದ ಮುಖ್ಯಸ್ಥರು ಮತ್ತು ಉಪನ್ಯಾಸಕರು ನಮ್ಮಲ್ಲಿ ಧೈರ್ಯ ತುಂಬಿದರು. ನಮ್ಮ ಸೀನಿಯರ್‌ಗಳು ಕೂಡ ಮಾತನಾಡಲು ಹುರಿದುಂಬಿಸಿದರು. ಅವರು ನೀಡಿದ ಧೈರ್ಯವು ವೇದಿಕೆಯಲ್ಲಿ ನಿಂತು ಮಾತನಾಡಲು ನಮ್ಮಲ್ಲಿ ಆಶಾಭಾವನೆ ಮೂಡಿಸಿತು. ಆ ವೇದಿಕೆಯಲ್ಲಿ ಎಲ್ಲ ವಿದ್ಯಾರ್ಥಿಗಳೂ ಮುಕ್ತವಾಗಿ ಭಾಗವಹಿಸಲು ಅವಕಾಶವಿತ್ತು. ಮತ್ತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಅವಕಾಶವಿತ್ತು. ಯಾವುದೇ ಭಯವಿಲ್ಲದೆ ಮಾತನಾಡುವುದನ್ನು ಕಲಿಯಲು ಮೊದಲ ವರ್ಷದಲ್ಲೇ ಆ ವೇದಿಕೆ ನನಗೆ ಸಹಾಯ ಮಾಡಿತ್ತು. ದ್ವಿತೀಯ ವರ್ಷಕ್ಕೆ ಕಾಲಿರಿಸುವ ಹೊತ್ತಿಗೆ ಮಾತಿನ ವೇದಿಕೆಯು ಇಷ್ಟವಾಗಿತ್ತು. ಅಂತಿಮ ವರ್ಷದ ಹೊತ್ತಿಗೆ ಆ ವೇದಿಕೆಗೆ ನಾನೊಬ್ಬ ಚಿರಪರಿಚಿತ ವ್ಯಕ್ತಿಯಾಗಿ ಬದಲಾಗಿದ್ದೆ.

ಆ ವೇದಿಕೆಯು ಮಾತುಗಾರರ ವೇದಿಕೆ ಎಂಬ ಟ್ಯಾಗ್‌ಲೈನ್‌ನಿಂದಲೇ ಪ್ರಸಿದ್ಧಿಯಾಗಿದೆ.

ಅಕ್ಷಯ ಕೃಷ್ಣ ಪಿ.
ಪ್ರಥಮ ಎಂ. ಎ. (ಪತ್ರಿಕೋದ್ಯಮ)
ಮಂಗಳೂರು ವಿ. ವಿ.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.