ಅಪ್ಪಾ…ನೀನಂದ್ರೆ ನನಗಿಷ್ಟ !


Team Udayavani, Mar 16, 2018, 7:30 AM IST

a-10.jpg

ನನಗೆ ಸುಮಾರು 12 ವರ್ಷವಿರಬೇಕು. ನಮ್ಮ ಪಕ್ಕದ ಊರಿನ ಜಾತ್ರೆಗೆ ಅಪ್ಪ ನನ್ನನ್ನೂ ಅಣ್ಣನನ್ನೂ ಕರೆದುಕೊಂಡು ಹೋಗಿದ್ದರು. ತುಂಬಾ ಜನಜಂಗುಳಿಯಿದ್ದ ಪ್ರದೇಶವದು. ಎಲ್ಲೂ ಕೈತಪ್ಪಿ ಹೋಗದಂತೆ ಒಂದು ಕೈಯ್ಯಲ್ಲಿ ಅಣ್ಣನನ್ನು ಇನ್ನೊಂದು ಕೈಯ್ಯಲ್ಲಿ ನನ್ನನ್ನು ಗಟ್ಟಿಯಾಗಿ ಹಿಡಿದುಕೊಂಡು ಸಂತೆ ಪೂರ್ತಿ ಸುತ್ತಾಡಿಸುತ್ತಿದ್ದರು. ತೇರು ಎಳೆದು ಜಾತ್ರೆ ಮುಗಿಯುವ ಹೊತ್ತು ಬಂದರೂ ಮನೆಗೆ ಬಾರದೆ ಅಲ್ಲೇ ಇರಬೇಕು ಎಂಬ ನನ್ನ ಹಠಕ್ಕೆ ಅಪ್ಪನೂ ಮಣೆ ಹಾಕುತ್ತಿದ್ದರು. ಕೇಳಿದ್ದನ್ನೆಲ್ಲಾ ಕೊಡಿಸುವ ಅಪ್ಪನ ಜೇಬು ಮನೆಗೆ ಕಾಲಿಡುವ ಹೊತ್ತಿಗಾಗಲೇ ಪೂರ್ತಿ ಖಾಲಿಯಾಗಿರುತ್ತಿತ್ತು. 

ಅಮ್ಮ ಮಕ್ಕಳನ್ನು ಹೆಚ್ಚು ಮುದ್ದಿಸುತ್ತಾಳೆ ಎಂದು ಕೆಲವರು ಹೇಳುವುದುಂಟು. ಆದರೆ ಅಪ್ಪ ಯಾರಿಗೂ ಕಮ್ಮಿಯಿಲ್ಲ. ಅದರಲ್ಲೂ ಹುಡುಗಿಯರಿಗಂತೂ ಅಪ್ಪ ಅಂದ್ರೆ ಎಲ್ಲದಕ್ಕಿಂತಲೂ ಮಿಗಿಲು. ಅದಾಗ ನಾನು ಸಣ್ಣ ಹುಡುಗಿ. ಸುಮಾರು 9 ವರ್ಷವಿರಬೇಕು. ನಮ್ಮ ಪುಟ್ಟ ಮನೆಯಲ್ಲಿ ಇದ್ದದ್ದು ನಾನು ಅಪ್ಪ, ಅಮ್ಮ ಮತ್ತು ಅಣ್ಣ. ಮಳೆಗಾಲದ ಸಂದರ್ಭವದು. ವಿದ್ಯುತ್‌ ಸಮಸ್ಯೆ ಜಾಸ್ತಿಯಾಗಿಯೇ ಇತ್ತು. ಬಚ್ಚಲ ಮನೆ ತುಂಬಾ ದೂರವಿತ್ತು. ಕರೆಂಟ್‌ ಹೋಗಿದ್ದ ಕಾರಣ ಅಪ್ಪ ಸೀಮೆಎಣ್ಣೆ ದೀಪವನ್ನು ಉರಿಸಿ ಗಾಳಿಗೆ ಆರದಂತೆ ಒಂದು ಕೈಯಲ್ಲಿ ದೀಪವನ್ನು ಹಿಡಿದುಕೊಂಡು ಕಂಕುಳಲ್ಲಿ ನನ್ನನ್ನು ಕೂರಿಸಿಕೊಂಡು ಅಷ್ಟು ದೂರ ಸಾಗಿ ಸ್ನಾನ ಮಾಡಿಸಿ ಕರೆದುಕೊಂಡು ಬರುತ್ತಿದ್ದ ದಿನ ಈಗಲೂ ನನಗೆ ಚೆನ್ನಾಗಿ ನೆನಪಿದೆ. 

ಮನೆಯಿಂದಲೇ ನನ್ನ ಆಟ, ಪಾಠ ಪ್ರಾರಂಭವಾದದ್ದು. ಮುಂಜಾನೆ ನಾನು ಏಳುವುದಕ್ಕೆ ಮೊದಲೇ ಅಪ್ಪನ ಅರ್ಧದಷ್ಟು ಕೆಲಸಗಳು ಮುಗಿದಿರುತ್ತಿದ್ದವು. ಶಾಲೆಗೆ ಹೊರಟಾಗ ಅಪ್ಪನ ಮುಂದೆ ಹಾಜರು. “ಅಪ್ಪಾ… ಒಂದು ರುಪಾಯಿ ಇದ್ರೆ ಕೊಡಪ್ಪಾ… ಐಸ್‌ಕ್ಯಾಂಡಿ ತಗೋಬೇಕು’ ಅಂದಾಗ ಜೇಬಿಗೆ ಕೈ ಹಾಕಿ ನನಗೂ ಅಣ್ಣನಿಗೂ ಒಂದು ರೂ. ಕೊಡುತ್ತಿದ್ದರು. ಹೊಸ ಯೂನಿಫಾರಮ್‌, ವರ್ಷಕ್ಕೆ ಎರಡು ಜೊತೆ ಬಟ್ಟೆ ತರುವುದನ್ನು ನೋಡಿದ್ದೇನೆ. ಆದರೆ, ಅಪ್ಪ ಅವರಿಗೆ ಏನನ್ನೂ ಕೊಂಡವರಲ್ಲ. ಇಂದಿಗೂ ತನ್ನ ಪಾಲಿನದ್ದನ್ನು ನಮಗೆ ನೀಡಿ ಇರುವುದರಲ್ಲೇ ತೃಪ್ತಿ ಪಟ್ಟುಕೊಳ್ಳುತ್ತಾರೆ.

ನಮ್ಮನ್ನು ನೋಡಿಕೊಳ್ಳಲು ಅದೆಷ್ಟು ಕಷ್ಟ ಪಟ್ಟಿದ್ದಾರೋ? ಅಕ್ಕಪಕ್ಕದ ಮನೆಯವರ ಕಿರಿಕಿರಿ, ದಿನನಿತ್ಯದ ಜಗಳ, ತೋಟದ ಕೆಲಸ, ಇದರ ಮಧ್ಯೆ ಮನೆ ನಡೆಸುವ ದೊಡ್ಡ ಜವಾಬ್ದಾರಿ ಅಪ್ಪನ ಹೆಗಲ ಮೇಲೆ. ನಮ್ಮನ್ನು ಶಾಲೆಗೆ ಕಳಿಸಲು ಫೀಸು, ಹೀಗೆ ದುಡ್ಡು ಖರ್ಚಾಗುತ್ತಿತ್ತೇ ಹೊರತು ಕೈಯ್ಯಲ್ಲಿ ಸ್ವಲ್ಪವೂ ಉಳಿಯುತ್ತಿರಲಿಲ್ಲ. ಆದರೂ ಹಿಂಜರಿಯದೆ ಬಂದ ಕಷ್ಟಗಳನ್ನೆಲ್ಲಾ ನುಂಗಿಕೊಂಡು ನಮ್ಮನ್ನು ಇಷ್ಟು ದೊಡ್ಡವರನ್ನಾಗಿ ಮಾಡಿದ್ದಾರೆ. 

ದಿನನಿತ್ಯ ಅಮ್ಮ ಕಷ್ಟಪಡುವುದನ್ನು ನೋಡಿದ್ದೇನೆ. ಕಣ್ಣೀರು ಹಾಕಿದ್ದನ್ನು ನೋಡಿದ್ದೇನೆ. ಆದರೆ ಅಪ್ಪ ಯಾಕೆ ಅಳುವುದಿಲ್ಲ. ಅವ್ರಿಗೆ ಅಳು ಬರೋದಿಲ್ವಾ? ಅನ್ನೋ ನನ್ನ ಪ್ರಶ್ನೆಗೆ ಅದೊಂದು ದಿನ ಉತ್ತರ ಸಿಕ್ಕಿತ್ತು. ಬಾಗಿಲ ಸಣ್ಣ ಸಂದಿಯಲ್ಲಿ ನಿಂತು ಅಪ್ಪ ಅತ್ತಿದ್ದನ್ನು ನಾನು ಕಣ್ಣಾರೆ ಕಂಡಿದ್ದೆ. ಕಾರಣ, ತನಗಾಗಿ ಅಲ್ಲ, ಬೇರೆಯವರಿಗಾಗಿ. ಅಪ್ಪನ ಮನಸ್ಸು ಮಿಡಿಯುತ್ತದೆ ಎಂಬುದು ನನಗೆ ಅರಿವಾದ ದಿನವದು. ನನ್ನ ಕಣ್ಣಲ್ಲೂ ಸಣ್ಣಗೆ ಕಣ್ಣಹನಿ ಜಾರಿ ನೆಲದ ಮೇಲೆ ಬಿದ್ದಿತ್ತು. ಕೇವಲ ಅಪ್ಪನ ಗಡಸು ಧ್ವನಿ, ಉದ್ಗಾರದ ಮಾತು, ದಿಟ್ಟಿಸಿ ನೋಡಿದಾಗ ಕೆಂಪಗಾಗುತ್ತಿದ್ದ ಕಣ್ಣಲ್ಲಿ ಅಂದು ಅದೇ ಕೆಂಪಗಾಗಿದ್ದ ಕಣ್ಣು, ಆದರೆ, ಸ್ವಲ್ಪ ನೀರನ್ನೂ ಕಂಡಿದ್ದೆ. 

ಮುಂದಿನ ವಿದ್ಯಾಭ್ಯಾಸಕ್ಕೆ ನಾನು ಇಷ್ಟಪಟ್ಟ ಕಾಲೇಜಿಗೆ ನನ್ನನ್ನು ಸೇರಿಸಿ, ಫೀಸಿಗೆ ಎಷ್ಟೇ ಖರ್ಚಾದರೂ ಅದನ್ನು ಭರ್ತಿ ಮಾಡಿ, ಕೊನೆಗೆ “ಖರ್ಚಿಗೆ ಇಟ್ಟುಕೋ… ಬೇಕಾಗುತ್ತದೆ’ ಎಂದು ಹೇಳುವ ಅಪ್ಪ. ನೂರು ರುಪಾಯಿ ಕೇಳಿದಾಗ “ಅಷ್ಟು ಸಾಕಾ ಬೇರೆ ಏನಕ್ಕಾದ್ರೂ ಬೇಕಾಗುತ್ತದೆ’ ಎಂದು ಹೇಳಿ ಇನ್ನೂ ಸ್ವಲ್ಪ ದುಡ್ಡನ್ನು ಕೈಗೆ ಇಡುತ್ತಿದ್ದರು. ತಾನು ನಡೆದರೂ ಪರಾÌಗಿಲ್ಲ. ಮಕ್ಕಳು ಚೆನ್ನಾಗಿರಬೇಕು ಎಂಬ ಮನೋಭಾವನೆ. ಮಕ್ಕಳಿಗಾಗಿಯೇ ಅಪ್ಪ ಹುಟ್ಟಿದ್ದಾರೆಯೇ ಎಂದೊಮ್ಮೆ ಅನ್ನಿಸುತ್ತಿತ್ತು. ಈ ಪ್ರಪಂಚದಲ್ಲಿ ಎಲ್ಲಾ ಕಷ್ಟವನ್ನು ಆ ದೇವರು ನನ್ನ ಅಪ್ಪನಿಗೆ ಯಾಕೆ ನೀಡಿದ್ದಾನೆ ಎಂಬ ಪ್ರಶ್ನೆ ಈಗಲೂ ನನ್ನ ಮನಸ್ಸಿನಲ್ಲಿ ಹಾಗೆಯೇ ಕೊರೆಯುತ್ತಿದೆ. ಯಾರಿಗೂ ಕೆಡುಕು ಬಯಸಿದವರಲ್ಲ ನನ್ನಪ್ಪ. ಸಹೋದರರ ಕಷ್ಟದಲ್ಲೂ ಪಾಲು ತೆಗೆದುಕೊಂಡವರು. ಆದರೆ ಕೊನೆಗೆ ಅವರಿಗೆ ಸಿಕ್ಕಿದ್ದು ಏನು? 

ಅಪ್ಪ ಕಂಡ ಕಷ್ಟ ಅಷ್ಟಿಷ್ಟಲ್ಲ. ಬಳಗದವರ ಚುಚ್ಚುಮಾತು, ಅಸಹ್ಯ ನಡೆ, ಮಾನಸಿಕ-ದೈಹಿಕ ನೋವು. ನೆನಪಿಸಿಕೊಂಡಾಗ ಕಣ್ಣಂಚಿನಲ್ಲಿ ನೀರು ಉಕ್ಕಿ ಬರುತ್ತದೆ. ನಾನೂ ನೋಡಲು ಅಪ್ಪನಂತೇ ಎಂದು ಹೆಚ್ಚಿನವರು ಹೇಳುವುದನ್ನು ನೋಡಿದ್ದೇನೆ. ಆಗ ನನಗೆ ಹೆಮ್ಮೆ ಎನಿಸುತ್ತದೆ. ಎಷ್ಟಾದರೂ ನಾನು ಅಪ್ಪನ ಮಗಳಲ್ಲವೇ? ಹಾಗೆಯೇ ಇರುತ್ತೇನೆ ಎಂದು ಅವರಿಗೆ ತಿರುಗಿಸಿ ಹೇಳಿದ್ದೂ ಇದೆ. ಆಗ ಅಪ್ಪನ ಮುಖದಲ್ಲೊಮ್ಮೆ ನಗು ನೋಡುತ್ತಿದ್ದಾ. ನನಗೂ ಅಷ್ಟೇ ಬೇಕಾದದ್ದು. 

“ಅಪ್ಪಾ… ಐ ಲವ್‌ ಯೂ ಪಾ’ ಹಾಡು ಬಂದಾಗ ಅದೆಷ್ಟು ಬಾರಿ ಕೇಳಿದ್ದಾನೋ ಗೊತ್ತಿಲ್ಲ. “ಪುಷ್ಪಕ ವಿಮಾನ’ ಸಿನೆಮಾ ಬಂದಾಗಲಂತೂ ಮುಗಿಲು ಮುಟ್ಟುವ ತನಕ ಅತ್ತಿದ್ದೆ. ಸಿನೆಮಾ ಮಾಡಿದ ನಿರ್ದೇಶಕರಿಗೆ ಮನಸ್ಸಿನಲ್ಲೇ ನೂರು ಬಾರಿ ಥ್ಯಾಂಕ್ಸ್‌ ಹೇಳಿದ್ದೆ. ಅಪ್ಪನ ಬಗೆಗಿನ ಹಾಡು, ಸಿನೆಮಾ ಇಷ್ಟು ಚೆನ್ನಾಗಿ ಮಾಡಬಹುದೆಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ. ಅತ್ತಾಗ ಮುದ್ದಿಸೋ ಮಡಿಲು, ಹೊಡೆದರೂ, ಬೈದರೂ ಕೇಳಿಸಿಕೊಳ್ಳುವ ಮನಸ್ಸು. ಅಪ್ಪಾ ನಿನಗೆ ನೀನೇ ಸಾಟಿ. ನಿನ್ನಂಥ ಗೆಳೆಯ ಮತ್ತೂಬ್ಬ ಸಿಗಲು ಸಾಧ್ಯನೂ ಇಲ್ಲ. ಅಪ್ಪಾ ನೀನಂದ್ರೆ ನನಗಿಷ್ಟಪ್ಪಾ. 
                                    
ವೇದಾವತಿ ಗೌಡ ಎಸ್‌. ಡಿ. ಎಂ. ಕಾಲೇಜು ಮಂಗಳೂರು

ಟಾಪ್ ನ್ಯೂಸ್

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.