ದಸರಾ ರಜೆಯ ನೆನಪುಗಳು


Team Udayavani, Nov 1, 2019, 4:05 AM IST

17

ನಮ್ಮ ಬಾಲ್ಯದ ಶಾಲಾ ದಿನಗಳಲ್ಲಿ ರಜೆಯೆಂದರೆ ತುಂಬಾ ಸಂತೋಷ. ಅದರಲ್ಲಿ ಶನಿವಾರ ಬಂತೆಂದರೆ ನಮಗೆ ಖುಶಿಯೋ ಖುಶಿ. ಏಕೆಂದರೆ, ಭಾನುವಾರ ಆಟ ಆಡಬಹುದಲ್ಲ ! ಆಗ ನಾವು ಐದು ಮಂದಿ ಗೆಳೆಯರಿದ್ದೆವು. ನಮ್ಮ ಶಾಲೆ ಎರಡು ಕಿ. ಮೀ. ದೂರದಲ್ಲಿದ್ದರೂ ಎಲ್ಲರೂ ಒಟ್ಟಿಗೆ ಶಾಲೆಗೆ ಹೋಗುವುದು, ಒಟ್ಟಿಗೆ ಮನೆಗೆ ಬರುವುದು ನಮ್ಮ ದಿನಚರಿ.

ಒಂದು ದಿನ ನಮ್ಮಲ್ಲಿ ಒಬ್ಬನಿಗೆ ಜ್ವರ ಬಂದು, “ಇವತ್ತು ನಾನು ಶಾಲೆಗೆ ಬರುವುದಿಲ್ಲ’ ಎಂದು ಹೇಳಿ ಮನೆಯಲ್ಲೇ ಉಳಿದುಬಿಟ್ಟ. ನನಗೂ ಹೀಗೆಯೇ ಜ್ವರ ಬಂದರೆ ಒಳ್ಳೆಯದಿತ್ತು. ಮನೆಯಲ್ಲೇ ಇರಬಹುದಿತ್ತು ಎಂದು ಅನಿಸಿತು. ಸರಿ, ನಾವೆಲ್ಲರೂ ಸೇರಿ “ಇವತ್ತು ಶಾಲೆಗೆ ಹೋಗುವುದು ಬೇಡ’ ಎಂದು ನಿರ್ಧರಿಸಿದೆವು. ಹಾಗಂತ ಮನೆಗೆ ಹೋದರೆ ಅಮ್ಮನಿಂದ ಪೆಟ್ಟು ತಿನ್ನಬೇಕಾಗುತ್ತದೆ. ಒಬ್ಬ ಅಲ್ಲೇ ಸ್ವಲ್ಪ ದೂರದಲ್ಲಿ ಇರುವ ಅಜ್ಜಿ ಮನೆಗೆ ಹೋಗುತ್ತೇನೆಂದ. ಅದಕ್ಕೆ ನಾನು ಹೇಳಿದೆ, “ಎಲ್ಲಿಯೂ ಹೋಗುವುದು ಬೇಡ. ಇಲ್ಲೇ ಇರುವ ಗುಡ್ಡದಲ್ಲಿ ನಾವೆಲ್ಲ ಕುಳಿತುಕೊಂಡು ಸಮಯ ಕಳೆಯೋಣ’ ಎಂದೆ. ಎಲ್ಲರೂ ಒಪ್ಪಿದರು. ಅಲ್ಲೇ ಸೇರಿ ಸಮಯ ಕಳೆದೆವು. ಸ್ವಲ್ಪ ಹೊತ್ತಿನಲ್ಲಿ ನಮಗೆ ಹಸಿವೆಯಾಗಲು ಶುರುವಾಯಿತು. ಏನು ಮಾಡುವುದು ನಮ್ಮಲ್ಲಿ ತಿನ್ನಲೂ ಏನೂ ಇರಲಿಲ್ಲ. ಹಾಗೆ ಅತ್ತಿತ್ತ ಕಣ್ಣು ಆಡಿಸುವಾಗ ಗಿಡಗಳ ಪೊದೆಯಲ್ಲೆಲ್ಲ ಸಿಕ್ಕಿದ ಹಣ್ಣುಗಳನ್ನು ತಿಂದು ಪಕ್ಕದಲ್ಲಿದ್ದ ಕೆರೆಯ ನೀರನ್ನು ಕುಡಿದು ಹೊಟ್ಟೆ ತಂಪಾಗಿಸಿದೆವು. ನಂತರ ಎಲ್ಲರೂ ಸೇರಿ ಆಟ ಆಡಿದೆವು. ಹಾಗೆ ಆಡುತ್ತ ಆಡುತ್ತ ಎಲ್ಲೆಲ್ಲೂ ಓಡಾಡುವಾಗ ಗುಡ್ಡದ ಪಕ್ಕದ ಮನೆಯವರ್ಯಾರೋ ನೋಡಿ ನಮ್ಮ ಬಗ್ಗೆ ನಮ್ಮ ಮನೆಗೆ ಹಾಗೂ ಶಾಲೆಗೆ ಹೇಳಿಬಿಟ್ಟರು. ನಾನು ಮನೆಗೆ ಕಾಲಿಡುತ್ತಿದ್ದಂತೆ ನನ್ನ ಅಮ್ಮ ಒಂದು ದೊಡ್ಡ ಬೆತ್ತದಿಂದ ಬೆನ್ನಿಗೆ ಎರಡು ಬಾರಿಸಿದರು. ಶಾಲೆಗೆ ಹೋಗದೆ ಗುಡ್ಡೆಯಲ್ಲಿ ಕಾಲಕಳೆಯಲು ನಿಮಗೆ ಯಾರು ಹೇಳಿದ್ದು ಎಂದು ಚೆನ್ನಾಗಿ ಬೈಯ್ದರು. ಶಾಲೆಯಲ್ಲೂ ಮೇಸ್ಟ್ರೆ ನಮಗೆ ಕೈಗೆ ಮುಂದಕ್ಕೆ ಚಾಚಲು ಹೇಳಿ ಎರಡೆರಡು ಪೆಟ್ಟು ಕೊಟ್ಟರು. ಮುಂದೆ ನಾನು ಇದರಿಂದ ಒಳ್ಳೆಯ ಪಾಠ ಕಲಿತೆ. ಶಾಲೆಗೆ ಹೋಗುವುದನ್ನು ಒಂದು ದಿನವೂ ತಪ್ಪಿಸಲಿಲ್ಲ.

ನಮಗೆ ದಸರಾ ಸಮಯದಲ್ಲಿ ತುಂಬಾ ದಿನ ರಜೆ ಕೊಡುತ್ತಿದ್ದರು. ದಸರಾ ರಜೆಯಲ್ಲಿ ಒಮ್ಮೆ ನಾವು ಐದು ಮಂದಿ ಗೆಳೆಯರು ಸೇರಿ ಯೋಚನೆ ಮಾಡಿ ಹುಲಿ ವೇಷ ಮಾಡಿದೆವು. ಒಬ್ಬ ವಾದ್ಯ, ಇನ್ನೊಬ್ಬ ಕೋವಿ ಹೆಗಲ ಮೇಲೆ ಇಟ್ಟುಕೊಂಡು ಬೇಟೆಗಾರನ ವೇಷ ಮಾಡಿದ. ಉಳಿದವರು ಹುಲಿವೇಷ ಹಾಕಿದರು. ಮನೆ ಮನೆಗೆ ಹೋಗಿ ಕುಣಿದೆವು. ಈ ನೆನಪು ನನ್ನಲ್ಲಿ ಇಂದಿಗೂ ಮರೆಯಲಾಗುತ್ತಿಲ್ಲ.

ಗೀತಾಶ್ರೀ
ದ್ವಿತೀಯ ಪಿಯುಸಿ, ವಿವೇಕಾನಂದ ಪದವಿಪೂರ್ವ ಕಾಲೇಜು, ಎಡಪದವು

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.