ಪ್ರೀತಿ ಇಲ್ಲದೆ ಬದುಕು ಇಲ್ಲ


Team Udayavani, Jun 8, 2018, 6:00 AM IST

c-17.jpg

ಪುತ್ತೂರು-ಉಪ್ಪಿನಂಗಡಿ ಹೋಗುತ್ತಿದ್ದ ಬಸ್ಸಿನಲ್ಲಿ ಕೊನೆಯ ಸೀಟಿನಲ್ಲಿ ಕುಳಿತಿದ್ದ ನಾನು ಏನೋ ಒಂದು ಖುಷಿಯಲ್ಲಿ ಇಯರ್‌ಫೋನ್‌ ಹಾಕಿಕೊಂಡು ಕುಳಿತುಕೊಂಡಿದ್ದೆ. ಕಿವಿಗೆ ಇಯರ್‌ಫೋನ್‌ ಸಿಕ್ಕಿಸಿ ಹಾಡು ಕೇಳುತ್ತಾ ಕುಳಿತವರೆಲ್ಲರಿಗೆ ಹೊರಗಿನ ಪ್ರಪಂಚದಲ್ಲಿ ಏನಾಗುತ್ತಿದೆ ಎಂದು ಗೊತ್ತಾಗುವುದೇ ಇಲ್ಲ. ನನ್ನದೂ ಅದೇ ಕತೆ. ಕೆಲವೊಮ್ಮೆ ಕೆಲವೊಂದು ಹಾಡುಗಳನ್ನು ಕೇಳುತ್ತಾ ಇದ್ದರೆ ಏನೇನೋ ನೆನಪಾಗುತ್ತದೆ. ಹಾಗೇ ಹಾಡು ಕೇಳುತ್ತಾ ಬಸ್ಸಿನ ಕಿಟಕಿಯಿಂದ ಹೊರಗಡೆ ಕಣ್ಣಾಯಿಸುತ್ತಿದ್ದಂತೆ ಬಸ್‌ ಒಂದು ಸ್ಟಾಪ್‌ನಲ್ಲಿ ನಿಂತಿತು. ಅಷ್ಟರಲ್ಲಿ ನನ್ನ ಕಣ್ಣಿಗೆ ಹೆಂಗಸೊಬ್ಬಳು ತನ್ನ ಮಗುವಿನ ಕೈಹಿಡಿದು ಜಾಗ್ರತೆಯಿಂದ ರಸ್ತೆ ದಾಟುತ್ತಿದ್ದುದು ಕಾಣಿಸಿತು. ಇನ್ನು ಕೆಲವರು ಬಸ್ಸಿಗಾಗಿ ಅತ್ತ ಕಡೆಯಿಂದ ಧಾವಿಸುತ್ತಾ ಓಡೋಡಿ ಬಂದು ಬಸ್‌ ಹತ್ತುತ್ತಿದ್ದರು. 

ಬಸ್‌ ಜನರನ್ನು ಹತ್ತಿಸಿಕೊಂಡು ಮುಂದೆ ಚಲಿಸಿತು. ನನ್ನ ಮುಂದಿನ ಸೀಟ್‌ನಲ್ಲಿ ಹುಡುಗ-ಹುಡುಗಿ ಕುಳಿತಿದ್ದರು. ಅವರು ಏನೋ ಹರಟುತ್ತಿದ್ದಂತಿತ್ತು. ತುಂಬ ಖುಷಿ ಖುಷಿಯಾಗಿ ಮಾತನಾಡುತ್ತಿದ್ದರು. ಅವರು ಮಾತನಾಡುವ ಶೈಲಿ ನೋಡಿದರೆ ಅವರಿಬ್ಬರು  ಒಬ್ಬರನ್ನೊಬ್ಬರು ತುಂಬ ಪ್ರೀತಿಸುತ್ತಿರುವಂತಿತ್ತು. ಈ ಹುಡುಗ-ಹುಡುಗಿಯನ್ನು ನೋಡಿ ಪ್ರೀತಿಯಲ್ಲಿ ಎಷ್ಟೊಂದು ಸುಖವಿದೆ ಅಲ್ವಾ ಅಂತನ್ನಿಸಿತು.

ಒಬ್ಬನಿಗೆ ಅಪಘಾತವಾಗಿ ಗಾಯಗೊಂಡಿದ್ದರೆ ಅವನಿಗೆ ನಾವು ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಕೇವಲ ವೈದ್ಯರಿಗೆ ತೋರಿಸಿ ಔಷಧಿಕೊಡಿಸಿದರೆ ಅವನ ನೋವು ಕಡಿಮೆಯಾಗುವುದಿಲ್ಲ. ಬದಲಾಗಿ ಅವನ ಮನೆಯವರು, ಹಿತೈಷಿಗಳು ಬಂದು ಉಪಚರಿಸಿಕೊಳ್ಳುವಾಗ ಆತನಿಗೆ ಎಲ್ಲಾ ನೋವು ಕಡಿಮೆಯಾಗುತ್ತದೆ. ಜೊತೆಗೆ ತಾನು ಬೇಗ ಗುಣಮುಖನಾಗುವೆ ಎಂಬ ಧೈರ್ಯ, ನಂಬಿಕೆಯೂ ಸೇರಿ ಆತ ಬೇಗನೆ ಚೇತರಿಸಿಕೊಳ್ಳುತ್ತಾನೆ. ಹಾಗೆಯೇ ಒಂದು ಮಗುವಿನ ಅಪ್ಪ-ಅಮ್ಮ ತನ್ನ ಮಗುವನ್ನು ಚೆನ್ನಾಗಿರಬೇಕು ಎಂದು ಎಷ್ಟು  ಪ್ರೀತಿಯಿಂದ ಸಾಕುತ್ತಾರೆ ಎಂದರೆ ಅದು ಕೇಳಿದ್ದೆಲ್ಲವನ್ನೂ ಕೊಡಿಸುತ್ತಾರೆ. ಅವರಿಗೂ ಮಗುವಿನ ಖುಷಿಯೇ ಮುಖ್ಯ. ಅದರಂತೆಯೇ ಹೆಂಡತಿಯಾದವಳು ತನ್ನ ಗಂಡ ಬರುವ ಹೊತ್ತು ಮೀರಿದರೆ ತಳಮಳಗೊಳ್ಳುತ್ತಾಳೆ. ನಮ್ಮನ್ನು ಪ್ರೀತಿಸುವವರಿಗೆ ನಾವು ಬೈದರೂ ಅವರು ನಮಗೆ ವಾಪಾಸು ಬೈಯ್ಯುವುದಿಲ್ಲ. ಅದರ ಬದಲು ಅವರು ಅಳುತ್ತಾರೆ. ಪ್ರೀತಿಯೆಂದರೆ ಇದೇ ಅಲ್ಲವೆ? ನಿಜವಾದ ಪ್ರೀತಿ ಎಂದರೆ ಇದೇ. ಈ ಪ್ರಪಂಚದಲ್ಲಿ ಪ್ರೀತಿ ಇಲ್ಲದೆ ಬದುಕಲು ಸಾಧ್ಯವಿಲ್ಲ. ಪ್ರೀತಿ ಇಲ್ಲದೆ ಬದುಕುವುದಲ್ಲಿ ಅರ್ಥವೂ ಇಲ್ಲ.

ಮಂಜನಾಥ್‌
ಥಮ ಪಿಯುಸಿ ಸರಕಾರಿ ಪದವಿಪೂರ್ವ ಕಾಲೇಜು, ಕೊಂಬೆಟ್ಟು ಪುತ್ತೂರು

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.