ಪೂರ್ವ  ವಿದ್ಯಾರ್ಥಿಗಳ ಅಪೂರ್ವ ಕೂಟ


Team Udayavani, Mar 9, 2018, 7:30 AM IST

s-3.jpg

ಕಾಲೇಜುಗಳಲ್ಲಿ ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ವಿದಾಯ ಹೇಳುವ ಕಾಲ ಸನ್ನಿಹಿತವಾಗಿದೆ. ವಿದ್ಯಾರ್ಥಿಗಳು ಭಾವನಾತ್ಮಕವಾಗಿ ಆಟೋಗ್ರಾಫ್ ಬರೆಯುವ, ಸೆಲ್ಫಿ ಫೋಟೋ ಹೊಡೆಸಿಕೊಳ್ಳುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ನಾನು ಮರೆಯುವುದಿಲ್ಲ. ನೀನೂ ಮರೆಯಬೇಡ. ನಿರಂತರ ಸಂಪರ್ಕದಲ್ಲಿರು ಎಂದು ಮುಂತಾಗಿ ಹೇಳುತ್ತಾ ಗೆಳತಿಯರು ಪರಸ್ಪರ ಅಪ್ಪಿಕೊಳ್ಳುತ್ತಾ ಕಣ್ಣೀರಧಾರೆ ಹರಿಸುತ್ತಿದ್ದಾರೆ.

ಮುಂದೊಂದು ದಿನ ಪದವಿ ಪತ್ರ ಗಿಟ್ಟಿಸಿಕೊಂಡು ಹೀಗೆ ಮನೆ ತಲುಪಿದವರಲ್ಲಿ ಯಾರು ಯಾರನ್ನು ಎಷ್ಟು ಕಾಲ ನೆನಪಿಸಿಕೊಳ್ಳುತ್ತಾರೋ? ಸಂಪರ್ಕದಲ್ಲಿರುತ್ತಾರೋ ಗೊತ್ತಿಲ್ಲ. ಬದುಕಿನ ಬಂಡಿ ನಿಲ್ಲುವುದೇ? ಇಲ್ಲವಲ್ಲ. ಈ ಎಲ್ಲಾ ಮಂದಿ ಒಂದು ದೊಡ್ಡ ಬಾಂಬ್‌ ಸಿಡಿದಂತೆ ಪ್ರಪಂಚದ ಮೂಲೆ ಮೂಲೆಗೂ ಚದುರಿ ಹೋಗಿ ಬಿಡುತ್ತಾರೆ. ತಮ್ಮ ತಮ್ಮ ಕಾಯಕಗಳಲ್ಲಿ ತೊಡಗಿಕೊಳ್ಳುತ್ತಾರೆ. ಇಡೀ ಕ್ಲಾಸಿಗಾಗುವಾಗ ಬಹುತೇಕ ಮಂದಿಗೆ ಯಾರು ಎಲ್ಲಿದ್ದಾರೆಂದೇ ಅರಿಯದ ಸ್ಥಿತಿ. ಯಾರೂ ಅರಿಯುವ ಗೋಜಿಗೂ ಹೋಗುವವರಿಲ್ಲ!

ಹಾಗೇ ಆಯಿತು ನೋಡಿ. 1984ನೇ ಇಸವಿಯಲ್ಲಿ ಎಂಜಿಎಂ ಕಾಲೇಜಿನಲ್ಲಿ ವಾಣಿಜ್ಯ ತರಗತಿಯಲ್ಲಿ ಕಲಿತ ಯಾರೋ ಒಬ್ಬ ಪುಣ್ಯಾತ್ಮನಿಗೆ ಹಿಂತಿರುಗಿ ನೋಡುವ ಬಯಕೆಯಾಗಿದೆ! ಸರಿ 33 ವರ್ಷಗಳ ಬಳಿಕ ತನ್ನ ಜತೆಗಿದ್ದವರು ಎಲ್ಲಿದ್ದಾರೆ, ಹೇಗಿದ್ದಾರೆ? ಸೋತಿದ್ದಾರೋ ಗೆದ್ದಿದ್ದಾರೋ ನೋಡುವ ತವಕ. ಆತ ತನ್ನ ಸಂಪರ್ಕದಲ್ಲಿ ಇದ್ದ ಗೆಳೆಯನಲ್ಲಿ ಅರುಹಿದ. ಆತನಿಗೊ ಅದೇ ಕುತೂಹಲ. ಅವರಿಬ್ಬರಿಗೂ ತಲಾಶ್‌ ಮಾಡುವ ಉಮೇದು ಬಂದು ಮತ್ತೆರಡು ಮಂದಿಯನ್ನು ಜೊತೆಗೆ ಸೇರಿಸಿಕೊಂಡರು.

ಈಗಿನ ಸ್ಪೀಡ್‌ ನಿಮಗೆ ಗೊತ್ತಲ್ಲ. ಆಧುನಿಕ ತಂತ್ರಜ್ಞಾನ ಮೂಲಕ ಸಂದೇಶ ಕಳುಹಿಸಿ ನಮಗೆ ಬೇಕಾದವರನ್ನು ಪ್ರಪಂಚದ ಯಾವ ಮೂಲೆಯಲ್ಲಿದ್ದರೂ ಕ್ಷಣಮಾತ್ರದಲ್ಲಿ ಹುಡುಕಿ ತೆಗೆಯುವ ಕಾಲವಿದು.

ಪರಿಣಾಮ 1984ರ ಪೂರ್ತಿ ಬ್ಯಾಚು. ಎಂಜಿಎಂ ಕಾಲೇಜಿನಲ್ಲಿ ಮತ್ತೆ ಒಂದು ಸೇರುವುದೆಂದು ದಿನ ನಿಗದಿಯಾಯಿತು. ತಮಗೆ ವಿದ್ಯೆಬುದ್ಧಿ ಕಲಿಸಿದ ಎಲ್ಲಾ ಗುರುಗಳಿಗೆ ಕರೆ ಹೋಯಿತು. ಗುರುಗಳು ಧನ್ಯತಾಭಾವವನ್ನು ಕಂಡುಕೊಳ್ಳುವುದು ಇಂಥ ಶಿಷ್ಯರ ಬಳಿಯೇ.

ಹೀಗಾಗಿ, ಬಹಳ ಅಪರೂಪದ “ಪುನರ್ಮಿಲನ’ ಮಾದರಿ ಕಾರ್ಯಕ್ರಮವೊಂದು ಎಂಜಿಎಂ ಕಾಲೇಜಿನ ಗೀತಾಂಜಲಿ ಹಾಲ್‌ನಲ್ಲಿ ಇತ್ತೀಚೆಗೆ ನಡೆಯಿತು. ದೂರದ ಬೆಂಗಳೂರು, ಮುಂಬೈ, ಡೆಲ್ಲಿ ಸಹಿತ ವಿದೇಶಗಳಲ್ಲಿದ್ದವರೂ ಸೇರಿ ಕಾರು, ಬಸ್ಸು, ರೈಲು, ವಿಮಾನ ಏರಿ, ಹಾರಿ ಬಂದರೆ ಕಾಲೇಜು ಪಕ್ಕದ ಊರಿನಲ್ಲಿದ್ದವರು ದ್ವಿಚಕ್ರಿಗಳಾಗಿ, ಪಾದಾಚಾರಿಗಳಾಗಿ ಬಂದು ಸೇರಿಕೊಂಡರು. ಬೆಳಗಿನ ಉಪಾಹಾರದ ಬಳಿಕ ಪ್ರಾರ್ಥನೆ, ಕೇಕ್‌ ಕತ್ತರಿಸುವುದರೊಂದಿಗೆ, ಕಲಾಪ ಆರಂಭ. 

ಸೇರಿದ ಗುರು-ಶಿಷ್ಯರಲ್ಲಿ ಅಳುಕಿಲ್ಲ, ಅಂಜಿಕೆಯಿರಲಿಲ್ಲ. ಶಿಷ್ಯರುಗಳು ಬಾಗಿ ಗುರುಗಳ ಪಾದಗಳಿಗೆರಗಿ ಶರಣಾದರೆ, ಗುರುಗಳು ಇಂದಿನ ದಿನ ಸುದಿನವೆಂದು ಬೀಗಿದರು. ಮನಸಾರೆ ಒಡನಾಡಿದರು. ಗುರುಗಳು ಹಾಡಿದರು, ಶಿಷ್ಯರು ಕುಣಿದರು. ಮನದಣಿಯೆ ಹಳೆ ನೆನಪುಗಳನ್ನು ಮೆಲುಕು ಹಾಕುತ್ತಾ, ಕುಶಾಲು ತೋಪುಗಳನ್ನು ಹಾರಿಸುತ್ತಾ ನಕ್ಕು ಹಗುರಾದರು.

ಇಷ್ಟೆಲ್ಲವನ್ನೂ ಆಯೋಜಿಸಿದ ಶಿಷ್ಯರ ಕನಸುಗಳು ಇಷ್ಟಕ್ಕೇ ಸೀಮಿತವಾಗಿರಲಿಲ್ಲ.  ಅವರು “ಪುನರ್ಮಿಲನ’ 33 ವರ್ಷಗಳ ಬಳಿಕ 1984-2017 ಎಂಬ ನೂತನ ಹೊತ್ತಗೆಯನ್ನೂ ಬಿಡುಗಡೆಗೊಳಿಸಿದರು.

ಅದರಲ್ಲಿ ಎಲ್ಲಾ ಗೆಳೆಯರ ಭಾವಚಿತ್ರಗಳು, ಅವರವರ ವ್ಯಕ್ತಿಗತ ಸ್ಥಾನಮಾನ, ಕುಟುಂಬದ ವಿವರಗಳನ್ನು ನಮೂದಿಸಿದರು. 1984ರ ವಿದಾಯ ಪಾರ್ಟಿಯ ಚಿತ್ರ ಸಹಿತ ಇಂದಿನ ಗುರುವಂದನೆಯ ವರೆಗಿನ ಚಿತ್ರಗಳನ್ನು ಅದಕ್ಕೆ ಸೇರಿಸಿದರು.

ಸಂಜೆ ಭವ್ಯ ಹೊಟೇಲೊಂದರಲ್ಲಿ ಔತಣ ಕೂಟವನ್ನೂ ಏರ್ಪಡಿಸಿದ ಈ ಶಿಷ್ಯರುಗಳು ಖರ್ಚು ಭರಿಸಲು ವಂತಿಗೆ ವಸೂಲು ಮಾಡಿದ್ದರು. ಉಳಿಕೆ ಹಣವನ್ನು ಬಡ ವಿದ್ಯಾರ್ಥಿಗಳಿಗೆ ನೀಡಲು ನಿರ್ಧರಿಸಿ ಮಾದರಿಯೆನಿಸಿದರು! ಈ ಸಂಗತಿ ಇತರರಿಗೂ ಸ್ಫೂರ್ತಿಯಾದರೆ ಎಷ್ಟು ಚೆನ್ನ!

ರಾಜಗೋಪಾಲ ರಾವ್‌ ಎಂಜಿಎಂ ಕಾಲೇಜು, ಉಡುಪಿ

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.