ಋಣಾತ್ಮಕ ಅಭಿಪ್ರಾಯವನ್ನು ಧನಾತ್ಮಕವಾಗಿಸೋಣ!


Team Udayavani, May 3, 2019, 6:00 AM IST

YUVA

ಪ್ರತಿಯೊಬ್ಬ ವ್ಯಕ್ತಿಯು ಜೀವನದಲ್ಲಿ ಏನನ್ನಾದರೂ ಸಾಧಿಸಬೇಕೆಂದು ಪ್ರಯತ್ನಪಡುತ್ತಿರುತ್ತಾನೆ. ಪ್ರಯತ್ನ ಗೆಲುವಿನ ಪ್ರಥಮ ಹೆಜ್ಜೆ. ಯಾವುದೇ ಒಬ್ಬ ವ್ಯಕ್ತಿ ಪ್ರಯತ್ನ ಮಾಡದೆ ಗೆಲುವನ್ನು ಸಾಧಿಸುವುದು ಅಸಾಧ್ಯ. ಹೀಗೆ ತನ್ನ ಪ್ರಯತ್ನದಲ್ಲಿ ತೊಡಗಿರುವ ವ್ಯಕ್ತಿಯ ಬಗ್ಗೆ ಬೇರೆಯವರು ಮಾತನಾಡುವುದು ಸಹಜ. ಇದು ಮಾನವನ ಸಹಜ ಗುಣ. ತನಗೆ ಏನೂ ಸಾಧಿಸಲು ಸಾಧ್ಯವಾಗದಿದ್ದರೂ ಬೇರೆಯವರ ಬಗ್ಗೆ ಮಾತನಾಡಬೇಕು. ನಮ್ಮ ಬಗ್ಗೆ ಒಳ್ಳೆಯದಾಗಿ ಮಾತನಾಡಿದರೆ, ನಮಗೆ ಖುಷಿಯಾಗುತ್ತದೆ. ಆದರೆ, ನೆಗೆಟಿವ್‌ ಕಮೆಂಟ್ಸ್‌ಗಳು ಬಂದರೆ ತುಂಬಾ ಬೇಸರ ಪಡುತ್ತೇವೆ.

ನೆಗೆಟಿವ್‌ ಕಮೆಂಟ್ಸ್‌ಗಳಿಗೆ ತಲೆಕೆಡಿಸಿಕೊಂಡು ತಮ್ಮ ಪ್ರಯತ್ನವನ್ನು ನಿಲ್ಲಿಸುವವರು ಹಲವರು. ಅಂತಹವರಲ್ಲಿ ಬಹುಶಃ ನಾನೂ ಒಬ್ಬಳು. ಯಾಕೆಂದರೆ, ನಾನು ಜೀವನದಲ್ಲಿ ಕಂಡ ಅನೇಕ ಜನರು ಹೇಗೆ ಎಂದರೆ ಏನು ಮಾಡಿದರೂ ತಪ್ಪನ್ನು ಹುಡುಕುವವರು. ಮೊಸರಲ್ಲೂ ಕಲ್ಲನ್ನು ಹುಡುಕುವಂತೆ ಪ್ರತಿ ಪ್ರಯತ್ನದಲ್ಲೂ ತಪ್ಪನ್ನು ಹುಡುಕುತ್ತಾರೆ. ತಮ್ಮ ಜೀವನದಲ್ಲಿ ನಡೆಯುವ ವಿಚಾರಗಳು, ತಾವು ಮಾಡುವ ತಪ್ಪುಗಳನ್ನು ಕಂಡುಕೊಳ್ಳುವ ಬದಲು ಬೇರೆಯವರ ಜೀವನದ ಬಗ್ಗೆ ಮಾತನಾಡುವ ಆ ಜನರ ಬಗ್ಗೆ ಏನು ಹೇಳಬೇಕು!

ನಾನು ಕೂಡ ಅನೇಕ ನೆಗೆಟಿವ್‌ ಕಮೆಂಟ್ಸ್‌ಗಳನ್ನು ಕೇಳಿ ನನ್ನ ಕೆಲವೊಂದು ಭಾಗವಹಿಸುವಿಕೆಯ ಕ್ಷೇತ್ರವನ್ನು ಬಿಟ್ಟುಬಿಟ್ಟೆ. ಅನೇಕ ಅವಕಾಶಗಳು ಬಂದರೂ ಅದನ್ನು ತಿರಸ್ಕರಿಸು ತ್ತಿದ್ದೆ. ನಾನು ಯಾವ ವಿಷಯದಲ್ಲೂ ಭಾಗವಹಿಸುವುದಿಲ್ಲ ಎಂಬ ನಿರ್ಧಾರಕ್ಕೆ ಬಂದುಬಿಟ್ಟಿದ್ದೆ. ಆದರೆ, ಕೊನೆಗೆ ನನಗೆ ಅರಿವಾಯಿತು ಈ ಕಮೆಂಟ್ಸ್‌ಗಳ ಬಗ್ಗೆ ಯೋಚಿಸುವುದರಿಂದ ಏನೂ ಪ್ರಯೋಜನವಿಲ್ಲ. ಅದೇ ನೆಗೆಟಿವ್‌ ಕಮೆಂಟ್ಸ್‌ ಗಳನ್ನು ಪಾಸಿಟಿವ್‌ ಆಗಿ ತೆಗೆದುಕೊಳ್ಳಲು ನಿರ್ಧರಿಸಿದೆ. ನನ್ನ ಬಗ್ಗೆ ಯಾರೂ ಏನೂ ಹೇಳುವರೋ, ಅವರ ಎದುರು ನಾನು ಅದೇ ವಿಷಯದಲ್ಲಿ ಸಾಧಿಸಿ ತೋರಿಸಬೇಕೆಂದು ಪಣತೊಟ್ಟೆ. ಇಂದಿಗೂ ಕೂಡ ನಾನು ಅದೇ ಸಾಧನೆಯ ಪ್ರಯತ್ನದಲ್ಲಿದ್ದೇನೆ.

ಆದ್ದರಿಂದ ಸ್ನೇಹಿತರೇ, ಏನೇ ಆದರೂ ನೆಗೆಟಿವ್‌ ಕಮೆಂಟ್ಸ್‌ಗಳನ್ನು ಪಾಸಿಟಿವ್‌ ಆಗಿ ತೆಗೆದುಕೊಳ್ಳಿ. ಆ ನೆಗೆಟಿವ್‌ ಕಮೆಂಟ್ಸ್‌ಗಳಲ್ಲಿಯೇ ಪಾಸಿಟಿ ವಿಟಿ ಯನ್ನು ಕಂಡುಕೊಳ್ಳಿ. ಆ ಪಾಸಿಟಿವಿಟಿ ನಮ್ಮ ಜೀವನದಲ್ಲಿ ಸಾಧಿಸಲು ಅವಕಾಶ ಮಾಡಿಕೊಡುತ್ತದೆ. ನೆಗೆಟಿವ್‌ ಕಮೆಂಟ್ಸ್‌ಗಳ ಬಗ್ಗೆ ಯೋಚಿಸುತ್ತ ಹೋದರೆ ನಮ್ಮ ಜೀವನವೇ ಹಾಳಾಗಿ ಹೋಗುತ್ತದೆ.

-ಶ್ರಾವ್ಯಾ ಎನ್‌.ಕೆ.
ದ್ವಿತೀಯ ಬಿ.ಕಾಂ.ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜು, ಸವಣೂರು

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.