ಗಿಳಿವಿಂಡಿಗೆ ಹೋಗಿಬಂದೆವು !


Team Udayavani, Jul 26, 2019, 5:06 AM IST

aa

ಕನ್ನಡ ಸಾಹಿತಿಗಳ ಮನೆ ಸಂದರ್ಶಿಸುವುದೆಂದರೆ ನಮಗೆಲ್ಲ ಎಲ್ಲಿಲ್ಲದ ಉತ್ಸಾಹ. ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈಗಳನ್ನು ಅರಿಯದವರಿದ್ದಾರೆಯೇ? ಸಾಹಿತ್ಯದಲ್ಲಿ ಇಂದಿಗೂ ಭದ್ರವಾಗಿ ನೆಲೆಯೂರಿ ಕನ್ನಡಿಗರ ಮನದಲ್ಲಿ ಇಂದಿಗೂ ಹಚ್ಚಹಸುರಾಗಿರುವ ಹೆಸರು ಪೈಗಳದ್ದು. ಮಂಜೇಶ್ವರದಲ್ಲಿರುವ ಪೈಗಳ ಮನೆ ಸಂದರ್ಶಿಸಬೇಕೆಂದು ತೀರ್ಮಾನಿಸಿ ತಿಂಗಳುಗಳೇ ಕಳೆದಿದ್ದುವು. ಆದರೆ, ಹಲವು ಕಾರಣಗಳಿಂದ ಸಂದರ್ಶನಕ್ಕೆ ತೊಡಕುಂಟಾಗುತ್ತಿತ್ತು.ಕೊನೆಗೊಂದು ದಿನ ಎಲ್ಲಾ ಕಾರ್ಯಗಳನ್ನು ಬದಿಗಿಟ್ಟು ಮಂಜೇಶ್ವರಕ್ಕೆ ಹೋಗಿಯೇ ಬರಬೇಕೆಂದು ದಿನ ನಿಗದಿಪಡಿಸಿದೆವು. ನಿಗದಿಪಡಿಸಿದ ದಿನದಂದು ಎಲ್ಲ ರೂ ಮಂಜೇಶ್ವರದಲ್ಲಿ ಜೊತೆಯಾದೆವು. ಸ್ವತಃ ಕಾಸರಗೋಡಿನವಳಾದರೂ ಇದುವರೆಗೆ ಪೈಗಳ ಮನೆ ಸಂದರ್ಶಿಸುವ ಭಾಗ್ಯ ನನಗೊದಗಿ ಬಂದಿರಲಿಲ್ಲ. ಆದ್ದರಿಂದ ಪೈಗಳ ಮನೆಯೂ ತಿಳಿದಿರಲಿಲ್ಲ. ಮನೆ ಹುಡುಕಲು ಹೆಚ್ಚು ಕಷ್ಟಪಡಬೇಕಾಗಿಯೂ ಬರಲಿಲ್ಲ ಬಿಡಿ. ಆಟೋರಿಕ್ಷಾದ ಮೊರೆಹೊಕ್ಕು ಪೈಗಳ ಮನೆ ತಲುಪಿಯೇ ಬಿಟ್ಟೆವು. ಆಟೋದಿಂದ ಇಳಿದ ನಮಗೆ ಅಚ್ಚರಿ ಕಾದಿತ್ತು. ಪೈಗಳ ಮನೆಯು ಭವ್ಯವಾಗಿ ಕಂಗೊಳಿಸುತ್ತಿತ್ತು. ಮನೆಯೊಳಗೆ ಪ್ರವೇಶಿಸುವ ತವಕ ಎಲ್ಲರಲ್ಲೂ ಎದ್ದು ನಿಂತಿತ್ತು.

ಮನೆಯ ಮುಂಭಾಗದ ಛಾವಣಿಯಲ್ಲಿ ಪೈಗಳ ಭವ್ಯವಾದ ಮೂರ್ತಿ ಕಣ್ಮನ ಸೂರೆಗೊಳಿಸಿತು. ಒಳಹೋದವರೇ ಅಲ್ಲಿದ್ದವರಲ್ಲಿ ನಮ್ಮ ಪರಿಚಯ ಹೇಳಿಕೊಂಡೆವು. ಮನೆಯೊಳಗೆ ಹೊಕ್ಕಾಗ ಹಲವಾರು ಹೊತ್ತಗೆಗಳನ್ನು ಹೊತ್ತ ಕಪಾಟುಗಳಿದ್ದುವು. ಅದರಲ್ಲಿ ಮಲಯಾಳ, ಕನ್ನಡ ಹೀಗೆ ಬಗೆಬಗೆಯ ಪುಸ್ತಕಗಳಿದ್ದುವು. ಮತ್ತೂ ಒಳಹೊಕ್ಕಾಗ ಅಂದವಾದ ಕಲಾಕೃತಿಗಳನ್ನು ಹೊಂದಿದ ಬಾಗಿಲೊಂದರ ಮೇಲೆ “ಯಕ್ಷದೇಗುಲ’ ಎಂದು ಬರೆದಿತ್ತು.ಎಲ್ಲರ ಮನದಲ್ಲೂ ಒಂದೇ ಪ್ರಶ್ನೆ, “ಇದರೊಳಗೇನಿರಬಹುದು?’ ಎಂದು. ಕೊನೆಗೂ ಬಾಗಿಲು ತೆರೆದು ಒಳಹೊಕ್ಕ ನಮಗೆ ವಿಸ್ಮಯ ಕಾದಿತ್ತು. ಹಲವು ತರದ ಯಕ್ಷಗಾನ ವೇಷಗಳು, ಮುಖವರ್ಣಿಕೆಯ ಮಾದರಿಗಳು, ಯಕ್ಷಗಾನದಲ್ಲಿ ಉಪಯೋಗಿಸುವ ಆಯುಧಗಳು, ಆಭರಣಗಳ ಆಗರ. ಈ ಕೋಣೆಯೊಳಗಿನ ಸೌಂದರ್ಯ ನಮ್ಮ ಮನಸ್ಸಿಗೂ ಕಣ್ಣಿಗೂ ಹಬ್ಬವನ್ನುಂಟುಮಾಡಿ ನಮ್ಮನ್ನು ಹೊರಬರದಂತೆ ಅಲ್ಲೇ ಬಂಧಿಸಿತು.

-ತೇಜಶ್ರೀ ಶೆಟ್ಟಿ
ತೃತೀಯ ಪತ್ರಿಕೋದ್ಯಮ
ಮಂಗಳೂರು ವಿ. ವಿ.

ಟಾಪ್ ನ್ಯೂಸ್

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.