ಮಿಸ್‌ ಯೂ ಫ್ರೆಂಡ್‌


Team Udayavani, May 10, 2019, 5:50 AM IST

22

ಅದು ಪದವಿ ಜೀವನದ ಮುಕ್ತಾಯ. ಮುಕ್ತಾಯವೇ ಮುಂದಿನ ಹೊಸತನದ ಆರಂಭ. ಅಂದು 2017 ಮೇ ನನ್ನ ಪದವಿ ಜೀವನ ಮುಗಿದು ಗುರುಗಳ ಸಲಹೆಯಂತೆ ನನ್ನ ಇಷ್ಟದ ವಿಷಯವಾದ ಅರ್ಥಶಾಸ್ತ್ರ ಸ್ನಾತಕೋತ್ತರ ಅಧ್ಯಯನಕ್ಕೆಂದು ಮಡಿಕೇರಿಯಿಂದ ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್‌ ಮಂಗಳಗಂಗೋತ್ರಿಗೆ ತೆರಳಿದೆ.

ಅದೇನೋ ಹೊಸತನ, ಹೊಸಜನ. ನನ್ನವರೂ ಯಾರೂ ಇಲ್ಲದ ಭಾವ, ಏಕಾಂಗಿಯಾಗಿ ನಾನು ಅಲ್ಲಿಗೆ ಬಂದರೆ ಮನದಲ್ಲಿ ಏನೋ ಭಯ, ಆದರೂ ಕಲಿಯಬೇಕೆಂಬ ಹಂಬಲ ನನ್ನನ್ನು ಅಲ್ಲಿ ಸ್ಥಿರವಾಗಿ ನಿಲ್ಲಿಸಿತ್ತು.

ನಾನು ಮೂಲತಃ ಕನ್ನಡ ಮಾಧ್ಯಮದ ಪುಟ್ಟ ಗ್ರಾಮದ ಹುಡುಗನಾಗಿದ್ದೆ. ಮೊದಲನೆ ಭಾರಿ ಮನೆಬಿಟ್ಟು ಬಹುದೂರದ ಹಾಸ್ಟೆಲ್‌ನಲ್ಲಿ ಇನ್ನು ಜೀವನ, ಇದನ್ನೂ ಊಹಿಸಿಯೇ ಇರಲಿಲ್ಲ ಬಿಡಿ. ಹಾಗೋ ಹೀಗೋ ಮೊದಲ ತರಗತಿ ಪ್ರಾರಂಭವಾಯಿತು. ಅಕ್ಕಪಕ್ಕದ ಜಿಲ್ಲೆಯವರೂ, ರಾಜ್ಯದವರು ಪರಿಚಿತರಾದರು.

ನಮ್ಮ ತರಗತಿಯಲ್ಲಿ ಒಬ್ಬ ವಿದೇಶಿ ವಿದ್ಯಾರ್ಥಿ! ಆತನನ್ನು ಕಂಡು ಅಚ್ಚರಿ, ಮಾತನಾಡಿಸಬೇಕೆಂಬ ಹಂಬಲ. ಆದರೆ ಹೇಗೆ ? ನನಗೆ ಇಂಗ್ಲಿಶ್‌ ಜ್ಞಾನ ಅಷ್ಟಕ್ಕಷ್ಟೆ ಆಗಿತ್ತು. ಕೊನೆಗೆ ಹೇಗೋ ಮಾತನಾಡಲು ಪ್ರಾರಂಭಿಸಿದೆ, ಆತನ ಹೆಸರು ಡೇನಿಸ್‌ ಮ್ಯಾಥ್ಯೂ ಸಿಲಾಯೊ. ದೇಶ ಆಫ್ರಿಕಾದ ತಾಂಜಾನಿಯಾ.

ದಿನಗಳು, ವಾರಗಳು ಕಳೆದವು. ನಮ್ಮಲ್ಲಿ ಸ್ನೇಹ ಬೆಳೆಯಿತು. ಅದೆಷ್ಟೋ ವಿಷಯಗಳನ್ನು ವಿನಿಮಯ ಮಾಡಿಕೊಂಡೆವು. ನಮ್ಮಿಬ್ಬರ ಊರಿನ, ದೇಶದ ಬಗ್ಗೆ ತಿಳಿದುಕೊಳ್ಳುತ್ತ ಸಾಗಿದೆವು. ನನಗೆ ಖುಷಿಯೋ ಖುಷಿ. ವಿದೇಶಿ ಪ್ರಜೆಯೊಬ್ಬ ಸ್ನೇಹಿತನಾಗಿ ಅದರಲ್ಲೂ ತರಗತಿಯ ಸಹಪಾಠಿಯಾಗಿದ್ದಾನೆಂದು. ನಾವಿಬ್ಬರು ಮುಂದಿನ ಬೆಂಚಿನಲ್ಲಿ ಅಕ್ಕಪಕ್ಕ ಕುಳಿತುಕೊಳ್ಳುತ್ತಿದ್ದೆವು. ಆತ ನನ್ನ ಜೀವನಕ್ಕೆ ಬೇಕಾದ ಅದೆಷ್ಟೋ ವಿಷಯಗಳನ್ನು ಕಲಿಸಿದ.

ಇಂಗ್ಲಿಷ್‌ ಕಲಿಯಲು ಕಷ್ಟಪಡುತ್ತಿದ್ದ ನನಗೆ ಆತ ಹೇಳಿದ್ದು ಇಷ್ಟೇ Don’t Worry ಎಂದು. ಆತ ದಿನಂಪ್ರತಿ ನನ್ನೊಡನೆ ಮಾತನಾಡುತ್ತಿದ್ದ. ನಾನು ಅವನಿಗೆ ಪ್ರೊಫೆಸರ್‌ ಮತ್ತು ತರಗತಿಯ ಇತರ ಸಹಪಾಠಿಗಳ ಕನ್ನಡದ ಮಾತನ್ನು ಅವನಿಗೆ ಇಂಗ್ಲಿಷ್‌ಗೆ ಅನುವಾದ ಮಾಡಿ ಹೇಳುತ್ತಿದ್ದೆ.

ನನಗೆ ಅರ್ಥಶಾಸ್ತ್ರದ ಬಗ್ಗೆ ಅನೇಕ ವಿಷಯ ಕಲಿಸಿದ. ಅವರ ಭಾಷೆ, ಆಚಾರ, ಆಹಾರದ ಬಗ್ಗೆ ತಿಳಿಸಿದ. ಅವನ ಮಾತೃಭಾಷೆ “ಸ್ವಹಿಲಿ’ಯ ಕೆಲವು ಪದಗಳನ್ನು ಹೇಳಿಕೊಟ್ಟ. ನಾನು ಅವನಿಗೆ ಕನ್ನಡದ ಕೆಲವು ಪದಗಳು ಹೇಳಿಕೊಟ್ಟಿದ್ದೆ. ಆತನ ಸ್ನೇಹ ಹೃದಯಕ್ಕೆ ಬಹಳ ಹತ್ತಿರವಾಗ ತೊಡಗಿತ್ತು. ನಾವಿಬ್ಬರು ಸಿಟಿ ಸೆಂಟರ್‌, ಮಾಲ್, ಬೀಚ್‌, ದೇವಾಲಯಗಳನ್ನು ಸುತ್ತಿದೆವು.

ಮತ್ತೂಂದು ಅಚ್ಚರಿಯ ಸಂಗತಿಯೆಂದರೆ ಆತನ ವಯಸ್ಸು 32. ಮದುವೆಯಾಗಿ ಒಂದು ಮಗುವಿನ ತಂದೆ ಆತ, ಮೂರು ವಾರದ ಮಗುವನ್ನು ಬಿಟ್ಟು ಕಲಿಕೆಯ ಉದ್ದೇಶದಿಂದ ಭಾರತಕ್ಕೆ ಬಂದಿದ್ದ. ಆತನ ಹಂಬಲ, ಶಿಕ್ಷಣ ಪಡೆಯುವ ತವಕ ನಮ್ಮ ತರಗತಿಯ ಎಲ್ಲರಿಗೂ ಸ್ಫೂರ್ತಿದಾಯಕ ವಿಷಯವಾಗಿತ್ತು. ದೇಶ-ಭಾಷೆ ಬೇರೆಯಾದರೂ ಆತನ ಮುಗ್ಧತೆ, ಒಳ್ಳೆಯ ಮನಸ್ಸು, ಸಮಾನತೆಯ ಭಾವ ಅವನಿಗಿಂತ 10 ವರ್ಷ ಚಿಕ್ಕವಯಸ್ಸಿನ ನನ್ನನ್ನು ಆತನ ಸ್ನೇಹಿತನಾಗುವಂತೆ ಮಾಡಿತ್ತು.

ಈಗ ನಮ್ಮ ಎರಡು ವರ್ಷದ ಸ್ನಾತಕೋತ್ತರ ತರಗತಿ ಈ ತಿಂಗಳಲ್ಲಿ ಮುಗಿಯುತ್ತಿದೆ. ಆತ ಆತನ ದೇಶಕ್ಕೆ ತೆರಳುತ್ತಿದ್ದಾನೆ. ನಾನು ನನ್ನೂರಿಗೆ ಪ್ರಯಾಣ ಬೆಳೆಸಬೇಕಾಗಿದೆ. ಮುಂದೆ ನಾನು-ಅವನು ಭೇಟಿಯಾಗಲು ಅದೆಷ್ಟು ಸಮಯ ಕಾಯಬೇಕಾಗಿದೆಯೋ ಗೊತ್ತಿಲ್ಲ. ಅವನನ್ನು ಮಿಸ್‌ ಮಾಡಿಕೋಳ್ಳುತ್ತಿದ್ದೇನೆ. ಹೃದಯ ಭಾರವಾಗುತ್ತಿದೆ. ಸಾವಿರಾರು ಕಿಲೋಮೀಟರ್‌ ಅಂತರದಲ್ಲಿ ನನ್ನ ಅವನ ಜೀವನ. ಭಾವಪೂರ್ಣ ವಿದಾಯದೊಂದಿಗೆ ಆತನನ್ನು ಬೀಳ್ಕೊಡಬೇಕಾಗಿದೆ. ಆತನ ಸ್ನೇಹ ನೆನಪು ಸದಾ ನನ್ನ ಹೃದಯದಲ್ಲಿದೆ.

ತಿಮ್ಮಯ್ಯ ಮೋನಿ, ಅರ್ಥಶಾಸ್ತ್ರ- ದ್ವಿತೀಯ ಎಂ. ಎ. ಮಂಗಳೂರು ವಿ. ವಿ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.