ಕಣ್ಣಿಗೆ ಕಾಣುವ ದೇವರು


Team Udayavani, Jun 14, 2019, 5:00 AM IST

God

ಸಾಂದರ್ಭಿಕ ಚಿತ್ರ

ಅಮ್ಮ ಎನ್ನುವ ಪದದಲ್ಲೇ ಏನೋ ಒಂದು ಶಕ್ತಿಯಿದೆ. ಅದನ್ನು ಉಚ್ಚರಿಸಿದಾಕ್ಷಣ ನೆಮ್ಮದಿ ಕಾಣುತ್ತದೆ. ಯಾವುದೇ ನೋವನ್ನು ಅನುಭವಿಸುವಾಗಲೂ ಮೊದಲು ಹೊರಡುವ ಪದವೇ ಅಮ್ಮ. ಕರೆದಾಕ್ಷಣ ನೋವಿಗೆ ಹೆಗಲು ಕೊಡುವ ಈ ತಾಯಿಯ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ.

ನಮ್ಮ ಮೊದಲ ಗುರು ತಾಯಿಯೇ. ಕೆಲವರಿಗೆ ತಾಯಿಯ ಪ್ರೀತಿ ಅರ್ಥವಾಗುವುದೇ ಇಲ್ಲ. ಯಾಕೆಂದರೆ ಅದು ಅರ್ಥವಾಗುವಷ್ಟು ಸರಳವೂ ಅಲ್ಲ, ಅರ್ಥ ಮಾಡಿಕೊಳ್ಳಲಾರದಷ್ಟು ಸಂಕೀರ್ಣವೂ ಅಲ್ಲ. ಒಂದು ರೀತಿಯಲ್ಲಿ ತಾಯಿಯ ಪ್ರೀತಿಯನ್ನು ಅರ್ಥಮಾಡಿಕೊಳ್ಳಲು ಸಾಧ್ಯವೂ ಇಲ್ಲ. ಹೂವಿನ ಪರಿಮಳಕ್ಕೆ ಅರ್ಥ ಎಂಬುದಿದೆಯೆ? ಅದನ್ನು ಅರ್ಥಮಾಡಿಕೊಳ್ಳಲು ಸಾಧ್ಯವೆ? ಮುಂಜಾನೆಯ ಬೆಳಗಿಗೆ ಅರ್ಥ ಎಂಬುದಿದೆಯೆ? ಅದನ್ನು ಸುಮ್ಮನೆ ನೋಡುತ್ತ ಅನುಭವಿಸಬೇಕಷ್ಟೆ. ಹಾಗೆಯೇ ತಾಯಿಯ ಪ್ರೀತಿಯೂ. ಸಂಕಟವೆನಿಸಿದಾಗ ಅಮ್ಮನ ಮಡಿಲಲ್ಲಿ ತಲೆಯಿಟ್ಟು ಸುಮ್ಮನೆ ಕುಳಿತುಕೊಳ್ಳುವುದೇ ದಾರಿ.

ಆದರೆ, ಈ ಸೃಷ್ಟಿ ವಿಚಿತ್ರ. ಕೆಲವರಿಗೆ ತಾಯಿ ಇದ್ದರೂ ಇಲ್ಲದ ಹಾಗೆ ಇರುತ್ತಾರೆ. ತಾಯಿ ಪ್ರೀತಿ ತೋರಿಸಿದರೂ ಅದನ್ನು ಒಪ್ಪಿಕೊಳ್ಳುವ ಪರಿಸ್ಥಿತಿ ಅವರಲ್ಲಿ ಇರುವುದಿಲ್ಲ. ತಮ್ಮ ಜೀವನದಲ್ಲಿ ಬೇರೆಯವರನ್ನು ಪ್ರೀತಿಸುವ ಭರದಲ್ಲಿ ತಾಯಿಯ ನೆನಪೇ ಇರುವುದಿಲ್ಲ. ಆದರೂ, ಕೊನೆಗೆ ಕಾಯುವುದು ತಾಯಿಯ ಪ್ರೀತಿಯೇ.

ಜೀವನದಲ್ಲಿ ಯಾವುದೇ ಆಗಿರಬಹುದು ಜೊತೆಗಿದ್ದಾಗ ನಮಗೆ ಅದರ ಬೆಲೆ ಗೊತ್ತಾಗುವುದಿಲ್ಲ. ಅದನ್ನು ಕಳೆದುಕೊಂಡ ಮೇಲೆ ಅದರ ಬೆಲೆ ಎಂಥಾದ್ದು, ಎಷ್ಟು ಮಹತ್ವದ್ದು ಅಂತ ತಿಳಿಯುತ್ತದೆ. ತಾಯಿ ಪ್ರೀತಿಸದೇ ಇದ್ದರೆ ನಮ್ಮ ಸ್ಥಿತಿ ಏನಾಗಬಹುದು, ಊಹಿಸಿಕೊಳ್ಳಿ.

ತಾಯಿ ಜೊತೆಗೆ ಇಲ್ಲದಿದ್ದಾಗ ತಾಯಿ ಬೇಕು ಅಂತ ಅನಿಸುತ್ತದೆ. ಆದರೆ, ಇದ್ದಾಗ ಯಾಕಿದ್ದಾರೆ ಅಂತನೂ ಅನಿಸುತ್ತದೆ. ತಾಯಿ ನಮ್ಮನ್ನು ಬೈಯ್ಯುವುದು ನಾವು ತಪ್ಪು ಮಾಡಿದಾಗ. ಆದರೆ, ಅದನ್ನೇ ನಾವು ತಪ್ಪಾಗಿ ಭಾವಿಸುತ್ತೇವೆ. ಏನೇ ಹೇಳಿ, ತಾಯಿಯ ಋಣ ಅದೆಷ್ಟು ಜನ್ಮ ಹುಟ್ಟಿ ಬಂದರೂ ಕೂಡ ತೀರಿಸಲು ಸಾಧ್ಯವಿಲ್ಲ.

-ರೋಶ್ನಿ
ದ್ವಿತೀಯ ಬಿ.ಕಾಂ.
ಮಿಲಾಗ್ರಿಸ್‌ ಕಾಲೇಜ್‌, ಕಲ್ಯಾಣಪುರ

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.