ಆ ನಡೆದಾಡುವ ದಿನಗಳು 


Team Udayavani, Nov 10, 2017, 6:45 AM IST

14india2-jumbo.jpg

ನಮ್ಮದು ಒಂದು ಹಳ್ಳಿ. ಮನೆಯಿಂದ ಶಾಲೆಗೆ ಸುಮಾರು ಹನ್ನೆರಡು ಕಿ.ಮೀ. ದಾರಿ. ಅದರಲ್ಲಿ ಐದು ಕಿ.ಮೀ. ಎನ್ನುವುದು ಬಸ್‌, ಆಟೋರಿಕ್ಷಾ ಅಂತಹ ಯಾವುದೇ ಸೌಲಭ್ಯವನ್ನು ಹೊಂದಿಲ್ಲ. ಹೀಗಾಗಿ, ಈ ರಸ್ತೆಯಲ್ಲಿ ನನಗೆ ನನ್ನ ಮುದ್ದು ಅಪ್ಪನೇ ತಮ್ಮ ಬೈಕ್‌ನಲ್ಲಿ ಬಿಡುತ್ತಿದ್ದರು.ಆಗ ನಾನು ಆರನೆಯ ತರಗತಿ. ಇಷ್ಟು ವರ್ಷ ಸ್ಕೂಲಿಗೆ ಅಪ್ಪನ ಬೈಕಲ್ಲಿ “ರೊಂಯ್‌…’ ಅಂತ ಹೋಗ್ತಿದ್ದೆ. ಈಗ ಸ್ನೇಹಿತರ ಜೊತೆ ನಡೆಯಬೇಕೆಂದು ಅಪ್ಪನ ಹತ್ತಿರ ಹೇಳಿದಾಗ ಅರ್ಧ ದೂರ ಎರಡು ಚಕ್ರದ (ಬೈಕ್‌ನಲ್ಲಿ), ಅರ್ಧ ದೂರ ನಾಲ್ಕು ಚಕ್ರದ (ನಡೆಯುವುದು) ಅನುಭವ ಸಿಕು¤.

ವ್ಹಾವ್‌! ಐದು ಜನ ಅಕ್ಕ-ತಮ್ಮ, ಸ್ನೇಹಿತರ ಜೊತೆ ನಡೆದುಕೊಂಡು ಹೋಗುವಾಗ ಆಗುವ ಮಜಾನೇ ಬೇರೆ. ಮೊದಮೊದಲು ಅವರ ವೇಗಕ್ಕೆ ನನ್ನ ಕಾಲು ಸುಸ್ತಾಗಿ ನಂತರ ಅವರ ಹಿಂದೆ ಹಿಂದೆ ಓಡುವುದು. ಆದರೆ ಕ್ರಮೇಣ ಸುಧಾರಿಸಿದೆ. ನಮ್ಮ ಗುಂಪಲ್ಲಿ ಹೆಚ್ಚು ಜನ ಹುಡುಗಿಯರೇ ಇರುವುದರಿಂದ ಡ್ರೆಸ್‌, ಧಾರಾವಾಹಿ ಹೀಗೆ ಹಲವು ವಿಷಯಗಳ ಬಗ್ಗೆ ಮಾತನಾಡುತ್ತಾ ನಡೆಯುತ್ತಿದ್ದೆವು. ಮಾತಿನ ಮಧ್ಯೆ ಜಗಳ ಬಂತೆಂದರೆ ಆಮೇಲೆ ಅವರವರ ದಾರಿ ಅವರಿಗೆ.

ನಮ್ಮ ಬಸ್‌ ಬೆಳಿಗ್ಗೆ ಎಂಟು ಗಂಟೆಗೆ ಬಿಟ್ಟರೆ ಮತ್ತೆ ಹತ್ತು ಗಂಟೆಗೆ. ಹಾಗಾಗಿ ಎಲ್ಲರೂ ವಾಚ್‌ ನೋಡುತ್ತಾ ಓಡೋಡಿ ಹೋಗುವುದು. ಕೆಲವೊಮ್ಮೆ ಓಡಿ ಹೋಗಿ ಹಿಂದೆ ಇದ್ದವರಿಗೆ “ಬಸ್‌ ಬಂತು’ ಅಂತ ಗೂಬೆ ಮಾಡಿದ್ದೂ  ಉಂಟು. ಅಯ್ಯೋ… ಆಗ ಅವರ ಅವಸ್ಥೆ ನೋಡ್ಬೇಕು, ಕಾಲಿಗೆ ಚಕ್ರ ಕಟ್ಟಿದಂತೆ ಓಡೋಡಿ ಬರುವವರು.

ಮಳೆಗಾಲದಲ್ಲಂತೂ ಕೇಳ್ಳೋದೇ ಬೇಡ. ಎಷ್ಟೇ ಬೇಗ ಮನೆಯಿಂದ ಹೊರಟರೂ ಕೆಸರನ್ನು ದಾಟಿ ಬಸ್‌ಸ್ಟಾಂಡ್‌ಗೆ ಹೋಗುವಾಗ ಲೇಟಾಗಿರುತ್ತೆ. ಕೊಡೆ ಹಿಡೊªàರ ಅವಸ್ಥೆ ಅಂದ್ರೆ ಜೋರಾಗಿ ಗಾಳಿ ಬಂದ್ರೆ ಕೊಡೆ ಮಾಯ. ಪುಸ್ತಕವನ್ನೆಲ್ಲಾ ಪ್ಲಾಸ್ಟಿಕ್‌ನಲ್ಲಿ ಹಾಕಿದ್ರೂ ಒದ್ದೆಯಾಗಿರುತ್ತೆ. ಬಸ್ಸಿನಲ್ಲೂ ಕುಳಿತವರಿಗೆ ಬೇರೆಯವರ ಬ್ಯಾಗ್‌, ಒದ್ದೆಯಾದ ಕೊಡೆ ಹಿಡಿಯೋ ಕೆಲಸ. ಇನ್ನು ನಿಲ್ಲೋಣ ಅಂದರೆ, ಜನಜಂಗುಳಿಯಿಂದ ಎಲ್ಲಿ ಹಿಂದೆ ನಿಂತವರು ಮೈಮೇಲೆ ಬೀಳ್ತಾರೇನೋ ಎನ್ನೋ ಕಿರಿಕಿರಿ. ಇಷ್ಟೆಲ್ಲಾ ಆದರೂ ಅದರಲ್ಲಿಯೇ ಏನೋ ಮಜಾ.

ನನ್ನ ಹತ್ತಿರ ರೈನ್‌ಕೋಟ್‌ ಇದ್ದ ಕಾರಣ ಅದನ್ನು ಹಾಕಿಕೊಂಡು ನಡೆದದ್ದು ಇದೆ. ಆದರೆ, ಕೆಲವೊಮ್ಮೆ ಆಟದಲ್ಲಿ ಗೆಲ್ಲಬೇಕೆಂದು ಓಡುವ ಹುಡುಗರ ರೀತಿ ಸಮಯಕ್ಕೆ ಮುಂಚಿತವಾಗಿ ಬಸ್‌ ಬಂದಿದ್ದರೆ, ಆಗ ರೈನ್‌ಕೋಟ್‌ನ ಗುಂಡಿ ಕೈಗೆ ಬರುವಂತೆ ಎಳೆದು ಕೈಚೀಲಕ್ಕೆ ಹಾಕಿ ಬಸ್‌ ಹತ್ತಿದ್ದೂ ಉಂಟು. ಇಲ್ಲದಿದ್ದರೆ, “ಮೊದಲೇ ಬಸ್‌ನಲ್ಲಿ ಜಾಗವಿಲ್ಲ, ಅದರಲ್ಲೂ ನಿಮ್ಮ ರೈನ್‌ಕೋಟ್‌ ಬೇರೆ’ ಎನ್ನುವ ಕಂಡಕ್ಟರ್‌ನ ಮಂಗಳಾರತಿ ಬೇರೆ. ಮತ್ತೆ ಸಂಜೆ ಮಳೆ ಬಂದರೇನೆ ನನಗೆ ರೈನ್‌ಕೋಟ್‌ನ ನೆನಪು. 

ಆದರೆ, ಸಂಜೆ ಹಾಗಲ್ಲ. ನಾವು ಎಷ್ಟೇ ಲೇಟಾಗಿ ಹೋದರೂ ಅದೇ ಬೇಗ. ಗದ್ದೆ ಅಂಚಿನಲ್ಲಿ ಕಾಲೊಂದಿಗೆ ಮಾತನಾಡುವ ಸಣ್ಣ ಸಣ್ಣ ಹುಲ್ಲು, ತಂತುರು ಹನಿಯೊಂದಿಗೆ ಆಟವಾಡುತ್ತ, ಗೆಳತಿಯರೊಂದಿಗೆ ಕಥೆ ಹೇಳುತ್ತ, ಶಾಲೆಯಲ್ಲಿನ ಅನುಭವವನ್ನು ಹಂಚುತ್ತ ಮನೆಗೆ ಹೋಗುವುದು. ಮನೆಗೆ ಹೋದವರೆ ಬಿಸಿನೀರನ್ನು ಮೈಮೇಲೆ ಹಾಕಿ, ಬಿಸಿ ಬಿಸಿ ಹಾಲು ಅಥವಾ ಕಾಫಿ-ತಿಂಡಿ ತಿಂದರೇ  ಸಮಾಧಾನ.

ಆದರೂ ಆಗಿನ ಮಜಾ ಈಗ ಮನೆಯಿಂದಲೇ ಸ್ಕೂಲ್‌ ವ್ಯಾನ್‌ನಲ್ಲಿ ಹೋಗುವವರಿಗೆ ಸಿಗುವುದು ಕಷ್ಟ. ಅವರಿಗೆ ಹೀಗೆ ಅನುಭವದ ನೆನಪಲ್ಲಿ ಸಿಹಿ ಸಿಗುವುದು ಕಡಿಮೆ. 

ಐ ಮಿಸ್‌ ದೋಸ್‌ ಡೇಸ್‌.

– ನಾಗರತ್ನ ಶೆಣೈ, 
ದ್ವಿತೀಯ ಪಿಯುಸಿ
ಎಕ್ಸಲೆಂಟ್‌ ಪಿಯು ಕಾಲೇಜು, ಸುಣ್ಣಾರಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.