ಅಂಡರ್‌ ದಿ ಮ್ಯಾಂಗೋ ಟ್ರೀ ! 


Team Udayavani, Sep 28, 2018, 6:00 AM IST

d-10.jpg

ನಾವು ಕಲಿಯುವ ಕಾಲೇಜು ಯಾವತ್ತಿಗೂ ನಮ್ಮ ಪಾಲಿಗೆ ದಿ ಬೆಸ್ಟ್‌… ನನಗೆ ಗೊತ್ತಿರುವ ಹಾಗೆ ಪ್ರತಿಯೊಂದು ಕಾಲೇಜಿಗೂ ಅದರದ್ದೇ ಆದ ಕೆಲವೊಂದು ವಿಶೇಷತೆಗಳಿರುತ್ತದೆ. ಅದರಲ್ಲಿ ಬಹಳ ಹಿಂದಿನಿಂದಲೂ ಪಾಲಿಸಿಕೊಂಡು ಬಂದ ಸಾಂಪ್ರದಾಯಿಕ ಆಚರಣೆಗಳು ಒಂದೆಡೆಯಾದರೆ, ಬದಲಾದ ಕಾಲಕ್ಕೆ ತಕ್ಕಂತೆ ಹೊಸದಾಗಿ ಸೇರಿಕೊಂಡ ಕೆಲವು ವಿಶೇಷಗಳು ಕಾಲೇಜಿನ ಪರಿಸರವನ್ನು ವಿದ್ಯಾರ್ಥಿಗಳಿಗೆ ಇನ್ನಷ್ಟು ಆಪ್ತಗೊಳಿಸುತ್ತದೆ. ಕೆಲವು ವಿದ್ಯಾರ್ಥಿಗಳು ಈ ವಿಶೇಷತೆಯನ್ನು ಗಮನಿಸಿ ಆನಂದಿಸಿದರೆ, ಇನ್ನು ಕೆಲವು ವಿದ್ಯಾರ್ಥಿಗಳು ಇದರ ಪರಿವೆಯೇ ಇಲ್ಲದಂತೆ ಅಲೆದಾಡುವುದನ್ನು ಕಾಣುತ್ತೇವೆ. ಆದರೆ, ಕಾಲೇಜಿನ ಇಂತಹ ಪ್ರತಿಯೊಂದು ಸೂಕ್ಷ್ಮಗಳನ್ನೂ ಗಮನಿಸಿದರೆ ಮಾತ್ರ ನಮಗೆ ಆ ವಿದ್ಯಾದೇಗುಲದ ಮೇಲಿನ ಪ್ರೀತಿ ಜಾಸ್ತಿಯಾಗುತ್ತದೆ, ಇದು ನಮ್ಮದು ಎನ್ನುವ ಭಾವ ಮೂಡುತ್ತದೆ. ನಾನೀಗ ಕಲಿಯುತ್ತಿರುವ ಕಾಲೇಜಿನಲ್ಲೂ ಇತರ ಕಾಲೇಜುಗಳಿಗೆ ಮಾದರಿಯಾಗುವಂತಹ ಒಂದು ವಿಶೇಷವಿದೆ. ಅದೇ the Mango Tree… 

ನಾನು ಕಲ್ಯಾಣಪುರದ ಪ್ರತಿಷ್ಠಿತ ಮಿಲಾಗ್ರಿಸ್‌ ಕಾಲೇಜಿನ ವಿದ್ಯಾರ್ಥಿನಿ. ನಮ್ಮ ಕ್ಯಾಂಪಸ್ಸಿನ ಹೃದಯ ಭಾಗದಲ್ಲಿ ಒಂದು ಮಾವಿನ ಮರವಿದೆ. ನಾನು ನನ್ನ ಪಿಯುಸಿ ವಿದ್ಯಾಭ್ಯಾಸ ಮುಗಿಸಿ ಮಿಲಾಗ್ರಿಸ್‌ ಕಾಲೇಜು ಸೇರಿದ ಆರಂಭದಲ್ಲಿ ಈ ಮರದ ಕೆಳಗೆ ಕಟ್ಟೆಯಲ್ಲಿ ವಿದ್ಯಾರ್ಥಿಗಳು ಕುಳಿತುಕೊಳ್ಳುವುದನ್ನು ನೋಡಿದ್ದೆ. ಅದೊಂದು ದಿನ ಎಲ್ಲರೂ ಇವತ್ತು  Under the mango tree, Under the mango tree ಎಂದು ಖುಷಿಯಿಂದ ಮಾತಾಡುವುದು ಕಂಡಿತು. “ಇದೇನಪ್ಪಾ… ಮರದ ಕೆಳಗೆ ಕೂತುಕೊಳ್ಳುವುದರಲ್ಲೂ ಇಷ್ಟು ಆಸಕ್ತಿ?’ ಎಂದು ನಾನಂದುಕೊಂಡೆ. ಆದರೂ ಅದೇನಿರಬಹುದು ಎಂದು ಗೊತ್ತಾಗಲಿಲ್ಲ.  

ಅಂದು ಮಧ್ಯಾಹ್ನ ಸುಮಾರು ಒಂದು ಗಂಟೆ ಹೊತ್ತಿಗೆ ಕ್ಯಾಂಪಸ್ಸಿನಲ್ಲಿರುವ ಆ ಮಾವಿನ ಮರದ ಕೆಳಗೆ ಬಹಳಷ್ಟು ವಿದ್ಯಾರ್ಥಿಗಳು ಸೇರಿದ್ದರು. ನಾನೂ ಕೂಡ ಏನಿರಬಹುದೆಂದು ನೋಡಲು ಅಲ್ಲಿಗೆ ಹೋದೆ. ಆಗ ನನಗೆ ನಮ್ಮ ಕಾಲೇಜಿನ ಈ ವಿಶೇಷ ಚಟುವಟಿಕೆಯ ಬಗ್ಗೆ ತಿಳಿದುಬಂತು. 
ಮಿಲಾಗ್ರಿಸ್‌ ಕಾಲೇಜಿನಲ್ಲಿ ಬಹಳ ಹಿಂದಿನಿಂದಲೂ ಮಧ್ಯಾಹ್ನದ ಬಿಡುವಿನ ವೇಳೆಯನ್ನು ಸದುಪಯೋಗಪಡಿಸಿಕೊಳ್ಳುವ Under the Mango Tree  ಚಟುವಟಿಕೆಗಳು ನಡೆಯುತ್ತಿವೆ. ವಿದ್ಯಾರ್ಥಿಗಳೆಲ್ಲ ಬೇಗ ಊಟ ಮುಗಿಸಿ ಲಗುಬಗೆಯಿಂದ ಮರದಡಿ ಸೇರಿ ಬರುತ್ತಾರೆ. ಹೆಚ್ಚಾಗಿ ಕಾಲೇಜಿನ ಸಾಹಿತ್ಯ ಸಂಘದ ಮುಂದಾಳುತ್ವದಲ್ಲಿ ಇಲ್ಲಿ ನಡೆಯುವ ಚಟುವಟಿಕೆಗಳ ಜೊತೆಗೆ ಐಖ ಕ್ಲಬ…, ವಿಜ್ಞಾನ ಸಂಘದ ಕಾರ್ಯಕ್ರಮಗಳೂ ಕೆಲವೊಮ್ಮೆ ನಡೆಯುತ್ತವೆ. ಮರದಡಿಯಲ್ಲಿ ನಡೆಯುವ ರಸಪ್ರಶ್ನೆ ಹಾಗೂ ಇನ್ನೂ ಕೆಲವು ಸ್ಪರ್ಧೆಗಳು ವಿದ್ಯಾರ್ಥಿಗಳಿಗೆ ಖುಷಿಕೊಟ್ಟರೆ, ಯಾವುದಾದರೊಂದು ಹೊಸ ವಿಷಯದ ಕುರಿತಾದ ಚರ್ಚೆ, ಹಾಡು, ಕವನವಾಚನ ಇನ್ನಿತ್ಯಾದಿಗಳು ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸುವ ವೇದಿಕೆಯಾಗುತ್ತಿದೆ. 

ಇತ್ತೀಚೆಗಿನ ಕೆಲವು ಸಮಯದಿಂದ ಬುಧವಾರದಂದು ಮಧ್ಯಾಹ್ನ ಒಂದು ಗಂಟೆಯಿಂದ ಒಂದೂವರೆಯವರೆಗೆ ನಡೆಯುವ ಈ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಆಸಕ್ತಿಯಿಂದ ಪಾಲ್ಗೊಳ್ಳುತ್ತಿದ್ದಾರೆ. ಸಾಹಿತ್ಯಿಕ ಚಟುವಟಿಕೆಗಳ ಮುಖಾಂತರ ಬಿಡುವಿನ ಸಮಯ ಸದುಪಯೋಗಪಡಿಸಿಕೊಳ್ಳುವುದಷ್ಟೇ ಅಲ್ಲ, ಆ ಮೂಲಕ ಪರಿಸರದೊಂದಿಗೆ ಒಂದಾಗಿ ಬಾಳುತ್ತಿದ್ದಾರೆ. ಹೆಚ್ಚಾಗಿ ಹರಟೆ, ಗಾಸಿಪ್‌ ಮುಂತಾದ ಟೈಮ್‌ಪಾಸ್‌ ಮಾತುಗಳಿಗಷ್ಟೇ ಸೀಮಿತವಾಗುವ ಕ್ಯಾಂಪಸ್ಸಿನೊಳಗಿನ ಮರದ ಕಟ್ಟೆಯನ್ನು ಹೇಗೆ ಸದುಪಯೋಗ ಪಡಿಸಿಕೊಳ್ಳಬಹುದೆನ್ನುವುದಕ್ಕೆ ನಮ್ಮ ಕಾಲೇಜಿನ ಈ ಪ್ರಯೋಗವೇ ಸಾಕ್ಷಿ. 

ಅಂಬಿಕಾ 
ತೃತೀಯ ಬಿ.ಎಸ್ಸಿ ಮಿಲಾಗ್ರಿಸ್‌ ಕಾಲೇಜು, ಕಲ್ಯಾಣಪುರ 

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.