ಅವ್ಯವಸ್ಥೆಯ ಆಗರ ಕಡಬ ಸಾರ್ವಜನಿಕ ರುದ್ರಭೂಮಿ

ನನೆಗುದಿಗೆ ಬಿದ್ದ 26.08 ಲಕ್ಷ ರೂ. ಅಂದಾಜುಪಟ್ಟಿ; ಬಳಕೆಯಾಗಿಲ್ಲ 4 ಲಕ್ಷ ರೂ. ಅನುದಾನ

Team Udayavani, Nov 4, 2019, 5:12 AM IST

0211KDB1

ಕಡಬ: ಕಡಬವು ತಾಲೂಕು ಕೇಂದ್ರವಾಗಿ ಮೇಲ್ದರ್ಜೆಗೇರಿದ್ದರೂ ಇಲ್ಲಿನ ಸಾರ್ವಜನಿಕ ರುದ್ರಭೂಮಿ ಮೂಲ ಸೌಕರ್ಯವಿಲ್ಲದೆ ಅವ್ಯವಸ್ಥೆಯ ಆಗರವಾಗಿದೆ.

ಶವಸಂಸ್ಕಾರಕ್ಕಾಗಿ ಆಧುನಿಕ ವ್ಯವಸ್ಥೆಯ ಸುಸಜ್ಜಿತ ರುದ್ರಭೂಮಿ ಬೇಕು ಎನ್ನುವ ಗ್ರಾಮಸ್ಥರ ಬೇಡಿಕೆಗೆ ಯಾವುದೇ ರೀತಿಯ ಮಾನ್ಯತೆ ಸಿಕ್ಕಿಲ್ಲ.

ಕಾದಿರಿಸಿದ ಭೂಮಿ ಇದೆ
ರುದ್ರಭೂಮಿಗಾಗಿ ಗ್ರಾ.ಪಂ. ವ್ಯಾಪ್ತಿಯ ಕಲ್ಲಂತಡ್ಕದಲ್ಲಿ ಕಡಬ-ಪಂಜ ರಸ್ತೆಯ ಪಕ್ಕದಲ್ಲಿ ಸ.ನಂ. 306/1ಎ1 ಯಲ್ಲಿ 1.03 ಎಕರೆ ಭೂಮಿ ಕಾದಿರಿಸಲಾಗಿದೆ. ಸದ್ರಿ ಭೂಮಿಯಲ್ಲಿ ಸಾಧಾರಣ ಚಿತಾಗಾರ ಇದೆಯಾದರೂ ಅಲ್ಲಿ ಸಮರ್ಪಕ ವ್ಯವಸ್ಥೆಗಳಿಲ್ಲ. ಇರುವ ಕಟ್ಟಡ ನಿರ್ವಹಣೆ ಇಲ್ಲದೆ ಪಾಳುಬಿದ್ದಿದೆ. ಚಿತಾಗಾರದ ಛಾವಣಿಯ ತಗಡು ಶೀಟುಗಳು ಗಾಳಿಗೆ ಹಾರಿಹೋಗಿವೆ. ಸರಿಯಾದ ಸಂಪರ್ಕ ರಸ್ತೆ ನಿರ್ಮಾಣವಾಗಿಲ್ಲ. ಜಮೀನಿನ ಸುತ್ತ ಆವರಣಗೋಡೆ ನಿರ್ಮಿಸಿ ಅತಿಕ್ರಮಣ ತಡೆಯಲು ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ದೂರುತ್ತಾರೆ.

ಸರಕಾರವು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ರುದ್ರಭೂಮಿ ಹಾಗೂ ಆಧುನಿಕ ವಿದ್ಯುತ್‌ ಚಿತಾಗಾರ ಒದಗಿಸುವ ಬಗ್ಗೆ 2011-12ನೇ ಸಾಲಿನಲ್ಲಿ 60 ಕೋಟಿ ರೂ. ಅನುದಾನವನ್ನು ಮೀಸಲಿರಿಸಿತ್ತು. ಈ ವಿಚಾರದ ಬಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಕಡಬ ವಿಶೇಷ ತಹಶೀಲ್ದಾರರ ಕಚೇರಿಗೆ ಬಂದ ಮಾಹಿತಿಯನ್ನು ಅನುಸರಿಸಿ ಕಡಬ ಗ್ರಾ.ಪಂ. ಆಡಳಿತವು ಜಿ.ಪಂ. ಎಂಜಿನಿಯರಿಂಗ್‌ ಮೂಲಕ 26.08 ಲಕ್ಷ ರೂ. ಗಳ ಅಂದಾಜು ಪಟ್ಟಿ ತಯಾರಿಸಿ ಸರಕಾರಕ್ಕೆ ಕಳುಹಿಸಿದೆ.

ಅಂದಾಜು ಪಟ್ಟಿಯಲ್ಲಿ ರುದ್ರಭೂಮಿಯ ಆವರಣದೊಳಗೆ ಕಾವಲುಗಾರನ ಶೆಡ್‌, ಪ್ರಾರ್ಥನ ಮಂದಿರ, ವಿದ್ಯುತ್‌ ಚಿತಾಗಾರ, ಶೌಚಾಲಯ ಇತ್ಯಾದಿಗೆ 20.58 ಲಕ್ಷ ರೂ., ರಸ್ತೆ ಕಾಂಕ್ರೀಟ್‌ ಕಾಮಗಾರಿಗೆ 3.5 ಲಕ್ಷ ರೂ. ಹಾಗೂ ಕೊಳವೆ ಬಾವಿಗಾಗಿ 2 ಲಕ್ಷ ರೂ.ಗಳನ್ನು ವಿಂಗಡಿಸಲಾಗಿದೆ. ಆದರೆ ಇವೆಲ್ಲ ಆಗಿ ಹಲವು ವರ್ಷಗಳೇ ಸಂದರೂ ವಿದ್ಯುತ್‌ ಚಿತಾಗಾರದ ಕನಸು ನನಸಾಗಿಲ್ಲ. ಸದ್ಯಕ್ಕೆ ವಿದ್ಯುತ್‌ ಚಿತಾಗಾರ ಇಲ್ಲದೇ ಇದ್ದರೂ ಇರುವ ಸ್ಮಶಾನಕ್ಕೆ ಸೂಕ್ತ ಸೌಲಭ್ಯಗಳನ್ನಾದರೂ ನೀಡುವ ವ್ಯವಸ್ಥೆ ಆಗಬೇಕಿದೆ. ಸುಸಜ್ಜಿತ ರುದ್ರಭೂಮಿ ನಿರ್ಮಾಣಕ್ಕಾಗಿ 26.08 ಲಕ್ಷ ರೂ.ಗಳ ಅಂದಾಜು ಪಟ್ಟಿ ತಯಾರಿಸಿ ಸರಕಾರಕ್ಕೆ ಕಳುಹಿಸಿ ಹಲವು ವರ್ಷಗಳು ಕಳೆದರೂ ಬಿಡುಗಡೆಯಾಗಿರುವುದು 4 ಲಕ್ಷ ರೂ. ಮಾತ್ರ. ಅದೂ ಬಳಕೆಯಾಗದೆ 7 ವರ್ಷಗಳಿಂದ ತಹಶೀಲ್ದಾರರ ಖಾತೆಯಲ್ಲಿಯೇ ಉಳಿದಿದೆ.

ಅನುದಾನ ಸಿಗಲಿದೆ
2 ಲಕ್ಷ ರೂ. ಪಂಚಾಯತ್‌ ಅನುದಾನದಲ್ಲಿ ರಸ್ತೆ ನಿರ್ಮಿಸಿ, ರುದ್ರಭೂಮಿಯ ಜಾಗಕ್ಕೆ ತಂತಿ ಬೇಲಿ ನಿರ್ಮಿಸುವ ಸಿದ್ಧತೆ ನಡೆದಿದೆ. ಕಡಬವನ್ನು ಇದೀಗ ಪಟ್ಟಣ ಪಂಚಾಯತ್‌ ಆಗಿ ಸರಕಾರ ಮೇಲ್ದರ್ಜೆಗೇರಿಸಿ ಅದೇಶಿಸಿದೆ. ಮುಂದಿನ ದಿನಗಳಲ್ಲಿ ಕಡಬದ ಅಭಿವೃದ್ಧಿಗೆ ಹೆಚ್ಚಿನ ಅನುದಾನಗಳು ಲಭಿಸುವ ನಿರೀಕ್ಷೆ ಇದ್ದು, ಆ ಸಂದರ್ಭದಲ್ಲಿ ರುದ್ರಭೂಮಿಯ ಅಭಿವೃದ್ಧಿಗೂ ಅನುದಾನ ಸಿಗಲಿದೆ.
– ಬಾಬು ಮೊಗೇರ
ಕಡಬ ಗ್ರಾ.ಪಂ. ಅಧ್ಯಕ್ಷ

ಬಳಕೆಗೆ ಕ್ರಮ
ಮಂಜೂರುಗೊಂಡಿರುವ 4 ಲಕ್ಷ ರೂ. ಅನುದಾನವನ್ನು ಬಳಸಿ ರುದ್ರಭೂಮಿಗೆ ಹೊಸದಾದ ಚಿತಾಗಾರ ಅಳವಡಿಸಿ ಸೌಲಭ್ಯಗಳನ್ನು ನೀಡಲು ಪ್ರಯತ್ನ ನಡೆಸಲಾಗುತ್ತಿದೆ. ಲಭ್ಯ ಇರುವ ಅನುದಾನ ಬಳಸುವ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆಯಿಂದ ಅಂದಾಜುಪಟ್ಟಿ ತಯಾರಿಸಿ ಜಿಲ್ಲಾಧಿಕಾರಿ ಅನುಮತಿಗಾಗಿ ಕಳುಹಿಸಿದೆ. ಅನುಮತಿ ಲಭಿಸಿದ ಕೂಡಲೇ ಕಾಮಗಾರಿ ನಡೆಯಲಿದೆ.
– ಪಿ.ಪಿ.ವರ್ಗೀಸ್‌
ಜಿ.ಪಂ. ಸದಸ್ಯ, ಕಡಬ

ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.