161 ಅಡಿ ಆಂಜನೇಯ ವಿಗ್ರಹ ಲೋಕಾರ್ಪಣೆಗೆ ಸಿದ್ಧ


Team Udayavani, Dec 20, 2021, 1:27 PM IST

161 ಅಡಿ ಆಂಜನೇಯ ವಿಗ್ರಹ ಲೋಕಾರ್ಪಣೆಗೆ ಸಿದ್ಧ

ಕುಣಿಗಲ್‌: ತಾಲೂಕಿನ ಪ್ರಸಿದ್ಧ ಭಕ್ತಿ ನಗರ ಬಿದನಗೆರೆ ಶ್ರೀ ಕ್ಷೇತ್ರದ ಬಸವೇಶ್ವರ ಮಠದಲ್ಲಿ ವಿಶ್ವದಲ್ಲೇ ಪ್ರಥಮ ಎನ್ನಲಾದ 161 ಎತ್ತರದ ಪಂಚಮುಖಿ ಆಂಜನೇಯಸ್ವಾಮಿ ವಿಗ್ರಹ ಲೋಕಾರ್ಪಣೆಗೆ ಸಿದ್ಧವಾಗಿದೆ.

ಪಟ್ಟಣದ ಹೊರ ವಲಯದ ಬಿದನಗೆರೆ ಸತ್ಯಶನೇಶ್ವರ, ಉದ್ಬವ ಬಸವಣ್ಣ, ಶನಿಶಿಗ್ನಾಪುರತ್ರಿಮೂರ್ತಿ ಸಂಗಮ ಕ್ಷೇತ್ರ ಶ್ರೀ ಬಸವೇಶ್ವರ ಮಠದ ಧರ್ಮಾಧಿಕಾರಿ ಡಾ.ಧನಂಜಯ್ಯ ಗುರೂಜಿ ಅವರ ನೇತೃತ್ವದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪಂಚಮುಖಿ ಆಂಜನೇಯ ಸ್ವಾಮಿ ವಿಗ್ರಹ ಕಾಮಗಾರಿ ಪರಿಪೂರ್ಣವಾಗಿ ಮುಗಿದಿದ್ದು, ಲೋಕಾರ್ಪಣೆಗಾಗಿ ಶ್ರೀ ಕ್ಷೇತ್ರದ ವತಿಯಿಂದ ಸಕಲ ಸಿದ್ಧತೆ ನಡೆಯುತ್ತಿದೆ.

ಹರಿದು ಬರುತ್ತಿರುವ ಭಕ್ತ ಸಾಗರ: ಪಂಚಮುಖಿ ಆಂಜನೇಯಸ್ವಾಮಿ ವಿಗ್ರಹ ಲೋಕಾರ್ಪಣೆಮಾಡುವ ಮುನ್ನವೇ ರಾಜ್ಯದ ವಿವಿಧ ಭಾಗಗಳಿಂದ ಬಸ್‌, ಕಾರು, ಟೆಂಪೋ ಟ್ರಾವಲ್ಸ್‌ ಸೇರಿದಂತೆಇತರೆ ವಾಹನಗಳಲ್ಲಿ ಸಾವಿರಾರು ಭಕ್ತರು ನಿತ್ಯ ಶ್ರೀ ಕ್ಷೇತ್ರಕ್ಕೆ ಆಗಮಿಸಿ ಪಂಚಮುಖಿ ಆಂಜನೇಯಸ್ವಾಮಿಯನ್ನು ಕಣ್ಣತುಂಬಿಕೊಳ್ಳುತ್ತಿದ್ದಾರೆ. ವಿಗ್ರಹ ನಿರ್ಮಾಣ ಕಾಮಗಾರಿಯನ್ನು ತಮಿಳುನಾಡಿನ ಮಾರಿಮುತ್ತು ಅವರಿಗೆ ಪಂಚಮುಖೀ ಆಂಜನೇಯ ಸ್ವಾಮಿ ವಿಗ್ರಹ ಕಾಮಗಾರಿಯನ್ನು ವಹಿಸಿಕೊಡಲಾಗಿತ್ತು. ಮಾರಿಮುತ್ತು ತಮ್ಮ 50 ಕಾರ್ಮಿಕರ ತಂಡದೊಂದಿಗೆ 2014ರಲ್ಲಿ ಕಾಮಗಾರಿಯನ್ನು ಪ್ರಾರಂಭಿಸಿದ್ದರು.  ಸತತ ಏಳು ವರ್ಷಗಳ ಕಾಲ ನಿರಂತರವಾಗಿ ಕಾಮಗಾರಿ ಕೆಲಸ ಮಾಡಿ, ಡಿ.2021ಕ್ಕೆ ಕಾಮಗಾರಿ ಪೂರ್ಣಗೊಳಿಸಿದ್ದಾರೆ.

ಶ್ರೀ ಕ್ಷೇತ್ರದ ಹಿನ್ನಲೆ: ಕಳೆದ 20 ವರ್ಷದ ಹಿಂದೆ ಡಾ. ಧನಂಜಯ್ಯ ಗುರೂಜಿ ಸಣ್ಣ ಗುಡಿಸಲಲ್ಲಿ ಸತ್ಯಶನೇಶ್ವರ ಸ್ವಾಮಿ ಪ್ರತಿಷ್ಠಾಪಿಸಿದ್ದರು. ಬಳಿಕ ಉದ್ಬವಬಸವಣ್ಣ, ಶನಿಶಿಗ್ನಾಪುರ ವಿಗ್ರಹಗಳನ್ನು ಪ್ರತಿಷ್ಠಾಪಿಸಿದ್ದರು. ಈ ದೇವರನ್ನು ಪೂಜೆ, ಪುನಸ್ಕಾರ ನೆರವೇರಿಸುತ್ತಾಆರಾಧಿಸಿಕೊಂಡು ಬರುತ್ತಿದ್ದಾರೆ. ದಿನ ಕಳೆದಂತೆ ಜಿಲ್ಲೆ,ರಾಜ್ಯ ಹಾಗೂ ದೇಶ, ವಿದೇಶದಿಂದ ಶ್ರೀ ಕ್ಷೇತ್ರಕ್ಕೆ ಸಾವಿರಾರು ಭಕ್ತಾದಿಗಳು ಆಗಮಿಸಿ ತಮ್ಮ ಇಷ್ಟಾರ್ಥಕ್ಕಾಗಿ ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.

ಸಾಮಾಜಿಕ ಕಾರ್ಯಗಳು: ಶ್ರೀ ಕ್ಷೇತ್ರದಲ್ಲಿ ಧಾರ್ಮಿಕ ಕಾರ್ಯಗಳ ಜೊತೆಗೆ ಹಲವು ಸಾಮಾಜಿಕ ಕಾರ್ಯಕ್ರಮ ನಡೆಯುತ್ತಿವೆ. ಉಚಿತ ಸರಳ ವಿವಾಹ, ವಯೋವೃದ್ಧರು, ಉಚಿತಆರೋಗ್ಯ ಶಿಬಿರ, ವಸತಿ ರಹಿತಿ ಬಡವರಿಗೆ ಮನೆನಿರ್ಮಾಣಕ್ಕೆ ಧನ ಸಹಾಯ, ದಾಸೋಹ, ವಸತಿಸೌಲಭ್ಯ ಸೇರಿದಂತೆ ವಿವಿಧ ಸಾಮಾಜಿಕ ಕಾರ್ಯಕ್ರಮಗಳು ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿದೆ.

ಫೆಬ್ರವರಿ 28ರಂದು ಲೋಕಾರ್ಪಣೆ: ಗುರೂಜಿ ಶ್ರೀ ಕ್ಷೇತ್ರದ ಧರ್ಮದರ್ಶಿ ಡಾ.ಧನಂಜಯ್ಯ ಗುರೂಜಿ ಮಾತನಾಡಿ, ಭಕ್ತಾದಿಗಳಸಹಾಯ, ಸಹಕಾರದಿಂದ ಶ್ರೀ ಕ್ಷೇತ್ರವು ಅದ್ಭುತವಾಗಿ ಬೆಳೆಯುತ್ತಿದೆ. ಈಗಾಗಲೇನಿರ್ಮಾಣ ಪೂರ್ಣಗೊಂಡಿರುವ ವಿಶ್ವದಲ್ಲೇ ಪ್ರಥಮವಾಗಿರುವ ಪಂಚಮುಖಿ ಆಂಜನೇಯಸ್ವಾಮಿ ವಿಗ್ರಹ ಕಾಮಗಾರಿಯ ಕೆಲಸ ಮುಗಿದಿದೆ.ಮುಂದಿನ ವರ್ಷ ಫೆ. 28ರಂದು ಅಧಿಕೃತವಾಗಿ ಲೋಕಾರ್ಪಣೆ ಮಾಡಲು ಉದ್ದೇಶಿಸಲಾಗಿದೆ. ಧಾರ್ಮಿಕಕಾರ್ಯಕ್ರಮಕ್ಕೆ ರಾಜ್ಯ, ರಾಷ್ಟ್ರದಪ್ರಮುಖ ಗಣ್ಯರು, ಅಧಿಕಾರಿಗಳು ಆಗಮಿಸಲಿದ್ದಾರೆ ಎಂದು ಹೇಳಿದರು.

-ಕೆ.ಎನ್‌.ಲೋಕೇಶ್‌

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.