1.66 ಕೋ.ರೂ. ಉಳಿತಾಯ ಬಜೆಟ್‌


Team Udayavani, Feb 22, 2019, 7:55 AM IST

dvg-5.jpg

ಹರಿಹರ: ನಗರಸಭೆ ಸಭಾಂಗಣದಲ್ಲಿ ಗುರುವಾರ ನಡೆದ 2019-20ನೇ ಸಾಲಿನ ಬಜೆಟ್‌ ಸಭೆಯಲ್ಲಿ ನಗರಸಭಾಧ್ಯಕ್ಷೆ ಸುಜಾತಾ ರೇವಣಸಿದ್ದಪ್ಪ 1.66 ಕೋಟಿ ರೂ. ಉಳಿತಾಯದ ಬಜೆಟ್‌ ಮಂಡಿಸಿದರು.

ಸದಸ್ಯ ಶಂಕರ್‌ ಖಟಾವ್‌ಕರ್‌, ಕಟ್ಟಡ ಪರವಾನಿಗೆ ಪಡೆಯಲು ಇರುವ ತೊಂದರೆ ನಿವಾರಿಸಿದರೆ ಆದಾಯ ಹೆಚ್ಚಾಗುತ್ತದೆ. ಬೀದಿ ದೀಪ ಕೊರತೆಯಿಂದ ನಗರದ ಬಹುಭಾಗ ಕತ್ತಲಲ್ಲಿದೆ. ಹೊಸ ಅಧಿಕಾರಿಗಳ ಆಗಮನದಿಂದ ಕಂದಾಯ ಶಾಖೆ ಸಿಬ್ಬಂದಿ ಜನರಿಗೆ ಸ್ಪಂದಿಸುತ್ತಿದ್ದಾರೆ ಎಂದರು.

ನಾಗರಾಜ್‌ ಮೆಹರ್ವಾಡೆ ಮಾತನಾಡಿ, ನದಿ ಬಿಟ್ಟು ಇನ್ನೊಂದು ನೀರಿನ ಮೂಲಕ್ಕೆ ಹಣ ಇಟ್ಟಿಲ್ಲ. ಎಲ್‌ಇಡಿ ಬದಲು ಟ್ಯೂಬ್‌ ಲೈಟ್‌ ಬೀದಿ ದೀಪಕ್ಕೆ ಉಪಯುಕ್ತ. ವಿದ್ಯಾನಗರ ಪಾರ್ಕ್‌ ಅಭಿವೃದ್ಧಿಯಾಗಬೇಕು ಎಂದರು. ನಾಗರಾಜ್‌ ರೋಖಡೆ, ಅಗನಸಕಟ್ಟೆ ಕೆರೆ ಡಿಪಿಆರ್‌ಗೆ 20 ಲಕ್ಷ ನೀಡಬೇಕು. 2ನೇ ವಾರ್ಡಿನಲ್ಲಿ ಪಾರ್ಕ್‌ ಅಭಿವೃದ್ಧಿಪಡಿಸಬೇಕು ಎಂದರೆ, ಡಿ.ಜಿ.ರಘುನಾಥ್‌, ಹತ್ತಿಪ್ಪತ್ತು ವರ್ಷಗಳಿಂದ ಠಿಕಾಣಿ ಹೂಡಿದ್ದ ಅಧಿಕಾರಿ, ಸಿಬ್ಬಂದಿಗೆ ಗೇಟ್‌ ಪಾಸ್‌ ನೀಡಿರುವುದು ಸೂಕ್ತವಾಗಿದೆ ಎಂದರು.

ಬಿ.ರೇವಣಸಿದ್ದಪ್ಪ, 40 ಲಕ್ಷದ ಬದಲು ಮಳಿಗೆಗಳ ಬಾಡಿಗೆಯ ಆದಾಯ 1 ಕೋಟಿ ರೂ. ದಾಟಬೇಕು ಎಂದರೆ, ಬಿ.ಮೊಹ್ಮದ್‌ ಸಿಗ್ಬತ್‌ ಉಲ್ಲಾ, ಜಲಸಿರಿ ಪೈಪ್‌ ರಸ್ತೆಯ ಒಂದು ಬದಿ ಬದಲು ಎರಡೂ ಬದಿ ಅಳವಡಿಸಬೇಕು. ಆಶ್ರಯ ಮನೆಗಳಾಗಬೇಕು ಎಂದು ಆಗ್ರಹಿಸಿದರು. 

ಕೆ.ಮರಿದೇವ, ಕ್ರೀಡಾಪಟುಗಳಿಗೆ ಸಹಾಯಧನ ಮೊತ್ತವನ್ನು 1 ಲಕ್ಷದ ಬದಲು 10 ಲಕ್ಷ ರೂ. ನಿಗದಿ ಮಾಡಬೇಕೆಂದರೆ, ಎಸ್‌.ಎಂ. ವಸಂತ್‌, ಎರಡು ಪೂರ್ವಭಾವಿ ಸಭೆ ಮಾಡಿ ಎಚ್ಚರಿಕೆಯಿಂದಲೇ ಬಜೆಟ್‌ ಸಿದ್ಧಪಡಿಸಲಾಗಿದೆ. ಬೀದಿಬದಿ ವ್ಯಾಪಾರಿಗಳಿಗೆ ಚಿಕ್ಕ ಮಳಿಗೆಗಳ ಸಂಕೀರ್ಣ ನಿರ್ಮಿಸಬೇಕು. ನಗರದ 23 ಪಾರ್ಕ್‌ಗಳ ಅಭಿವೃದ್ಧಿಗೆ ಕೆಆರ್‌ಡಿಎಲ್‌ನವರಿಗೆ ಶಾಸಕರು ಸೂಚಿಸಿದ್ದಾರೆ ಎಂದರು.

ಬಿ.ಕೆ.ಸೈಯದ್‌ ರಹಮಾನ್‌, ಇಲ್ಲಿರುವ ವಿದ್ಯುತ್‌ ಎಂಜಿನಿಯರ್‌ ಶ್ವೇತಾ ಏನೂ ಉಪಯೋಗವಿಲ್ಲ. ಕಚೇರಿಗೆ ಬರುವುದೇ ಅಪರೂಪ ಎಂದಾಗ ಧ್ವನಿಗೂಡಿಸಿದ ನಗೀನಾ ಸುಭಾನ್‌ಸಾಬ್‌, ಕಚೇರಿಗೆ ಬಂದರೂ ಮೊಬೈಲ್‌ನಲ್ಲಿ ಕಾಲಕಳೆಯುತ್ತಾರೆ ಎಂದು ಆರೋಪಿಸಿದರು.

ಆರಂಭದಲ್ಲೇ ಸದಸ್ಯ ಸೈಯದ್‌ ಏಜಾಜ್‌, ಬಜೆಟ್‌ ಸಭೆಗೆ 7 ದಿನ ಮುಂಚೆ ನೋಟಿಸ್‌ ನೀಡಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿ ಸಭೆ ಬಹಿಷ್ಕರಿಸಿ ಹೊರನಡೆದರು. ಉಪಾಧ್ಯಕ್ಷೆ ಅಂಜಿನಮ್ಮ, ಪೌರಾಯುಕ್ತೆ ಎಸ್‌.ಲಕ್ಷ್ಮಿ, ರತ್ನಮ್ಮ, ಹಜರತ್‌ ಅಲಿ, ಎಂ.ಅಲ್ತಾಫ್‌, ವಿರುಪಾಕ್ಷಿ, ಅಂಬುಜಾ ರಾಜೊಳ್ಳಿ, ಪ್ರತಿಭಾ ಪಾಟೀಲ್‌, ನಗೀನಾ ಸುಭಾನ್‌ಸಾಬ್‌ ಇತರರಿದ್ದರು. ಸಭೆಗೂ ಮುನ್ನ ಹುತಾತ್ಮ ಯೋಧರಿಗೆ ಒಂದು ನಿಮಿಷ ಮೌನಾಚರಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. 

ಪ್ರಮುಖ ವೆಚ್ಚಗಳು
ಕೊಳವೆ ಬಾವಿ, ಕಿರು ನೀರು, ಶುದ್ಧ ಕುಡಿಯುವ ನೀರು ಘಟಕಕ್ಕೆ 2.20 ಕೋ.ರೂ., ಘನತ್ಯಾಜ್ಯ ನಿರ್ವಹಣೆಗೆ 1 ಕೋ., ಬೀದಿ ದೀಪಕ್ಕೆ 1 ಕೋ., ಪಿಡಬ್ಲ್ಯೂಡಿ ಸಹಯೋಗದಲ್ಲಿ ಹಳೆ ಪಿ.ಬಿ. ರಸ್ತೆ ವಿಭಜಕದಲ್ಲಿ ಬೀದಿ ದೀಪ ಹಾಗೂ ಪ್ರಮುಖ ವೃತ್ತಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆಗಾಗಿ 1.45 ಕೋ., ರಸ್ತೆ ಚರಂಡಿ, ಪಾದಚಾರಿ ಮೇಲು ಸೇತುವೆಗಳಿಗಾಗಿ 10 ಕೋ., ಊರಮ್ಮ ದೇವಸ್ಥಾನದಿಂದ ಬಾಹರ್‌ ಮಕಾನ್‌ ನಡುವೆ ಮೇಲು ಸೇತುವೆಗಾಗಿ 2.50 ಕೋ., ಪಾರ್ಕ್‌ ಅಭಿವೃದ್ಧಿಗೆ 1 ಕೋ. ರೂ., ನಗರಸಭೆ ಹೊಸ ಕಟ್ಟಡ, ವಾಣಿಜ್ಯ ಮಳಿಗೆಗಳ ದುರಸ್ತಿಗೆ 2.40 ಕೋಟಿ ರೂ., ಸಾಮೂಹಿಕ ಶೌಚಾಲಯಕ್ಕಾಗಿ 30 ಲಕ್ಷ ರೂ., ವಿವಿಧ ಜನಾಂಗಗಳ ಸ್ಮಶಾನಗಳ ಕಾಂಪೌಂಡ್‌ ಹಾಗೂ ಮುಕ್ತಿಧಾಮ ವಾಹನ ಖರೀದಿಗೆ 20 ಲಕ್ಷ ರೂ., ಶೇ.24.10 ಯೋಜನೆಯಲ್ಲಿ ಎಸ್ಸಿ, ಎಸ್ಟಿ ವರ್ಗದವರ ಕಲ್ಯಾಣಕ್ಕಾಗಿ 75 ಲಕ್ಷ ರೂ., ಶೇ.7.25ರಲ್ಲಿ ಇತರೆ ಬಡ ಜನಾಂಗದವರ ಅಭಿವೃದ್ಧಿಗೆ 21 ಲಕ್ಷ ರೂ., ಶೇ.3ರಲ್ಲಿ ವಿಕಲಚೇತನರಿಗೆ 15 ಲಕ್ಷ ರೂ., ಕ್ರೀಡಾ ಚಟುವಟಿಕೆಗಾಗಿ 1 ಲಕ್ಷ ರೂ. ಸೇರಿದಂತೆ ಒಟ್ಟು 50.83 ಕೋಟಿ ರೂ. ವೆಚ್ಚ ನಿರೀಕ್ಷಿಸಲಾಗಿದೆ.

ಪ್ರಮುಖ ಆದಾಯಗಳು 
ಆಸ್ತಿ ತೆರಿಗೆ 3.64 ಕೋಟಿ ರೂ., ನೀರಿನ ಶುಲ್ಕ 6 ಲಕ್ಷ ರೂ., ವಾಣಿಜ್ಯ ಸಂಕೀರ್ಣದ ಬಾಡಿಗೆ 40 ಲಕ್ಷ ರೂ., ನೀರಿನ ಕಂದಾಯ .151 ಕೋ, ಉದ್ಯಮ ಪರವಾನಿಗೆಯ 7.5 ಲಕ್ಷ., ಎಸ್‌ಎಫ್‌ಸಿ, ನಲ್ಮ್, ವಿಶೇಷ ಅನುದಾನ, 14ನೇ ಹಣಕಾಸು ಯೋಜನೆ, ಬರಪರಿಹಾರ, ಕಚೇರಿ ಕಟ್ಟಡಕ್ಕಾಗಿ 1 ಕೋ.ರೂ. ಸೇರಿದಂತೆ ವಿವಿಧ ಮೂಲಗಳಿಂದ ಒಟ್ಟು 52.50 ಕೋ. ರೂ. ಆದಾಯ ನಿರೀಕ್ಷಿಸಲಾಗಿದೆ. 

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.