ನಾಗರಹೊಳೆಯಲ್ಲಿ 1,920 ಕಿ.ಮೀ. ಫೈರ್‌ಲೈನ್‌ ನಿರ್ಮಾಣ


Team Udayavani, Jan 19, 2019, 1:10 AM IST

17.jpg

ಹುಣಸೂರು: ಮುಂಬರುವ ಬೇಸಿಗೆ-ಬಿರುಗಾಳಿಗೆ ಹರಡಬಹುದಾದ ಬೆಂಕಿ ಅನಾಹುತವನ್ನು ತಡೆ ಯಲು ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಅರಣ್ಯ ಇಲಾಖೆ ಸರ್ವ ಸನ್ನದ್ಧವಾಗಿದ್ದು, ಫೈರ್‌ಲೈನ್‌ ನಿರ್ಮಿಸಿ ಕಟ್ಟೆಚ್ಚರ ವಹಿಸಿದೆ. ಈಗಾಗಲೇ ಉದ್ಯಾನದ ಎಲ್ಲ 8 ವಲಯಗಳಲ್ಲೂ ಬೆಂಕಿ ರೇಖೆ ನಿರ್ಮಿಸಲು ಬಹುತೇಕ ಕಡೆ ಗಿಡಗಂಟಿಗಳನ್ನು ತೆರವುಗೊಳಿಸಲಾಗಿದೆ.

1,920 ಕಿ.ಮೀ. ಬೆಂಕಿ ರೇಖೆ: ನಾಗರಹೊಳೆ, ಕಲ್ಲಹಳ್ಳ, ಆನೆಚೌಕೂರು, ವೀರನಹೊಸಹಳ್ಳಿ, ಮೇಟಿ ಕುಪ್ಪೆ, ಅಂತರಸಂತೆ, ಡಿ.ಬಿ.ಕುಪ್ಪೆ ಹಾಗೂ ಹುಣ ಸೂರು ವಲಯ ಸೇರಿ ಒಟ್ಟಾರೆ 1,920 ಕಿ.ಮೀ. ಬೆಂಕಿರೇಖೆ ನಿರ್ಮಿಸಲಾಗಿದ್ದು, ಮುಖ್ಯರಸ್ತೆಯಲ್ಲಿ 30 ಮೀಟರ್‌, ಇತರೆಡೆಗಳಲ್ಲಿ 10 ಮೀಟರ್‌ ಅಗಲದ ಫೈರ್‌ಲೈನ್‌ ಅಳವಡಿಸಲಾಗಿದೆ. 270 ಫೈರ್‌ ವಾಚರ್‌ ನೇಮಕ: ಇಡೀ ಉದ್ಯಾನಕ್ಕೆ 270 ಮಂದಿ ಫೈರ್‌ವಾಚರ್ಗಳನ್ನಾಗಿ ಅರಣ್ಯದಂಚಿನ ಹಾಡಿಗಳ ಆದಿವಾಸಿಗಳನ್ನು ಮೂರು ತಿಂಗಳ ಕಾಲನೇಮಿಸಿಕೊಳ್ಳಲಾಗಿದೆ. ಇವರಿಗೆ ಇಲಾಖೆ ಮಾರ್ಗಸೂಚಿಯಂತೆ ನಿತ್ಯ ಮಧ್ಯಾಹ್ನದ ಊಟ ಹಾಗೂ 320 ರೂ. ದಿನಗೂಲಿ ನೀಡಲಾಗುತ್ತದೆ.

ಇವರು ಬೆಂಕಿ ಬೀಳದಂತೆ ಎಚ್ಚರಿಕೆ ವಹಿಸುವ ಕಾರ್ಯದಲ್ಲಿ ನಿರತರಾಗುವರು. ಪ್ರತಿ ವಲಯಕ್ಕೂ ತಲಾ ನಾಲ್ಕು ಸ್ಪ್ರೆàಯರ್‌, ಬ್ಲೋವರ್‌, ವೀಡ್‌ಕಟರ್‌, ವಾಟರ್‌ ಟ್ಯಾಂಕ್‌ ಇರುವ ವಾಹನ ನೀಡಲಾಗಿದ್ದು, ವೀರನಹೊಸಹಳ್ಳಿಯಲ್ಲಿ 5 ಸಾವಿರ ಲೀ. ಸಾಮರ್ಥ್ಯದ ನೀರಿನ ಟ್ಯಾಂಕ್‌ ಹಾಗೂ 6 ಮಂದಿ ಸಿಬ್ಬಂದಿ ಹೊಂದಿರುವ ಕ್ಷಿಪ್ರ ಕಾರ್ಯಪಡೆ ವಾಹನವನ್ನು ಸನ್ನದಟಛಿವಾಗಿರಿಸಲಾಗಿದೆ. ಹೆಚ್ಚುವರಿ ವಾಹನ ಸೌಲಭ್ಯ ಕಲ್ಪಿಸಲಾಗಿದೆ.

ಎಲ್ಲ ಸಿಬ್ಬಂದಿಗೂ ವಾಕಿಟಾಕಿ: ಎಲ್ಲಾ ಅರಣ್ಯ ಸಿಬ್ಬಂದಿಗೂ ವಾಕಿಟಾಕಿ ವಿತರಿಸಿದ್ದು, ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಣ್ಣ ಅವಘಡ ಸಂಭವಿಸಿದರೂ ತಕ್ಷಣವೇ ಕೇಂದ್ರಕ್ಕೆ ಮಾಹಿತಿ ನೀಡುವ ವ್ಯವಸ್ಥೆ ಕಲ್ಪಿ ಸಲಾಗಿದೆ. ಅಲ್ಲದೇ 30 ವಾಚ್‌ ಟವರ್‌ ಗಳ ಮೂಲಕ ನಿಗಾವಹಿಸಲಾಗುತ್ತಿದೆ. ಮುನ್ನೆಚ್ಚರಿಕೆ ಯಾಗಿ ನಾಗರಹೊಳೆ, ವೀರನಹೊಸ ಹಳ್ಳಿ, ಅಂತರಸಂತೆ ವಲಯಗಳಲ್ಲಿ ಅಗ್ನಿಶಾಮಕ ವಾಹನ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ. ಮಾನವನ ಅತಿಕ್ರಮಣ ಪ್ರವೇಶ ತಡೆಯಲು ಪ್ರಥಮ ಬಾರಿಗೆ ಕಾಡಂಚಿನಲ್ಲಿ ಪ್ರತಿ ಮೂರು ಕಿ.ಮೀ.ಗೊಬ್ಬರಂತೆ ಫೈರ್‌ ವಾಚರ್‌ ನೇಮಿಸಲಾಗಿದೆ.

2 ಕೋಟಿ ವೆಚ್ಚ: ಉದ್ಯಾನದ ಬೆಂಕಿ ತಡೆ ನಿರ್ವಹಣೆಗಾಗಿ ಒಟ್ಟಾರೆ ಎರಡು ಕೋಟಿ ರೂ. ವೆಚ್ಚ ತಗುಲಲಿದ್ದು, ಬೆಂಕಿ ರೇಖೆ ನಿರ್ಮಾಣ, ಫೈರ್‌ ವಾಚರ್‌ಗಳ ಸಂಬಳ, ಊಟ, ವಾಹನ ಬಾಡಿಗೆ, ಪರಿಕರಗಳ ಖರೀದಿ ಸೇರಿ ಒಟ್ಟು 2 ಕೋಟಿ ರೂ.
ಖರ್ಚಾಗಲಿದೆ.

ಫೈರ್‌ಲೈನ್‌ ನಿರ್ಮಾಣ ಹೇಗೆ?
ಸುಮಾರು 643 ಚ.ಕಿ.ಮೀ. ವಿಸ್ತೀರ್ಣದ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಬೇಸಿಗೆ ಆರಂಭಕ್ಕೂ ಮುನ್ನ ಅರಣ್ಯದೊಳಗೆ ಈ ಹಿಂದೆ ನಿರ್ಮಿಸಿಕೊಂಡಿದ್ದ ಮಾರ್ಗಗಳಲ್ಲಿ ಮೊದಲು ಬೆಳೆದಿರುವ ಲ್ಯಾಂಟಾನಾ, ಗಿಡಗಂಟಿಗಳನ್ನು ತೆರವುಗೊಳಿಸಿ, ಒಂದೆಡೆ ರಾಶಿಹಾಕಿ ಸುಡಲಾಗುತ್ತದೆ. ಬಳಿಕ ಮುಖ್ಯರಸ್ತೆಯಲ್ಲಿ 30 ಮೀಟರ್‌, ಇತರೆಡೆಗಳಲ್ಲಿ 10 ಮೀಟರ್‌ ಅಗಲದ ಫೈರ್‌ಲೈನ್‌ ನಿರ್ಮಿಸಲಾಗುತ್ತದೆ. ಇದರಿಂದ ಬೆಂಕಿ ಬಿದ್ದ ವೇಳೆ ಶೀಘ್ರವಾಗಿ ಸಿಬ್ಬಂದಿ ಹಾಗೂ ನೀರಿನ ಟ್ಯಾಂಕ್‌ಗಳನ್ನು ತೆಗೆದುಕೊಂಡು ಹೋಗಲು ಸಹಕಾರಿಯಾಗಲಿದೆ.

ಅರಣ್ಯಕ್ಕೆ ಬೆಂಕಿ ಬೀಳುವುದನ್ನು ತಡೆಯಲು ಇಲಾಖೆ ವಿಶೇಷ ಶ್ರಮವಹಿಸಿ ಸಾಕಷ್ಟು ಮುನ್ನೆಚ್ಚರಿಕೆ
ವಹಿಸಿದೆ. ಇನ್ನು 3 ತಿಂಗಳು ಇಲಾಖೆಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಣ್ಗಾವಲಿನಲ್ಲಿ ಕಾರ್ಯನಿರ್ವಹಿಸುತ್ತೇವೆ. ಬೆಂಕಿ ಬೀಳದಂತೆ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಪ್ರಶಸ್ತಿ ನೀಡಿ
ಪ್ರೋತ್ಸಾಹಿಸಲಾಗುತ್ತಿದೆ.

● ನಾರಾಯಣಸ್ವಾಮಿ, ಹುಲಿಯೋಜನೆ ನಿರ್ದೇಶಕ

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.