ಸೌಮ್ಯಾ ಹತ್ಯೆ ಪ್ರಕರಣ: ಕೇರಳ ಅರ್ಜಿ ವಜಾ
Team Udayavani, Apr 29, 2017, 1:06 AM IST
ಹೊಸದಿಲ್ಲಿ: ಸೌಮ್ಯಾ ಕೊಲೆ ಪ್ರಕರಣ ಸಂಬಂಧ ಕೇರಳ ಸರಕಾರ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾ ಮಾಡಿದೆ. ಅಪರಾಧಿ ಗೋವಿಂದಚಾಮಿ ವಿರುದ್ಧದ ಕೊಲೆ ಆರೋಪ ಕೈಬಿಟ್ಟು, ಆತನಿಗೆ ಕೇರಳದ ಸ್ಥಳೀಯ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷೆಯನ್ನು 7 ವರ್ಷ ಜೈಲುಶಿಕ್ಷೆಗೆ ಇಳಿಸಿದ್ದ ಸುಪ್ರೀಂ ತೀರ್ಪು ಪ್ರಶ್ನಿಸಿ ಕೇರಳ ಸರಕಾರ ಮೇಲ್ಮನವಿ ಸಲ್ಲಿಸಿತ್ತು. 2011ರ ಫೆ.1ರಂದು 23 ವರ್ಷದ ಸೌಮ್ಯಾಳನ್ನು ಚಲಿಸುತ್ತಿರುವ ರೈಲಿನಿಂದ ನೂಕಿದ್ದ ಆರೋಪಿ ಗೋವಿಂದಚಾಮಿ, ಅನಂತರ ಕೆಳಕ್ಕೆ ಬಿದ್ದಿದ್ದ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ. ಗಂಭೀರ ಗಾಯಗೊಂಡಿದ್ದ ಆಕೆ ಆಸ್ಪತ್ರೆಯಲ್ಲಿ ಅಸುನೀಗಿದ್ದಳು. ಶಿಕ್ಷೆ ಕಡಿತಗೊಳಿಸಿದ ಸುಪ್ರೀಂ ಆದೇಶದ ವಿರುದ್ಧ ಕಿಡಿಕಾರಿ ನಿವೃತ್ತ ನ್ಯಾ| ಮಾರ್ಕಂಡೇಯ ಕಾಟ್ಜು ಅವರು ನ್ಯಾಯಾಂಗ ನಿಂದನೆ ಆರೋಪಕ್ಕೂ ಗುರಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ