ನಾಯಕನಹಟ್ಟಿ ದೇಗುಲದಲ್ಲಿ 67.65 ಲಕ್ಷ ರೂ. ಕಾಣಿಕೆ ಸಂಗ್ರಹ

ಜಾತ್ರೆ ಸಂದರ್ಭದಲ್ಲಿ ಈ ಪ್ರಮಾಣದ ಕಾಣಿಕೆ ಸಂಗ್ರಹ ಇದೇ ಮೊದಲು

Team Udayavani, Apr 21, 2022, 2:29 PM IST

nayakanahatti

ನಾಯಕನಹಟ್ಟಿ: ಗುರು ತಿಪ್ಪೇರುದ್ರಸ್ವಾಮಿ ದೇವಾಲಯದ ಹುಂಡಿಗಳಲ್ಲಿ 67.65 ಲಕ್ಷ ರೂ.ಗಳ ದಾಖಲೆ ಪ್ರಮಾಣದ ಹಣ ಸಂಗ್ರಹವಾಗಿದೆ. ಒಳಮಠದ ಹುಂಡಿಗಳಲ್ಲಿ 51,40,500 ರೂ, ಹೊರಮಠದ ಹುಂಡಿಗಳಲ್ಲಿ 16,24,583 ರೂಗಳು ಸೇರಿದಂತೆ ಒಟ್ಟು 67,65,583 ರೂ. ಸಂಗ್ರಹವಾಗಿದೆ. ಜಾತ್ರೆ ಸಂದರ್ಭದಲ್ಲಿ ಈ ಪ್ರಮಾಣದಲ್ಲಿ ಹಣ ಸಂಗ್ರಹವಾಗಿರುವುದು ಇದೇ ಮೊದಲು.

ಕೊರೊನಾ ಹಿನ್ನೆಲೆಯಲ್ಲಿ ಎರಡು ವರ್ಷ ಜಾತ್ರೆ ಜರುಗಿದರೂ ಭಕ್ತರಿಗೆ ನಿರ್ಬಂಧ ವಿಧಿಸಲಾಗಿತ್ತು. ಹೀಗಾಗಿ ದೊಡ್ಡ ಪ್ರಮಾಣದಲ್ಲಿ ಭಕ್ತಾದಿಗಳು ದೇವಾಲಯಕ್ಕೆ ಭೇಟಿ ನೀಡಿರಲಿಲ್ಲ. ಯಾವುದೇ ನಿರ್ಬಂಧಗಳಿಲ್ಲದೆ ಮಾ. 20 ರಂದು ಜಾತ್ರೆ ಜರುಗಿತು. ಹೀಗಾಗಿ ಸುಮಾರು ಎರಡು ಲಕ್ಷ ಭಕ್ತರು ಜಾತ್ರೆಗೆ ಆಗಮಿಸಿದ್ದರು. ಸಾಮಾನ್ಯವಾಗಿ ಹುಂಡಿ ಹಣ ಎಣಿಕೆ ಕಾರ್ಯ ಬೆಳಗ್ಗೆ ಆರಂಭವಾಗಿ ಸಂಜೆ ಮುಕ್ತಾಯವಾಗುತ್ತಿತ್ತು. ಆದರೆ ಈ ಬಾರಿಯ ಹುಂಡಿ ಹಣದ ಎಣಿಕೆ ಕಾರ್ಯ ಮುಕ್ತಾಯವಾದಾಗ ರಾತ್ರಿ 8 ಗಂಟೆಯಾಗಿತ್ತು. ಜಾತ್ರೆಗೆ ಮುಂಚೆ ಜ. 28ರಂದು ಹುಂಡಿ ಹಣವನ್ನು ಎಣಿಕೆ ಮಾಡಲಾಗಿತ್ತು. ಅಂದು 57.93 ಲಕ್ಷ ರೂ. ಸಂಗ್ರಹವಾಗಿತ್ತು. ಜಾತ್ರೆಯ ಮುಂಚೆ, ಜಾತ್ರೆಯ ನಂತರ ಹಾಗೂ ಶ್ರಾವಣ ಮಾಸದ ನಂತರ ಹುಂಡಿ ಹಣವನ್ನು ವರ್ಷದಲ್ಲಿ ಮೂರು ಬಾರಿ ಎಣಿಸಲಾಗುತ್ತದೆ. ಹಿಂದೂ ಧಾರ್ಮಿಕ ದತ್ತಿ ಇಲಾಖೆಯಲ್ಲಿ ಇಲ್ಲಿನ ದೇವಾಲಯವನ್ನು ‘ಎ’ ಶ್ರೇಣಿಯ ದೇವಾಲಯ ಎಂದು ಪರಿಗಣಿಸಲಾಗಿದೆ.

ಎರಡು ತಿಂಗಳಲ್ಲಿ ಕೋಟಿ ಮೀರಿದ ಆದಾಯ

ಜ. 30ರಿಂದ ಇಲ್ಲಿಯವರೆಗೆ ದೇವಾಲಯಕ್ಕೆ ಒಂದು ಕೋಟಿಗೂ ಹೆಚ್ಚಿನ ಹಣವನ್ನು ಭಕ್ತರು ನಾನಾ ರೀತಿಯಲ್ಲಿ ದೇವಾಲಯಕ್ಕೆ ನೀಡಿದ್ದಾರೆ. ತೆಂಗಿನಕಾಯಿ, ಹಣ್ಣು, ಪ್ರಸಾದ ಇನ್ನಿತರೆ ಮಾರಾಟದಿಂದ ಎರಡು ತಿಂಗಳ ಅವಧಿಯಲ್ಲಿ 35.45 ಲಕ್ಷ ರೂ. ಸಂಗ್ರಹವಾಗಿದೆ. ದೇವಾಲಯದಲ್ಲಿ ಜರುಗುವ ರುದ್ರಾಭಿಷೇಕ ಸೇವೆಗಳಿಂದ 3.14 ಲಕ್ಷ ರೂ. ಸಂಗ್ರಹವಾಗಿದೆ. ಲಗ್ನ ಕಾಣಿಕೆ, ಬಾಡಿಗೆ ಸೇರಿದಂತೆ ಇತರೆ ರೂಪದಿಂದ 13.5 ಲಕ್ಷ ರೂ.ಗಳ ಆದಾಯ ದೇವಾಲಯಕ್ಕೆ ದೊರೆತಿದೆ. ಹೀಗೆ ಎರಡು ತಿಂಗಳಲ್ಲಿ ನಾನಾ ರೂಪಗಳಿಂದ 1.19 ಕೋಟಿ ರೂ.ಗಳಷ್ಟು ಹಣವನ್ನು ಭಕ್ತಾದಿಗಳು ನೀಡಿದ್ದಾರೆ.

ನೇರ ದರ್ಶನದಿಂದ 6.95 ಲಕ್ಷ ರೂ. ಸಂಗ್ರಹ

ಜಾತ್ರೆಯಲ್ಲಿ ಅತಿ ಹೆಚ್ಚಿನ ಭಕ್ತರು ದೇವರ ದರ್ಶನಕ್ಕೆ ಆಗಮಿಸುತ್ತಾರೆ. ಜನಸಂದಣೆ ಹೆಚ್ಚಾಗಿರುವುದರಿಂದ ನೇರ ದರ್ಶನ ವ್ಯವಸ್ಥೆ ಏರ್ಪಡಿಸಲಾಗಿತ್ತು. ಇದಕ್ಕಾಗಿ 100 ರೂ. ಶುಲ್ಕ ನಿಗದಿಪಡಿಸಲಾಗಿದೆ. 6,950 ಜನರು ನೇರ ದರ್ಶನ ಪಡೆದಿದ್ದು, ಇದರಿಂದ ದೇವಾಲಯಕ್ಕೆ 6.95 ಲಕ್ಷ ರೂ. ಆದಾಯ ದೊರೆತಿದೆ.

ಕಂದಾಯ ಇಲಾಖೆ, ಕೆನರಾ ಬ್ಯಾಂಕ್‌, ದೇವಾಲಯ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ತಹಶೀಲ್ದಾರ್‌ ಎನ್‌. ರಘುಮೂರ್ತಿ, ದೇವಾಲಯದ ಇಒ. ಎಚ್‌. ಗಂಗಾಧರಪ್ಪ, ಪಿಎಸ್‌ಐ ಜೆ. ಶಿವರಾಜ್‌, ಕೆನರಾ ಬ್ಯಾಂಕ್‌ ವ್ಯವಸ್ಥಾಪಕ ಸೂರ್ಯದೇವ ನಾಯ್ಕ, ರಾಜಸ್ವ ನಿರೀಕ್ಷಕ ಚೇತನ್‌, ಶಿರಸ್ತೇದಾರ್‌ ಸದಾಶಿವಪ್ಪ, ಸಿಬ್ಬಂದಿ ರೇಖಾ, ದೇವಾಲಯದ ಸಿಬ್ಬಂದಿ ಸತೀಶ್‌ ಮತ್ತಿತರರು ಇದ್ದರು.

ಹುಂಡಿಯಲ್ಲಿತ್ತು ವಿದೇಶಿ ನಾಣ್ಯ-ಕರೆನ್ಸಿ

ಹುಂಡಿಯಲ್ಲಿ ಸಂಗ್ರಹವಾದ ನಾಣ್ಯಗಳಲ್ಲಿ ಹಲವಾರು ವಿದೇಶಿ ನಾಣ್ಯ ಹಾಗೂ ಕರೆನ್ಸಿಗಳು ಕಂಡುಬಂದವು. ಯೂರೋ, ಸೆಂಟ್‌, ಅರಬ್‌ ದೇಶದ ನಾಣ್ಯಗಳನ್ನು ಭಕ್ತಾದಿಗಳು ಹುಂಡಿಗೆ ಹಾಕಿದ್ದರು. ಈ ಬಾರಿ ನಾಣ್ಯಗಳಿಗಿಂತ ನೋಟುಗಳ ಸಂಖ್ಯೆ ಹೆಚ್ಚಾಗಿರುವುದು ವಿಶೇಷವಾಗಿತ್ತು. 1.98 ಲಕ್ಷ ರೂ.ಗಳಷ್ಟು ನಾಣ್ಯಗಳು ಹುಂಡಿಯಲ್ಲಿದ್ದವು. 69 ಸಾವಿರ ಮೌಲ್ಯದ 5 ರೂ. ನಾಣ್ಯಗಳು, 70 ಸಾವಿರ ರೂ. ಮೌಲ್ಯದ 2 ರೂ., 55,920 ರೂ.ಗಳಷ್ಟು 1 ರೂ. ನಾಣ್ಯಗಳು ಹುಂಡಿಯಲ್ಲಿದ್ದವು. ಇದರ ಜತೆಗೆ ಹಲವಾರು ರೀತಿಯ ಬೆಳ್ಳಿ ಆಭರಣಗಳೂ ಇದ್ದವು. ಹುಂಡಿ ಎಣಿಕಾ ಕಾರ್ಯವನ್ನು ಸಂಪೂರ್ಣವಾಗಿ ವಿಡಿಯೋ ಚಿತ್ರೀಕರಣ ಮಾಡಲಾಯಿತು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.