ಶಿಕ್ಷಕರ ದಿನಾಚರಣೆ : ಶಿಕ್ಷಣದ ಬದಲಿಗೆ ನಮಗಿಂದು ಅಗತ್ಯವಿರುವುದು ಮೌಲ್ಯಾಧಾರಿತ ಶಿಕ್ಷಣ…

ಇಂತಹ ಅಪವಾದಗಳಿಂದ ಮುಕ್ತವಾಗುವುದರ ಜೊತೆಗೆ ನಮ್ಮ ಶಿಕ್ಷಣ ವ್ಯವಸ್ಥೆಗೆ ಆಮೂಲಾಗ್ರ ಬದಲಾವಣೆ ಬೇಕಿದೆ.

Team Udayavani, Sep 5, 2020, 9:21 AM IST

ಶಿಕ್ಷಕರ ದಿನಾಚರಣೆ 2020: ಶಿಕ್ಷಣವು ಒಂದು ಉದ್ಯಮವಲ್ಲವೆಂಬುದನ್ನು ಸಾಬೀತುಪಡಿಸಬೇಕಿದೆ…

ಮನುಕುಲದ ಇತಿಹಾಸದಲ್ಲೇ ಇದುವರೆಗೂ ನಮ್ಮ ಶಿಕ್ಷಣ ವ್ಯವಸ್ಥೆಗೆ ಇಂತಹದೊಂದು ತೊಡಕು ಬಂದಿರಲಿಲ್ಲ. ಪ್ರಸ್ತುತ ಕೋವಿಡ್ ಮಹಾಮಾರಿಯಿಂದ ತಪ್ಪಿಸಿಕೊಳ್ಳುವುದು ಒಂದು ಸವಾಲಾದರೆ, ಮಕ್ಕಳ ಬೌದ್ಧಿಕ ಮಟ್ಟ ಕುಸಿಯದಂತೆ, ಭವಿಷ್ಯದಲ್ಲಿ ಅವರನ್ನು ಅನಕ್ಷರಸ್ಥರಾಗದಂತೆ ತಡೆಯುವುದು ಮತ್ತೊಂದು ಸವಾಲಾಗಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ನಮ್ಮ ಉಪಖಂಡದಲ್ಲಿ ಈಗಾಗಲೇ ಇರುವ ಅನರಕ್ಷತೆಯ ಪ್ರಮಾಣ ಮತ್ತೊಂದಷ್ಟು ಹೆಚ್ಚಾಗುವ ಸಂಭವನೀಯತೆ ಇದೆ. ಆದರೆ ಇದಕ್ಕೆ ನಮ್ಮ ಶಿಕ್ಷಕ ಬಂಧುಗಳು ಆಸ್ಪದ ಕೊಡದೆ ಶಿಕ್ಷಣ ಇಲಾಖೆಯ ಸೂಚನೆಗಳ ಜೊತೆಜೊತೆಗೆ ತಮ್ಮದೇ ಅದ ಉಪಕ್ರಮಗಳನ್ನು ಕೈಗೊಳ್ಳುವ ಮೂಲಕ ಭವಿಷ್ಯದಲ್ಲಿ ಜ್ಞಾನ ವಲಯವನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತು ಸಾಗುತ್ತಿರುವುದು ಶ್ಲಾಘನೀಯ.

ವಿದ್ಯೆ ಇಲ್ಲದವನ ಮುಖ ಹಾಳೂರ ಹದ್ದಿನಂತಿಕ್ಕು ಸರ್ವಜ್ಞ ಎಂಬ ಉಕ್ತಿಯನ್ನು ಸಾಕ್ಷೀಕರಿಸುವಂತೆ ಇಂದು ಶಿಕ್ಷಣವು ಮನುಷ್ಯನ ಮೂಲಭೂತ ಅವಶ್ಯಕತೆಗಳಲ್ಲಿ ಒಂದಾಗಿದೆ. ಏಕೆಂದರೆ ಶಿಕ್ಷಣವು ಅತ್ಯಂತ ಸಾರ್ವಕಾಲಿಕ ಆಗಿದೆ. ಶಿಕ್ಷಣವು ಮಗುವಿನ ಸರ್ವಾಂಗೀಣ ಪ್ರಗತಿಗೆ ಸಹಕಾರಿಯಾಗಿದೆ.

ಆದರೆ ಈ ಹೊತ್ತಿನಲ್ಲಿ ಸಮಾರಂಭದವೊಂದರಲ್ಲಿ ಹಿರಿಯೊಬ್ಬರು ಹೇಳಿದ ಮಾತು ಹೀಗಿದೆ ನಮ್ಮ ಇಂದಿನ ಶಿಕ್ಷಣ ಪದ್ಧತಿಯು ಮಕ್ಕಳಿಗೆ ಭವಿಷ್ಯದಲ್ಲಿ ಹೇಗೆ ಕೂಲಿ ಮಾಡಬೇಕೆಂಬುದನ್ನಷ್ಟೇ ಕಲಿಸುತ್ತಿದೆ. ಇಂತಹ ಅಪವಾದಗಳಿಂದ ಮುಕ್ತವಾಗುವುದರ ಜೊತೆಗೆ ನಮ್ಮ ಶಿಕ್ಷಣ ವ್ಯವಸ್ಥೆಗೆ ಆಮೂಲಾಗ್ರ ಬದಲಾವಣೆ ಬೇಕಿದೆ.

ಈಗಾಗಲೇ ರಾಷ್ಟ್ರಕ್ಕೆ ನೂತನ ಶಿಕ್ಷಣ ನೀತಿ ಘೋಷಣೆಯಾಗಿದ್ದು, ಅದು ಪ್ರಸ್ತುತ ತಲ್ಲಣಗಳನ್ನು ದಾಟಿ, ಮುಂಬರುವ ದಿನಗಳಲ್ಲಿ ಶಿಕ್ಷಣವೇ ಶಕ್ತಿ ಎಂಬ ವಾಕ್ಯದ ಬೆನ್ನತ್ತಿ ಹೊರಟಲ್ಲಿ ನಮ್ಮ ಸನಾತನ ಶಿಕ್ಷಣ ಪದ್ಧತಿಗೆ ಒಂದು ಬೆಲೆ ತರಲು ಸಾಧ್ಯ. ಕೇವಲ ಓದು, ಬರಹವನ್ನು ಕಲಿಸಿ ಮಕ್ಕಳನ್ನು ಯಂತ್ರಮಾನವರನ್ನಾಗಿಸುವ ಶಿಕ್ಷಣದ ಬದಲಿಗೆ ನಮಗಿಂದು ಅಗತ್ಯವಿರುವುದು ಮೌಲ್ಯಾಧಾರಿತ ಶಿಕ್ಷಣ. ಮಕ್ಕಳಲ್ಲಿ ಮೌಲ್ಯಗಳು ಕ್ಷೀಣಿಸುತ್ತಿದ್ದು, ಇದರೊಂದಿಗೆ ಇಡಿಯ ನಮ್ಮ ಸಮಾಜದ ದಿಕ್ಕೇ ಬದಲಾಗಿ ಹೋಗುತ್ತಿದೆ.

ಶಿಕ್ಷಣವನ್ನು ಪ್ರಗತಿಪರ ಕಾರ್ಯಗಳಿಗೆ ಬಳಸಿಕೊಳ್ಳುವ ಮಂದಿಗಿಂತ ಇಂದು ಅದನ್ನು ಸ್ವಾರ್ಥ ಮತ್ತು ಸರ್ವನಾಶಕ್ಕೆ ಬಳಸಿಕೊಳ್ಳುತ್ತಿರುವುದು ದುಸ್ತರ ಭವಿಷ್ಯದ ಮುನ್ಸೂಚನೆಯಾಗಿದೆ. ಇಂದು ಈ ಜಗತ್ತನ್ನು ನಿಜಕ್ಕೂ ನಾಶ ಮಾಡುತ್ತಿರುವವರು ಬಹುತೇಕ ವಿದ್ಯಾವಂತರೆಂಬ ಕಳಂಕ ಪಿಸುಗುಡುತ್ತಿದೆ. ಬದಲಾದ ಜಾಯಮಾನದಲ್ಲಿ ನಾವು ಇವುಗಳಿಂದ ಮುಕ್ತಗೊಳ್ಳಬೇಕಿದೆ. ಶಿಕ್ಷಣವು ಒಂದು ಉದ್ಯಮವಲ್ಲವೆಂಬುದನ್ನು ಸಾಬೀತುಪಡಿಸಬೇಕಿದೆ.

ವಿ.ಕೆ ಕುಮಾರಸ್ವಾಮಿ
ವಿರುಪಾಪುರ, ಮಾಗಡಿ ತಾಲ್ಲೂಕು. ರಾಮನಗರ ಜಿಲ್ಲೆ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳ ಜತೆಗೆ ಶಿಕ್ಷಕರಿಗೂ ಆನ್ ಲೈನ್ ಕ್ಲಾಸ್ ಎಂಬ ಹೊಸ‌ ಅನುಭವ

ಮಕ್ಕಳ ಜತೆಗೆ ಶಿಕ್ಷಕರಿಗೂ ಆನ್ ಲೈನ್ ಕ್ಲಾಸ್ ಎಂಬ ಹೊಸ‌ ಅನುಭವ

ವಿದ್ಯಾರ್ಥಿಗಳ ನೇರ ಒಡನಾಟವಿಲ್ಲದೇ ವೃತ್ತಿ ಜೀವನ ಬೇಸರವೆನಿಸಿದೆ

ವಿದ್ಯಾರ್ಥಿಗಳ ನೇರ ಒಡನಾಟವಿಲ್ಲದೇ ವೃತ್ತಿ ಜೀವನ ಬೇಸರವೆನಿಸಿದೆ

ಈಗ ಶಾಲಾ ಕಾಲೇಜುಗಳಲ್ಲಿ ಎಲ್ಲರ ಬಾಯಲ್ಲೂ ಆನ್ ಲೈನ್ ತರಗತಿಗಳದ್ದೇ ವಿಚಾರ

ಈಗ ಶಾಲಾ ಕಾಲೇಜುಗಳಲ್ಲಿ ಎಲ್ಲರ ಬಾಯಲ್ಲೂ ಆನ್ ಲೈನ್ ತರಗತಿಗಳದ್ದೇ ವಿಚಾರ

ಮಕ್ಕಳೊಂದಿಗೆ ಇದ್ದು ಪಾಠ ಮಾಡುವ ಖುಷಿ ಆನ್ ಲೈನ್ ಕ್ಲಾಸ್ ನಲ್ಲಿ ಸಿಗಲ್ಲ..!

ಮಕ್ಕಳೊಂದಿಗೆ ಇದ್ದು ಪಾಠ ಮಾಡುವ ಖುಷಿ ಆನ್ ಲೈನ್ ಕ್ಲಾಸ್ ನಲ್ಲಿ ಸಿಗಲ್ಲ..!

ವಸತಿ ಪ್ರದೇಶಕ್ಕೆ ತೆರಳಿ ಮಕ್ಕಳ ಕಲಿಕೆಗೆ ಶ್ರಮಿಸುತ್ತಿರುವ ಶಿಕ್ಷಕರು ಅಭಿನಂದನಾರ್ಹ‌ರು

ವಸತಿ ಪ್ರದೇಶಕ್ಕೆ ತೆರಳಿ ಮಕ್ಕಳ ಕಲಿಕೆಗೆ ಶ್ರಮಿಸುತ್ತಿರುವ ಶಿಕ್ಷಕರು ಅಭಿನಂದನಾರ್ಹ‌ರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.