ಬರಲಿದೆ 20 ನಿಮಿಷ ಚಾರ್ಜ್ ಮಾಡಿ ಬರೋಬ್ಬರಿ 500 ಕಿಲೋಮೀಟರ್ ಓಡುವ ಕಾರು


Team Udayavani, Sep 1, 2020, 4:42 PM IST

ಬರಲಿದೆ 20 ನಿಮಿಷ ಚಾರ್ಜ್ ಮಾಡಿ ಬರೋಬ್ಬರಿ 500 ಕಿಲೋಮೀಟರ್ ಓಡುವ ಕಾರು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಇದೀಗ ಅಟೊಮೊಬೈಲ್ ಲೋಕದಲ್ಲಿ ಎಲೆಕ್ಟ್ರಿಕ್ ಕಾರುಗಳದ್ದೇ ಕಾರುಬಾರು.ಹೊಸ ಹೊಸ ಫೀಚರ್ ಗಳೊಂದಿಗೆ ಹಲವಾರು ಕಂಪೆನಿಗಳ ಎಲಕ್ಟ್ರಿಕಲ್ ಕಾರುಗಳು ಮಾರುಕಟ್ಟೆಯನ್ನು ಪ್ರವೆಶಿಸಲು ಸಜ್ಜಾಗಿ ನಿಂತಿವೆ. ಸದ್ಯಕ್ಕೆ ಕೋವಿಡ್ 19 ಕಾಟದಿಂದ ಈ ವೇಗಕ್ಕೆ ಸ್ವಲ್ಪ ಬ್ರೇಕ್ ಬಿದ್ದಿದೆಯಷ್ಟೇ!

ಅಮೆರಿಕಾ ಮೂಲದ ಎಲೆಕ್ಟ್ರಿಕ್ ಕಾರು ಉತ್ಪಾದಕಾ ಕಂಪೆನಿ ಲ್ಯೂಸಿಡ್ ಮೊಟಾರ್ಸ್ ನವರು ಹೊರತರಲುದ್ದೇಶಿಸಿರುವ ಲ್ಯೂಸಿಡ್ ಆ್ಯರ್ ಕಾರು ಇದೀಗ ವಿಶ್ವಾದ್ಯಂತ ಇ.ವಿ. ಕಾರುಗಳ ವಿಭಾಗದಲ್ಲಿ ಕ್ರಾಂತಿಯೆಬ್ಬಿಸಲು ಸಜ್ಜಾಗಿದೆ.

ಲ್ಯೂಸಿಡ್ ಆ್ಯರ್ ಕಿರು ಗಾತ್ರದ ಕಾರುಗಳಲ್ಲಿಯೇ ಅತೀ ವೇಗದ ಚಾರ್ಜಿಂಗ್ ಸೌಲಭ್ಯವನ್ನು ನೀಡುವ ಮೂಲಕ ಇ.ಯು. ಗ್ರಾಹಕರನ್ನು ಸೆಳೆಯಲು ಸಜ್ಜಾಗಿದೆ.

ಈ ಕಾರಿನಲ್ಲಿ 300 ಕಿಲೋ ವ್ಯಾಟ್ ಸಾಮರ್ಥ್ಯದ ಪವರ್ ಸಪ್ಲೈ ವ್ಯವಸ್ಥೆ ಇರಲಿದ್ದು ಸದ್ಯಕ್ಕೆ ಮಾರುಕಟ್ಟೆಯಲ್ಲಿರುವ ಎಲೆಕ್ಟ್ರಿಕ್ ಕಾರುಗಳಲ್ಲಿನ ಗರಿಷ್ಠ ಚಾರ್ಜಿಂಗ್ ಸಾಮರ್ಥ್ಯ 270 ಕಿಲೋವ್ಯಾಟ್ ಗಳಾಗಿರುವುದು ಈ ಕಾರನ್ನು ವಿಶಿಷ್ಟವಾಗಿಸಿದೆ.

ಕೇವಲ 20 ನಿಮಿಷಗಳ ಚಾರ್ಜಿಂಗ್ ಸಮಯದಲ್ಲಿ ಬರೋಬ್ಬರಿ 500 ಕಿಲೋಮೀಟರ್ ಗಳಷ್ಟು ದೂರವನ್ನು ಕ್ರಮಿಸುವ ಸಾಮರ್ಥ್ಯ ಈ ಕಾರಿಗೆ ಇದೆ ಎನ್ನಲಾಗುತ್ತಿದ್ದು 2021ರಲ್ಲಿ ಈ ಹೊಸ ಎಲೆಕ್ಟ್ರಿಕ್ ಕಾರು ವಿಶ್ವಾದ್ಯಂತ ಪ್ರಮುಖ ಮಾರುಕಟ್ಟೆಗಳಲ್ಲಿ ಬಿಡುಗಡೆಗೊಳ್ಳಲಿದೆ.

20 ನಿಮಿಷಗಳ ಕಾಲದ ಚಾರ್ಜಿಂಗ್ ನಲ್ಲಿ 500 ಕಿಲೋಮೀಟರ್ ಕ್ರಮಿಸುವ ವ್ಯವಸ್ಥೆ ಇದರಲ್ಲಿದ್ದರೂ ಈ ಕಾರಿನ ಡ್ರೈವಿಂಗ್ ರೇಂಜ್ ಸರಿಸುಮಾರು 830 ಕಿಲೋಮೀಟರ್ ಗಳಾಗಿರುವುದರಿಂದ ಪ್ರಯಾಣ ಮಧ್ಯದಲ್ಲೇ ಕಾರಿನ ಬ್ಯಾಟರಿ ಚಾರ್ಜ್ ಮುಗಿದುಹೋಗಬಹುದೆಂಬ ಭಯ ಇರುವುದಿಲ್ಲ!

ಇಷ್ಟು ಮಾತ್ರವಲ್ಲದೇ ಈ ಎಲೆಕ್ಟ್ರಿಕ್ ಕಾರಿನಲ್ಲಿ ಬ್ಯಾಟರಿ ಬ್ಯಾಕಪ್ ಸೌಲಭ್ಯವನ್ನೂ ಸಹ ಇದರ ತಯಾರಕರು ನೀಡಿದ್ದಾರೆ. ಈ ಮೂಲಕ ನಿಮ್ಮ ಪ್ರಯಾಣ ಮಧ್ಯದಲ್ಲೇ ಒಂದು ವೇಳೆ ಚಾರ್ಜ್ ಖಾಲಿಯಾಗಿ ಕಾರು ನಡುರಸ್ತೆಯಲ್ಲಿ ನಿಂತುಬಿಡಬಹುದೆಂಬ ಭಯ ಈ ಕಾರಿನ ಗ್ರಾಹಕರಿಗೆ ಇರಬೇಕಾಗಿಲ್ಲ.

ಒಂದು ವೇಳೆ ಈ ಕಾರಿನಲ್ಲಿ ಬ್ಯಾಟರಿ ಚಾರ್ಜ್ ಮುಗಿದು ಹೋದರೂ ಕ್ಷಣ ಮಾತ್ರದಲ್ಲೇ ಇದರಲ್ಲಿ ಅಳವಡಿಸಿರುವ ಬ್ಯಾಟರಿ ಬ್ಯಾಕಪ್ ವ್ಯವಸ್ಥೆ ನಿಮ್ಮ ಕಾರು ಮಾರ್ಗ ಮಧ್ಯದಲ್ಲಿ ಕೈಕೊಡುವುದನ್ನು ತಪ್ಪಿಸಲಿದೆ.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.