ಆರೋಗ್ಯ ಸೇತು ಆ್ಯಪ್ ಕಡ್ಡಾಯವೇ ? ಲಾಕ್ ಡೌನ್ 4.0 ಮಾರ್ಗಸೂಚಿಯಲ್ಲಿ ಸರ್ಕಾರ ಹೇಳಿದ್ದೇನು ?


Team Udayavani, May 18, 2020, 9:30 AM IST

arogya

ನವದೆಹಲಿ: ಕೋವಿಡ್ -19 ಸೋಂಕು ಪ್ರಕರಣಗಳನ್ನು ಪತ್ತೆಹಚ್ಚಲು ಕೇಂದ್ರ ಸರ್ಕಾರ  ಕೆಲ ತಿಂಗಳ ಹಿಂದೆ ಆರೋಗ್ಯ ಸೇತು ಆ್ಯಪ್ ಅನ್ನು ಬಿಡುಗಡೆ ಮಾಡಿತ್ತು. ಮಾತ್ರವಲ್ಲದೆ ಇದನ್ನು ಸರ್ಕಾರಿ ನೌಕರರು ಕಡ್ಡಾಯವಾಗಿ ಡೌನ್ ಲೋಡ್ ಮಾಡುವಂತೆ ಆದೇಶ ಹೊರಡಿಸಿತ್ತು.

ಆದರೇ ಲಾಕ್  ಡೌನ್  4ನೇ ಹಂತದ ಮಾರ್ಗ ಸೂಚಿಯಲ್ಲಿ ಸರ್ಕಾರವು ಆರೋಗ್ಯ ಸೇತು ಆ್ಯಪ್ ಗೆ ಸಂಬಂಧಿಸಿದ ನಿಯಮವನ್ನು ಸರಳೀಕರಿಸಿದೆ. ಅಂದರೇ ಈ ಆ್ಯಪ್ ಅನ್ನು ಡೌನ್ ಲೋಡ್ ಮಾಡುವ ಆಯ್ಕೆಯನ್ನು ಐಚ್ಚಿಕಗೊಳಿಸಿದೆ(optional). ಗೃಹ ಸಚಿವಾಲಯ ಭಾನುವಾರ ಹೊರಡಿಸಿರುವ ಹೊಸ ಮಾರ್ಗಸೂಚಿಗಳಲ್ಲಿ ಆ್ಯಪ್‌ ನ ಪ್ರಯೋಜನಗಳಿಗೆ ವಿಶೇಷ ಒತ್ತು ನೀಡಿದೆ. ಇದು ವ್ಯಕ್ತಿಗಳು ಮತ್ತು ಸಮಾಜದ ರಕ್ಷಣೆಗೆ ಸಹಾಯಕವಾಗುತ್ತದೆ. ಮತ್ತು ಸಂಭವನೀಯ ಅಪಾಯವನ್ನು ಮೊದಲೇ ಕಂಡುಹಿಡಿಯಲು ಈ ಅಪ್ಲಿಕೇಶನ್ ಸಹಾಯ ಮಾಡುತ್ತದೆ ಎಂದು ಹೇಳಿಕೊಂಡಿದೆ.

ಕಚೇರಿಗಳು ಮತ್ತು ಕೆಲಸದ ಸ್ಥಳಗಳಲ್ಲಿ ಸುರಕ್ಷತೆಯನ್ನು ಖಾತರಿಪಡಿಸುವ ಉದ್ದೇಶದಿಂದ,  ನೌಕರರು ಈ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳುವುದು ಅಗತ್ಯ. ಆದರೆ ಇದು ಕೇವಲ ಅವರ ವಿವೇಚನೆಗೆ ಬಿಟ್ಟಿದ್ದು ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

ಮೇ 1 ರಂದು ಜಾರಿಗೆ ತಂದ ಮಾರ್ಗಸೂಚಿಯಲ್ಲಿ ಕೇಂದ್ರ ಸರ್ಕಾರವೂ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ನೌಕರರರಿಗೆ ಆರೋಗ್ಯ ಸೇತು ಆ್ಯಪ್ ಅನ್ನು ಕಡ್ಡಾಯಗೊಳಿಸಿತ್ತು. ಆಯಾ ಸಂಸ್ಥೆಯು ತನ್ನ ಉದ್ಯೋಗಿಗಳು ಆರೋಗ್ಯ ಸೇತು ಆ್ಯಪ್ ಡೌನ್ ಲೋಡ್ ಮಾಡುವ ಹೊಣೆಗಾರಿಕೆಯನ್ನು ಹೊರಬೇಕು ಎಂಬುದನ್ನು ತಿಳಿಸಿತ್ತು.

ಆದರೇ ಭಾನುವಾರ ಬಂದ 4ನೇ ಮಾರ್ಗಸೂಚಿಯಲ್ಲಿ ಸ್ಥಳೀಯ ಅಧಿಕಾರಿಗಳು ಸ್ಮಾರ್ಟ್ ಫೋನ್ ಹೊಂದಿರುವ ಜನರಿಗೆ ಆರೋಗ್ಯ ಸೇತು ಆ್ಯಪ್ ಬಳಸುವಂತೆ ಸಲಹೆ ನೀಡಬಹುದು. ಅದರ ಜೊತೆಗೆ  ಕಂಟೈನ್ ಮೆಂಟ್ ಝೋನ್ ನಲ್ಲಿರುವ ಪ್ರತಿಯೊಬ್ಬರೂ ಕೂಡ ಈ ಆ್ಯಪ್ ಬಳಸಿ ಕ್ಷಣ ಕ್ಷಣ ದ ಆರೋಗ್ಯ ಮಾಹಿತಿಯನ್ನು ಅಪ್ ಡೇಟ್ ಮಾಡುವಂತೆ ಸೂಚಿಸಬೇಕು  ಎಂಬುದನ್ನು ಮಾತ್ರ ಉಲ್ಲೇಖಿಸಲಾಗಿದೆ.

ಕೆಲ ದಿನಗಳ ಹಿಂದೆ ಏಲಿಯಟ್ ಆಲ್ಡರ್ಸನ್ ಎಂಬ ಹೆಸರಿನಲ್ಲಿ  ಪರಿಚಯಿಸಿಕೊಂಡಿರುವ ಫ್ರೆಂಚ್ ಹ್ಯಾಕರ್ ಒಬ್ಬಾತ  ಆರೋಗ್ಯ ಸೇತು ಆ್ಯಪ್ ನಲ್ಲಿ ಲೋಪ ಕಂಡುಬಂದಿದೆ. ಇದು 90 ಮಿಲಿಯನ್ ಭಾರತೀಯರ ಗೌಪ್ಯತಾ ಮಾಹಿತಿಗೆ ಧಕ್ಕೆ ತರುತ್ತಿದೆ ಎಂದು ಹೇಳಿಕೊಂಡಿದ್ದಾನೆ.   ಆದರೇ ಕೂಡಲೇ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ ಈ ಆರೋಪವನ್ನು ನಿರಾಕರಿಸಿದೆ.  ಮಾತ್ರವಲ್ಲದೆ ಶೇ 100% ಈ ಆ್ಯಪ್ ಸುರಕ್ಷಿತ ಎಂದು ಹೇಳಿಕೊಂಡಿದೆ.

ಆರೋಗ್ಯ ಸೇತು ಆ್ಯಪ್ ಅನ್ನು ನಿರಂತರವಾಗಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಮತ್ತು ಅಪ್ ಡೇಟ್ ಮಾಡಲಾಗುತ್ತಿದೆ. ಪ್ರತಿಯೊಬ್ಬ ಭಾರತೀಯರ ಡೇಟಾ ಕೂಡ ಸುರಕ್ಷಿತವಾಗಿದ್ದು ಸುಳ್ಳು ಮಾಹಿತಿ ಹರಡಲಾಗುತ್ತಿದೆ ಎಂದು ಸರ್ಕಾರ ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.