ಉದ್ಯೋಗದಲ್ಲಿ ಲಿಂಗ ತಾರತಮ್ಯ ರಹಿತ ನೀತಿ ಅನುಸರಿಸುತ್ತಿರುವ ಅಮೆಜಾನ್ ಇಂಡಿಯಾ


Team Udayavani, Jun 28, 2022, 9:38 PM IST

ಉದ್ಯೋಗದಲ್ಲಿ ಲಿಂಗ ತಾರತಮ್ಯ ರಹಿತ ನೀತಿ ಅನುಸರಿಸುತ್ತಿರುವ ಅಮೆಜಾನ್ ಇಂಡಿಯಾ

ಮುಂಬಯಿ: ‘ಕೆಲಸ ಮಾಡಲು ಉತ್ತಮ ಸ್ಥಳ’’ ಎಂದು ಗುರುತಿಸಿಕೊಳ್ಳುವುದಕ್ಕಾಗಿ ಅಮೆಜಾನ್ ಇಂಡಿಯಾವು ಲಿಂಗ ತಟಸ್ಥ ನೀತಿಯನ್ನು (ಉದ್ಯೋಗದಲ್ಲಿ ಲಿಂಗ ತಾರತಮ್ಯವಿಲ್ಲದಿರುವುವಿಕೆ) ತನ್ನ ವ್ಯವಹಾರದಲ್ಲಿ ಅನುಸರಿಸುತ್ತಿದೆ.

ಮಹಿಳೆಯರು, ಎಲ್‌ಜಿಬಿಟಿಕ್ಯುಐಎ ಸಮೂಹ, ಮಾಜಿ ಯೋಧರು ಮತ್ತು ದಿವ್ಯಾಂಗರಿಗೆ ಸಮಾನ ಅವಕಾಶಗಳನ್ನು ನೀಡುತ್ತಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.

ಅಮೆಜಾನ್ ಇಂಡಿಯಾವು ವೈವಿಧ್ಯತೆ, ಸಮಾನತೆ ಮತ್ತು ಉದ್ಯೋಗಿಗಳ ಒಳಗೊಳ್ಳುವಿಕೆಯನ್ನು ತರಲು ಅನೇಕ ಉಪಕ್ರಮಗಳನ್ನು ಕಳೆದ ಕೆಲವು ವರ್ಷಗಳಿಂದ ಪ್ರಾರಂಭಿಸಿದೆ. ’ರೀಕಿಂಡಲ್’, ’ಪಿನಾಕಲ್ ಪ್ರೋಗ್ರಾಂ ’ಸನ್‌ಶೈನ್’ ಮತ್ತು ಅಮೆಜಾನ್ ವುವೇರ್‌ನಂತಹ ಕಾರ್ಯಕ್ರಮಗಳು ಮಹಿಳಾ ಉದ್ಯಮಿಗಳ ಬೆಳವಣಿಗೆಗೆ ಸಹಾಯಕವಾಗಿದೆ. ಜೊತೆಗೆ ಸಂಸ್ಥೆ ದೇಶಾದ್ಯಂತ ಮತ್ತು ಮಹಿಳೆಯರ ನೇತೃತ್ವದ ಸಣ್ಣ ಮತ್ತು ಮಧ್ಯಮ ವ್ಯವಹಾರಗಳ ಯಶಸ್ಸನ್ನು ಬೆಂಬಲಿಸುತ್ತಿದೆ.

ಭಾರತದಲ್ಲಿ ಹೆಚ್ಚು ವೈವಿಧ್ಯಮಯ ಮತ್ತು ಎಲ್ಲರನ್ನು ಒಂದಾಗಿ ಸೇರ್ಪಡೆ ಮಾಡಿಕೊಳ್ಳುವ ಕಾರ್ಯಸ್ಥಳ ಎಂಬ ಗುರಿ ಸಾಧಿಸುವುದಕ್ಕೆ ಅಮೆಜಾನ್‍ ಶ್ರಮಿಸುತ್ತಿದೆ. ಇದಕ್ಕೆ ಅನುಗುಣವಾಗಿ, ಕಾರ್ಯಾಚರಣೆ ತಂಡವು ತಮ್ಮ ಕಾರ್ಯಾಚರಣಾ ಜಾಲದಲ್ಲಿ ಮಂಗಳಮುಖಿಯರಿಗೆ ಅವಕಾಶ ನೀಡಿದೆ. ಅಗತ್ಯ ಪೂರೈಸುವಿಕೆ ಕೇಂದ್ರಗಳು, ವಿಂಗಡಣೆ ಕೇಂದ್ರಗಳು ಮತ್ತು ವಿತರಣಾ ಕೇಂದ್ರಗಳಲ್ಲಿ ಮಂಗಳಮುಖಿಯರನ್ನು ನೇಮಿಸಿಕೊಳ್ಳಲಾಗಿದೆ.

ಇದನ್ನೂ ಓದಿ : ಚುನಾವಣೆ : ಆಣೆ ಪ್ರಮಾಣಕ್ಕಾಗಿ ಗೆಲುವಿನ ಸಂಭ್ರಮ ಮರೆತು ಬಸ್ ಹತ್ತಿದ ಗ್ರಾ.ಪಂ. ಸದಸ್ಯರು

ಅಮೆಜಾನ್ ಇಂಡಿಯಾವು ಚೆನ್ನೈನಲ್ಲಿ ವಿಂಗಡಣೆ ಕೇಂದ್ರವನ್ನು ಪ್ರಾರಂಭಿಸಿದ್ದು, ಇಲ್ಲಿ ಕಾರ್ಯನಿರ್ವಹಿಸುವವರೆಲ್ಲರೂ ಮಹಿಳೆಯರು, ಅಂಗವಿಕಲತೆ ಹೊಂದಿರುವ ಜನರು ಮತ್ತು ಮಂಗಳಮುಖಿಯರು ಸೇರಿದ್ದಾರೆ.

ಮಹಿಳೆಯರ ಹಕ್ಕುಗಳನ್ನು ಸಂಭ್ರಮಿಸುವುದರಿಂದ ಹಿಡಿದು ವಿಕಲಾಂಗ ವ್ಯಕ್ತಿಗಳಿಂದ ಮಿಲಿಟರಿ ಪರಿಣತರವರೆಗೆ ಎಲ್ಲರಿಗೂ ಅವಕಾಶ ನೀಡಿದೆ. ಉತ್ಪನ್ನ ನಿರ್ವಾಹಕರು, ಕಲಾ ನಿರ್ದೇಶಕರು, ಸಹಾಯಕರು, ಮಾನವ ಸಂಪನ್ಮೂಲ ಮ್ಯಾನೇಜರ್‌ಗಳು ಮತ್ತು ವಿತರಣಾ ಸಹವರ್ತಿಗಳು ಸೇರಿದಂತೆ ವಿವಿಧ ಕೆಲಸಗಳಲ್ಲಿ ಎಲ್‌ಜಿಬಿಟಿಕ್ಯುಐಎ ಸಮುದಾಯದ ಉದ್ಯೋಗಿಗಳಿದ್ದಾರೆ.

ಎಲ್‌ಜಿಬಿಟಿಕ್ಯುಐಎ ಸಮುದಾಯದೊಂದಿಗೆ ತನ್ನನ್ನು ತಾನು ಗುರುತಿಸಿಕೊಂಡಿರುವ ಅಮೆಜಾನ್ ಇಂಡಿಯಾದ ಹಿರಿಯ ಕಲಾ ನಿರ್ದೇಶಕ ಮನೀಶ್ ಚೋಪ್ರಾ ತಮ್ಮ ಅನುಭವದ ಅಭಿಪ್ರಾಯ ಹಂಚಿಕೊಂಡಿದ್ದಾರೆ, ಉದ್ಯೋಗಿಗಳ ಲಿಂಗ ಅಥವಾ ಹಿನ್ನೆಲೆಯನ್ನು ಲೆಕ್ಕಿಸದೆ ಸಮಾನವಾಗಿ ಮತ್ತು ನ್ಯಾಯಯುತವಾಗಿ ಪರಿಗಣಿಸಲಾಗುತ್ತಿದೆ. ಎಲ್‌ಜಿಬಿಟಿಕ್ಯುಐಎ ಸಮುದಾಯದ ಬಗ್ಗೆ ಹೆಚ್ಚು ತಿಳಿದಿಲ್ಲದ ಆದರೆ ಅವರನ್ನು ಸ್ವಾಗತಿಸುವ ಮತ್ತು ಕಲಿಕೆಗೆ ಮುಕ್ತವಾಗಿರುವ ಜನರನ್ನು ನಾನು ಭೇಟಿ ಮಾಡಿದ್ದೇನೆ. ಇದು ನನಗೆ ಬಹಳಷ್ಟು ಸಹಯೋಗಿ ಮಿತ್ರರನ್ನು ಹೊಂದಲು ಮತ್ತು ನನ್ನ ತಂಡದ ಯಶಸ್ಸಿಗೆ ಕೊಡುಗೆ ನೀಡಲು ಸಹಾಯ ಮಾಡಿದೆ ಎಂದರು.

ಟಾಪ್ ನ್ಯೂಸ್

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.