ಮೊಬೈಲ್‌ ಚಂದಾದಾರರು; ಜಿಯೋ-ಏರ್‌ಟೆಲ್‌ ನಡುವೆ ಸ್ಪರ್ಧೆ


Team Udayavani, Sep 29, 2022, 7:45 AM IST

ಮೊಬೈಲ್‌ ಚಂದಾದಾರರು; ಜಿಯೋ-ಏರ್‌ಟೆಲ್‌ ನಡುವೆ ಸ್ಪರ್ಧೆ

ತಂತ್ರಜ್ಞಾನ ಕ್ಷಿಪ್ರಗತಿಯಲ್ಲಿ ದಾಪುಗಾಲಿಡುತ್ತಿರುವಂತೆಯೇ ಟೆಲಿಕಾಂ ಕ್ಷೇತ್ರದಲ್ಲೂ ಮಹತ್ತರ ಬದಲಾವಣೆಗಳಾಗುತ್ತಿವೆ. ವರ್ಷಗಳ ಹಿಂದೆ ಅಂತರ್ಜಾಲದ ಸಂಪರ್ಕ ಜನಸಾಮಾನ್ಯರ ಪಾಲಿಗಂತೂ ಕನಸಿನ ಮಾತಾಗಿತ್ತು. ಇದೀಗ ಎಲ್ಲರ ಕೈಯಲ್ಲೂ ಸ್ಮಾರ್ಟ್‌ ಫೋನ್‌ಗಳು ರಾರಾಜಿಸುತ್ತಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದಾರೆ. ಸದ್ಯ ದೇಶದೆಲ್ಲೆಡೆ 4ಜಿ ಬಳಕೆ ವ್ಯಾಪಕವಾಗಿದ್ದು ಮುಂದಿನ ಮಾಸಾಂತ್ಯಕ್ಕೆ ದೇಶದ ಆಯ್ದ ನಗರಗಳಲ್ಲಿ 5ಜಿ ಸೇವೆ ಆರಂಭಿಸಲು ಕೆಲವು ಟೆಲಿಕಾಂ ಕಂಪೆನಿಗಳು ಭರದ ಸಿದ್ಧತೆಯಲ್ಲಿ ತೊಡಗಿವೆ.

ಈ ಭರಾಟೆಯ ನಡುವೆಯೇ ಟೆಲಿಕಾಂ ಕ್ಷೇತ್ರದಲ್ಲಿ ದಿಗ್ಗಜ ಕಂಪೆನಿಗಳ ನಡುವೆ ಭಾರೀ ಪೈಪೋಟಿ ನಡೆಯುತ್ತಿದ್ದು ದೇಶದ ಟೆಲಿಕಾಂ ವಲಯದ ಮೇಲೆ ಅಧಿಪತ್ಯ ಸ್ಥಾಪಿಸಲು ಜಿದ್ದಾಜಿದ್ದಿಗಿಳಿದಿವೆ. ಸದ್ಯ ದೇಶದಲ್ಲಿ ಜಿಯೋ ಮತ್ತು ಏರ್‌ಟೆಲ್‌ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದ್ದು ರಿಲಯನ್ಸ್‌ ಜಿಯೋ ಪ್ರಾಬಲ್ಯ ಮೆರೆದಿದೆ.

ಟ್ರಾಯ್‌ ವರದಿ
ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ…) ಪ್ರಕಾರ, ಜುಲೈಯಲ್ಲಿ ಜಿಯೋ ತನ್ನ ನೆಟ್‌ವರ್ಕ್‌ಗೆ 29.4 ಲಕ್ಷ ಹೊಸ ಬಳಕೆದಾರರನ್ನು ಸೇರ್ಪಡೆಗೊಳಿಸಿದೆ.

ಇದರೊಂದಿಗೆ ಜಿಯೋ ನೆಟ್‌ವರ್ಕ್‌ ಬಳಕೆದಾರರ ಸಂಖ್ಯೆ 41.59 ಕೋಟಿಗೆ ಏರಿಕೆಯಾಗಿದೆ.

ಇದೇ ವೇಳೆ ಏರ್‌ಟೆಲ್‌ 5.1 ಲಕ್ಷ ಹೊಸ ಬಳಕೆದಾರರನ್ನು ಸೇರ್ಪಡೆ ಗೊಳಿಸಿದ್ದು ಈಗ ಇದರ ಒಟ್ಟಾರೆ ಚಂದಾದಾರರ ಸಂಖ್ಯೆ 36.34 ಕೋಟಿಗೆ ಏರಿದೆ. ಅದೇ ಸಮಯದಲ್ಲಿ, ವೊಡಾಫೋನ್‌ ಐಡಿಯಾದ ಬಳಕೆದಾರರ ಸಂಖ್ಯೆ ನಿರಂತರವಾಗಿ ಕಡಿಮೆಯಾಗುತ್ತಿದೆ. ಜುಲೈಯಲ್ಲಿ 15.4 ಲಕ್ಷ ಬಳಕೆದಾರರು ವೊಡಾಫೋನ್‌-ಐಡಿಯಾ ಕಂಪೆನಿಗೆ ಗುಡ್‌ಬೈ ಹೇಳಿದ್ದಾರೆ. ಇದರೊಂದಿಗೆ ಕಂಪೆನಿಯ ಒಟ್ಟು ಚಂದಾದಾರರ ಸಂಖ್ಯೆ 25.51 ಕೋಟಿಗೆ ಇಳಿಕೆಯಾಗಿದೆ.

114.8 ಕೋಟಿ ಬಳಕೆದಾರರು
ವರದಿಗಳ ಪ್ರಕಾರ, ಜುಲೈ ತಿಂಗಳಲ್ಲಿ ದೇಶದಲ್ಲಿ ಮೊಬೈಲ್‌ ಫೋನ್‌ ಬಳಕೆದಾರರ ಸಂಖ್ಯೆ ಶೇ. 0.06ರಷ್ಟು ಹೆಚ್ಚಾಗಿದೆ. ಪ್ರಸ್ತುತ ದೇಶದಲ್ಲಿ ಸುಮಾರು 114.8 ಕೋಟಿ ಮೊಬೈಲ್‌ ಫೋನ್‌ ಬಳಕೆದಾರರಿದ್ದಾರೆ. ಜೂನ್‌ನಲ್ಲಿ ಇದು 114.7 ಕೋಟಿ ಆಗಿತ್ತು.

ಗ್ರಾಮೀಣ ಭಾಗದಲ್ಲಿ ಇಳಿಕೆ
ನಗರ ಪ್ರದೇಶದಲ್ಲಿ ಮೊಬೈಲ್‌ ಫೋನ್‌ ಬಳಕೆದಾರರ ಸಂಖ್ಯೆ ಹೆಚ್ಚಿದ್ದರೆ, ಗ್ರಾಮೀಣ ಭಾಗದಲ್ಲಿ ಮೊಬೈಲ್‌ ಫೋನ್‌ ಬಳಕೆದಾರರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಜೂನ್‌ಗೆ ಹೋಲಿಸಿದರೆ, ನಗರ ಪ್ರದೇಶಗಳಲ್ಲಿ ಬಳಕೆದಾರರ ಸಂಖ್ಯೆ 6.49 ಕೋಟಿಯಿಂದ 6.50ಕೋಟಿಗೆ ಏರಿದೆ. ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಬಳಕೆದಾರರ ಸಂಖ್ಯೆ 5.24ಕೋಟಿಯಿಂದ 5.23ಕೋಟಿಗೆ ಇಳಿದಿದೆ.

ಅಕ್ಟೋಬರ್‌ನಲ್ಲಿ 5ಜಿ
ಮುಂದಿನ ತಿಂಗಳ ಆರಂಭದಿಂದ 5ಜಿ ಸೇವೆಯನ್ನು ಪ್ರಾರಂಭಿಸುವುದಾಗಿ ರಿಲಯನ್ಸ್‌ ತಿಳಿಸಿದೆ. ಇದೇ ವೇಳೆ ಏರ್‌ಟೆಲ್‌ ಕೂಡ ಅಕ್ಟೋಬರ್‌ನಲ್ಲಿ 5ಜಿ ಸೇವೆಯನ್ನು ಪ್ರಾರಂಭಿಸಲು ಚಿಂತನೆ ನಡೆಸಿದೆ.

ಕಂಪೆನಿ-ಗ್ರಾಹಕರು
– ಜಿಯೋ- 41. 59 ಕೋಟಿ
– ಏರ್‌ಟೆಲ್‌-36.34 ಕೋಟಿ
– ಐಡಿಯಾ-25.51 ಕೋಟಿ

ಮುನ್ನಡೆ ಕಾಯ್ದುಕೊಂಡ ಜಿಯೋ
– ಟೆಲಿಕಾಂ ಮಾರುಕಟ್ಟೆಯಲ್ಲಿ ರಿಲಯನ್ಸ್‌ ಜಿಯೋ ಮಾರುಕಟ್ಟೆ ಪಾಲು ಶೇ.36 ರಿಂದ ಶೇ.36.23ಕ್ಕೆ ಏರಿಕೆಯಾಗಿದೆ.
-ಭಾರ್ತಿ ಏರ್‌ಟೆಲ್‌ನ ಮಾರುಕಟ್ಟೆ ಪಾಲು ಶೇ.31.63 ರಿಂದ ಶೇ.31.66 ಕ್ಕೆ ಏರಿದೆ.
– ವೊಡಾಫೋನ್‌-ಐಡಿಯಾ ಪಾಲು ಶೇ.22.37 ರಿಂದ ಶೇ.22.22 ಕ್ಕೆ ಇಳಿದಿದೆ.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.