ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ


Team Udayavani, Feb 27, 2024, 6:23 PM IST

18

ಬೆಂಗಳೂರು: ಸ್ಮಾರ್ಟ್ ವಾಚ್ ಗಳು ಅನಾರೋಗ್ಯದ ಸೂಚನೆ ನೀಡುವ ಮೂಲಕ ಬಳಕೆದಾರರನ್ನು ಎಚ್ಚರಿಸುವ ಕೆಲಸ ಮಾಡಿ ರೋಗಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿದ ಪ್ರಸಂಗಗಳನ್ನು ಆಗಾಗ ಕೇಳುತ್ತಿರುತ್ತೇವೆ. ಅಂಥದೇ ಪ್ರಕರಣ ಬೆಂಗಳೂರಿನಲ್ಲಿ ನಡೆದಿದ್ದು, ಆಪಲ್ ವಾಚ್ ಮೂಲಕ ಸಹಜಕ್ಕಿಂತ ಹೆಚ್ಚಿನ ಹೃದಯ ಬಡಿತದ ಸೂಚನೆ ಅರಿತ ಬೆಂಗಳೂರಿನ ಟೆಕಿಯೊಬ್ಬರು ಹೃದ್ರೋಗ ತಜ್ಞರಲ್ಲಿ ಪರೀಕ್ಷಿಸಿಕೊಂಡು ಮುಂದಾಗಬಹುದಾಗಿದ್ದ ಅಪಾಯದಿಂದ ಪಾರಾದ ಘಟನೆ ನಡೆದಿದೆ.

ತಮ್ಮ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಆಪಲ್ ವಾಚ್ ಸಹಾಯ ಮಾಡಿದ್ದಕ್ಕಾಗಿ ಆ ಟೆಕಿ, ಆಪಲ್ ಸಿಇಒ ಟಿಮ್ ಕುಕ್ ಅವರಿಗೆ ಇಮೇಲ್ ಮೂಲಕ ಪತ್ರ ಬರೆದು ಕೃತಜ್ಞತೆ ಸಲ್ಲಿಸಿದ್ದಾರೆ.

ಬೆಂಗಳೂರಿನ ಸಾಫ್ಟ್ ವೇರ್ ಡೆವಲಪರ್ 25 ವರ್ಷದ ಶರತ್ ಶ್ರೀರಾಮ್ ಅವರು ಕಳೆದ ವರ್ಷದ ಏಪ್ರಿಲ್ ನಲ್ಲಿ ಟೆಕ್ ಕಂಪೆನಿಯೊಂದಕ್ಕೆ ಸೇರಿಕೊಂಡರು. ತಮ್ಮ ಕೋಡಿಂಗ್ ಕೆಲಸ ಕಾರ್ಯಗಳಲ್ಲಿ ಸದಾ ಬ್ಯುಸಿಯಾಗಿದ್ದರು. ಅಲ್ಲಿನ ಕೆಲಸ ಹೆಚ್ಚು ಒತ್ತಡದಿಂದ ಕೂಡಿತ್ತು. ಅಲ್ಲಿನ ಕೆಲಸದ ವಾತಾವರಣವೂ ಸ್ನೇಹಮಯಿಯಾಗಿರಲಿಲ್ಲ. ಅಕ್ಟೋಬರ್-ನವೆಂಬರ್ನಲ್ಲಿ ನಾವು ಹೊಸ ಪ್ರಾಜೆಕ್ಟ್ ಇದ್ದು, ರಾತ್ರಿ ಮತ್ತು ವಾರಾಂತ್ಯದಲ್ಲೂ ಕೆಲಸ ನಿರ್ವಹಿಸಬೇಕಿತ್ತು. ನವೆಂಬರ್ ತಿಂಗಳಲ್ಲಿ ಅಲ್ಲಿನ ಕೆಲಸ ತುಂಬಾ ಒತ್ತಡ ಮತ್ತು ಅಸಹನೀಯವಾಗಿತ್ತು. ಶರತ್ ಆಪಲ್ ವಾಚ್ 8 ಸರಣಿ ಬಳಸುತ್ತಿದ್ದರು.

ದೀಪಾವಳಿಯ ನಂತರ, ಅವರು ತಮ್ಮ ಆಪಲ್ ವಾಚ್ ನಲ್ಲಿ ಹೆಚ್ಚಿನ ಹೃದಯ ಬಡಿತದ ಸೂಚನೆಗಳನ್ನು ಪಡೆಯಲು ಪ್ರಾರಂಭಿಸಿದರು. ಪ್ರತಿ ಬಾರಿ ಅವರು ಮೀಟಿಂಗ್ ಗಳಿಗೆ ಹೋದಾಗ, ಹೃದಯದ ಬಡಿತ 130 ರಿಂದ 135 ತೋರಿಸುತ್ತಿತ್ತು. ಈ ಸಂದರ್ಭದಲ್ಲಿ ನಾಲ್ಕೈದು ನೋಟಿಫಿಕೇಷನ್ ಬರುತ್ತಿತ್ತು.

ಹೆಚ್ಚಿನ ಹೃದಯ ಬಡಿತದ ಸೂಚನೆಗಳನ್ನು ನೋಡಿ ಹೃದ್ರೋಗ ತಜ್ಞರನ್ನು ಭೇಟಿಯಾದ ಶರತ್ ಅವರಿಗೆ ವೈದ್ಯರು ಪರೀಕ್ಷೆ ಮಾಡಿದರು. ವಿಶ್ರಾಂತಿ ಸಂದರ್ಭದಲ್ಲೂ ಅವರ ಹೃದಯ ಬಡಿತ ಹೆಚ್ಚಿತ್ತು. ಸೂಕ್ತ ಸಮಯಕ್ಕೆ ಬಂದು ಪರೀಕ್ಷೆ ಮಾಡಿಸಿದ್ದೀರಿ. ಈಗಲೇ ನೀವು ಎಚ್ಚೆತ್ತುಕೊಂಡು ಜೀವನ ಶೈಲಿಯಲ್ಲಿ ಬದಲಾವಣೆ, ಒತ್ತಡ ಮುಕ್ತ ಜೀವನ ಶೈಲಿ ರೂಢಿಸಿಕೊಳ್ಳಬೇಕು ಇಲ್ಲವಾದರೆ ದೀರ್ಘಾವಧಿಯಲ್ಲಿ ಕಾಯಿಲೆ ಉಂಟಾಗಬಹುದೆಂದು ಸಲಹೆ ನೀಡಿದರು.

ಆಪಲ್ ವಾಚ್ನಲ್ಲಿರುವ ಆಪ್ಟಿಕಲ್ ಹಾರ್ಟ್ ಸೆನ್ಸರ್ ಫೋಟೊಪ್ಲೆಥಿಸ್ಮೋಗ್ರಫಿ ಎಂಬ ತಂತ್ರಜ್ಞಾನ ಹೊಂದಿದ್ದು, ಹೃದಯ ಸಂವೇದಕವು ಪ್ರತಿ ನಿಮಿಷಕ್ಕೆ 30 ರಿಂದ 210 ರವರೆಗಿನ ಬಡಿತಗಳವರೆಗೂ ಕೆಲಸ ನಿರ್ವಹಿಸುತ್ತದೆ.

ವೈದ್ಯರ ಸಲಹೆಯಿಂದ ಎಚ್ಚೆತ್ತ ಶರತ್ ಅವರು ತಾವಿದ್ದ ಕಂಪನಿಯಲ್ಲಿ ಮುಂದುವರಿಯುವುದು ಯೋಗ್ಯವಲ್ಲ ಎಂದು ನಿರ್ಧರಿಸಿ, ಹೊಸ ಕಂಪನಿ ಸೇರಿದರು.

“ಹಳೆಯ ಕಂಪೆನಿ ಬಿಟ್ಟ ಒಂದು ವಾರಕ್ಕೇ ನನ್ನ ವಿಶ್ರಾಂತಿ ಸಂದರ್ಭದ ಹೃದಯ ಬಡಿತ 71 ಕ್ಕೆ ಇಳಿಯಿತು! ಮಾನಸಿಕ ಆರೋಗ್ಯದ ಮಹತ್ವವನ್ನು ಅರಿತುಕೊಂಡ ಕಾರಣ ನಾನು ಟಿಮ್ ಕುಕ್ (ಆಪಲ್ ಸಿಇಒ) ಅವರಿಗೆ ಇಮೇಲ್ ಬರೆದಿದ್ದೇನೆ. ನಾನು ಆಪಲ್ ವಾಚ್ ರೀಡಿಂಗ್ಗಳನ್ನು ಅನುಸರಿಸದಿದ್ದರೆ ಮತ್ತು ವೈದ್ಯರ ಬಳಿಗೆ ಹೋಗದಿದ್ದರೆ, ನನ್ನ ಆರೋಗ್ಯ, ಹದಗೆಡುತ್ತಿತ್ತು. ಕೆಲವು ತಿಂಗಳುಗಳಲ್ಲಿ ಇತರ ಗಂಭೀರ ಸಮಸ್ಯೆಗಳು ಉಂಟಾಗುತ್ತಿದ್ದವು” ಎಂದು ಶರತ್ ಹೇಳುತ್ತಾರೆ.

ಟಾಪ್ ನ್ಯೂಸ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.