ಬ್ಯಾಟಲ್‌ಗ್ರೌಂಡ್ಸ್‌ ಮೊಬೈಲ್‌ ಇಂಡಿಯಾ ಇಸ್ಪೋರ್ಟ್ಸ್‌ 2022 ವೇಳಾಪಟ್ಟಿ ಪ್ರಕಟ


Team Udayavani, Feb 19, 2022, 5:35 PM IST

25BGMI

ಬೆಂಗಳೂರು: ದಕ್ಷಿಣ ಕೊರಿಯಾದ ವಿಡಿಯೋ ಗೇಮ್‌ ಕಂಪನಿಯಾದ ಕ್ರಾಫ್ಟನ್‌, ಐಎನ್‌ಸಿ ಮತ್ತು ಬ್ಯಾಟಲ್‌ ಗ್ರೌಂಡ್ಸ್‌ ಮೊಬೈಲ್‌ ಇಂಡಿಯಾ (ಬಿಜಿಎಂಐ) ತಯಾರಕರು ತನ್ನ ಇಸ್ಪೋರ್ಟ್ಸ್‌ 2022 ಭಾರತದ ರೋಡ್‌ಮ್ಯಾಪ್‌ ಬಿಡುಗಡೆಗೊಳಿಸಿದೆ.

ಬಿಜಿಎಂಐನ ರೋಡ್‌ಮ್ಯಾಪ್‌, 2022ರಲ್ಲಿ ನಾಲ್ಕು ಆಕರ್ಷಕ ಪಂದ್ಯಾವಳಿಗಳು, 4 ಕೋಟಿ ರೂ.ಗಳ ನಗದು ಪುರಸ್ಕಾರ, ಮೆಗಾ ಪ್ರಶಸ್ತಿಗಳು ಮತ್ತು ಕ್ರೀಡಾ ಗೇಮರ್‌ಗಳಿಗೆ ತಮ್ಮ ಗುರುತು ಮೂಡಿಸಲು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಅವಕಾಶಗಳನ್ನು ಕಲ್ಪಿಸಲಿದೆ.

ಬ್ಯಾಟಲ್‌ಗ್ರೌಂಡ್ಸ್‌ ಮೊಬೈಲ್‌ ಓಪನ್‌ ಚಾಲೆಂಜ್‌ (ಬಿಎಂಒಸಿ)ಯೊಂದಿಗೆ ಆರಂಭಿಸಿ, ಕ್ರಾಫ್ಟಾನ್‌ ಐಎನ್‌ಸಿ, 2022ರಲ್ಲಿ ಬಿಜಿಎಂಐಗಾಗಿ ನಾಲ್ಕು ಇಸ್ಪೋರ್ಟ್ಸ್‌ ಟೂರ್ನಮೆಂಟ್‌ಗಳನ್ನು ಹಮ್ಮಿಕೊಳ್ಳಲಿದೆ. ಈಗಾಗಲೇ ಬಿಜಿಎಂಐ 6 ಲಕ್ಷಕ್ಕೂ ಹೆಚ್ಚು ನೋಂದಣಿ, 200 ಮಿಲಿಯನ್‌ಗೂ ಹೆಚ್ಚು ವೀಕ್ಷಣೆ ಹೊಂದಿದೆ.

ಕಳೆದ ವರ್ಷ ಅದರ ಅತ್ಯುತ್ತಮ ಪ್ರದರ್ಶನದ ನಂತರ, ಬ್ಯಾಟಲ್‌ಗ್ರೌಂಡ್ಸ್ ಮೊಬೈಲ್ ಇಂಡಿಯಾ (ಬಿಜಿಎಂಐ) ಈಗ ತನ್ನ ವ್ಯಾಪ್ತಿ ವಿಸ್ತರಿಸಲು ಮುಂದಾಗಿದೆ.

2022 ರಲ್ಲಿ, BGMI ನಾಲ್ಕು ಪ್ರಮುಖ ಪಂದ್ಯಾವಳಿಗಳು

  • ಬಿಎಂಒಸಿ – ಬ್ಯಾಟಲ್‌ಗ್ರೌಂಡ್ಸ್ ಮೊಬೈಲ್ ಓಪನ್ ಚಾಲೆಂಜ್
  • ಬಿಎಂಪಿಎಸ್‌ – ಬ್ಯಾಟಲ್‌ಗ್ರೌಂಡ್ಸ್ ಮೊಬೈಲ್ ಪ್ರೊ ಸೀರೀಸ್ ಸೀಸನ್ 1
  • ಬಿಎಂಐಎಸ್‌ – ಬ್ಯಾಟಲ್‌ಗ್ರೌಂಡ್ಸ್ ಮೊಬೈಲ್ ಇಂಡಿಯಾ ಸೀರೀಸ್
  • BMPS – ಬ್ಯಾಟಲ್‌ಗ್ರೌಂಡ್ಸ್ ಮೊಬೈಲ್ ಪ್ರೊ ಸೀರೀಸ್ ಸೀಸನ್ 2

2022 ರ ಮಾರ್ಗಸೂಚಿಯ ಕುರಿತು ಪ್ರತಿಕ್ರಿಯಿಸಿದ, ಬ್ಯಾಟಲ್‌ಗ್ರೌಂಡ್ಸ್ ಮೊಬೈಲ್ ಇಂಡಿಯಾ, ಕ್ರಾಫ್ಟನ್‌, ಐಎನ್‌ಸಿಯ ಮುಖ್ಯಸ್ಥ ಮಿನು ಲೀ, ” ಭಾರತದಲ್ಲಿ ಇಸ್ಪೋರ್ಟ್ಸ್ ಅಭಿವೃದ್ಧಿಗೆ ಕ್ರಾಫ್ಟನ್‌ ಬದ್ಧವಾಗಿದೆ, 2022 ರಲ್ಲಿ, ನಾವು ಹಲವು ವಲಯಗಳಲ್ಲಿ ಆಟಗಾರರಿಗೆ ವೇದಿಕೆಯನ್ನು ಒದಗಿಸಲಿದ್ದೇವೆ. ಭಾರತದಲ್ಲಿ ಹೆಚ್ಚು ಹೆಚ್ಚು ಪ್ರತಿಭೆಗಳನ್ನು ಹೊರತರುವುದು ನಮ್ಮ ಗುರಿ. ಮತ್ತು ದೇಶದಲ್ಲಿ ಬೆಳೆಯುತ್ತಿರುವ ಇಸ್ಪೋರ್ಟ್ಸ್ ವ್ಯವಸ್ಥೆಯಡಿ ಪಂದ್ಯಾವಳಿಗಳನ್ನು ಆಯೋಜಿಸಲು ನಾವು ಎದುರು ನೋಡುತ್ತಿದ್ದೇವೆ.  ಆಟಗಾರರು ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು ಮತ್ತು ಬಳಸಿಕೊಳ್ಳಲು ಜಾಗತಿಕ ವೇದಿಕೆಯನ್ನು ನಾವು ಒದಗಿಸಲಿದ್ದೇವೆ” ಎಂದರು.

2022ರಲ್ಲಿ ಬ್ಯಾಟಲ್‌ಗ್ರೌಂಡ್ಸ್ ಮೊಬೈಲ್ ಓಪನ್ ಚಾಲೆಂಜ್ (BMOC) ಗಾಗಿ ನೋಂದಣಿಗಳು ಫೆಬ್ರವರಿ 2022 ರ ಕೊನೆಯಲ್ಲಿ ಪ್ರಾರಂಭವಾಗುತ್ತವೆ ಮತ್ತು ಮಾರ್ಚ್ ಅಂತ್ಯದಲ್ಲಿ ಪಂದ್ಯದ ಅರ್ಹತಾ ಪಂದ್ಯಗಳು ನಡೆಯುತ್ತವೆ. ಬ್ಯಾಟಲ್‌ಗ್ರೌಂಡ್ಸ್ ಮೊಬೈಲ್ ಪ್ರೊ ಸೀರೀಸ್ ಸೀಸನ್ 1 ಮತ್ತು ಸೀಸನ್ 2 ಗಾಗಿ  2 ಕೋಟಿ ರೂ. ಬಹುಮಾನ ಘೋಷಿಸಲಾಗಿದೆ. ಇದು ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಸರಣಿಯಲ್ಲೂ ಮುಂದುವರಿಯುತ್ತದೆ. 2 ಕೋಟಿ ಮೊತ್ತದ ಬಹುಮಾನದ ಭಾರತದಲ್ಲಿ ಇಸ್ಪೋರ್ಟ್ಸ್ ಈವೆಂಟ್‌ಗಾಗಿ ಅತಿದೊಡ್ಡ ಬಹುಮಾನವಾಗಿರಲಿದೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.