ಹೊಸ ಅವತಾರದಲ್ಲಿ ಲಗ್ಗೆಯಿಡುತ್ತಿದೆ ಪಬ್ ಜಿ: ಗೇಮ್ ಆಡಲು ಈ ನಿಯಮಗಳನ್ನು ಪಾಲಿಸಲೇಬೇಕು !


Team Udayavani, May 7, 2021, 10:00 PM IST

battele-ground

ಬೆಂಗಳೂರು:  ಗೇಮಿಂಗ್ ಪ್ರಿಯರಿಗೆ ಸಂತಸದ ವಿಚಾರವೊಂದು ಹೊರಬಿದ್ದಿದ್ದು ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಎಂಬ ಹೆಸರಿನಲ್ಲಿ ದೇಸಿ ಅವತಾರದ ಪಬ್ ಜಿ ಗೇಮ್ ಭಾರತಕ್ಕೆ ಲಗ್ಗೆಯಿಡುತ್ತಿದೆ. ದಕ್ಷಿಣ ಕೊರಿಯಾ ಮೂಲದ ಕ್ರಾಫ್ಟನ್ ಸಂಸ್ಥೆಯು ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಶೀಘ್ರದಲ್ಲಿ ಅತ್ಯುನ್ನತ ಗುಣಮಟ್ಟದೊಂದಿಗೆ ಹೊಸ ಮಾದರಿಯ ಪಬ್ ಜಿ ಬಳಕೆದಾರರನ್ನು ತಲುಪಲಿದೆ ಎಂದು ತಿಳಿಸಿದೆ.

ಗಮನಿಸಬೇಕಾದ ಅಂಶವೆಂದರೇ ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಎಂಬ ಹೆಸರಿನಲ್ಲಿ ಈಗಾಗಲೇ ವೆಬ್ ಸೈಟ್ ಒಂದು ಆರಂಭವಾಗಿದ್ದು, ಹೊಸ ಗೇಮ್ ನಲ್ಲಿ ಹಲವು ಬದಲಾವಣೆಗಳಿರಲಿವೆ ಎಂದು ತಿಳಿಸಿದೆ. ಸಂಸ್ಥೆಯ ಸುರಕ್ಷತಾ ನೀತಿಯ ಅನುಸಾರ “18 ವರ್ಷಕ್ಕಿಂತ ಕೆಳಗಿನವರು ಈ ಗೇಮ್ ಆಡಲು ಪೋಷಕರ ಅನುಮತಿ ಕಡ್ಡಾಯವಾಗಿ ಪಡೆದುಕೊಳ್ಳುವುದು ಅಗತ್ಯವಾಗಿದೆ”

ಕ್ರಾಫ್ಟನ್ ಸಂಸ್ಥೆಯ ಪ್ರಕಾರ “18 ವರ್ಷಕ್ಕಿಂತ ಕೆಳಗಿನವರು ಈ ಗೇಮ್ ಆಡಬೇಕಾದರೇ ಪೋಷಕರ ಅನುಮತಿ ಪಡೆಯಬೇಕಾಗುತ್ತದೆ. ಇದಕ್ಕಾಗಿ ಪೋಷಕರ ಮೊಬೈಲ್ ನಂಬರ್ ಅನ್ನು ಕಡ್ಡಾಯವಾಗಿ ನಮೂದಿಸಬೇಕಾಗುತ್ತದೆ. ಸೈನ್ ಇನ್ ಆದ ನಂತರವಷ್ಟೇ ಬ್ಯಾಟಲ್ ಗ್ರೌಂಡ್ಸ್ ಆಡಲು ಅವಕಾಶ ಕಲ್ಪಿಸಲಾಗುವುದು. ಅದಾಗ್ಯೂ ಈ ಹೊಸ ಫೀಚರ್ ನಲ್ಲಿ ಹಲವು ಸಮಸ್ಯೆಗಳು ಕಂಡುಬರುತಿದ್ದು, ಪರಿಹಾರವಾದ ನಂತರ ಗೇಮ್ ಅನ್ನು ಬಿಡುಗಡೆಗೊಳಿಸಲಾಗುವುದು ಎಂದು ತಿಳಿಸಿದೆ.

ಇದನ್ನೂ ಓದಿ:  ಗಂಟೆಗೆ 28,968 ಕಿಮೀ ವೇಗದಲ್ಲಿ ಭೂಮಿಗೆ ಹಿಂತಿರುಗಲಿದೆ ಚೀನಿ ರಾಕೆಟ್ ಲಾಂಗ್ ಮಾರ್ಚ್..!?

ಇಂದು 18 ವರ್ಷ ಕೆಳಗಿನವರೂ ಕೂಡ ಪ್ರತ್ಯೇಕವಾದ ಮೊಬೈಲ್ ನಂಬರ್ ಅನ್ನು ಹೊಂದಿರುತ್ತಾರೆ. ಹೀಗಾಗಿ ಈ ಗೇಮಿಂಗ್ ಆಡಲೆಂದೇ ಕೆಲವೊಂದು ಜಾಣ್ಮೆಗಳನ್ನು ಪ್ರದರ್ಶಿಸುತ್ತಾರೆ. ಈ ಎಲ್ಲಾ ಆಂಶಗಳನ್ನು ಗಮನದಲ್ಲಿಟ್ಟುಕೊಂಡು ವೇರಿಫಿಕೇಶನ್ ತಂತ್ರಜ್ಞಾನವನ್ನು ರೂಪಿಸಲಾಗುತ್ತಿದೆ ಎಂದು ಕ್ರಾಫ್ಟನ್ ತಿಳಿಸಿದೆ. ಇದರ ಜೊತೆಗೆ 18 ವರ್ಷ ಕೆಳಗಿನವರಿಗೆ ಈ ಗೇಮ್ ಅನ್ನು ದಿನದಲ್ಲಿ ಇಂತಿಷ್ಟೇ ಗಂಟೆ ಮಾತ್ರ ಆಡಬೇಕೆಂಬ ನಿಯಮವನ್ನೂ ಕೂಡ ರೂಪಿಸಲಾಗುತ್ತಿದೆ ಎಂದು ವರದಿಯಾಗಿದೆ,

ಕಳೆದ ವರ್ಷ ಭಾರತದಲ್ಲಿ ಪಬ್ ಜಿ ಸೇರಿದಂತೆ ನೂರಕ್ಕೂ ಅಧಿಕ ಆ್ಯಪ್ ಗಳನ್ನು ನಿಷೇಧ ಮಾಡಲಾಗಿತ್ತು. ತದನಂತರದಲ್ಲಿ ಹಲವು ದೇಸಿ ಆ್ಯಪ್ ಗಳು ಮುನ್ನಲೆಗೆ ಬಂದಿದ್ದವು. ಇದೀಗ ಬ್ಯಾಟಲ್ ಗ್ರೌಂಡ್ಸ್ ಇಂಡಿಯಾ ಕೂಡ ಹಲವು ಸುಧಾರಿತ ತಂತ್ರಜ್ಞಾನಗಳು, ವಿಶೇಷ ಇನ್ ಗೇಮ್ ಇವೆಂಟ್ ಗಳು, ಡೇಟಾ ಗೌಪ್ಯತಾ ಅಂಶಗಳನ್ನು ಒಳಗೊಂಡು ಭಾರತದಲ್ಲಿ ಲಗ್ಗೆಯಿಡುತ್ತಿದೆ.

ಇದನ್ನೂ ಓದಿ:   ಡಿಜಿಲಾಕರ್ ಬಳಸಿ, ನಿಮ್ಮ ಎಲ್ಲಾ ದಾಖಲೆಪತ್ರಗಳನ್ನು ಸುರಕ್ಷಿತವಾಗಿರಿಸಿ

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.