ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಟ್ಟ ಬೆನೆಲ್ಲಿ ಡಾಂಗ್ ಎಲೆಕ್ಟ್ರಿಕ್ ಸ್ಕೂಟರ್


Team Udayavani, May 8, 2021, 1:47 PM IST

gyuyjgjghjh

ಪ್ರಸ್ತುತ ದಿನಗಳಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕಲ್ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಇ-ಕಾರು ಹಾಗೂ ಸ್ಕೂಟರ್ ಗಳು ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ. ಇದೀಗ ಬೆನೆಲ್ಲಿ ಕಂಪನಿ ಕೂಡ ತನ್ನ ಹೊಚ್ಚ ಹೊಸ ಎಲೆಕ್ಟ್ರಿಕಲ್ ಸ್ಕೂಟರ್ ಲಾಂಚ್ ಮಾಡಿದೆ.

ಇತ್ತೀಚಿಗೆ ಇಂಡೋನೇಷಿಯಾ ಮಾರುಕಟ್ಟೆಗೆ ಈ ಸ್ಕೂಟರ್ ಪರಿಚಯಿಸಲಾಗಿದೆ. ಅಲ್ಲಿ ಇದರ ಆನ್‌ರೋಡ್‌ ಬೆಲೆ 36,800,000 ರೂ. ಇದು ಭಾರತೀಯ ಕರೆನ್ಸಿಯಲ್ಲಿ ಸುಮಾರು 1.90 ಲಕ್ಷ ರೂ ಮೌಲ್ಯವನ್ನು ಹೊಂದಿದೆ. ಇ-ಸ್ಕೂಟರ್ ಅನ್ನು ಬೆನೆಲ್ಲಿ ಚೀನಿ ಮೂಲ ಕಂಪನಿ ಕಿಯಾಂಜಿಯಾಂಗ್ ಗ್ರೂಪ್ ಅಭಿವೃದ್ಧಿಪಡಿಸಿದೆ.

ಪುಟ್ಟ ಆಕಾರದ ಡಾಂಗ್ ಸ್ಕೂಟರ್ ತನ್ನ ವಿಭಿನ್ನ ಲುಕ್‌ನಿಂದಲೇ ಗಮನ ಸೆಳೆಯುತ್ತದೆ. ಅಲ್ಲದೇ ಅತ್ಯಂತ ಕೈಗೆಟಕುವ ರೀತಿಯಲ್ಲಿ ಇ-ಸ್ಕೂಟರ್ ವಿನ್ಯಾಸ ಮಾಡಲಾಗಿದೆ. ಈ ಡಾಂಗ್ ಇ-ಸ್ಕೂಟರ್ ನ ಹಿಂಭಾಗವು ತೇಲುವ ರೀತಿಯಲ್ಲಿದೆ. ಅಲ್ಯೂಮಿನಿಯಂ ಚೌಕಟ್ಟಿನಿಂದ ಮಧ್ಯದ ಭಾಗ ಹೊಂದಿಕೊಂಡಿದೆ. ಇದೇ ಚೌಕಟ್ಟು ಸ್ವಿಂಗ್ ಆರ್ಮ್ ಅನ್ನು ಹಿಂಬದಿಯ ಚಕ್ರ ಹಾಗೂ ಹಬ್ ಮೌಂಟೆಡ್ ಮೋಟಾರಿಗೆ ಕನೆಕ್ಟ್‌ ಮಾಡುತ್ತದೆ. ಈ ಡಾಂಗ್ ಎಲೆಕ್ಟ್ರಿಕಲ್ ಸ್ಕೂಟರ್ ಸಿಲಿಂಡರಿನ ಆಕಾರದಲ್ಲಿದ್ದು, ಬ್ಯಾಟರಿ ಮತ್ತು ಮೋಟಾರ್ ಒಳಗೊಂಡಿರುವ ಅಂಡರ್ ಸೀಟ್ ಪ್ಯಾನಲ್‌ನ ವೈಶಿಷ್ಟ್ಯತೆಯೊಂದಿಗೆ ಕೂಡಿದೆ.

ನಯವಾದ ಮತ್ತು ಆಕರ್ಷಕವಾದ ಮುಂಭಾಗದ ವಿನ್ಯಾಸವಿದ್ದು, ಡಾಂಗ್‌ನ ಸೌಂದರ್ಯವನ್ನು ಅದ್ಭುತಗೊಳಿಸಿದೆ. ಅಲ್ಲದೇ ಹೆಡ್‌ ಲ್ಯಾಂಪ್‌ನಲ್ಲಿ ಎಲ್‌ಇಡಿ ಲೈಟಿಂಗ್ ಹೊಂದಿದೆ. ಯುವ ಮನಸ್ಸುಗಳ ಜೊತೆಗೆ ಹೊಂದಿಕೊಳ್ಳುವಂತಹ ಫಂಕಿ ಥೀಮ್‌ ಅನುಗುಣವಾಗಿಟ್ಟುಕೊಂಡು ಎಲ್‌ಇಡಿ ವಿನ್ಯಾಸ ಮಾಡಲಾಗಿದೆ. ಆ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ.

ಮೂರು ಬಣ್ಣಗಳಲ್ಲಿ ಲಭ್ಯ :

ಡಾಂಗ್ ಇ-ಸ್ಕೂಟರ್ ನೀಲಿ, ಗಾಢವಾದ ಬೂದು ಮತ್ತು ಬಿಳಿ ಎಂಬ ಮೂರು ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ. ಡಾಂಗ್ 1.2 ಕಿಲೋವ್ಯಾಟ್ ಮೋಟಾರ್‌ನಿಂದ ನಿಯಂತ್ರಿಸಲ್ಪಡುತ್ತದೆ. ಗಂಟೆಗೆ 45 ಕಿ.ಮೀ ವೇಗವನ್ನು ಹೊಂದಿದ್ದು, ಇದು ಕೃತಕ ಧ್ವನಿ ವೈಶಿಷ್ಟ್ಯವನ್ನು ಒಳಗೊಂಡಿರುವುದು ಮತ್ತೊಂದು ವಿಶೇಷ. ಸಂಪೂರ್ಣವಾಗಿ ಒಮ್ಮೆ ಚಾರ್ಜ್ ಮಾಡಿದರೆ 1.56 ಕಿಲೋವ್ಯಾಟ್ ಲಿಥಿಯಂ ಐಯಾನ್ ಬ್ಯಾಟರಿ ಸಾಮಾರ್ಥ್ಯವಿರುವುದರಿಂದ 60 ಕಿ.ಮೀವರೆಗೆ ಪ್ರಯಾಣಿಸಬಹುದು.

ಭಾರತಕ್ಕೆ ಯಾವಾಗ :

ಹಲವಾರು ವರದಿಗಳ ಪ್ರಕಾರ ಡಾಂಗ್ ಇ – ಸ್ಕೂಟರ್ ವಿಶೇಷವಾಗಿ ಏಷ್ಯಾ ಮಾರುಕಟ್ಟೆಗೆ ಅನುಗುಣವಾಗಿ ವಿನ್ಯಾಸ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಭಾರತದ ಮಾರುಕಟ್ಟೆಗೂ ಇ-ಸ್ಕೂಟರ್ ಬರಬಹುದು, ಆದರೆ ಈ ಬಗ್ಗೆ ಇನ್ನೂ ದೃಢೀಕರಿಸಿಲ್ಲ. 2019 ರಲ್ಲಿ ಬೆನೆಲ್ಲಿಯ ಭಾರತದ ವ್ಯವಸ್ಥಾಪಕ ನಿರ್ದೇಶಕರು 2022ರಷ್ಟರಲ್ಲಿ ಭಾರತದಲ್ಲೂ ಎಲೆಕ್ಟ್ರಿಕ್ ದ್ವಿಚಕ್ರ ವಾಹನವನ್ನು ತರುವ ಯೋಜನೆಗಳನ್ನು ಬಹಿರಂಗಪಡಿಸಿತ್ತು.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.