ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಟ್ಟ ಬೆನೆಲ್ಲಿ ಡಾಂಗ್ ಎಲೆಕ್ಟ್ರಿಕ್ ಸ್ಕೂಟರ್


Team Udayavani, May 8, 2021, 1:47 PM IST

gyuyjgjghjh

ಪ್ರಸ್ತುತ ದಿನಗಳಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕಲ್ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಇ-ಕಾರು ಹಾಗೂ ಸ್ಕೂಟರ್ ಗಳು ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ. ಇದೀಗ ಬೆನೆಲ್ಲಿ ಕಂಪನಿ ಕೂಡ ತನ್ನ ಹೊಚ್ಚ ಹೊಸ ಎಲೆಕ್ಟ್ರಿಕಲ್ ಸ್ಕೂಟರ್ ಲಾಂಚ್ ಮಾಡಿದೆ.

ಇತ್ತೀಚಿಗೆ ಇಂಡೋನೇಷಿಯಾ ಮಾರುಕಟ್ಟೆಗೆ ಈ ಸ್ಕೂಟರ್ ಪರಿಚಯಿಸಲಾಗಿದೆ. ಅಲ್ಲಿ ಇದರ ಆನ್‌ರೋಡ್‌ ಬೆಲೆ 36,800,000 ರೂ. ಇದು ಭಾರತೀಯ ಕರೆನ್ಸಿಯಲ್ಲಿ ಸುಮಾರು 1.90 ಲಕ್ಷ ರೂ ಮೌಲ್ಯವನ್ನು ಹೊಂದಿದೆ. ಇ-ಸ್ಕೂಟರ್ ಅನ್ನು ಬೆನೆಲ್ಲಿ ಚೀನಿ ಮೂಲ ಕಂಪನಿ ಕಿಯಾಂಜಿಯಾಂಗ್ ಗ್ರೂಪ್ ಅಭಿವೃದ್ಧಿಪಡಿಸಿದೆ.

ಪುಟ್ಟ ಆಕಾರದ ಡಾಂಗ್ ಸ್ಕೂಟರ್ ತನ್ನ ವಿಭಿನ್ನ ಲುಕ್‌ನಿಂದಲೇ ಗಮನ ಸೆಳೆಯುತ್ತದೆ. ಅಲ್ಲದೇ ಅತ್ಯಂತ ಕೈಗೆಟಕುವ ರೀತಿಯಲ್ಲಿ ಇ-ಸ್ಕೂಟರ್ ವಿನ್ಯಾಸ ಮಾಡಲಾಗಿದೆ. ಈ ಡಾಂಗ್ ಇ-ಸ್ಕೂಟರ್ ನ ಹಿಂಭಾಗವು ತೇಲುವ ರೀತಿಯಲ್ಲಿದೆ. ಅಲ್ಯೂಮಿನಿಯಂ ಚೌಕಟ್ಟಿನಿಂದ ಮಧ್ಯದ ಭಾಗ ಹೊಂದಿಕೊಂಡಿದೆ. ಇದೇ ಚೌಕಟ್ಟು ಸ್ವಿಂಗ್ ಆರ್ಮ್ ಅನ್ನು ಹಿಂಬದಿಯ ಚಕ್ರ ಹಾಗೂ ಹಬ್ ಮೌಂಟೆಡ್ ಮೋಟಾರಿಗೆ ಕನೆಕ್ಟ್‌ ಮಾಡುತ್ತದೆ. ಈ ಡಾಂಗ್ ಎಲೆಕ್ಟ್ರಿಕಲ್ ಸ್ಕೂಟರ್ ಸಿಲಿಂಡರಿನ ಆಕಾರದಲ್ಲಿದ್ದು, ಬ್ಯಾಟರಿ ಮತ್ತು ಮೋಟಾರ್ ಒಳಗೊಂಡಿರುವ ಅಂಡರ್ ಸೀಟ್ ಪ್ಯಾನಲ್‌ನ ವೈಶಿಷ್ಟ್ಯತೆಯೊಂದಿಗೆ ಕೂಡಿದೆ.

ನಯವಾದ ಮತ್ತು ಆಕರ್ಷಕವಾದ ಮುಂಭಾಗದ ವಿನ್ಯಾಸವಿದ್ದು, ಡಾಂಗ್‌ನ ಸೌಂದರ್ಯವನ್ನು ಅದ್ಭುತಗೊಳಿಸಿದೆ. ಅಲ್ಲದೇ ಹೆಡ್‌ ಲ್ಯಾಂಪ್‌ನಲ್ಲಿ ಎಲ್‌ಇಡಿ ಲೈಟಿಂಗ್ ಹೊಂದಿದೆ. ಯುವ ಮನಸ್ಸುಗಳ ಜೊತೆಗೆ ಹೊಂದಿಕೊಳ್ಳುವಂತಹ ಫಂಕಿ ಥೀಮ್‌ ಅನುಗುಣವಾಗಿಟ್ಟುಕೊಂಡು ಎಲ್‌ಇಡಿ ವಿನ್ಯಾಸ ಮಾಡಲಾಗಿದೆ. ಆ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ.

ಮೂರು ಬಣ್ಣಗಳಲ್ಲಿ ಲಭ್ಯ :

ಡಾಂಗ್ ಇ-ಸ್ಕೂಟರ್ ನೀಲಿ, ಗಾಢವಾದ ಬೂದು ಮತ್ತು ಬಿಳಿ ಎಂಬ ಮೂರು ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ. ಡಾಂಗ್ 1.2 ಕಿಲೋವ್ಯಾಟ್ ಮೋಟಾರ್‌ನಿಂದ ನಿಯಂತ್ರಿಸಲ್ಪಡುತ್ತದೆ. ಗಂಟೆಗೆ 45 ಕಿ.ಮೀ ವೇಗವನ್ನು ಹೊಂದಿದ್ದು, ಇದು ಕೃತಕ ಧ್ವನಿ ವೈಶಿಷ್ಟ್ಯವನ್ನು ಒಳಗೊಂಡಿರುವುದು ಮತ್ತೊಂದು ವಿಶೇಷ. ಸಂಪೂರ್ಣವಾಗಿ ಒಮ್ಮೆ ಚಾರ್ಜ್ ಮಾಡಿದರೆ 1.56 ಕಿಲೋವ್ಯಾಟ್ ಲಿಥಿಯಂ ಐಯಾನ್ ಬ್ಯಾಟರಿ ಸಾಮಾರ್ಥ್ಯವಿರುವುದರಿಂದ 60 ಕಿ.ಮೀವರೆಗೆ ಪ್ರಯಾಣಿಸಬಹುದು.

ಭಾರತಕ್ಕೆ ಯಾವಾಗ :

ಹಲವಾರು ವರದಿಗಳ ಪ್ರಕಾರ ಡಾಂಗ್ ಇ – ಸ್ಕೂಟರ್ ವಿಶೇಷವಾಗಿ ಏಷ್ಯಾ ಮಾರುಕಟ್ಟೆಗೆ ಅನುಗುಣವಾಗಿ ವಿನ್ಯಾಸ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಭಾರತದ ಮಾರುಕಟ್ಟೆಗೂ ಇ-ಸ್ಕೂಟರ್ ಬರಬಹುದು, ಆದರೆ ಈ ಬಗ್ಗೆ ಇನ್ನೂ ದೃಢೀಕರಿಸಿಲ್ಲ. 2019 ರಲ್ಲಿ ಬೆನೆಲ್ಲಿಯ ಭಾರತದ ವ್ಯವಸ್ಥಾಪಕ ನಿರ್ದೇಶಕರು 2022ರಷ್ಟರಲ್ಲಿ ಭಾರತದಲ್ಲೂ ಎಲೆಕ್ಟ್ರಿಕ್ ದ್ವಿಚಕ್ರ ವಾಹನವನ್ನು ತರುವ ಯೋಜನೆಗಳನ್ನು ಬಹಿರಂಗಪಡಿಸಿತ್ತು.

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.