ಗ್ರಾಹಕರಿಗೆ ಗಣರಾಜ್ಯೋತ್ಸವದ ಗಿಫ್ಟ್ ನೀಡಿದ ಬಿ ಎಸ್ ಎನ್ ಎಲ್

ತನ್ನ ಎರಡು ದೀರ್ಘಾವಧಿಯ ಯೋಜನೆಗಳ ಸಿಂಧುತ್ವವನ್ನು ಹೆಚ್ಚಿಸಿದೆ ಬಿ ಎಸ್ ಎನ್ ಎಲ್

Team Udayavani, Jan 23, 2021, 2:14 PM IST

BSNL’s Republic Day 2021 gift to customers – big discounts on prepaid plans, check details

ನವದೆಹಲಿ: ಸರ್ಕಾರಿ ಸ್ವಾಮ್ಯದ ಟೆಲಿ ಕಾಮ್ ಕಂಪನಿ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್ ಎನ್ ಎಲ್) ಗಣರಾಜ್ಯೋತ್ಸವದ ಸಂದರ್ಭದಲ್ಲಿ ತನ್ನ ಗ್ರಾಹಕರಿಗೆ ಈ ದೊಡ್ಡ ಉಡುಗೊರೆಯನ್ನು ನೀಡುತ್ತಿದೆ.

ತನ್ನ ಎರಡು ದೀರ್ಘಾವಧಿಯ ಯೋಜನೆಗಳ ಸಿಂಧುತ್ವವನ್ನು ಹೆಚ್ಚಿಸಿದೆ ಎಂದು ಬಿ ಎಸ್ ಎನ್ ಎಲ್ ಘೋಷಿಸಿದೆ.

ಇದನ್ನೂ ಓದಿ : ಭಾರತದಲ್ಲಿ ಬಿಡುಗಡೆಗೊಂಡಿದೆ “ಟಾಟಾ ಆಲ್ಟ್ರೊಜ್ ಐಟರ್ಬೊ”

ಈ ಉಡುಗೊರೆಯೊಂದಿಗೆ ಬಿ ಎಸ್‌ ಎನ್‌ ಎಲ್ ದೀರ್ಘಾವಧಿಯ ಯೋಜನೆಗಳಲ್ಲಿ ಹೆಚ್ಚಿನ ಸಿಂಧುತ್ವವನ್ನು ನೀಡುವ ದೃಷ್ಟಿಯಿಂದ ಏರ್‌ಟೆಲ್, ಜಿಯೋ ಮತ್ತು ವೊಡಾಫೋನ್, ಐಡಿಯಾ ಟೆಲಿಕಾಮ್ ನೆಟ್ ವರ್ಕ್ ಗಳನ್ನು ಹಿಂದಿಕ್ಕಿದೆ.

ಬಿ ಎಸ್ ಎನ್ ಎಲ್ ತನ್ನ ಬಳಕೆದಾರರಿಗೆ ಒಂದು ವರ್ಷದ ಯೋಜನೆಯಲ್ಲಿ 72 ದಿನಗಳ ಹೆಚ್ಚಿನ ಮಾನ್ಯತೆಯನ್ನು ನೀಡುತ್ತಿದೆ. ಇದು ಸೀಮಿತ ಅವಧಿಯ ಕೊಡುಗೆಯಾಗಿದ್ದು, ಜನವರಿ 31 ರ ನಂತರ ಮುಕ್ತಾಯಗೊಳ್ಳಲಿದೆ ಎಂದು ಬಿ ಎಸ್ ಎನ್ ಎಲ್ ಹೇಳಿದೆ.

ಬಿ ಎಸ್ ಎನ್ ಎಲ್ ಮಾಡಿದ ಎಲ್ಲಾ ಬದಲಾವಣೆಗಳು ಇಲ್ಲಿವೆ:

2,399 ರೂ.ಗಳ ದೀರ್ಘಾವಧಿಯ ಪ್ರಿಪೇಯ್ಡ್ ಯೋಜನೆಯಲ್ಲಿ 72 ದಿನಗಳ ವಿಸ್ತೃತ ಮಾನ್ಯತೆಯನ್ನು ನೀಡಿದೆ.

ಪ್ರಸ್ತುತ, ಎಲ್ಲಾ ಬಳಕೆದಾರರು ಈ ಯೋಜನೆಯೊಂದಿಗೆ 365 ದಿನಗಳ ಮಾನ್ಯತೆಯನ್ನು ಪಡೆಯುತ್ತಾರೆ. 72 ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ, ಬಿ ಎಸ್ ಎನ್ ಎಲ್ ಈ ಯೋಜನೆಯೊಂದಿಗೆ ಹೆಚ್ಚುವರಿ 72 ದಿನಗಳ ಮಾನ್ಯತೆಯನ್ನು ನೀಡುತ್ತಿದೆ. ಅಂದರೆ, 2,399 ರೂಗಳಲ್ಲಿ 437 ದಿನಗಳು ಆಫರ್ ಲಭ್ಯವಿರಲಿದೆ.

ಈ ಹೆಚ್ಚುವರಿ 72 ದಿನಗಳ ಸಿಂಧುತ್ವವನ್ನು ಪ್ರಚಾರದ ಕೊಡುಗೆಯಾಗಿ ನೀಡಲಾಗುತ್ತಿದ್ದು, ಇದು ಮಾರ್ಚ್ 31, 2021 ರವರೆಗೆ ಮಾನ್ಯವಾಗಿರುತ್ತದೆ.

ಇದನ್ನೂ ಓದಿ : ಮೆಹರುನ್ನೀಸಾ ಎತ್ತುವ ಪ್ರಶ್ನೆ-> 80 ಆದರೂ ಹೀರೋ ಆಗಬಹುದಾದರೆ ನಟಿಯರಿಗೇಕೆ ವಯಸ್ಸಿನ ಲೆಕ್ಕ?

ಈಗ ಈ ಯೋಜನೆಯೊಂದಿಗೆ, ಯಾವುದೇ ನ್ಯಾಯಯುತ ಬಳಕೆ ನೀತಿ (ಎಫ್‌ಯುಪಿ)ಯೊಂದಿಗೆ ಯಾವುದೇ ನೆಟ್‌ವರ್ಕ್‌ನಲ್ಲಿ ಅನಿಯಮಿತ ಉಚಿತ ಕರೆ ಲಭ್ಯವಿರುತ್ತದೆ. ಹಾಗೂ 250 ನಿಮಿಷಗಳ ದೈನಂದಿನ ಮಿತಿಯನ್ನು ತೆಗೆದುಹಾಕಲಾಗಿದೆ. ಇದರೊಂದಿಗೆ, ಬಳಕೆದಾರರು ಈ ಯೋಜನೆಯಲ್ಲಿ ಪ್ರತಿದಿನ 3 ಜಿಬಿ ಇಂಟರ್ನೆಟ್ ಡೇಟಾವನ್ನು ಪಡೆಯುತ್ತಾರೆ. ಬಳಕೆದಾರರಿಗೆ 100 ಎಸ್‌ ಎಂ ಎಸ್ ಸಹ ಬ ೆಸ್ ಎನ್ ಎಲ್ ನೀಡುತ್ತಿದೆ.

ಹೆಚ್ಚುವರಿಯಾಗಿ, ಈ ಯೋಜನೆಯೊಂದಿಗೆ, ಬಿ ಎಸ್ ಎನ್ ಎಲ್ 1 ವರ್ಷಕ್ಕೆ ಇ ಆರ್ ಒ ಎಸ್ ಚಂದಾದಾರಿಕೆಯನ್ನು ಸಹ ಕೊಡಮಾಡುತ್ತಿದೆ.

1,999 ರೂ ಯೋಜನೆಯೊಂದಿಗೆ, 21 ದಿನಗಳವರೆಗೆ ಸಿಂಧುತ್ವವನ್ನು ಹೆಚ್ಚಿಸಲಾಗಿದೆ. ಅಂದರೆ, ನೀವು ಈಗ ಈ ಯೋಜನೆಯನ್ನು ಖರೀದಿಸಿದರೆ, ನಿಮಗೆ 386 ದಿನಗಳ ಸಿಂಧುತ್ವ ಸಿಗುತ್ತದೆ.

ಬಿ ಎಸ್‌ ಎನ್‌ ಎಲ್‌ ನ 1,999 ರೂ.ಗಳ ಪ್ರಿಪೇಯ್ಡ್ ಯೋಜನೆಯಲ್ಲಿ ಗ್ರಾಹಕರಿಗೆ 3 ಜಿಬಿ ಡೇಟಾ, ಅನಿಯಮಿತ ಕರೆ ಮತ್ತು 100 ಎಸ್‌ಎಂಎಸ್ ಸಿಗುತ್ತದೆ. ಈ ಯೋಜನೆಯಲ್ಲಿ ಬಿ ಎಸ್‌ ಎನ್‌ ಎಲ್ ಟ್ಯೂನ್ ಗಳಿಗೂ ಪ್ರವೇಶವನ್ನು ಸಹ ನೀಡಲಾಗಿದೆ.

ಇದಲ್ಲದೆ, ಈ ಯೋಜನೆಯನ್ನು ಖರೀದಿಸುವ ಗ್ರಾಹಕರು ಎರಡು ತಿಂಗಳವರೆಗೆ ಲೋಕಧನ್ ವಿಷಯವನ್ನು ಮತ್ತು 365 ದಿನಗಳವರೆಗೆ ಇ ಆರ್ ಒ ಎಸ್ ಚಂದಾದಾರಿಕೆಯನ್ನು ಪಡೆಯಲಿದ್ದಾರೆ.

ಇದನ್ನೂ ಓದಿ : ಗಣರಾಜ್ಯೋತ್ಸವ ಪರೇಡ್ ಪೂರ್ವಾಭ್ಯಾಸ, ಬದಲಿ ಮಾರ್ಗ ಕಂಡುಕೊಳ್ಳಿ : ಸಂಚಾರಿ ಪೋಲಿಸರು

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.