ಐಟಿ ಕ್ಷೇತ್ರದ ಕಾಣಿಕೆ ಹೆಚ್ಚಳಕ್ಕೆ ಕೇಂದ್ರದ ಹೊಸ ಹೆಜ್ಜೆ

ತ್ವರಿತ ನಿರ್ಧಾರ, ತ್ವರಿತ ಅನುಷ್ಠಾನಕ್ಕೆ ಒತ್ತು ನೀಡಲು ನಿರ್ಧಾರ

Team Udayavani, Oct 21, 2021, 5:45 AM IST

ಐಟಿ ಕ್ಷೇತ್ರದ ಕಾಣಿಕೆ ಹೆಚ್ಚಳಕ್ಕೆ ಕೇಂದ್ರದ ಹೊಸ ಹೆಜ್ಜೆ

ನವದೆಹಲಿ: ಪ್ರತಿಯೊಬ್ಬ ನಾಗರಿಕರ ಜನನ ಪ್ರಮಾಣ ಪತ್ರ, ನಾನಾ ಯೋಜನೆಗಳ ಪ್ರಮಾಣಪತ್ರಗಳು ಒಂದೇ ವೇದಿಕೆಯಲ್ಲಿ ನಾಗರಿಕರಿಗೆ ಲಭ್ಯವಾಗುವಂತೆ ಮಾಡಲು ಹೊಸ ವ್ಯವಸ್ಥೆಯೊಂದನ್ನು ರೂಪಿಸಲು ಕೇಂದ್ರ ಸರ್ಕಾರ 60 ಅಂಶಗಳ ಕಾರ್ಯಸೂಚಿಯನ್ನು ನಿರ್ಧರಿಸಿರುವ ಬೆನ್ನಲ್ಲೇ, ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಉಪಲಬ್ಧತೆಯನ್ನು ಗಣನೀಯವಾಗಿ ಹೆಚ್ಚಿಸಲು ಮತ್ತೊಂದು ಹೆಜ್ಜೆ ಇಡಲಾಗಿದೆ.

ಒಟ್ಟಾರೆ ದೇಶೀಯ ಉತ್ಪಾದನೆಗೆ (ಜಿಡಿಪಿ) ಮಾಹಿತಿ ತಂತ್ರಜ್ಞಾನ ಕ್ಷೇತ್ರದಿಂದ ಬರುತ್ತಿರುವ ದೇಣಿಗೆಯನ್ನು ಗಣನೀಯವಾಗಿ ಹೆಚ್ಚಿಸಲು, ಆ ಕ್ಷೇತ್ರದಲ್ಲಿ ತ್ವರಿತ ನಿರ್ಧಾರ, ತ್ವರಿತ ಅನುಷ್ಠಾನ, ಪರಿಣಾಮಕಾರಿ ಆಡಳಿತವನ್ನು ನೀಡುವುದು ಹಾಗೂ ಹೊಸ ಸ್ಟಾರ್ಟ್‌ ಅಪ್‌ ಗಳ ಬೆಳವಣಿಗೆಗಳಿಗೆ ಮತ್ತಷ್ಟು ಪೂರಕವಾದ ವಾತಾವರಣವನ್ನು ಒದಗಿಸಲು ತೀರ್ಮಾನಿಸಲಾಗಿದೆ.

ಹೆಚ್ಚೆಚ್ಚು ಸಂಗ್ರಹವಾಗಿರುವ ದತ್ತಾಂಶ ಕ್ರೋಢೀಕರಣವನ್ನು ವಿವಿಧ ಯೋಜನೆಗಳಲ್ಲಿ, ಪರಿಣಾಮಕಾರಿಯಾಗಿ ಬಳಸುವ ಉದ್ದೇಶದಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರಧಾನ ಮಾಹಿತಿ ಅಧಿಕಾರಿಗಳನ್ನು (ಸಿಐಒ) ಹಾಗೂ ಮುಖ್ಯ ತಾಂತ್ರಿಕ ಅಧಿಕಾರಿಗಳನ್ನು (ಸಿಟಿಒ) ನೇಮಿಸಲು ನಿರ್ಧರಿಸಲಾಗಿದೆ.

ಈ ಮೂಲಕ, ಈ ಕ್ಷೇತ್ರದಲ್ಲಿ ಬಂಡವಾಳ ಹೂಡುವ ಪ್ರತಿಯೊಬ್ಬರಿಗೂ ಸರ್ಕಾರ ಯೋಜನೆಗಳು, ಸವಲತ್ತುಗಳು ತ್ವರಿತವಾಗಿ, ಕ್ರಮಬದ್ಧವಾಗಿ ಸಿಗುವಂತೆ ಮಾಡಲು ನಿರ್ಧರಿಸಲಾಗಿದೆ. ಜಿಯೋಗ್ರಾಫಿಕ್‌ ಇನಾರ್ಮೇಷನ್‌ ಸಿಸ್ಟಂ (ಜಿಐಎಸ್‌) ಮ್ಯಾಪಿಂಗ್‌ ತಂತ್ರಜ್ಞಾನವನ್ನು ಮೇಲ್ದರ್ಜೆಗೇರಿಸಿ, ದೇಶದ ಒಟ್ಟಾರೆ ದೇಶೀಯ ಉತ್ಪಾದನೆಯನ್ನು (ಜಿಡಿಪಿ) ಗಣನೀಯ ಮಟ್ಟಕ್ಕೆ ಏರಿಸುವುದು ಮತ್ತೂಂದು ಉದ್ದೇಶವಾಗಿದೆ.

ಇದನ್ನೂ ಓದಿ:ಹಾಡಹಗಲೇ ಒಂಟಿ ಮಹಿಳೆಯ ಭೀಕರ ಕೊಲೆ : 17ಕ್ಕೂ ಹೆಚ್ಚು ಬಾರಿ ಇರಿದಿದ್ದ ದುಷ್ಕರ್ಮಿ

“ಕರ್ಮಯೋಗಿ’ಗೆ ಮತ್ತಷ್ಟು ಒತ್ತು:
ಜಿಐಎಸ್‌ ಆಧಾರಿತ ಯೋಜನೆ ಮತ್ತು ಅನುಷ್ಠಾನ ಪದ್ಧತಿಯನ್ನು ಮತ್ತಷ್ಟು ಅಭಿವೃದ್ಧಿಗೊಳಿಸುವ ಕೆಲಸವನ್ನು ಮತ್ತಷ್ಟು ಅಭಿವೃದ್ಧಿಗೊಳಿಸಲು ನಿರ್ಧರಿಸಲಾಗಿದೆ. ಕೇಂದ್ರ ಸರ್ಕಾರ ಈಗಾಗಲೇ ಜಾರಿಗೊಳಿಸಿರುವ ಕರ್ಮಯೋಗಿ ಯೋಜನೆಯಡಿಯ ಒಂದು ಭಾಗವಾಗಿಯೇ ಇದನ್ನು ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ.

ಮಿತ್ರುಭೂಮಿ ಮೂಲಕ ಡಿಜಿಟೈಸೇಷನ್‌:
2023ರೊಳಗೆ ಎಲ್ಲಾ ಭೂದಾಖಲೆಗಳನ್ನು ಡಿಜಿಟೈಸ್ಡ್ ತಂತ್ರಜ್ಞಾನದ ಮೂಲಕ ಲಭ್ಯವಾಗುವಂತೆ ಮಾಡಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ. ಪ್ರತಿಯೊಂದು ಹೊಲಕ್ಕೆ ಅಥವಾ ಮನೆಯ ನಿವೇಶನಕ್ಕೆ ವಿಶಿಷ್ಟ ಗುರುತಿನ ಸಂಖ್ಯೆಯನ್ನು ನೀಡಲಾಗುತ್ತದೆ. ಇದರ ಜೊತೆಯಲ್ಲೇ, ಕಂದಾಯ ಇಲಾಖೆಯ ಅಡಿಯಲ್ಲಿ ದಾಖಲಾಗುವ ಎಲ್ಲಾ ರೀತಿಯ ಭೂ ವ್ಯಾಜ್ಯಗಳ ಇತ್ಯರ್ಥಕ್ಕಾಗಿ ಇ-ಕೋರ್ಟ್‌ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತದೆ. ಈ ಮೂಲಕ, ಭೂದಾಖಲೆಗಳು, ವ್ಯಾಜ್ಯಗಳ ಇತ್ಯರ್ಥ ವ್ಯವಸ್ಥೆಗಳಿಗೆ ಪಾರದರ್ಶಕತೆ ಕೊಡಲು ನಿರ್ಧರಿಸಲಾಗಿದೆ.

ಹಂತಹಂತವಾಗಿ ಜಾರಿ
ಸೆ. 18ರಂದು ಪ್ರಧಾನಿ ನೇತೃತ್ವದಲ್ಲಿ ಹಲವಾರು ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆ ನಡೆಸಿ, ದೇಶದ ನಾಗರಿಕರಿಗೆ ಅವರಿಗೆ ಬೇಕಾದ ಮೂಲದಾಖಲೆಗಳನ್ನು ಒಂದೇ ವ್ಯವಸ್ಥೆಯಡಿ ಕಲ್ಪಿಸುವ ಮಹತ್ವದ ಯೋಜನೆಯನ್ನು ಜಾರಿಗೊಳಿಸುವ ಬಗ್ಗೆ ರೂಪುರೇಷೆಗಳನ್ನು ಚರ್ಚಿಸಿದ್ದರು. ಅದೇ ಸಂದರ್ಭದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಹಲವಾರು ಹೊಸ ಆಲೋಚನೆಗಳುಳ್ಳ ಯೋಜನೆಗಳ ಬಗ್ಗೆ ಚರ್ಚಿಸಲಾಗಿತ್ತು. ಆಗ ರೂಪುಗೊಂಡಿರುವ ಹೊಸ ವ್ಯವಸ್ಥೆಗಳು, ಹೊಸ ಯೋಜನೆಗಳನ್ನು ಹಂತಹಂತವಾಗಿ ಅನುಷ್ಠಾನಗೊಳಿಸಲಾಗುತ್ತದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.