ಚರ್ಚೆ ಹುಟ್ಟುಹಾಕಿದೆ ಫೇಸ್‌ ಬುಕ್ ಪರಿಚಯಿಸಲು ಹೊರಟಿರುವ ಇನ್ಸ್ಟಾ ಗ್ರಾಂ ಫಾರ್ ಕಿಡ್ಸ್


ಶ್ರೀರಾಜ್ ವಕ್ವಾಡಿ, May 16, 2021, 6:14 PM IST

Current Instagram policy forbids children under the age of 13 from using the service.

ಸಾಮಾನ್ಯವಾಗಿ ಬಳಕೆಯಲ್ಲಿರುವ ಬಹುತೇಕ ಎಲ್ಲಾ ಸಾಮಾಜಿಕ ಮಾಧ್ಯಮಗಳು ಯುವಜನತೆಯನ್ನೇ ಗಮನದಲ್ಲಿರಿಸಿ, ಅವರ ಅಭಿರುಚಿಗಳಿಗೆ ತಕ್ಕಹಾಗೆ ನಿರ್ಮಾಣಗೊಂಡಿದೆ. ಮಕ್ಕಳನ್ನು ಗಮನದಲ್ಲಿಟ್ಟುಕೊಂಡು ಇದುವರೆಗೆ ಯಾವುದೇ ಸಾಮಾಜಿಕ ಮಾಧ್ಯಮವನ್ನು ನಿರ್ಮಿಸಲಾಗಿಲ್ಲ. ಸಾಮಾಜಿಕ ಮಾಧ್ಯಮದ ದೈತ್ಯ ಫೇಸ್‌ ಬುಕ್ ಅನ್ನು ಸಹ ಮೂಲತಃ ಕಾಲೇಜು ಮಕ್ಕಳಿಗಾಗಿಯೇ ತಯಾರಿಸಲಾಗಿತ್ತು. ಅದರ ಪ್ರೇರಣೆಯಿಂದಲೇ ವಾಟ್ಸಾಪ್, ಇನ್ಸ್ಟಾ ಗ್ರಾಂ, ಯೂಟ್ಯೂಬ್, ಡೇಟಿಂಗ್ ಆ್ಯಪ್ ಇತ್ಯಾದಿಗಳು ಜನ್ಮತಾಳಿದವು.

ಎಲ್ಲರಿಗಿಂತ ಹೆಚ್ಚಾಗಿ, ಹದಿಹರೆಯದವರು ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿದ್ದಾರೆ. ಕೆಲವೊಂದು ಆ್ಯಪ್‌ಗಳಲ್ಲಿ ಲಾಗ್‌ಇನ್ ಆಗಲು ಕನಿಷ್ಠ 13 ರಿಂದ 18 ವರ್ಷ ತುಂಬಿರಬೇಕು. ಹಾಗಂತ ಹೇಳಿ, 13 ವರ್ಷದೊಳಗಿನ ಮಕ್ಕಳಿಗೆ ಇದರ ಬಗ್ಗೆ ಅರಿವೇ ಇಲ್ಲ ಎಂದೇನಿಲ್ಲ. ಅನೇಕ ಮಕ್ಕಳು ಈಗಾಗಲೇ ತಮ್ಮ ನೈಜ ವಯಸ್ಸನ್ನು ತಿಳಿಸದೇ ಸುಳ್ಳು ಮಾಹಿತಿ ನೀಡಿ ಬೇರೆ ಬೇರೆ ಪ್ಲಾಟ್‌ ಫಾರ್ಮ್ ಗಳಲ್ಲಿ ಅಕೌಂಟ್‌ ಗಳನ್ನು ಹೊಂದಿದ್ದಾರೆ. ಈ ಕೋವಿಡ್ ಸಮಯದಲ್ಲಂತೂ ಇಂಟರ್ನೆಟ್‌ನಲ್ಲಿ ಬ್ರೌಸ್ ಮಾಡುವುದನ್ನೂ ಕಲಿತಿದ್ದಾರೆ.

ಇದನ್ನೂ ಓದಿ :  ತೌಖ್ತೇ ಚಂಡಮಾರುತವನ್ನು ಎದುರಿಸಲು ಜನರ ಬೆನ್ನೆಲುಬಾಗಿರಿ : ಕಾರ್ಯಕರ್ತರಿಗೆ ನಡ್ಡಾ ಕರೆ

ಇದೀಗ 13 ವರ್ಷದ ಮಕ್ಕಳನ್ನೇ ಗುರಿಯಾಗಿಸಿಕೊಂಡು ಹೊಸ ಆ್ಯಪ್ ಪರಿಚಯಿಸಲು ಫೇಸ್‌ಬುಕ್ ಒಡೆತನದ ಇನ್ಸ್ಟಾ ಗ್ರಾಂ ಮುಂದಾಗುತ್ತಿದೆ. ಈಗಾಗಲೇ ಅಸ್ತಿತ್ವದಲ್ಲಿರುವ ಯೂಟ್ಯೂಬ್ ಫಾರ್ ಕಿಡ್ಸ್ ಹಾಗೂ ಮೆಸೆಂಜರ್ ಫಾರ್ ಕಿಡ್ಸ್ ಮಾದರಿಯಲ್ಲಿ ಇನ್ಸ್ಟಾ ಗ್ರಾಂ ಫಾರ್ ಕಿಡ್ಸ್ ಆ್ಯಪ್ ಪರಿಚಯಿಸಲು ಫೇಸ್‌ಬುಕ್ ಯೋಚಿಸುತ್ತಿದೆ.

ಈ ಕುರಿತಂತೆ ಈಗಾಗಲೇ ಪರ-ವಿರೋಧ ಚರ್ಚೆಗಳು ನಡೆಯುತ್ತಿದೆ. ಅಮೇರಿಕಾದ ಅಟಾರ್ನಿ ಜನರಲ್, ಈ ಯೋಜನೆಯನ್ನು ಕೈಬಿಡುವಂತೆ ಫೇಸ್‌ ಬುಕ್ ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್ ಗೆ ಪತ್ರ ಬರೆದಿದ್ದಾರೆ.

“ಸಾಮಾಜಿಕ ಮಾಧ್ಯಮವನ್ನು ಬಳಸುವುದು ಮಕ್ಕಳ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಹಾನಿಕಾರಕವಾಗಿದೆ, 13 ವರ್ಷದ ಒಳಗಿನ ಮಕ್ಕಳು ಇಂಟರ್ನೆಟ್ ಪ್ರಪಂಚಕ್ಕೆ ಹೊಂದಿಕೊಂಡು ಹೋಗುವ ಮನಃಸ್ಥಿತಿಯನ್ನೂ ಬೆಳೆಸಿಕೊಂಡಿರುವುದಿಲ್ಲ. ಇದಲ್ಲದೆ, ಫೇಸ್‌ಬುಕ್ ಮಕ್ಕಳ ಹಕ್ಕನ್ನು ರಕ್ಷಿಸುವಲ್ಲಿ ಈಗಾಗಲೇ ಹಲವಾರು ಸನ್ನಿವೇಶಗಲ್ಲಿ ವಿಫಲವಾಗಿರುವುದು ನಾವು ಕಂಡಿದ್ದೇವೆ”ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಹಾಗೆಯೇ, 13 ವರ್ಷದ ಒಳಗಿನವರೂ ಇಂಟರ್ನೆಟ್ ಹಾಗೂ ಸಾಮಾಜಿಕ ಮಾಧ್ಯಮಗಳನ್ನು ಬಳಸಿದರೆ, ಅವರ ಮನಸ್ಸಿನ ಮೇಲೆ ಬೀರಬಹುದಾದ ಋಣಾತ್ಮಕ ಪರಿಣಾಮಗಳನ್ನು ಮನಃಶಾಸ್ತçಜ್ಞರೊಬ್ಬರು ಖ್ಯಾತ ಜರ್ನಲ್ ಒಂದರಲ್ಲಿ ಪ್ರಕಟಿಸಿದ್ದಾರೆ.

ಸಣ್ಣ ವಯಸ್ಸಿನಲ್ಲೇ ಅವರು ಸಾಮಾಜಿಕ ಮಾಧ್ಯಮವನ್ನು ಪ್ರವೇಶಿಸಿದರೆ, ಬಾಡಿ ಶೇಮಿಂಗ್, ಸೈಬರ್ ಬೆದರಿಕೆ ಮತ್ತು ತಮ್ಮ ಅಂದ ಚಂದದ ಬಗ್ಗೆಯೇ ಚಿಂತೆ ಮಾಡಲು ಪ್ರಾರಂಭಿಸುತ್ತಾರೆ. ಮಕ್ಕಳ ದೈಹಿಕ ಹಾಗೂ ಮಾನಸಿಕ ರಕ್ಷಣೆಯ ಕುರಿತು ಹಲವಾರು ತಜ್ಞರ ಕಳವಳವನ್ನು ವ್ಯಕ್ತಪಡಿಸಿದ್ದಾರೆ.

ಆದರೆ ಈ ಕುರಿತಂತೆ ವಿಭಿನ್ನ ನಿಲುವನ್ನು ಫೇಸ್‌ ಬುಕ್ ಹೊಂದಿಕೊಂಡಿದೆ. ಪೋಷಕರ ಮೇಲ್ವಿಚಾರಣೆ ಅಥವಾ ಅನುಮತಿಯಿಲ್ಲದೆ ಯಾವುದೇ ವಯಸ್ಕ ಸೈಟ್‌ಗಳಿಗೆ ಹೋಗಲು ಆಗುವುದಿಲ್ಲ. ಮಕ್ಕಳು ಸುಳ್ಳು ಹೇಳುವುದನ್ನು ತಡೆಯಲು ಇಂತಹ ವೇದಿಕೆಗಳು ಅಗತ್ಯ ಎಂದು ಅದು ವಾದಿಸುತ್ತದೆ. ಇಂತಹ ಕಿಡ್ಸ್ ಆ್ಯಪ್‌ಗಳನ್ನು ಪರಿಚಯಿಸುವುದರಿಂದ ಪೋಷಕರಿಗೂ ತಮ್ಮ ಮಕ್ಕಳು ಏನ್ನನ್ನು ನೋಡುತ್ತಿದ್ದಾರೆ ಎಂದು ಅರಿವಿಗೆ ಬರುತ್ತದೆ. ಅವರ ಮಕ್ಕಳು ಏನು ಮಾಡುತ್ತಿದ್ದಾರೆ ಎಂಬುದರ ಮೇಲೆ ಖುದ್ದು ಪೋಷಕರೇ ನಿಯಂತ್ರಣವನ್ನು ಹೊಂದಿರುತ್ತಾರೆ ಎಂದು ಫೇಸ್‌ ಬುಕ್ ಸಂಸ್ಥೆ ಹೇಳುತ್ತದೆ.

ಇಲ್ಲಿ ನಮ್ಮ ಕಣ್ಣಮುಂದೆ ಕಾಣುವ ಮತ್ತೊಂದು ಸಮಸ್ಯೆಯೆಂದರೆ, ಮಕ್ಕಳ ಅಭಿರುಚಿ. 7 ವರ್ಷದ ಮಕ್ಕಳಿಗಾಗಿ ರಚಿತವಾದ ಒಂದು ಸೈಟ್, 12 ವರ್ಷದ ಮಕ್ಕಳಿಗೆ ಇಷ್ಟವಾಗುವುದಿಲ್ಲ. ನಮ್ಮನ್ನೇ ಉದಾಹರಣೆಯಾಗಿ ತೆಗೆದುಕೊಂಡರೂ, ವರ್ಷ ಕಳೆದಂತೆ ನಾವು ಟಿವಿಯಲ್ಲಿ ನೋಡುವ ಚಾನಲ್‌ಗಳೂ ಬದಲಾಗುತ್ತಾ ಹೋಗಿತ್ತು. 5-6ನೇ ವಯಸ್ಸಿನಲ್ಲಿದ್ದಾಗ ಕಾರ್ಟೂನ್ ನೋಡುತ್ತಿದ್ದವರು, 12-13 ನೇ ವಯಸ್ಸಿಗೆ ಬರುವಾಗ ಧಾರವಾಹಿ-ನ್ಯಾಶನಲ್ ಜಿಯೋಗ್ರಫಿಯಂತಹ ಪ್ರೋಗ್ರಾಂಗಳನ್ನು ವೀಕ್ಷಿಸಲು ಆರಂಭಿಸಿದೆವು. ಬಾಲ್ಯದಲ್ಲಿ ದಿನಕ್ಕೊಂದು ಆಸೆ, ಅಭುರುಚಿ ಬದಲಾಗುತ್ತಾ ಹೋಗುತ್ತದೆ. ಹೀಗಿರುವಾಗ 11-13 ವಯಸ್ಸಿನ ಮಕ್ಕಳು ನೇರವಾಗಿ ಹದಿಹರೆಯದವರೊಂದಿಗೆಯೇ ಹೊಂದಿಕೊಂಡು ಹೋಗಲು ಬಯಸುತ್ತಾರೆ.

ಹೀಗೆ ಪುಸ್ತಕ ಹಿಡಿಯುವ ಕೈಗಳಲ್ಲಿ ಕಾನೂನುಬದ್ಧವಾಗಿ ಮೊಬೈಲ್‌ಗಳನ್ನು ನೀಡಿದರೆ, ಮಕ್ಕಳ ಮಾನಸಿಕ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮಗಳು ಬೀರುವುದರಲ್ಲಿ ಯಾವುದೇ ಸಂಶಯವಿಲ್ಲ. ಈ ‘ಕಿಡ್ಸ್’ ಆ್ಯಪ್‌ ಗಳನ್ನು ಪರಿಚಯಿಸುವ ಮೊದಲು, ಫೇಕ್ ಅಕೌಂಟ್ ಹಾಗೂ ವಯಸ್ಸಿನ ಸುಳ್ಳು ಮಾಹಿತಿ ನೀಡಿ ಸಾಮಾಜಿಕ ಮಾಧ್ಯಮಗಳನ್ನು ಬಳಸುವವರನ್ನು ಅದರಿಂದ ಹೊರತರುವ ಪ್ರಯತ್ನಗಳು ನಡೆದರೆ ಉತ್ತಮ.

ಇಂದುಧರ ಹಳೆಯಂಗಡಿ

ಇದನ್ನೂ ಓದಿ : ಫೇಸ್ ಬುಕ್ ಸ್ನೇಹಿತನಿಂದ ಹೀನ ಕೃತ್ಯ : ಮಹಿಳೆ ಮೇಲೆ 25 ಕಾಮುಕರಿಂದ ಅತ್ಯಾಚಾರ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.