ಭೂಮಿಯ ಬಗ್ಗೆ ಪಿನ್ ಟು ಪಿನ್ ಮಾಹಿತಿ ನೀಡುತ್ತದೆ “ದಿಶಾಂಕ್ ಆ್ಯಪ್”..!


Team Udayavani, Mar 2, 2021, 6:43 PM IST

Dishaank app helps you check Karnataka land records

ಭೂಮಿಯ ನಕ್ಷೆಯ ವೆರಿಫಿಕೇಶನ್ ನಲ್ಲಿ  ನಿಮಗೆ ಮೋಸ ಮಾಡಲು ಭೂಕಳ್ಳರು ಹೋದಲ್ಲೆಲ್ಲಾ ಇದ್ದಾರೆ. ಒಂದು ಸೈಟ್ ಖರೀದಿಸಬೇಕಾದರೆ, ಅದನ್ನು ಸಾಕಷ್ಟು ಕಡೆಯಂದ ವೆರಿಫೈ ಮಾಡಬೇಕಾಗುತ್ತದೆ.  ಸಾಲ ಮಾಡಿ ಭೂಮಿ ಖರೀದಿಸುವಾಗ ಎಷ್ಟೋ ಮಂದಿ ಗೊತ್ತಿದ್ದೋ, ಗೊತ್ತಿಲ್ಲದೆಯೋ ಮೋಸ ಹೊಗಿ ಬಿಡುತ್ತಾರೆ. ಇನ್ಮುಂದೆ ಈ ಸನ್ನಿವೇಶ ಬರಲಿ ಸಾಧ್ಯವೇ ಇಲ್ಲ. ಭೂಕಳ್ಳರ ಕಳ್ಳಾಟಕ್ಕೆ ಬ್ರೇಕ್ ಬೀಳಲಿದೆ. ಹೌದು ಭೂಮಿ ವೆರಿಫಿಕೇಶನ್ ಗಾಗಿಯೇ ರಾಜ್ಯ ಸರ್ಕಾರ ಹೊರತಂದಿದೆ `ದಿಶಾಂಕ್ ಆ್ಯಪ್’.

ಸರಳವಾಗಿ ಹೇಳಬೇಕೆಂದರೆ ಇದು ಭೂನಕ್ಷೆ ತಿಳಿಸುವ ಸರ್ಕಾರಿ ಸ್ವಾಮ್ಯದ ಆ್ಯಪ್ ಇದಾಗಿದ್ದು, ಸರ್ವೆ ಇಲಾಖೆಯ ಅತ್ಯುತ್ತಮ ತಂತ್ರಾಂಶವಾಗಿದೆ. ಇದು ರಾಜ್ಯದ 30 ಜಿಲ್ಲೆಗಳ ಪ್ರತಿಭೂಭಾಗದ ಮಾಹಿತಿ, ಸರ್ವೆ ನಂಬರ್‍ ಒಳಗೊಂಡಿದೆ.

ಇದು ಫ್ರೀ ಅಪ್ಲಿಕೇಶನ್ ಆಗಿದ್ದು, ( ಮೊಬೈಲ್ ಫೋ ನಿನಲ್ಲಿ ಲೋಕೇಶನ್ ವಿವರ ಕೊಟ್ಟು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

ದಿಶಾಂಕ್ ಆ್ಯಪ್ ಯಾವುದಕ್ಕೆ ಸಹಕಾರಿ..? 

*ಯಾವುದಾದರೂ ಆಸ್ತಿಯ ನಿಖರ ಸರ್ವೇ ನಂಬರ್ ನ್ನು ಪಡೆಯಲು ಸಹಕಾರಿಯಾಗಿದೆ.

* ಆಸ್ತಿಯ ಭೂಭಾಗದ ಸಂಪೂರ್ಣ ವಿವರ ನೀಡುತ್ತದೆ. ಕೆರೆಕುಂಟೆ, ಸುತ್ತಲಿನ ಪ್ರದೇಶ, ಅಸುಪಾಸಿನ ಆಸ್ತಿಯ ವಿವರ ನೀಡುತ್ತದೆ.

* ಭೂಮಿ ಒತ್ತುವರಿಯಾಗಿದ್ದರೆ ಸುಲಭವಾಗಿ ಈ ಅಪ್ಲಿಕೇಶನ್ ಮೂಲಕ ಪತ್ತೆ ಮಾಡಬಹುದಾಗಿದೆ.

* ಈ ಅಪ್ಲಿಕೇಶನ್ ನ ಸಹಾಯದಿಂದ ಭೂಮಿಯ ಸರ್ವೇ ನಂಬರ್ ಸರಿಯಾಗಿದೆಯೇ ಎಂಬುದನ್ನು ಪರಿಶೀಲಿಸಬಹುದು.

*ಎಲ್ಲಾ ಸಾರ್ವಜನಿಕರು, ರಿಯಲ್ ಎಸ್ಟೇಟ್  ಉದ್ಯಮಿಗಳಿಗೆ  ಅತಿ ಉಪಯುಕ್ತ ಆ್ಯಪ್ ಇದು.

*  30 ಜಿಲ್ಲೆಗಳ ಸುಮಾರು 70 ಲಕ್ಷ ಸರ್ವೆ ನಂಬರ್ ಗಳಿಗೆ ಸಂಬಂಧಿಸಿದ ಬಹುತೇಕ ಎಲ್ಲಾ ವಿವರಗಳು ಇದರಲ್ಲಿವೆ .

* ಹೊಸ ಆಸ್ತಿ ಖರೀದಿ, ಮಾರಾಟದ ವೇಳೆ ಈ ಆ್ಯಪ್ ಬಹಳ ಉಪಯುಕ್ತ ಮಾಹಿತಿ ನೀಡಲಿದೆ.

* ಗ್ರಾಮದ ವಿಲೇಜ್ ಮ್ಯಾಪ್ ಇದರಲ್ಲಿ ಸೂಪರ್ ಇಂಪೋಸ್ ಆಗಿರತ್ತದೆ. ನೀವು ನಿಂತಿರುವ ಜಾಗದ ಸಂಪೂರ್ಣ ಮಾಹಿತಿ ಈ ಆ್ಯಪ್ ನಲ್ಲಿ ಲಭ್ಯವಿರುತ್ತದೆ. ಸರ್ವೇ ನಂಬರ್ ಸಹಿತ ಭೂಮಿಯ ಬಗ್ಗೆ ಎಲ್ಲಾ ಮಾಹಿತಿ ಸಿಗುತ್ತದೆ.

* ಆ ಸರ್ವೆ ನಂಬರ್‍ ಮಾಲೀಕ ಯಾರು ಅನ್ನೋ ಮಾಹಿತಿ ಕೂಡಾ ನಿಮಗೆ ಸಿಗುತ್ತದೆ.

* ಕೊಟ್ಟಿರುವ ಸರ್ವೆ ನಂಬರಿನಲ್ಲಿ ಸರ್ಕಾರದ ಯಾವುದಾದರೂ ಆಸ್ತಿಗಳಿವೆಯಾ..? ಎನ್ನುವ ಮಾಹಿತಿ ಕೂಡಾ ಈ ಅಪ್ಲಿಕೇಶನ್ ನಲ್ಲಿ ಲಭ್ಯವಿದೆ.

*  ನೀವು ಒಂದು ಸೈಟ್ ಖರೀದಿಗೆ ಹೋಗುವಾಗ ಆ ಸೈಟಿನ ಜಾಗದಲ್ಲಿ ನಿಂತು ಈ ದಿಶಾಂಕ್ ಆ್ಯಪ್ ಆನ್ ಮಾಡಿ. ಅಲ್ಲೇ ನಿಮಗೆ ಆ ಜಾಗದ ಸಮಸ್ತ ಮಾಹಿತಿ ಸಿಗುತ್ತದೆ.

ಭೂಮಿಯ ಬಗ್ಗೆ ಇಷ್ಟೆಲ್ಲಾ ಸಂಪೂರ್ಣ ಮಾಹಿತಿ ನೀಡುವ ಈ ಅಪ್ಲಿಕೇಶನ್ ನಮಗೆ ಸರ್ಕಾರದಿಂದ ಲಭ್ಯವಾಗುತ್ತಿರುವಾಗ ನಾವು ಇನ್ಮುಂದೆ ಭೂಮಿಯ ವಿಚಾರದಲ್ಲಿ ಮೋಸ ಹೋಗುವುದಕ್ಕೆ ಸಾಧ್ಯವಿಲ್ಲ ಎನ್ನುವುದರಲ್ಲಿ ಸಂಶಯ ಬೇಕಾಗಿಲ್ಲ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.