ಇನ್ಮುಂದೆ ಹೆಚ್ಚು ಲೈಕ್ಸ್ ಬಂದಿಲ್ಲವೆಂದು ಕೊರಗಬೇಡಿ: Facebook ತಂದಿದೆ ಹೊಸ ಫೀಚರ್!


Team Udayavani, Sep 4, 2019, 6:30 PM IST

facebook-teach

ಕ್ಯಾಲಿಫೋರ್ನಿಯಾ: ಫೇಸ್ ಬುಕ್ ಬಳಕೆದಾರರಿಗೆ ಸಂತಸದ ಸುದ್ದಿ. ಇನ್ನು ಮುಂದೆ ತಮ್ಮ ಪೋಸ್ಟ್ ಗಳಿಗೆ  ಕಡಿಮೆ ಲೈಕ್ಸ್ ಬಂದು ಇತರರೆದುರೂ ಅವಮಾನವಾಯಿತಲ್ಲಾ ಎಂದು ಕೊರಗಬೇಕಾಗಿಲ್ಲ. ಹೆಚ್ಚು ಲೈಕ್ಸ್ ಬರಬೇಕೆಂದು ಇತರರನ್ನು ಟ್ಯಾಗ್ ಮಾಡುವ ಅವಶ್ಯಕತೆಯೂ ಇಲ್ಲ. ಫೇಸ್ ಬುಕ್ ಹೊಸ ಫೀಚರ್ ಒಂದನ್ನು ಪರಿಚಯಿಸುತ್ತಿದ್ದು ಇದು ಬಳಕೆದಾರರಿಗೆ ಬಹಳ ಉಪಯುಕ್ತವಾಗಿದೆ.

ಫೇಸ್ ಬುಕ್ ಬಳಕೆದಾರರು ತಮ್ಮ ಪೋಸ್ಟ್  ಗಳಿಗೆ ಎಷ್ಟು ಜನ ಲೈಕ್ಸ್ ಹಾಗೂ ಕಮೆಂಟ್ಸ್ ಮಾಡಿದ್ದಾರೆ ಎಂಬುದನ್ನು ಬಹಿರಂಗಪಡಿಸದೆ ಗೌಪ್ಯವಾಗಿಡುವಂತಹ ಹೊಸ ಆಯ್ಕೆ ಬಂದಿದೆ . ಇದು  ಪೋಸ್ಟ್ ಮಾಡಿದವರಿಗೆ ಮಾತ್ರ ಎಷ್ಟು ಲೈಕ್ಸ್, ಕಮೆಂಟ್ಸ್ ಹಾಗೂ ಶೇರ್ ಆಗಿದೆ ಎಂಬುದನ್ನು ತೋರ್ಪಡಿಸುತ್ತದೆ.

ಪೋಸ್ಟ್ ಕೆಳಗೆ ಕಾಣುವ ಲೈಕ್ಸ್ ಆಯ್ಕೆಯನ್ನು ಗೋಚರಿಸದಂತೆ (ಹೈಡ್) ಮಾಡುವ ಕ್ರಮಕ್ಕೆ ಮುಂದಾಗಿರುವ ಫೇಸ್ ಬುಕ್ ನ ಈ ನಿರ್ಧಾರದ ಹಿಂದೆ  ಪ್ರಮುಖ ಕಾರಣವೇ ಇದೆ. ಜನರು ತಮ್ಮ ಪೋಸ್ಟ್ ಗಳಿಗೆ ಬರುವ ಕಡಿಮೆ ಲೈಕ್ಸ್ ಗಳಿಂದ ಹೆಚ್ಚು ನಿರುತ್ಸಾಹಗೊಳ್ಳುತ್ತಾರೆ ಮತ್ತು ಹೊಸ ಪೋಸ್ಟ್ ಹಾಕುವುದನ್ನು ನಿಲ್ಲಿಸುತ್ತಾರೆ ,ಇದರಿಂದ ಫೇಸ್ ಬುಕ್  ಎಂಗೇಜ್ ಮೆಂಟ್ ಕಡಿಮೆಯಾಗುತ್ತದೆ ಎಂಬುದೇ ಅದರ ಈ ನಿರ್ಧಾರಕ್ಕೆ ಕಾರಣ.

ಹಾಗಾಗಿ ಪೋಸ್ಟ್ ಮಾಡಿದ ವ್ಯಕ್ತಿಗಳಿಗೆ ಮಾತ್ರ ಎಷ್ಟು ಲೈಕ್ಸ್ ಬಂದಿದೆ ಎಂದು ಗೋಚರಿಸುವಂತೆ ಮಾಡುವುದರಿಂದ ಒಂದೆಡೆ ಬಳಕೆದಾರ ಸಂತುಷ್ಟನಾಗಿ, ಕಡಿಮೆ ಲೈಕ್ಸ್ ಬಂದರೆ ಮರೆಮಾಚಿ ಹೆಚ್ಚು ಲೈಕ್ಸ್ ಬಂದರೆ ಇತರರಿಗೂ ತೋರಿಸುತ್ತಾನೆ. ಇದರಿಂದ ಕಡಿಮೆ ಲೈಕ್ಸ್ ಬಂದಾಗ ಆಗುವ ಬೇಸರ ತಪ್ಪುತ್ತದೆ. ಇನ್ನೊಬ್ಬರ ಕಾಮೆಂಟ್ಸ್ ಬಾಕ್ಸ್ ಒಳಗೆ ಇಣುಕುವುದು ಕೂಡ ಕಡಿಮೆಯಾಗುತ್ತದೆ.

ಈಗಾಗಲೇ ಈ ಹೊಸ ಫೀಚರ್ ಕೆಲವು ರಾಷ್ಟ್ರಗಳಲ್ಲಿ ಪ್ರಾಯೋಗಿಕವಾಗಿ ಜಾರಿಯಲ್ಲಿತ್ತು . ಇದೀಗ ವಿಶ್ವದಾದ್ಯಂತ ಜಾರಿಗೆ ಬಂದಿದೆ.

ಟಾಪ್ ನ್ಯೂಸ್

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

BJP FLAG

400 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಕಷ್ಟ: ಎಬಿಪಿ ಸಮೀಕ್ಷೆ ಭವಿಷ್ಯ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

BJP FLAG

400 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಕಷ್ಟ: ಎಬಿಪಿ ಸಮೀಕ್ಷೆ ಭವಿಷ್ಯ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.