ಫ್ಲಿಪ್‍ಕಾರ್ಟ್‍ ಕ್ವಿಕ್‍ ವಿಸ್ತರಣೆ: ಗಣೇಶ ಹಬ್ಬಕ್ಕೆ 90 ನಿಮಿಷದ ಡೆಲಿವರಿ!


Team Udayavani, Sep 10, 2021, 8:00 AM IST

Flipkart Quick

ಬೆಂಗಳೂರು: ಭಾರತದ ಇ-ಕಾಮರ್ಸ್ ಮಾರುಕಟ್ಟೆ ಆಗಿರುವ ಫ್ಲಿಪ್ ಕಾರ್ಟ್ ತನ್ನ ಹೈಪರ್ ಲೋಕಲ್ ಸೇವೆಯಾದ ಫ್ಲಿಪ್ ಕಾರ್ಟ್ ಕ್ವಿಕ್ ಅನ್ನು ಇನ್ನೂ ಮೂರು ಮೆಟ್ರೋ ನಗರಗಳಾದ ಕೊಲ್ಕತ್ತ, ಚೆನ್ನೈ ಮತ್ತು ಮುಂಬೈಗೆ ವಿಸ್ತರಣೆ ಮಾಡಿದೆ. ಈ ವಿಸ್ತರಣೆಯಿಂದ ಫ್ಲಿಪ್ ಕಾರ್ಟ್ ತನ್ನ ಗ್ರಾಹಕರಿಗೆ ಅಗತ್ಯ ವಸ್ತುಗಳನ್ನು ಸುರಕ್ಷಿತ ಮತ್ತು ತಡೆರಹಿತವಾಗಿ ಮನೆ ಬಾಗಿಲಿಗೆ ತಲುಪಿಸಲಿದೆ.

ಕರ್ನಾಟಕದ ಗ್ರಾಹಕರು ಇನ್ನು ಮುಂದೆ ಪೂಜಾ ಸಾಮಗ್ರಿಗಳು, ಮೋದಕ ತಯಾರಿಸುವ ಪದಾರ್ಥಗಳು, ಸಿಹಿತಿಂಡಿಗಳು & ಡ್ರೈಫ್ರೂಟ್ಸ್, ತಾಜಾ ಹಣ್ಣುಗಳು ಮತ್ತು ತರಕಾರಿಗಳನ್ನು ಖರೀದಿಸಬಹುದಾಗಿದೆ. ಈ ವರ್ಷ 75+ ಗಣೇಶ ಚತುರ್ಥಿ ಆಯ್ಕೆಗಳಿದ್ದು, ಫ್ಲಿಪ್ ಕಾರ್ಟ್ ಕ್ವಿಕ್ ಗ್ರಾಹಕರಿಗೆ ಅನನ್ಯ ಕೊಡುಗೆಗಳನ್ನು ಒದಗಿಸುವುದಾಗಿ ಭರವಸೆ ನೀಡಿದೆ. ಗ್ರಾಹಕರಿಗೆ ಆನ್ ಲೈನ್ ನಲ್ಲಿ ಆರ್ಡರ್ ಮಾಡಲು ಮತ್ತು ಮುಂದಿನ 90 ನಿಮಿಷಗಳಲ್ಲಿ ಡೆಲಿವರಿ ಪಡೆಯಲು ಅಥವಾ ಅವರ ಅನುಕೂಲಕ್ಕೆ ಅನುಗುಣವಾಗಿ ಎರಡು ಗಂಟೆ ಸ್ಲಾಟ್ ಬುಕ್ ಮಾಡಲು ಅವಕಾಶ ನೀಡುತ್ತದೆ. ಗ್ರಾಹಕರು ತಮ್ಮ ಮೊದಲ ಆರ್ಡರ್ ನಲ್ಲಿ ಉಚಿತ ವಿತರಣೆಯನ್ನು ಪಡೆಯಲಿದ್ದಾರೆ. ಅಲ್ಲದೇ ಅವರ ನಂತರದ ಆರ್ಡರ್ ಗಾತ್ರವು 199 ರೂಪಾಯಿಗಳಿಗಿಂತ ಹೆಚ್ಚಿದ್ದರೆ ಈ ಅವಕಾಶವನ್ನು ಹೊಂದಲಿದ್ದಾರೆ. ಗ್ರಾಹಕರು ದಿನದ ಯಾವುದೇ ಸಮಯದಲ್ಲಿ ಆರ್ಡರ್ ಗಳನ್ನು ಮಾಡಬಹುದು ಮತ್ತು ಅಂತಹ ಉತ್ಪನ್ನಗಳನ್ನು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿವರೆಗೆ ಪಡೆದುಕೊಳ್ಳುವ ಆಯ್ಕೆ ಮಾಡಿಕೊಳ್ಳಬಹುದು.

ಇದನ್ನೂ ಓದಿ:‘ನಿಮ್ಮ ಮಗುವಿಗೆ ಅಪ್ಪ ಯಾರು’ ? ಪ್ರಶ್ನೆಗೆ ಖಡಕ್ ಉತ್ತರ ಕೊಟ್ಟ ನಟಿ ನುಸ್ರತ್ ಜಹಾನ್  

ಫ್ಲಿಪ್ ಕಾರ್ಟ್ ಕ್ವಿಕ್ ನ ಉಪಾಧ್ಯಕ್ಷ ಸಂದೀಪ್ ಕಾರ್ವ ಮಾತನಾಡಿ, “ಫ್ಲಿಪ್ ಕಾರ್ಟ್ ಕ್ವಿಕ್ ನೊಂದಿಗೆ ನಮ್ಮ ಗ್ರಾಹಕರಿಗೆ ವೈಯಕ್ತಿಕ ಅನುಭವ ಮತ್ತು ಆಯ್ಕೆಯನ್ನು ಒದಗಿಸಲು ತಂತ್ರಜ್ಞಾನ ಮತ್ತು ಪೂರೈಕೆ ಜಾಲ ಸಾಮರ್ಥ್ಯದ ಅನ್ಲಾಕ್ ಮಾಡುವುದು ನಮ್ಮ ಗುರಿಯಾಗಿದೆ. ನಾವು ವೇಗದ ವಿತರಣೆಗಳನ್ನು ಪರಿಹರಿಸಲು ಮಾತ್ರವಲ್ಲದೇ ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಲಭ್ಯವಾಗುವಂತೆ ಮಾಡಲು ನಾವು ಕೆಲಸ ಮಾಡುತ್ತಿದ್ದೇವೆ. ಕರ್ನಾಟಕದಲ್ಲಿ ಗಣೇಶೋತ್ಸವ ಆಚರಣೆಗಳು ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದುಕೊಂಡಿವೆ ಹಾಗೂ ಹಬ್ಬದ ಋತುವಿನಲ್ಲಿಯೂ ಈ ಪ್ರಾಮುಖ್ಯತೆ ಇರುತ್ತದೆ. ಈ ಅವಧಿಯಲ್ಲಿ ನಾವು ನಮ್ಮ ಗ್ರಾಹಕರಿಗೆ ತಾಜಾ ಹಣ್ಣುಗಳು ಮತ್ತು ತರಕಾರಿಗಳು, ಗೃಹೋಪಯೋಗಿ ಉತ್ಪನ್ನಗಳು ಮತ್ತು ಮಗುವಿನ ಆರೈಕೆಯ ಉತ್ಪನ್ನಗಳನ್ನು ಆರ್ಡರ್ ಮಾಡಿದ 90 ನಿಮಿಷಗಳೊಳಗೆ ವಿತರಣೆ ಮಾಡುವ ಗುರಿಯನ್ನು ಹೊಂದಿದ್ದೇವೆ’’ ಎಂದರು.

ಬೆಂಗಳೂರಿನಲ್ಲಿ 2020 ರಲ್ಲಿ ಫ್ಲಿಪ್ ಕಾರ್ಟ್ ಕ್ವಿಕ್ ಅನ್ನು ಆರಂಭಿಸಲಾಗಿದ್ದು, ಉತ್ಪನ್ನಗಳ ಲಭ್ಯತೆಯನ್ನು ವಿಸ್ತರಣೆ ಮಾಡಲು ಮತ್ತು ಫ್ಲಿಪ್ ಕಾರ್ಟ್ ಹಬ್ ಗಳಿಂದ ಉತ್ಪನ್ನಗಳನ್ನು ಆರ್ಡರ್ ಮಾಡುವ ಗ್ರಾಹಕರಿಗೆ ತ್ವರಿತವಾದ ವಿತರಣೆಯನ್ನು ಸಕ್ರಿಯಗೊಳಿಸಲು ಆರಂಭ ಮಾಡಲಾಗಿತ್ತು. ಹೈಪರ್ ಲೋಕಲ್ ವಿತರಣಾ ಸೇವೆಯು ತಾಜಾ ಹಣ್ಣುಗಳು ಮತ್ತು ತರಕಾರಿಗಳು, ಡೈರಿ ಉತ್ಪನ್ನಗಳು, ದಿನಸಿ, ಮೊಬೈಲ್ ಗಳು, ಎಲೆಕ್ಟ್ರಾನಿಕ್ಸ್ ಮತ್ತು ಮಗುವಿನ ಆರೈಕೆಯಂತಹ ವಿಭಾಗಗಳಲ್ಲಿ 2500 ಕ್ಕೂ ಹೆಚ್ಚು ಉತ್ಪನ್ನಗಳ ಸಂಗ್ರಹವನ್ನು ಒದಗಿಸುತ್ತದೆ. ಬೆಂಗಳೂರು, ದೆಹಲಿ, ಗುರುಗಾಂವ್, ಘಾಜಿಯಾಬಾದ್, ನೋಯ್ಡಾ, ಹೈದ್ರಾಬಾದ್, ಪುಣೆ, ಮುಂಬೈ, ಕೊಲ್ಕತ್ತ ಮತ್ತು ಚೆನ್ನೈ ಸೇರಿದಂತೆ 10 ನಗರಗಳಲ್ಲಿ ಈಗ ಫ್ಲಿಪ್ ಕಾರ್ಟ್ ಕ್ವಿಕ್ ಸೇವೆ ಲಭ್ಯವಿದೆ.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.